Homeಮುಖಪುಟಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

- Advertisement -
- Advertisement -

ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸುಖಿಧಾಂಗ್ ಗ್ರಾಮದ ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ಅಡುಗೆಯವರಾಗಿ ಕೆಲಸಕ್ಕೆ ಸೇರಿದ್ದು, ಆಕೆ ದಲಿತ ಸಮುದಾಯದವರು ಎಂದು ‘ಮೇಲ್ಜಾತಿ’ಗೆ ಸೇರಿದ ಹಲವಾರು ವಿದ್ಯಾರ್ಥಿಗಳು ಅವರು ತಯಾರಿಸಿದ ಆಹಾರವನ್ನು ತಿನ್ನಲು ನಿರಾಕರಿಸಿರುವ ಘಟನೆ ನಡೆದಿದೆ.

ನವೆಂಬರ್ 25 ರಂದು ದಲಿತ ಸಮುದಾಯದ ಸುನಿತಾ ಅವರಿಗೆ ’ಭೋಜನ್ ಮಾತಾ’ (ಅಡುಗೆಯವರು) ಆಗಿ ಕೆಲಸ ಪಡೆದರು. ಆಕೆಗೆ ಮಾಸಿಕ ವೇತನವು 3,000 ರೂಪಾಯಿ ಆಗಿದೆ. ತನ್ನ ಇಬ್ಬರು ಮಕ್ಕಳು ಮತ್ತು ಅನಾರೋಗ್ಯಕ್ಕೆ ತುತ್ತಾಗಿರುವ ನಿರುದ್ಯೋಗಿ ಪತಿಯನ್ನು ಪೋಷಿಸಲು ಈ ಕೆಲಸ ತುಂಬಾ ಮುಖ್ಯವಾಗಿತ್ತು ಎನ್ನುತ್ತಾರೆ.

ಸುನೀತಾ ಅವರು ಡಿಸೆಂಬರ್ 14 ರಂದು ಶಾಲೆಯಲ್ಲಿ ಅಡುಗೆ ಮಾಡಿದ ತೊಂದರೆಗಳು ಆರಂಭವಾಗಿವೆ. ಈ ಮೇಲ್ಜಾತಿ’ಗೆ ವಿದ್ಯಾರ್ಥಿಗಳ ಪೋಷಕರು ಸುನೀತಾ ತಮ್ಮ ಮಕ್ಕಳಿಗೆ ಅಡುಗೆ ಮಾಡಿದ್ದರಿಂದ ಆಕ್ರೋಶಗೊಂಡಿದ್ದಾರೆ. ಮಾತ್ರವಲ್ಲದೆ ಅವರ ನೇಮಕಾತಿಯನ್ನು ಪ್ರಶ್ನಿಸಿದ್ದಾರೆ. ಶಾಲೆಯಲ್ಲಿ ತಯಾರಿಸಿದ ಊಟವನ್ನು ತಿನ್ನುವುದರಿಂದ ತಪ್ಪಿಸಲು ವಿದ್ಯಾರ್ಥಿಗಳು ಪ್ರತಿದಿನ ತಾವೇ ಊಟ ತರಲು ಪ್ರಾರಂಭಿಸಿದ್ದಾರೆ.

ಶಾಲೆಯಲ್ಲಿ 230 ವಿದ್ಯಾರ್ಥಿಗಳಿದ್ದು, ಕಿರಿಯ ತರಗತಿಗಳಲ್ಲಿ ಓದುತ್ತಿರುವ 66 ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ನೀಡಲಾಗುತ್ತದೆ.

ಇದನ್ನೂ ಓದಿ: ಕೆ.ಆರ್ ಪೇಟೆ: ದಲಿತರ ಮೇಲೆ ದೌರ್ಜನ್ಯ – ದೂರು ನೀಡಿದ್ದಕ್ಕೆ ಅಂಗಡಿ ಮುಚ್ಚಿ ಸವರ್ಣೀಯರಿಂದ ಸಾಮಾಜಿಕ ಬಹಿಷ್ಕಾರ

