Homeಮುಖಪುಟಉತ್ತರಾಖಂಡ: ಮುಸ್ಲಿಂ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಬೇಕು; ಬೆದರಿಕೆಯ ಪೋಸ್ಟರ್‌ ಅಂಟಿಸಿದ ಕಿಡಿಗೇಡಿಗಳು

ಉತ್ತರಾಖಂಡ: ಮುಸ್ಲಿಂ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಬೇಕು; ಬೆದರಿಕೆಯ ಪೋಸ್ಟರ್‌ ಅಂಟಿಸಿದ ಕಿಡಿಗೇಡಿಗಳು

- Advertisement -
- Advertisement -

ಸೋಮವಾರ ಉತ್ತರಾಖಂಡದ ಉತ್ತರಕಾಶಿ ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚುಬೇಕು ಎಂದು ಬೆದರಿಕೆ ಹಾಕುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಇದು ಪುರೋಲಾ ಮುಖ್ಯ ಮಾರುಕಟ್ಟೆಯಲ್ಲಿ ನಡೆದಿದೆ. ಈ ಮಾರುಕಟ್ಟೆಯಲ್ಲಿ ಸರಿಸುಮಾರು 650-700 ಅಂಗಡಿಗಳಿದ್ದು, ಇವುಗಳಲ್ಲಿ ಸುಮಾರು 30-40 ಮುಸ್ಲಿಮರ ಅಂಗಡಿಗಳಿವೆ.

ಪುರೋಲಾ ಪ್ರದೇಶದಲ್ಲಿ ಕಳೆದ ತಿಂಗಳು 14 ವರ್ಷದ ಹಿಂದೂ ಹುಡುಗಿಯನ್ನು ಇಬ್ಬರು ಪುರುಷರು – ಒಬ್ಬ ಮುಸ್ಲಿಂ ಮತ್ತು ಇನ್ನೊಬ್ಬ ಹಿಂದೂ ಅಪಹರಣ ಯತ್ನ ನಡೆಸಿದ ಆರೋಪದ ಮೇಲೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ಸೋಮವಾರ ಉತ್ತರಾಖಂಡದ ಉತ್ತರಕಾಶಿ ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಜೂನ್ 15 ರೊಳಗೆ ಅಂಗಡಿಗಳನ್ನು ಮುಚ್ಚುವುದಾಗಿ ಬೆದರಿಕೆ ಹಾಕುವ ಪೋಸ್ಟರ್‌ಗಳು ಕಾಣಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಅಂಗಡಿಯ ಉಬೇದ್ ಖಾನ್ (24), ಮತ್ತು ಮೋಟಾರ್ ಸೈಕಲ್ ಮೆಕ್ಯಾನಿಕ್ ಜಿತೇಂದರ್ ಸೈನಿ (23) ಎನ್ನುವವರು ಯುವತಿಯ ಅಪಹರಣದ ಪ್ರಯತ್ನ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಒಂದು ದಿನದ ನಂತರ ಮೇ 27 ರಂದು ಬಂಧಿಸಲಾಯಿತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದು ‘ಲವ್ ಜಿಹಾದ್’ ಪ್ರಕರಣ ಎಂದು ಬಲಪಂಥೀಯ ಗುಂಪುಗಳು ಆರೋಪಿಸಿವೆ. ಇಂತಹ ಪ್ರಕರಣಗಳಲ್ಲಿ ಬಲಪಂಥೀಯರು, ಹಿಂದೂ ಮಹಿಳೆಯರನ್ನು ಓಲೈಸಲು ಮತ್ತು ಮೋಹಿಸಲು ಮುಸ್ಲಿಂ ಪುರುಷರು ನಡೆಸಿದ ಪಿತೂರಿ ಎಂದು ವಿವರಿಸಲು ಘಟನೆಯನ್ನು ಬಳಸಿಕೊಳ್ಳುತ್ತಾರೆ. ಆದರೆ ನ್ಯಾಯಾಲಯಗಳು ಮತ್ತು ಕೇಂದ್ರ ಸರ್ಕಾರ ಇದನ್ನು ಅಧಿಕೃತವಾಗಿ ಗುರುತಿಸುವುದಿಲ್ಲ.

ಉತ್ತರಕಾಶಿಯ ಪುರೋಲಾ ಮುಖ್ಯ ಮಾರುಕಟ್ಟೆಯಲ್ಲಿ ಜೂನ್ 15 ರಂದು ನಡೆಯುವ ಮಹಾಪಂಚಾಯತ್‌ಗೆ ಮುನ್ನ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಖಾಲಿ ಮಾಡುವಂತೆ ಪೋಸ್ಟರ್‌ಗಳಲ್ಲಿ ಹೇಳಲಾಗಿದೆ.

