Homeಮುಖಪುಟಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

- Advertisement -
- Advertisement -

ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸುಖಿಧಾಂಗ್ ಗ್ರಾಮದ ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ಅಡುಗೆಯವರಾಗಿ ಕೆಲಸಕ್ಕೆ ಸೇರಿದ್ದು, ಆಕೆ ದಲಿತ ಸಮುದಾಯದವರು ಎಂದು ‘ಮೇಲ್ಜಾತಿ’ಗೆ ಸೇರಿದ ಹಲವಾರು ವಿದ್ಯಾರ್ಥಿಗಳು ಅವರು ತಯಾರಿಸಿದ ಆಹಾರವನ್ನು ತಿನ್ನಲು ನಿರಾಕರಿಸಿರುವ ಘಟನೆ ನಡೆದಿದೆ.

ನವೆಂಬರ್ 25 ರಂದು ದಲಿತ ಸಮುದಾಯದ ಸುನಿತಾ ಅವರಿಗೆ ’ಭೋಜನ್ ಮಾತಾ’ (ಅಡುಗೆಯವರು) ಆಗಿ ಕೆಲಸ ಪಡೆದರು. ಆಕೆಗೆ ಮಾಸಿಕ ವೇತನವು 3,000 ರೂಪಾಯಿ ಆಗಿದೆ. ತನ್ನ ಇಬ್ಬರು ಮಕ್ಕಳು ಮತ್ತು ಅನಾರೋಗ್ಯಕ್ಕೆ ತುತ್ತಾಗಿರುವ ನಿರುದ್ಯೋಗಿ ಪತಿಯನ್ನು ಪೋಷಿಸಲು ಈ ಕೆಲಸ ತುಂಬಾ ಮುಖ್ಯವಾಗಿತ್ತು ಎನ್ನುತ್ತಾರೆ.

ಸುನೀತಾ ಅವರು ಡಿಸೆಂಬರ್ 14 ರಂದು ಶಾಲೆಯಲ್ಲಿ ಅಡುಗೆ ಮಾಡಿದ ತೊಂದರೆಗಳು ಆರಂಭವಾಗಿವೆ. ಈ ಮೇಲ್ಜಾತಿ’ಗೆ ವಿದ್ಯಾರ್ಥಿಗಳ ಪೋಷಕರು ಸುನೀತಾ ತಮ್ಮ ಮಕ್ಕಳಿಗೆ ಅಡುಗೆ ಮಾಡಿದ್ದರಿಂದ ಆಕ್ರೋಶಗೊಂಡಿದ್ದಾರೆ. ಮಾತ್ರವಲ್ಲದೆ ಅವರ ನೇಮಕಾತಿಯನ್ನು ಪ್ರಶ್ನಿಸಿದ್ದಾರೆ. ಶಾಲೆಯಲ್ಲಿ ತಯಾರಿಸಿದ ಊಟವನ್ನು ತಿನ್ನುವುದರಿಂದ ತಪ್ಪಿಸಲು ವಿದ್ಯಾರ್ಥಿಗಳು ಪ್ರತಿದಿನ ತಾವೇ ಊಟ ತರಲು ಪ್ರಾರಂಭಿಸಿದ್ದಾರೆ.

ಶಾಲೆಯಲ್ಲಿ 230 ವಿದ್ಯಾರ್ಥಿಗಳಿದ್ದು, ಕಿರಿಯ ತರಗತಿಗಳಲ್ಲಿ ಓದುತ್ತಿರುವ 66 ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ನೀಡಲಾಗುತ್ತದೆ.

