Homeಮುಖಪುಟರಾಮದೇವ್‌ ವಿರುದ್ಧ ಅಶ್ಲೀಲ ಪೋಸ್ಟರ್ ಆರೋಪ; ಇಬ್ಬರು ವ್ಯಂಗ್ಯಚಿತ್ರಕಾರರ ಮೇಲೆ ಎಫ್‌ಐಆರ್‌

ರಾಮದೇವ್‌ ವಿರುದ್ಧ ಅಶ್ಲೀಲ ಪೋಸ್ಟರ್ ಆರೋಪ; ಇಬ್ಬರು ವ್ಯಂಗ್ಯಚಿತ್ರಕಾರರ ಮೇಲೆ ಎಫ್‌ಐಆರ್‌

- Advertisement -
- Advertisement -

ಪತಂಜಲಿ ಸಂಸ್ಥೆಯ ಬಾಬಾ ರಾಮ್‌ದೇವ್ ಅವರ ಅಶ್ಲೀಲ ಪೋಸ್ಟರ್‌ಗಳನ್ನು ಮಾಡಿದ ಆರೋಪದ ಮೇಲೆ ಡೆಹ್ರಾಡೂನ್ ಮೂಲದ ಇಬ್ಬರು ವ್ಯಂಗ್ಯಚಿತ್ರಕಾರರ ವಿರುದ್ಧ ಉತ್ತರಾಖಂಡ ಪೊಲೀಸರು ಮಂಗಳವಾರ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ವ್ಯಂಗ್ಯಚಿತ್ರಕಾರರಾದ ಗಜೇಂದ್ರ ರಾವತ್ ಮತ್ತು ಹೇಮಂತ್ ಮಾಳವಿಯಾ ವಿರುದ್ಧ ಪತಂಜಲಿ ಯೋಗಪೀಠದ ಕಾನೂನು ಕೋಶದಿಂದ ದೂರು ದಾಖಲಿಸಿದ ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಕಂಖಾಲ್ ಪೊಲೀಸ್ ಠಾಣೆಯ ಉಸ್ತುವಾರಿ ಮುಖೇಶ್ ಚೌಹಾಣ್ ಹೇಳಿದ್ದಾರೆ.

ಪತಂಜಲಿ ಯೋಗಪೀಠ ತನ್ನ ದೂರಿನಲ್ಲಿ, “ಈ ಇಬ್ಬರು ವ್ಯಂಗ್ಯಚಿತ್ರಕಾರರು ಯೋಗ ಗುರುವಿನ ಪ್ರತಿಷ್ಠೆಯನ್ನು ಹಾಳುಮಾಡುವ ಪೋಸ್ಟರ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ” ಎಂದು ಆರೋಪಿಸಿದೆ. “ಇಬ್ಬರು ಕಲಾವಿದರನ್ನು ಬಂಧಿಸಲಾಗಿಲ್ಲ, ಪೊಲೀಸರು ಇನ್ನೂ ಅವರನ್ನು ಹುಡುಕುತ್ತಿದ್ದಾರೆ” ಎಂದು ಪಿಟಿಐ ವರದಿ ಮಾಡಿದೆ.

ರಾವತ್ ಮತ್ತು ಮಾಳವಿಯಾ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಿಳೆಯ ವಸ್ತ್ರದ ಬಗ್ಗೆ ಮಾತನಾಡಿ ವಿವಾದ ಸೃಷ್ಟಿಸಿದ್ದ ರಾಮದೇವ್

“ಮಹಿಳೆಯರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ” ಎಂದು ಪತಂಜಲಿ ಸಂಸ್ಥೆಯ ಬಾಬಾ ರಾಮದೇವ್ ಇತ್ತೀಚೆಗೆ ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.

“ಮಹಿಳೆಯರು ಸೀರೆಯಲ್ಲಿ, ಸಲ್ವಾರ್ ಸೂಟ್‌ಗಳಲ್ಲಿ ಮತ್ತು ಏನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ” ಎಂದು ರಾಮದೇವ್ ಹೇಳಿದ್ದು, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಈ ಹೇಳಿಕೆಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದರು.

ಥಾಣೆಯಲ್ಲಿ ನಡೆದ ಯೋಗ ಶಿಬಿರದಲ್ಲಿ ಮಾತನಾಡಿದ್ದ ರಾಮ್‌ದೇವ್ ಅವರು, “ಸೀರೆ, ಸಲ್ವಾರ್ ಸೂಟ್‌ಗಳಲ್ಲಿ ಮತ್ತು ಏನನ್ನೂ ಧರಿಸದಿದ್ದರೂ ಮಹಿಳೆಯರು ಚೆನ್ನಾಗಿ ಕಾಣುತ್ತಾರೆ” ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು.

ಈ ಶಿಬಿರದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನಾವೀಸ್ ಉಪಸ್ಥಿತರಿದ್ದರು. ರಾಮ್‌ದೇವ್ ಅವರ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಈ ವಿಡಿಯೋವನ್ನು ಶೇರ್ ಮಾಡಿಕೊಂಡು, ಬಾಬಾ ರಾಮದೇವ್ ಹೇಳಿಕೆಯನ್ನು ಖಂಡಿಸಿದ್ದರು.

“ಮಹಾರಾಷ್ಟ್ರದ ಉಪಮುಖ್ಯಮಂತ್ರಿಯವರ ಪತ್ನಿಯ ಮುಂದೆ ಸ್ವಾಮಿ ರಾಮ್‌ದೇವ್ ಅವರು ಮಹಿಳೆಯರ ಬಗ್ಗೆ ನೀಡಿದ ಹೇಳಿಕೆಗಳು ಅಸಭ್ಯ ಮತ್ತು ಖಂಡನೀಯ. ಈ ಹೇಳಿಕೆಯಿಂದ ಎಲ್ಲಾ ಮಹಿಳೆಯರಿಗೆ ನೋವಾಗಿದೆ, ಬಾಬಾ ರಾಮದೇವ್‌ ಅವರು ದೇಶದ ಎದುರು ಕ್ಷಮೆಯಾಚಿಸಬೇಕು” ಎಂದು ಅವರು ಟ್ವೀಟ್ ಮಾಡಿದ್ದರು.

ಈ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಸಂಸದ ಶ್ರೀಕಾಂತ್ ಶಿಂಧೆ ಕೂಡ ಉಪಸ್ಥಿತರಿದ್ದರು.

ವಿವಾದದ ಬಳಿಕ ರಾಮದೇವ್‌ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಮುಂದೆ ಔಪಚಾರಿಕವಾಗಿ ಕ್ಷಮೆಯಾಚಿಸಿದ್ದರು. ತಮ್ಮ ಮಾತುಗಳನ್ನು ಸಂದರ್ಭಕ್ಕೆ ತಕ್ಕಂತೆ ತಿರುಚಲಾಗಿದೆ ಎಂದೂ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...