Homeಮುಖಪುಟಉತ್ತರಖಂಡ: ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡುವವರಿಗೆ 1 ಲಕ್ಷದ ವರೆಗೂ ಬಹುಮಾನ!

ಉತ್ತರಖಂಡ: ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡುವವರಿಗೆ 1 ಲಕ್ಷದ ವರೆಗೂ ಬಹುಮಾನ!

ಉತ್ತರಖಂಡದಲ್ಲಿ 2019 ರಲ್ಲಿ ಮಾರಣಾಂತಿಕ ರಸ್ತೆ ಅಪಘಾತಗಳಲ್ಲಿ 866 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರೆ, 1459 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

- Advertisement -
- Advertisement -

ತ್ರಿವೇಂದ್ರ ಸಿಂಗ್ ರಾವತ್ ನೇತೃತ್ವದ ಉತ್ತರ‌ಖಂಡ ಸರ್ಕಾರ, ರಸ್ತೆ ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡಲು ಮಾಡಿದವರಿಗೆ 1 ಲಕ್ಷ ರೂ. ವರೆಗೂ ಬಹುಮಾನ ನೀಡುವ ಹೊಸ ಪ್ರಸ್ತಾಪಕ್ಕೆ ತಾತ್ವಿಕವಾಗಿ ಅನುಮೋದನೆ ನೀಡಿದೆ.

ಉತ್ತರಖಂಡ ರಾಜ್ಯದ ಸಾರಿಗೆ ಇಲಾಖೆಯ ಪ್ರಕಾರ, 2019 ರಲ್ಲಿ ಮಾರಣಾಂತಿಕ ರಸ್ತೆ ಅಪಘಾತಗಳಲ್ಲಿ 866 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರೆ, 1459 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪೊಲೀಸ್ ಅಧಿಕಾರಿಗಳು ಹೇಳುವಂತೆ, ನ್ಯಾಯಾಲಯದ ವಿಚಾರಣೆ ಮತ್ತು ಪದೇ ಪದೇ ಪೊಲೀಸ್ ಠಾಣೆ ಮೆಟ್ಟಿಲೇರುವ ತೊಂದರೆಗಳಿಗೆ ಹೆದರುತ್ತಿರುವುದರಿಂದ ಅನೇಕ ಮಂದಿ ಅಪಘಾತ ಸಂತ್ರಸ್ತರಿಗೆ ಸಹಾಯ ಮಾಡುವುದರಿಂದ ತಪ್ಪಿಸಿಕೊಳ್ಳುತ್ತಾರೆ, ಹಿಂದೇಟು ಹಾಕುತ್ತಾರೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆ ಸರ್ಕಾರದ ಈ ಕ್ರಮವು ಅಪಘಾತಗಳಲ್ಲಿ ಗಾಯಗೊಂಡ ಸಂತ್ರಸ್ತರಿಗೆ ನೆರವು ನೀಡಲು, ಅವರ ಜೀವ ಉಳಿಸಲು ಪ್ರೇರಣೆ ನೀಡಿ ಸಹಾಯ ಮಾಡುತ್ತದೆ. ರಸ್ತೆ ಸುರಕ್ಷತಾ ನಿಧಿಯಿಂದ ಇಂತಹ ಪ್ರಕರಣಗಳಲ್ಲಿ 1 ಲಕ್ಷ ರೂ.ವರೆಗೆ ಬಹುಮಾನ ನೀಡುವ ಅಧಿಕಾರ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಇರುತ್ತದೆ ಎಂದು ಅಧಿಖಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಉತ್ತರಖಂಡ: ಕೊರೊನಾ ನಡುವೆಯೂ ಹರಿದ್ವಾರದಲ್ಲಿ ಕುಂಬಮೇಳ ನಡೆಸಲು ಸರ್ಕಾರದ ಸಿದ್ದತೆ!

ಈ ಯೋಜನೆಗೆ ಹೆಚ್ಚುವರಿಯಾಗಿ, ಸರ್ಕಾರವು ’ಪಬ್ಲಿಕ್ ಹೈ ಆ್ಯಪ್’ ಅನ್ನು ಸಹ ಆರಂಭಿಸಲಾಗುತ್ತದೆ. ಇದರ ಮೂಲಕ ಅಪಘಾತ ಮಾತ್ರವಲ್ಲದೇ, ಮಹಿಳೆಯರ ವಿರುದ್ಧ ನಡೆಯುವ ದೌರ್ಜನ್ಯ ಮತ್ತು ಮಾದಕ ವಸ್ತುಗಳ ಪ್ರಕರಣಗಳ ಬಗ್ಗೆಯೂ ವಿಡಿಯೋ, ಫೋಟೋ ಸಾಕ್ಷಿಗಳೊಂದಿಗೆ ಮಾಹಿತಿ ನೀಡಬಹುದಾಗಿದೆ ಎಂದು ತಿಳಿಸಲಾಗಿದೆ.

ಗೃಹ ಇಲಾಖೆ ಮತ್ತು ಪೊಲೀಸರ ಅಧಿಕಾರಿಗಳು ಜಂಟಿಯಾಗಿ ನಡೆಸಿದ ಸಭೆಯಲ್ಲಿ ಈ ಕ್ರಮಗಳ ಕುರಿತು ಚರ್ಚಿಸಲಾಗಿದೆ. ನಗರ ಮತ್ತು ಹೆದ್ದಾರಿಯಲ್ಲಿ ಗಸ್ತು ತಿರುಗಲು ಸುಮಾರು 100 ಹೊಸ ಸ್ಕಾರ್ಪಿಯೋ ವಾಹನಗಳನ್ನು ತೆಗೆದುಕೊಳ್ಳಲಾಗುವುದು. ಮಹಿಳೆಯರಿಗೆ ಅಗ್ನಿಶಾಮಕ ಸೇವೆಯಲ್ಲಿ ಅವಕಾಶ ನೀಡಲಾಗುವುದು ಎಂದು ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.


ಇದನ್ನೂ ಓದಿ: ಸರೀಸೃಪಗಳು, ಸಣ್ಣ ಪ್ರಾಣಿಗಳಿಗಾಗಿ ಪರಿಸರ ಸೇತುವೆ ನಿರ್ಮಿಸಿದ ಉತ್ತರಖಂಡ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...