Homeಮುಖಪುಟಉತ್ತರಾಖಂಡ ಸುರಂಗ ಕುಸಿತ: ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮತ್ತೆ ಸ್ಥಗಿತ

ಉತ್ತರಾಖಂಡ ಸುರಂಗ ಕುಸಿತ: ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮತ್ತೆ ಸ್ಥಗಿತ

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರದ ಕುಸಿದ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಗೆ ಶುಕ್ರವಾರ ಸಂಜೆ ಮತ್ತೊಂದು ಅಡಚಣೆ ಎದುರಾಗಿದ್ದು, ಸುರಂಗ ಕೊರೆಯುವಿಕೆಯನ್ನು ಸ್ಥಗಿತಗೊಳಿಸಲಾಗಿದೆ.

ಗುರುವಾರ ಸುರಂಗ ಕೊರೆಯುವ ಯಂತ್ರದ ಬಳಿ ಬಿರುಕು ಕಾಣಿಸಿಕೊಂಡು ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಆ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ಹಿರಿಯ ಅಧಿಕಾರಿಗಳು, ಕಾರ್ಯಾಚರಣೆ ಪುನರಾರಂಭಗೊಂಡಿದೆ. ರಕ್ಷಣಾ ತಂಡ ಕಾರ್ಮಿಕರು ಸಿಲುಕಿರುವ ಸ್ಥಳ ತಲುಪಲು ಇನ್ನು ಕೇವಲ 10-12 ಮೀಟರ್ ಬಾಕಿಯಿದೆ. ನಿನ್ನೆ(ನ.25) ಕಾರ್ಮಿಕರು ಹೊರ ಬರುವ ಸಾಧ್ಯತೆ ಇದೆ ಎಂದಿದ್ದರು. ಆದರೆ, ಶುಕ್ರವಾರ ಕೊರೆಯುವ ಯಂತ್ರಕ್ಕೆ ಲೋಹದ ವಸ್ತುಗಳು ಅಡ್ಡಿಯಾಗಿದ್ದು, ಕಾರ್ಯಾಚರಣೆ ಸ್ಥಗಿತಗೊಂಡಿದೆ ಎಂದು ತಿಳಿದು ಬಂದಿದೆ.

ಕೊರೆಯುವ ಯಂತ್ರ ಕುಸಿದು ಬಿದ್ದಿರುವ ಕಲ್ಲು, ಮಣ್ಣಿನ ಮೂಲಕ ಮುಂದಕ್ಕೆ ಸಾಗುತ್ತಿದ್ದಂತೆ ಆರು ಮೀಟರ್ ಉದ್ದದ ಉಕ್ಕಿನ ಪೈಪ್‌ಗಳನ್ನು ಅಳವಡಿಸಿಕೊಂಡು ಹೋಗುತ್ತದೆ. ರಕ್ಷಣಾ ತಂಡ ಒಂದು ಪೈಪ್‌ನಿಂದ ಮತ್ತೊಂದು ಪೈಪ್‌ ವೆಲ್ಡಿಂಗ್ ಹಾಕಿ ಯಂತ್ರದ ಮೂಲಕ ಕಳಿಸುತ್ತಿದ್ದಾರೆ. ಪೈಪ್ ಕಾರ್ಮಿಕರ ಬಳಿ ತಲುಪಿದ ಬಳಿಕ ಚಕ್ರದ ಸ್ಟ್ರೆಚರ್‌ಗಳನ್ನು ಬಳಸಿ ಪೈಪ್ ಮೂಲಕ ಕಾರ್ಮಿಕರನ್ನು ಹೊರ ತರಲು ಅಧಿಕಾರಿಗಳು ಯೋಜನೆ ರೂಪಿಸಿದ್ದಾರೆ.

ರಕ್ಷಣಾ ಕಾರ್ಯ ಕೊನೆಯ ಹಂತಕ್ಕೆ ತಲುಪುವ ವೇಳೆ ಎರಡು ಭಾರೀ ಅಡಚಣೆ ಎದುರಾಗಿದೆ. ಇದರಿಂದ ತಮ್ಮವರಿಗಾಗಿ ಸುರಂಗದ ಬಳಿ ಕಾಯುತ್ತಿರುವ ಕಾರ್ಮಿಕರ ಕುಟುಂಬಸ್ಥರು ಆತಂಕಕ್ಕೀಡಾಗಿದ್ದಾರೆ. ಕಾರ್ಮಿಕರು ಸುರಂಗದೊಳಗೆ ಸಿಲುಕಿ ಎರಡು ವಾರಗಳು ಕಳೆದಿದೆ. ಆದರೆ, ಅವರೆಲ್ಲರೂ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಕಾಶಿಯಿಂದ ಸುಮಾರು 30 ಕಿಮೀ ಮತ್ತು ಡೆಹ್ರಾಡೂನ್‌ನಿಂದ ಏಳು ಗಂಟೆಗಳ ಪ್ರಯಾಣದ ದೂರದಲ್ಲಿರುವ ಸಿಲ್ಕ್ಯಾರಾ ಸುರಂಗವು ಕೇಂದ್ರ ಸರ್ಕಾರದ ಚಾರ್ ಧಾಮ್ ಸರ್ವಋತು ರಸ್ತೆ ಯೋಜನೆಯ ಅವಿಭಾಜ್ಯ ಅಂಗವಾಗಿದೆ.

ಇದನ್ನೂ ಓದಿ : ರಾಜಸ್ಥಾನ ಚುನಾವಣೆ: ಮತಗಟ್ಟೆಗೆ ನುಗ್ಗಿ ಏಜೆಂಟರ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...