“ಡಿಸೆಂಬರ್ 13 ರಂದು ನಾನು ಶಾಲೆಗೆ ಸೇರಿದಾಗ, ಎಲ್ಲಾ ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಊಟವನ್ನು ಸೇವಿಸಿದ್ದರು. ಆದರೆ, ಮರುದಿನ ಅವರು ನಾನು ತಯಾರಿಸಿದ ಆಹಾರವನ್ನು ತಿನ್ನಲು ಮಕ್ಕಳು ನಿರಾಕರಿಸಿದಾಗ ನನಗೆ ಆಘಾತವಾಯಿತು. ಊಟ ಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಪೋಷಕರು ಹೇಳಿದ್ದಾರೆ. ನಾನು ದಲಿತ ಸಮುದಾಯದವಳು ಎಂಬ ಕಾರಣಕ್ಕೆ ಮಕ್ಕಳಿಗೆ ಅಡುಗೆ ಮಾಡಬೇಡಿ ಎಂದು ಹೇಳಲಾಗಿತ್ತು. ಇದು ತುಂಬಾ ಅವಮಾನಕರವಾಗಿತ್ತು. ನಾನು ನ್ಯಾಯ ಕೇಳೀ ಮತ್ತೆ ಎಲ್ಲಿಗೂ ಹೋಗುವುದಿಲ್ಲ” ಎಂದು ಸುನೀತಾ ನೋವು ತೋಡಿಕೊಂಡಿದ್ದಾರೆ.

ಡಿಸೆಂಬರ್ 14 ರಂದು, ಸುನೀತಾ ವಿದ್ಯಾರ್ಥಿಗಳಿಗೆ ಅಡುಗೆ ಮಾಡದಂತೆ ತಡೆಯಲು ಪೋಷಕರು, ಬಹುತೇಕ ಗ್ರಾಮಸ್ಥರು ಶಾಲೆಗೆ ಆಗಮಿಸಿ ಶಿಕ್ಷಕರ ಮೇಲೆ ಒತ್ತಡ ಹೇರಿದ್ದರು.

ಪ್ರಕರಣದ ಗಂಭೀರತೆಯನ್ನು ಮನಗಂಡ ಚಂಪಾವತ್ ಜಿಲ್ಲಾ ಶಿಕ್ಷಣಾಧಿಕಾರಿ ಆರ್.ಸಿ. ಪುರೋಹಿತ್ ಶಾಲೆಗೆ ಆಗಮಿಸಿ ವಿದ್ಯಾರ್ಥಿಗಳು ಮತ್ತು ಶಾಲೆಯ ಸಿಬ್ಬಂದಿಯೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ.

ಚಂಪಾವತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿನೀತ್ ತೋಮರ್ ಮಾತನಾಡಿ, ‘ಶಾಲೆಯಲ್ಲಿ ದಲಿತ ಅಡುಗೆಯವರು ಮಾಡಿದ ಊಟ ಮಾಡುವುದಕ್ಕೆ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಆಕ್ಷೇಪ ವ್ಯಕ್ತಪಡಿಸಿರುವ ವರದಿಗಳ ಬಗ್ಗೆ ಹಾಗೂ ನೇಮಕಾತಿ ಅಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ’ ಎಂದು ಹೇಳಿದ್ದಾರೆ.

ಸ್ಥಳೀಯ ‘ಮೇಲ್ಜಾತಿ’ ಗ್ರಾಮಸ್ಥರಿಂದ ಅವಮಾನಕ್ಕೊಳಗಾದ ನಂತರ ದಲಿತ ಮಹಿಳೆ ಸುನೀತಾ ಅವರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. “ಮೇಲ್ವರ್ಗದ ಹಳ್ಳಿಗರು ಶಕ್ತಿಶಾಲಿಗಳಾಗಿದ್ದು, ನನಗೆ ಶಾಲೆಯಲ್ಲಿ ಕೆಲಸ ಮಾಡಲು ಬಿಡುವುದಿಲ್ಲ. ನನ್ನ ನೇಮಕಾತಿಯನ್ನು ಅಸಿಂಧುಗೊಳಿಸಿ ಮೇಲ್ಜಾತಿಯ ಮಹಿಳೆಗೆ ಕೆಲಸ ಕೊಟ್ಟರೂ ಆಶ್ಚರ್ಯವಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಉತ್ತರಾಖಂಡದಲ್ಲಿ, ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದ ಯೋಜನೆಗಾಗಿ, ಮಹಿಳೆಯರನ್ನು ಅಡುಗೆ ಮಾಡಲು ನೇಮಿಸಲಾಗುತ್ತದೆ ಮತ್ತು ಅವರನ್ನು “ಭೋಜನ್ ಮಾತಾಗಳು” ಎಂದು ಕರೆಯಲಾಗುತ್ತದೆ.


ಇದನ್ನೂ ಓದಿ: ಸಾರ್ವಜನಿಕ ರಸ್ತೆ ಬಳಸಿದ್ದಕ್ಕೆ ದಲಿತ ಯುವಕನ ಮೇಲೆ ತೀವ್ರ ಹಲ್ಲೆ: ಕ್ರೂರ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...