Homeಮುಖಪುಟವಿದ್ಯುತ್ ಕಡಿತವಿಲ್ಲ, 300 ಯುನಿಟ್ ಉಚಿತ ವಿದ್ಯುತ್- ಉತ್ತರಾಖಂಡ ಚುನಾವಣೆಗೆ ಕೇಜ್ರಿವಾಲ್ ಘೋಷಣೆ

ವಿದ್ಯುತ್ ಕಡಿತವಿಲ್ಲ, 300 ಯುನಿಟ್ ಉಚಿತ ವಿದ್ಯುತ್- ಉತ್ತರಾಖಂಡ ಚುನಾವಣೆಗೆ ಕೇಜ್ರಿವಾಲ್ ಘೋಷಣೆ

- Advertisement -
- Advertisement -

ಮುಂಬರುವ ಉತ್ತರಾಖಂಡ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಭೇಟಿ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಹಲವು ಪ್ರಮುಖ ಚುನಾವಣಾ ಘೋಷಣೆಗಳನ್ನು ಮಾಡಿದ್ದಾರೆ. ದಿನವಿಡೀ ವಿದ್ಯುತ್ ಕಡಿತವಿರುವುದಿಲ್ಲ. ಪ್ರತಿ ಮನೆಗೆ 300 ಯುನಿಟ್ ಉಚಿತ ವಿದ್ಯುತ್ ಸೇರಿದಂತೆ ಅನೇಕ ಭರವಸೆ ನೀಡಿದ್ದಾರೆ.

ಉತ್ತರಾಖಂಡದ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭಾನುವಾರ ರಾಜ್ಯ ಪ್ರವಾಸ ನಡೆಸಿದ್ದಾರೆ. ಫೆಬ್ರವರಿ 2022 ರಲ್ಲಿ ನಡೆಯಲಿರುವ ಉತ್ತರಾಖಂಡ ಚುನಾವಣೆಗೆ ತಯಾರಾಗುತ್ತಿರುವ ಆಮ್ ಆದ್ಮಿ ಪಾರ್ಟಿಯಿಂದ ಕೆಲವು ಪ್ರಮುಖ ಚುನಾವಣಾ ಭರವಸೆಗಳನ್ನು ಘೋಷಿಸಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಈ ಹಿಂದೆ ಘೋಷಿಸಿದೆ.

ದೆಹಲಿಯ ವಿದ್ಯುತ್‌ ಯೋಜನೆಯಲ್ಲಿ ಪ್ರಶಂಸೆಗೆ ಪಾತ್ರವಾಗಿರುವ ಕೇಜ್ರಿವಾಲ್ ಸರ್ಕಾರ, ಇದನ್ನೇ ಉತ್ತರಾಖಂಡದಲ್ಲೂ ಪ್ರಯೋಗಿಸಲು ಸಜ್ಜಾಗಿದೆ. ವಿದ್ಯುತ್ ಕಡಿತವಿಲ್ಲದಿರುವುದು. ಪ್ರತಿ ಮನೆಗೆ 300 ಯುನಿಟ್ ಉಚಿತ ವಿದ್ಯುತ್, ಹಿಂದಿನ ಬಿಲ್‌ಗಳನ್ನು ಮನ್ನಾ ಮಾಡುವುದು ಮತ್ತು ರೈತರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದು ಈ ಘೋಷಣೆಗಳಲ್ಲಿ ಪ್ರಮುಖವಾಗಿವೆ.

ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

ಪ್ರತಿಸ್ಪರ್ಧಿಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ರಾಜ್ಯವನ್ನು ಲೂಟಿ ಮಾಡಿವೆ. ಇದರಿಂದ ರಾಜ್ಯವನ್ನು ತಪ್ಪಿಸಬೇಕಾಗಿದೆ, ಎರಡು ಪಕ್ಷಗಳು ಅಧಿಕಾರದ ಹಿಂದೆ ಬಿದ್ದಿವೆ, ಅಭಿವೃದ್ಧಿ ಹಿಂದೆಯಲ್ಲ ಎಂದು ಹೇಳಿದ್ದಾರೆ.

ಉತ್ತರಾಖಂಡದಲ್ಲಿ ಕರೆಂಟ್ ಉತ್ಪಾದಿಸಿ, ಬೇರೆ ರಾಜ್ಯಗಳಿಗೆ ಮಾರಾಟ ಮಾಡಲಾಗುತ್ತಿದೆ. ಹಾಗಿದ್ದರೂ ರಾಜ್ಯದಲ್ಲಿ ವಿದ್ಯುತ್‌ ದರ ಬಹಳ ದುಬಾರಿಯಾಗಿದೆ. ರಾಜ್ಯದ ಜನರಿಗೆ ಉಚಿತ ವಿದ್ಯುತ್ ಒದಗಿಸುವುದನ್ನು ಯಾವುದಾದರೂ ಪಕ್ಷ ಪರಿಗಣಿಸಿದೆಯೇ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

“ಉತ್ತರಾಖಂಡದ ಜನರು ಕಳೆದ 20 ವರ್ಷಗಳಿಂದ ಈ ಎರಡು ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಿಕ್ಕು ಒದ್ದಾಡುತ್ತಿದ್ದಾರೆ. ಎರಡು ಪಕ್ಷಗಳು ಕುರ್ಚಿಗಾಗಿ ಮಾತ್ರ ಹೋರಾಡುತ್ತಿವೆ. ಉತ್ತರಾಖಂಡದ ಜನರ ಅಭಿವೃದ್ಧಿಯ ಬಗ್ಗೆ ಯಾರು ಯೋಚಿಸುತ್ತಾರೆ?” ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

“ರಾಜ್ಯದಲ್ಲಿ ಎಎಪಿ ಸರ್ಕಾರ ರಚನೆಯಾದರೆ, ಐದು ವರ್ಷಗಳವರೆಗೆ ಯಾವುದೇ ತೆರಿಗೆಯನ್ನು ಹೆಚ್ಚಿಸಲಾಗುವುದಿಲ್ಲ. ರಾಜ್ಯವು ಯಾವುದೇ ಸಾಲವನ್ನು ಪಡೆಯುವುದಿಲ್ಲ. ಇಂತಹ ಯೋಜನೆಗಳನ್ನು ನಾವು ದೆಹಲಿಯಲ್ಲಿ ಮಾಡಿದ್ದೇನೆ. ಅದನ್ನು ಉತ್ತರಾಖಂಡದಲ್ಲೂ ಮಾಡುತ್ತೇವೆ” ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

2022 ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಆಮ್ ಆದ್ಮಿ ಪಕ್ಷವು ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ಅರವಿಂದ್ ಕೇಜ್ರಿವಾಲ್ ಈ ಹಿಂದೆ ಹೇಳಿದ್ದಾರೆ.


ಇದನ್ನೂ ಓದಿ: ಗುಜರಾತ್ ಪರಿಸ್ಥಿತಿ ಈಗ ಬದಲಾಗಲಿದೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...