ಇದನ್ನೂ ಓದಿ: ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

“ಡಿಸೆಂಬರ್ 13 ರಂದು ನಾನು ಶಾಲೆಗೆ ಸೇರಿದಾಗ, ಎಲ್ಲಾ ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಊಟವನ್ನು ಸೇವಿಸಿದ್ದರು. ಆದರೆ, ಮರುದಿನ ಅವರು ನಾನು ತಯಾರಿಸಿದ ಆಹಾರವನ್ನು ತಿನ್ನಲು ಮಕ್ಕಳು ನಿರಾಕರಿಸಿದಾಗ ನನಗೆ ಆಘಾತವಾಯಿತು. ಊಟ ಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಪೋಷಕರು ಹೇಳಿದ್ದಾರೆ. ನಾನು ದಲಿತ ಸಮುದಾಯದವಳು ಎಂಬ ಕಾರಣಕ್ಕೆ ಮಕ್ಕಳಿಗೆ ಅಡುಗೆ ಮಾಡಬೇಡಿ ಎಂದು ಹೇಳಲಾಗಿತ್ತು. ಇದು ತುಂಬಾ ಅವಮಾನಕರವಾಗಿತ್ತು. ನಾನು ನ್ಯಾಯ ಕೇಳೀ ಮತ್ತೆ ಎಲ್ಲಿಗೂ ಹೋಗುವುದಿಲ್ಲ” ಎಂದು ಸುನೀತಾ ನೋವು ತೋಡಿಕೊಂಡಿದ್ದಾರೆ.

ಡಿಸೆಂಬರ್ 14 ರಂದು, ಸುನೀತಾ ವಿದ್ಯಾರ್ಥಿಗಳಿಗೆ ಅಡುಗೆ ಮಾಡದಂತೆ ತಡೆಯಲು ಪೋಷಕರು, ಬಹುತೇಕ ಗ್ರಾಮಸ್ಥರು ಶಾಲೆಗೆ ಆಗಮಿಸಿ ಶಿಕ್ಷಕರ ಮೇಲೆ ಒತ್ತಡ ಹೇರಿದ್ದರು.

ಪ್ರಕರಣದ ಗಂಭೀರತೆಯನ್ನು ಮನಗಂಡ ಚಂಪಾವತ್ ಜಿಲ್ಲಾ ಶಿಕ್ಷಣಾಧಿಕಾರಿ ಆರ್.ಸಿ. ಪುರೋಹಿತ್ ಶಾಲೆಗೆ ಆಗಮಿಸಿ ವಿದ್ಯಾರ್ಥಿಗಳು ಮತ್ತು ಶಾಲೆಯ ಸಿಬ್ಬಂದಿಯೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ.

ಚಂಪಾವತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿನೀತ್ ತೋಮರ್ ಮಾತನಾಡಿ, ‘ಶಾಲೆಯಲ್ಲಿ ದಲಿತ ಅಡುಗೆಯವರು ಮಾಡಿದ ಊಟ ಮಾಡುವುದಕ್ಕೆ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಆಕ್ಷೇಪ ವ್ಯಕ್ತಪಡಿಸಿರುವ ವರದಿಗಳ ಬಗ್ಗೆ ಹಾಗೂ ನೇಮಕಾತಿ ಅಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ’ ಎಂದು ಹೇಳಿದ್ದಾರೆ.

ಸ್ಥಳೀಯ ‘ಮೇಲ್ಜಾತಿ’ ಗ್ರಾಮಸ್ಥರಿಂದ ಅವಮಾನಕ್ಕೊಳಗಾದ ನಂತರ ದಲಿತ ಮಹಿಳೆ ಸುನೀತಾ ಅವರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. “ಮೇಲ್ವರ್ಗದ ಹಳ್ಳಿಗರು ಶಕ್ತಿಶಾಲಿಗಳಾಗಿದ್ದು, ನನಗೆ ಶಾಲೆಯಲ್ಲಿ ಕೆಲಸ ಮಾಡಲು ಬಿಡುವುದಿಲ್ಲ. ನನ್ನ ನೇಮಕಾತಿಯನ್ನು ಅಸಿಂಧುಗೊಳಿಸಿ ಮೇಲ್ಜಾತಿಯ ಮಹಿಳೆಗೆ ಕೆಲಸ ಕೊಟ್ಟರೂ ಆಶ್ಚರ್ಯವಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಉತ್ತರಾಖಂಡದಲ್ಲಿ, ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದ ಯೋಜನೆಗಾಗಿ, ಮಹಿಳೆಯರನ್ನು ಅಡುಗೆ ಮಾಡಲು ನೇಮಿಸಲಾಗುತ್ತದೆ ಮತ್ತು ಅವರನ್ನು “ಭೋಜನ್ ಮಾತಾಗಳು” ಎಂದು ಕರೆಯಲಾಗುತ್ತದೆ.


ಇದನ್ನೂ ಓದಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...