Homeಮುಖಪುಟಉತ್ತರಾಖಂಡ: ಮುಸ್ಲಿಂ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಬೇಕು; ಬೆದರಿಕೆಯ ಪೋಸ್ಟರ್‌ ಅಂಟಿಸಿದ ಕಿಡಿಗೇಡಿಗಳು

ಉತ್ತರಾಖಂಡ: ಮುಸ್ಲಿಂ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಬೇಕು; ಬೆದರಿಕೆಯ ಪೋಸ್ಟರ್‌ ಅಂಟಿಸಿದ ಕಿಡಿಗೇಡಿಗಳು

- Advertisement -
- Advertisement -

ಸೋಮವಾರ ಉತ್ತರಾಖಂಡದ ಉತ್ತರಕಾಶಿ ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚುಬೇಕು ಎಂದು ಬೆದರಿಕೆ ಹಾಕುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಇದು ಪುರೋಲಾ ಮುಖ್ಯ ಮಾರುಕಟ್ಟೆಯಲ್ಲಿ ನಡೆದಿದೆ. ಈ ಮಾರುಕಟ್ಟೆಯಲ್ಲಿ ಸರಿಸುಮಾರು 650-700 ಅಂಗಡಿಗಳಿದ್ದು, ಇವುಗಳಲ್ಲಿ ಸುಮಾರು 30-40 ಮುಸ್ಲಿಮರ ಅಂಗಡಿಗಳಿವೆ.

ಪುರೋಲಾ ಪ್ರದೇಶದಲ್ಲಿ ಕಳೆದ ತಿಂಗಳು 14 ವರ್ಷದ ಹಿಂದೂ ಹುಡುಗಿಯನ್ನು ಇಬ್ಬರು ಪುರುಷರು – ಒಬ್ಬ ಮುಸ್ಲಿಂ ಮತ್ತು ಇನ್ನೊಬ್ಬ ಹಿಂದೂ ಅಪಹರಣ ಯತ್ನ ನಡೆಸಿದ ಆರೋಪದ ಮೇಲೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ಸೋಮವಾರ ಉತ್ತರಾಖಂಡದ ಉತ್ತರಕಾಶಿ ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಜೂನ್ 15 ರೊಳಗೆ ಅಂಗಡಿಗಳನ್ನು ಮುಚ್ಚುವುದಾಗಿ ಬೆದರಿಕೆ ಹಾಕುವ ಪೋಸ್ಟರ್‌ಗಳು ಕಾಣಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಅಂಗಡಿಯ ಉಬೇದ್ ಖಾನ್ (24), ಮತ್ತು ಮೋಟಾರ್ ಸೈಕಲ್ ಮೆಕ್ಯಾನಿಕ್ ಜಿತೇಂದರ್ ಸೈನಿ (23) ಎನ್ನುವವರು ಯುವತಿಯ ಅಪಹರಣದ ಪ್ರಯತ್ನ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಒಂದು ದಿನದ ನಂತರ ಮೇ 27 ರಂದು ಬಂಧಿಸಲಾಯಿತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದು ‘ಲವ್ ಜಿಹಾದ್’ ಪ್ರಕರಣ ಎಂದು ಬಲಪಂಥೀಯ ಗುಂಪುಗಳು ಆರೋಪಿಸಿವೆ. ಇಂತಹ ಪ್ರಕರಣಗಳಲ್ಲಿ ಬಲಪಂಥೀಯರು, ಹಿಂದೂ ಮಹಿಳೆಯರನ್ನು ಓಲೈಸಲು ಮತ್ತು ಮೋಹಿಸಲು ಮುಸ್ಲಿಂ ಪುರುಷರು ನಡೆಸಿದ ಪಿತೂರಿ ಎಂದು ವಿವರಿಸಲು ಘಟನೆಯನ್ನು ಬಳಸಿಕೊಳ್ಳುತ್ತಾರೆ. ಆದರೆ ನ್ಯಾಯಾಲಯಗಳು ಮತ್ತು ಕೇಂದ್ರ ಸರ್ಕಾರ ಇದನ್ನು ಅಧಿಕೃತವಾಗಿ ಗುರುತಿಸುವುದಿಲ್ಲ.

ಉತ್ತರಕಾಶಿಯ ಪುರೋಲಾ ಮುಖ್ಯ ಮಾರುಕಟ್ಟೆಯಲ್ಲಿ ಜೂನ್ 15 ರಂದು ನಡೆಯುವ ಮಹಾಪಂಚಾಯತ್‌ಗೆ ಮುನ್ನ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಖಾಲಿ ಮಾಡುವಂತೆ ಪೋಸ್ಟರ್‌ಗಳಲ್ಲಿ ಹೇಳಲಾಗಿದೆ.