”ಲವ್ ಜಿಹಾದಿಗಳು ಜೂನ್ 15ರಂದು ಮಹಾಪಂಚಾಯತ್‌ಗೆ ಮುಂಚಿತವಾಗಿ ಅಂಗಡಿಗಳನ್ನು ಖಾಲಿ ಮಾಡಬೇಕು ಎಂದು ತಿಳಿಸಲಾಗಿದೆ. ಅವರು ಖಾಲಿ ಮಾಡದಿದ್ದರೆ,  ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಇದು ‘ಭೂಮಿ ರಕ್ಷಣೆಗಾಗಿ ಅಭಿಯಾನಕ್ಕೆ ಕರೆ ನೀಡುತ್ತದೆ” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಬಾರ್ಕೋಟ್‌ನಲ್ಲಿ ಪ್ರತಿಭಟನೆ ನಡೆಸಿ ಬಲಪಂಥೀಯ ಸಂಘಟನೆಗಳ ಸದಸ್ಯರು ಮುಸ್ಲಿಮರ ಅಂಗಡಿಗಳು ಮತ್ತು ಮನೆಗಳ ಮೇಲೆ ದಾಳಿ ಮಾಡಿದರು. ಇದಾದ ಎರಡು ದಿನಗಳ ನಂತರ ಈ ಪೋಸ್ಟರ್‌ಗಳು ಕಾಣಿಸಿಕೊಂಡವು. ಮತ್ತೊಂದೆಡೆ ಆ ದಾಳಿಕೋರರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಪೋಸ್ಟರ್‌ಗಳನ್ನು ಸೋಮವಾರ ತೆಗೆದುಹಾಕಲಾಗಿದ್ದು, ಅವುಗಳನ್ನು ಅಂಟಿಸಿದವರನ್ನು ಗುರುತಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ’ದಿ ಕೇರಳ ಸ್ಟೋರಿ’ ವರ್ಸಸ್ ’ದಿ ಗುಜರಾತ್ ಸ್ಟೋರಿ’!

”ನಾವು ಈ ಪೋಸ್ಟರ್‌ಗಳನ್ನು ತೆಗೆದುಹಾಕಿದ್ದೇವೆ ಮತ್ತು ಅವುಗಳನ್ನು ಅಂಟಿಸಿದ ಸಮಾಜವಿರೋಧಿಗಳನ್ನು ಗುರುತಿಸುತ್ತಿದ್ದೇವೆ” ಎಂದು ಉತ್ತರಕಾಶಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅರ್ಪಣ್ ಯದುವಂಶಿ ಹೇಳಿದ್ದಾರೆ.

ಸ್ಥಳೀಯ ನಿವಾಸಿಗಳು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ ಎಂದು ಸ್ಥಳೀಯ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮುಖಂಡರೊಬ್ಬರು ತಿಳಿಸಿದ್ದಾರೆ.

”ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಉಳಿಯಲು ನಿರ್ದಿಷ್ಟ ಸಮುದಾಯದ ಜನರು ಪಟ್ಟಣವನ್ನು ತೊರೆಯಬೇಕೆಂದು ಬಯಸುವ ಸ್ಥಳೀಯ ನಿವಾಸಿಗಳು ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ. ಅವರು ವ್ಯಾಪಾರ ಮಾಡುವ ನೆಪದಲ್ಲಿ ಇಲ್ಲಿಗೆ ಬಂದರು ಆದರೆ ನಮ್ಮ ಸಮುದಾಯದ ಹುಡುಗಿಯರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂದು ವಿಎಚ್‌ಪಿ ನಾಯಕ ವೀರೇಂದ್ರ ರಾಣಾ ಆರೋಪ ಮಾಡಿದ್ದಾರೆ.

ಪುರೋಲಾದಲ್ಲಿ ಗಾರ್ಮೆಂಟ್ಸ್ ಅಂಗಡಿಯನ್ನು ನಡೆಸುತ್ತಿರುವ ಸಲೀಂ (35) ಅವರು ನಡೆಯುತ್ತಿರುವ ಉದ್ವಿಗ್ನತೆ ಬಗ್ಗೆ ಮಾತನಾಡಿ,”ನಾವು ನಿರಂತರ ಭಯದಲ್ಲಿ ಬದುಕುತ್ತಿದ್ದೇವೆ ಮತ್ತು ಅಂತಹ ವಾತಾವರಣದಲ್ಲಿ ಪುರೋಲಾಗೆ ಹಿಂತಿರುಗಲು ಸಾಧ್ಯವಿಲ್ಲ. ನಾವು ಅಂಗಡಿಯಲ್ಲಿನ ಬಟ್ಟೆಗಳನ್ನೆಲ್ಲಾ ಬಿಟ್ಟು ಓಡಿಹೋಗಬೇಕೆಂದು ಅವರು ಬಯಸಿದ್ದಾರೆ. ಒಂದುವೇಳೆ ಅದೇ ರೀತಿಯಾದರೆ, ಅಧಿಕಾರಿಗಳು ನಮ್ಮ ಒಡೆತನದ ಆಸ್ತಿಗೆ ಪರಿಹಾರ ನೀಡಬೇಕು” ಎಂದು ಹೇಳಿದ್ದಾರೆ. ಸಧ್ಯ ಅವರು ಆ ಸ್ಥಳ ಬಿಟ್ಟು ಡೆಹ್ರಾಡೂನ್‌ನಲ್ಲಿರುವ ತನ್ನ ಸಹೋದರನ ಮನೆಗೆ ಓಡಿಹೋಗಿದ್ದಾರೆ.

