Homeಮುಖಪುಟರಾಮದೇವ್‌ ವಿರುದ್ಧ ಅಶ್ಲೀಲ ಪೋಸ್ಟರ್ ಆರೋಪ; ಇಬ್ಬರು ವ್ಯಂಗ್ಯಚಿತ್ರಕಾರರ ಮೇಲೆ ಎಫ್‌ಐಆರ್‌

ರಾಮದೇವ್‌ ವಿರುದ್ಧ ಅಶ್ಲೀಲ ಪೋಸ್ಟರ್ ಆರೋಪ; ಇಬ್ಬರು ವ್ಯಂಗ್ಯಚಿತ್ರಕಾರರ ಮೇಲೆ ಎಫ್‌ಐಆರ್‌

- Advertisement -
- Advertisement -

ಪತಂಜಲಿ ಸಂಸ್ಥೆಯ ಬಾಬಾ ರಾಮ್‌ದೇವ್ ಅವರ ಅಶ್ಲೀಲ ಪೋಸ್ಟರ್‌ಗಳನ್ನು ಮಾಡಿದ ಆರೋಪದ ಮೇಲೆ ಡೆಹ್ರಾಡೂನ್ ಮೂಲದ ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಉತ್ತರಾಖಂಡ ಪೊಲೀಸರು ಮಂಗಳವಾರ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ವ್ಯಂಗ್ಯಚಿತ್ರಕಾರರಾದ ಗಜೇಂದ್ರ ರಾವತ್ ಮತ್ತು ಹೇಮಂತ್ ಮಾಳವಿಯಾ ವಿರುದ್ಧ ಪತಂಜಲಿ ಯೋಗಪೀಠದ ಕಾನೂನು ಕೋಶದಿಂದ ದೂರು ದಾಖಲಿಸಿದ ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಕಂಖಾಲ್ ಪೊಲೀಸ್ ಠಾಣೆಯ ಉಸ್ತುವಾರಿ ಮುಖೇಶ್ ಚೌಹಾಣ್ ಹೇಳಿದ್ದಾರೆ.

ಪತಂಜಲಿ ಯೋಗಪೀಠ ತನ್ನ ದೂರಿನಲ್ಲಿ, “ಈ ಇಬ್ಬರು ವ್ಯಂಗ್ಯಚಿತ್ರಕಾರರು ಯೋಗ ಗುರುವಿನ ಪ್ರತಿಷ್ಠೆಯನ್ನು ಹಾಳುಮಾಡುವ ಪೋಸ್ಟರ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ” ಎಂದು ಆರೋಪಿಸಿದೆ. “ಇಬ್ಬರು ಕಲಾವಿದರನ್ನು ಬಂಧಿಸಲಾಗಿಲ್ಲ, ಪೊಲೀಸರು ಇನ್ನೂ ಅವರನ್ನು ಹುಡುಕುತ್ತಿದ್ದಾರೆ” ಎಂದು ಪಿಟಿಐ ವರದಿ ಮಾಡಿದೆ.

ರಾವತ್ ಮತ್ತು ಮಾಳವಿಯಾ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಿಳೆಯ ವಸ್ತ್ರದ ಬಗ್ಗೆ ಮಾತನಾಡಿ ವಿವಾದ ಸೃಷ್ಟಿಸಿದ್ದ ರಾಮದೇವ್

“ಮಹಿಳೆಯರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ” ಎಂದು ಪತಂಜಲಿ ಸಂಸ್ಥೆಯ ಬಾಬಾ ರಾಮದೇವ್ ಇತ್ತೀಚೆಗೆ ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.

“ಮಹಿಳೆಯರು ಸೀರೆಯಲ್ಲಿ, ಸಲ್ವಾರ್ ಸೂಟ್‌ಗಳಲ್ಲಿ ಮತ್ತು ಏನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ” ಎಂದು ರಾಮದೇವ್ ಹೇಳಿದ್ದು, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಈ ಹೇಳಿಕೆಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದರು.

ಥಾಣೆಯಲ್ಲಿ ನಡೆದ ಯೋಗ ಶಿಬಿರದಲ್ಲಿ ಮಾತನಾಡಿದ್ದ ರಾಮ್‌ದೇವ್ ಅವರು, “ಸೀರೆ, ಸಲ್ವಾರ್ ಸೂಟ್‌ಗಳಲ್ಲಿ ಮತ್ತು ಏನನ್ನೂ ಧರಿಸದಿದ್ದರೂ ಮಹಿಳೆಯರು ಚೆನ್ನಾಗಿ ಕಾಣುತ್ತಾರೆ” ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು.

ಈ ಶಿಬಿರದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನಾವೀಸ್ ಉಪಸ್ಥಿತರಿದ್ದರು. ರಾಮ್‌ದೇವ್ ಅವರ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಈ ವಿಡಿಯೋವನ್ನು ಶೇರ್ ಮಾಡಿಕೊಂಡು, ಬಾಬಾ ರಾಮದೇವ್ ಹೇಳಿಕೆಯನ್ನು ಖಂಡಿಸಿದ್ದರು.

“ಮಹಾರಾಷ್ಟ್ರದ ಉಪಮುಖ್ಯಮಂತ್ರಿಯವರ ಪತ್ನಿಯ ಮುಂದೆ ಸ್ವಾಮಿ ರಾಮ್‌ದೇವ್ ಅವರು ಮಹಿಳೆಯರ ಬಗ್ಗೆ ನೀಡಿದ ಹೇಳಿಕೆಗಳು ಅಸಭ್ಯ ಮತ್ತು ಖಂಡನೀಯ. ಈ ಹೇಳಿಕೆಯಿಂದ ಎಲ್ಲಾ ಮಹಿಳೆಯರಿಗೆ ನೋವಾಗಿದೆ, ಬಾಬಾ ರಾಮದೇವ್‌ ಅವರು ದೇಶದ ಎದುರು ಕ್ಷಮೆಯಾಚಿಸಬೇಕು” ಎಂದು ಅವರು ಟ್ವೀಟ್ ಮಾಡಿದ್ದರು.

ಈ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಸಂಸದ ಶ್ರೀಕಾಂತ್ ಶಿಂಧೆ ಕೂಡ ಉಪಸ್ಥಿತರಿದ್ದರು.

ವಿವಾದದ ಬಳಿಕ ರಾಮದೇವ್‌ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಮುಂದೆ ಔಪಚಾರಿಕವಾಗಿ ಕ್ಷಮೆಯಾಚಿಸಿದ್ದರು. ತಮ್ಮ ಮಾತುಗಳನ್ನು ಸಂದರ್ಭಕ್ಕೆ ತಕ್ಕಂತೆ ತಿರುಚಲಾಗಿದೆ ಎಂದೂ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...