”ಲವ್ ಜಿಹಾದಿಗಳು ಜೂನ್ 15ರಂದು ಮಹಾಪಂಚಾಯತ್‌ಗೆ ಮುಂಚಿತವಾಗಿ ಅಂಗಡಿಗಳನ್ನು ಖಾಲಿ ಮಾಡಬೇಕು ಎಂದು ತಿಳಿಸಲಾಗಿದೆ. ಅವರು ಖಾಲಿ ಮಾಡದಿದ್ದರೆ,  ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಇದು ‘ಭೂಮಿ ರಕ್ಷಣೆಗಾಗಿ ಅಭಿಯಾನಕ್ಕೆ ಕರೆ ನೀಡುತ್ತದೆ” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಬಾರ್ಕೋಟ್‌ನಲ್ಲಿ ಪ್ರತಿಭಟನೆ ನಡೆಸಿ ಬಲಪಂಥೀಯ ಸಂಘಟನೆಗಳ ಸದಸ್ಯರು ಮುಸ್ಲಿಮರ ಅಂಗಡಿಗಳು ಮತ್ತು ಮನೆಗಳ ಮೇಲೆ ದಾಳಿ ಮಾಡಿದರು. ಇದಾದ ಎರಡು ದಿನಗಳ ನಂತರ ಈ ಪೋಸ್ಟರ್‌ಗಳು ಕಾಣಿಸಿಕೊಂಡವು. ಮತ್ತೊಂದೆಡೆ ಆ ದಾಳಿಕೋರರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಪೋಸ್ಟರ್‌ಗಳನ್ನು ಸೋಮವಾರ ತೆಗೆದುಹಾಕಲಾಗಿದ್ದು, ಅವುಗಳನ್ನು ಅಂಟಿಸಿದವರನ್ನು ಗುರುತಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ’ದಿ ಕೇರಳ ಸ್ಟೋರಿ’ ವರ್ಸಸ್ ’ದಿ ಗುಜರಾತ್ ಸ್ಟೋರಿ’!

”ನಾವು ಈ ಪೋಸ್ಟರ್‌ಗಳನ್ನು ತೆಗೆದುಹಾಕಿದ್ದೇವೆ ಮತ್ತು ಅವುಗಳನ್ನು ಅಂಟಿಸಿದ ಸಮಾಜವಿರೋಧಿಗಳನ್ನು ಗುರುತಿಸುತ್ತಿದ್ದೇವೆ” ಎಂದು ಉತ್ತರಕಾಶಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅರ್ಪಣ್ ಯದುವಂಶಿ ಹೇಳಿದ್ದಾರೆ.

ಸ್ಥಳೀಯ ನಿವಾಸಿಗಳು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ ಎಂದು ಸ್ಥಳೀಯ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮುಖಂಡರೊಬ್ಬರು ತಿಳಿಸಿದ್ದಾರೆ.

”ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಉಳಿಯಲು ನಿರ್ದಿಷ್ಟ ಸಮುದಾಯದ ಜನರು ಪಟ್ಟಣವನ್ನು ತೊರೆಯಬೇಕೆಂದು ಬಯಸುವ ಸ್ಥಳೀಯ ನಿವಾಸಿಗಳು ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ. ಅವರು ವ್ಯಾಪಾರ ಮಾಡುವ ನೆಪದಲ್ಲಿ ಇಲ್ಲಿಗೆ ಬಂದರು ಆದರೆ ನಮ್ಮ ಸಮುದಾಯದ ಹುಡುಗಿಯರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂದು ವಿಎಚ್‌ಪಿ ನಾಯಕ ವೀರೇಂದ್ರ ರಾಣಾ ಆರೋಪ ಮಾಡಿದ್ದಾರೆ.

ಪುರೋಲಾದಲ್ಲಿ ಗಾರ್ಮೆಂಟ್ಸ್ ಅಂಗಡಿಯನ್ನು ನಡೆಸುತ್ತಿರುವ ಸಲೀಂ (35) ಅವರು ನಡೆಯುತ್ತಿರುವ ಉದ್ವಿಗ್ನತೆ ಬಗ್ಗೆ ಮಾತನಾಡಿ,”ನಾವು ನಿರಂತರ ಭಯದಲ್ಲಿ ಬದುಕುತ್ತಿದ್ದೇವೆ ಮತ್ತು ಅಂತಹ ವಾತಾವರಣದಲ್ಲಿ ಪುರೋಲಾಗೆ ಹಿಂತಿರುಗಲು ಸಾಧ್ಯವಿಲ್ಲ. ನಾವು ಅಂಗಡಿಯಲ್ಲಿನ ಬಟ್ಟೆಗಳನ್ನೆಲ್ಲಾ ಬಿಟ್ಟು ಓಡಿಹೋಗಬೇಕೆಂದು ಅವರು ಬಯಸಿದ್ದಾರೆ. ಒಂದುವೇಳೆ ಅದೇ ರೀತಿಯಾದರೆ, ಅಧಿಕಾರಿಗಳು ನಮ್ಮ ಒಡೆತನದ ಆಸ್ತಿಗೆ ಪರಿಹಾರ ನೀಡಬೇಕು” ಎಂದು ಹೇಳಿದ್ದಾರೆ. ಸಧ್ಯ ಅವರು ಆ ಸ್ಥಳ ಬಿಟ್ಟು ಡೆಹ್ರಾಡೂನ್‌ನಲ್ಲಿರುವ ತನ್ನ ಸಹೋದರನ ಮನೆಗೆ ಓಡಿಹೋಗಿದ್ದಾರೆ.