ಹೆಸರು ಹೇಳಲಿಚ್ಚಿಸದ ಮಾರುಕಟ್ಟೆಯಲ್ಲಿನ ಮತ್ತೊಬ್ಬ ಮುಸ್ಲಿಂ ಅಂಗಡಿಯವವರು ಮಾತನಾಡಿದ್ದು, ”ನಾವು ಅಪಹರಣ ಪ್ರಯತ್ನವನ್ನು ಖಂಡಿಸುತ್ತೇವೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತೇವೆ. ಅಪರಾಧ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಜನರನ್ನು ನಾವು ಬೆಂಬಲಿಸುವುದಿಲ್ಲ” ಎಂದು ಹೇಳಿದ್ದಾರೆ.

ಸೋಮವಾರ, ಕೆಲವು ಮುಸ್ಲಿಂ ಕುಟುಂಬಗಳು ಪುರೋಲೋ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ (SDM) ಜ್ಞಾಪಕ ಪತ್ರವನ್ನು ಹಸ್ತಾಂತರಿಸಿದ್ದು, ಅವರು ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟನ್ನು ಎತ್ತಿ ತೋರಿಸಿದರು ಮತ್ತು ಅಂಗಡಿಗಳನ್ನು ಪುನಃ ತೆರೆಯಲು ಭದ್ರತೆಯನ್ನು ಕೋರಿದರು. ಜ್ಞಾಪಕ ಪತ್ರದಲ್ಲಿ ಮುಸ್ಲಿಮರಿಗೆ ಏನಾದರೂ ಅಹಿತಕರವಾದರೆ ಆಡಳಿತವೇ ಹೊಣೆಯಾಗುತ್ತದೆ ಎಂದು ಹೇಳಿದೆ.

ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ದೇವಾನಂದ್ ಶರ್ಮಾ ಈ ಬಗ್ಗೆ ಮಾತನಾಡಿ, ”ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಪಟ್ಟಣದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಖಚಿತಪಡಿಸಿಕೊಳ್ಳಲು ನಾವು ಬೆಳವಣಿಗೆಗಳ ಮೇಲೆ ಕಣ್ಣಿಟ್ಟಿದ್ದೇವೆ” ಎಂದು ಹೇಳಿದರು.

ಮೇ 26 ರಂದು ಇಬ್ಬರು ವ್ಯಕ್ತಿಗಳು ಅಪ್ರಾಪ್ತೆಯನ್ನು ಅಪಹರಿಸಲು ಪ್ರಯತ್ನಿಸಿದಾಗ ಉತ್ತರಕಾಶಿಯಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಅಪಹರಣ ಪ್ರಯತ್ನ ವಿಫಲವಾದ ನಂತರ ಆರೋಪಿಗಳು ಪರಾರಿಯಾಗಿದ್ದು, ಮರುದಿನ ಹುಡೋಳಿ ಗ್ರಾಮದಿಂದ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 29 ರಂದು, ಕೆಲವು ಪ್ರತಿಭಟನಾಕಾರರು ಮುಸ್ಲಿಮರಿಗೆ ಸೇರಿದ ಅಂಗಡಿಗಳು ಮತ್ತು ಸಂಸ್ಥೆಗಳ ಮೇಲೆ ದಾಳಿ ಮಾಡಿದ ನಂತರ ಪುರೋಲಾದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿತು. ಯಮುನಾ ಘಾಟಿ ಹಿಂದೂ ಜಾಗೃತಿ ಸಂಘಟನೆಯ ಬ್ಯಾನರ್ ಅಡಿಯಲ್ಲಿ ಶನಿವಾರ ಇದೇ ರೀತಿಯ ಪ್ರತಿಭಟನೆ ನಡೆಸಲಾಯಿತು. ಸುಮಾರು 900 ಜನರು ಈ ಧರಣಿಯಲ್ಲಿ ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...