Homeಮುಖಪುಟರಾಮದೇವ್‌ ವಿರುದ್ಧ ಅಶ್ಲೀಲ ಪೋಸ್ಟರ್ ಆರೋಪ; ಇಬ್ಬರು ವ್ಯಂಗ್ಯಚಿತ್ರಕಾರರ ಮೇಲೆ ಎಫ್‌ಐಆರ್‌

ರಾಮದೇವ್‌ ವಿರುದ್ಧ ಅಶ್ಲೀಲ ಪೋಸ್ಟರ್ ಆರೋಪ; ಇಬ್ಬರು ವ್ಯಂಗ್ಯಚಿತ್ರಕಾರರ ಮೇಲೆ ಎಫ್‌ಐಆರ್‌

- Advertisement -
- Advertisement -

ಪತಂಜಲಿ ಸಂಸ್ಥೆಯ ಬಾಬಾ ರಾಮ್‌ದೇವ್ ಅವರ ಅಶ್ಲೀಲ ಪೋಸ್ಟರ್‌ಗಳನ್ನು ಮಾಡಿದ ಆರೋಪದ ಮೇಲೆ ಡೆಹ್ರಾಡೂನ್ ಮೂಲದ ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಉತ್ತರಾಖಂಡ ಪೊಲೀಸರು ಮಂಗಳವಾರ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ವ್ಯಂಗ್ಯಚಿತ್ರಕಾರರಾದ ಗಜೇಂದ್ರ ರಾವತ್ ಮತ್ತು ಹೇಮಂತ್ ಮಾಳವಿಯಾ ವಿರುದ್ಧ ಪತಂಜಲಿ ಯೋಗಪೀಠದ ಕಾನೂನು ಕೋಶದಿಂದ ದೂರು ದಾಖಲಿಸಿದ ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಕಂಖಾಲ್ ಪೊಲೀಸ್ ಠಾಣೆಯ ಉಸ್ತುವಾರಿ ಮುಖೇಶ್ ಚೌಹಾಣ್ ಹೇಳಿದ್ದಾರೆ.

ಪತಂಜಲಿ ಯೋಗಪೀಠ ತನ್ನ ದೂರಿನಲ್ಲಿ, “ಈ ಇಬ್ಬರು ವ್ಯಂಗ್ಯಚಿತ್ರಕಾರರು ಯೋಗ ಗುರುವಿನ ಪ್ರತಿಷ್ಠೆಯನ್ನು ಹಾಳುಮಾಡುವ ಪೋಸ್ಟರ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ” ಎಂದು ಆರೋಪಿಸಿದೆ. “ಇಬ್ಬರು ಕಲಾವಿದರನ್ನು ಬಂಧಿಸಲಾಗಿಲ್ಲ, ಪೊಲೀಸರು ಇನ್ನೂ ಅವರನ್ನು ಹುಡುಕುತ್ತಿದ್ದಾರೆ” ಎಂದು ಪಿಟಿಐ ವರದಿ ಮಾಡಿದೆ.

ರಾವತ್ ಮತ್ತು ಮಾಳವಿಯಾ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಿಳೆಯ ವಸ್ತ್ರದ ಬಗ್ಗೆ ಮಾತನಾಡಿ ವಿವಾದ ಸೃಷ್ಟಿಸಿದ್ದ ರಾಮದೇವ್

“ಮಹಿಳೆಯರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ” ಎಂದು ಪತಂಜಲಿ ಸಂಸ್ಥೆಯ ಬಾಬಾ ರಾಮದೇವ್ ಇತ್ತೀಚೆಗೆ ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.

“ಮಹಿಳೆಯರು ಸೀರೆಯಲ್ಲಿ, ಸಲ್ವಾರ್ ಸೂಟ್‌ಗಳಲ್ಲಿ ಮತ್ತು ಏನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ” ಎಂದು ರಾಮದೇವ್ ಹೇಳಿದ್ದು, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಈ ಹೇಳಿಕೆಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದರು.

ಥಾಣೆಯಲ್ಲಿ ನಡೆದ ಯೋಗ ಶಿಬಿರದಲ್ಲಿ ಮಾತನಾಡಿದ್ದ ರಾಮ್‌ದೇವ್ ಅವರು, “ಸೀರೆ, ಸಲ್ವಾರ್ ಸೂಟ್‌ಗಳಲ್ಲಿ ಮತ್ತು ಏನನ್ನೂ ಧರಿಸದಿದ್ದರೂ ಮಹಿಳೆಯರು ಚೆನ್ನಾಗಿ ಕಾಣುತ್ತಾರೆ” ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು.

ಈ ಶಿಬಿರದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನಾವೀಸ್ ಉಪಸ್ಥಿತರಿದ್ದರು. ರಾಮ್‌ದೇವ್ ಅವರ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಈ ವಿಡಿಯೋವನ್ನು ಶೇರ್ ಮಾಡಿಕೊಂಡು, ಬಾಬಾ ರಾಮದೇವ್ ಹೇಳಿಕೆಯನ್ನು ಖಂಡಿಸಿದ್ದರು.

“ಮಹಾರಾಷ್ಟ್ರದ ಉಪಮುಖ್ಯಮಂತ್ರಿಯವರ ಪತ್ನಿಯ ಮುಂದೆ ಸ್ವಾಮಿ ರಾಮ್‌ದೇವ್ ಅವರು ಮಹಿಳೆಯರ ಬಗ್ಗೆ ನೀಡಿದ ಹೇಳಿಕೆಗಳು ಅಸಭ್ಯ ಮತ್ತು ಖಂಡನೀಯ. ಈ ಹೇಳಿಕೆಯಿಂದ ಎಲ್ಲಾ ಮಹಿಳೆಯರಿಗೆ ನೋವಾಗಿದೆ, ಬಾಬಾ ರಾಮದೇವ್‌ ಅವರು ದೇಶದ ಎದುರು ಕ್ಷಮೆಯಾಚಿಸಬೇಕು” ಎಂದು ಅವರು ಟ್ವೀಟ್ ಮಾಡಿದ್ದರು.

ಈ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಸಂಸದ ಶ್ರೀಕಾಂತ್ ಶಿಂಧೆ ಕೂಡ ಉಪಸ್ಥಿತರಿದ್ದರು.

ವಿವಾದದ ಬಳಿಕ ರಾಮದೇವ್‌ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಮುಂದೆ ಔಪಚಾರಿಕವಾಗಿ ಕ್ಷಮೆಯಾಚಿಸಿದ್ದರು. ತಮ್ಮ ಮಾತುಗಳನ್ನು ಸಂದರ್ಭಕ್ಕೆ ತಕ್ಕಂತೆ ತಿರುಚಲಾಗಿದೆ ಎಂದೂ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...