ಹೆಸರು ಹೇಳಲಿಚ್ಚಿಸದ ಮಾರುಕಟ್ಟೆಯಲ್ಲಿನ ಮತ್ತೊಬ್ಬ ಮುಸ್ಲಿಂ ಅಂಗಡಿಯವವರು ಮಾತನಾಡಿದ್ದು, ”ನಾವು ಅಪಹರಣ ಪ್ರಯತ್ನವನ್ನು ಖಂಡಿಸುತ್ತೇವೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತೇವೆ. ಅಪರಾಧ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಜನರನ್ನು ನಾವು ಬೆಂಬಲಿಸುವುದಿಲ್ಲ” ಎಂದು ಹೇಳಿದ್ದಾರೆ.

ಸೋಮವಾರ, ಕೆಲವು ಮುಸ್ಲಿಂ ಕುಟುಂಬಗಳು ಪುರೋಲೋ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ (SDM) ಜ್ಞಾಪಕ ಪತ್ರವನ್ನು ಹಸ್ತಾಂತರಿಸಿದ್ದು, ಅವರು ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟನ್ನು ಎತ್ತಿ ತೋರಿಸಿದರು ಮತ್ತು ಅಂಗಡಿಗಳನ್ನು ಪುನಃ ತೆರೆಯಲು ಭದ್ರತೆಯನ್ನು ಕೋರಿದರು. ಜ್ಞಾಪಕ ಪತ್ರದಲ್ಲಿ ಮುಸ್ಲಿಮರಿಗೆ ಏನಾದರೂ ಅಹಿತಕರವಾದರೆ ಆಡಳಿತವೇ ಹೊಣೆಯಾಗುತ್ತದೆ ಎಂದು ಹೇಳಿದೆ.

ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ದೇವಾನಂದ್ ಶರ್ಮಾ ಈ ಬಗ್ಗೆ ಮಾತನಾಡಿ, ”ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಪಟ್ಟಣದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಖಚಿತಪಡಿಸಿಕೊಳ್ಳಲು ನಾವು ಬೆಳವಣಿಗೆಗಳ ಮೇಲೆ ಕಣ್ಣಿಟ್ಟಿದ್ದೇವೆ” ಎಂದು ಹೇಳಿದರು.

ಮೇ 26 ರಂದು ಇಬ್ಬರು ವ್ಯಕ್ತಿಗಳು ಅಪ್ರಾಪ್ತೆಯನ್ನು ಅಪಹರಿಸಲು ಪ್ರಯತ್ನಿಸಿದಾಗ ಉತ್ತರಕಾಶಿಯಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಅಪಹರಣ ಪ್ರಯತ್ನ ವಿಫಲವಾದ ನಂತರ ಆರೋಪಿಗಳು ಪರಾರಿಯಾಗಿದ್ದು, ಮರುದಿನ ಹುಡೋಳಿ ಗ್ರಾಮದಿಂದ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 29 ರಂದು, ಕೆಲವು ಪ್ರತಿಭಟನಾಕಾರರು ಮುಸ್ಲಿಮರಿಗೆ ಸೇರಿದ ಅಂಗಡಿಗಳು ಮತ್ತು ಸಂಸ್ಥೆಗಳ ಮೇಲೆ ದಾಳಿ ಮಾಡಿದ ನಂತರ ಪುರೋಲಾದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿತು. ಯಮುನಾ ಘಾಟಿ ಹಿಂದೂ ಜಾಗೃತಿ ಸಂಘಟನೆಯ ಬ್ಯಾನರ್ ಅಡಿಯಲ್ಲಿ ಶನಿವಾರ ಇದೇ ರೀತಿಯ ಪ್ರತಿಭಟನೆ ನಡೆಸಲಾಯಿತು. ಸುಮಾರು 900 ಜನರು ಈ ಧರಣಿಯಲ್ಲಿ ಭಾಗವಹಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...