Homeಮುಖಪುಟಉತ್ತರಾಖಂಡ | ಹಿಂಸಾಚಾರಕ್ಕೆ ತಿರುಗಿದ ಮಸೀದಿ ವಿರೋಧಿ ಪ್ರತಿಭಟನೆ, ಮುಸ್ಲಿಮರ ಅಂಗಡಿಗಳು ಧ್ವಂಸ

ಉತ್ತರಾಖಂಡ | ಹಿಂಸಾಚಾರಕ್ಕೆ ತಿರುಗಿದ ಮಸೀದಿ ವಿರೋಧಿ ಪ್ರತಿಭಟನೆ, ಮುಸ್ಲಿಮರ ಅಂಗಡಿಗಳು ಧ್ವಂಸ

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿ ಪಟ್ಟಣದಲ್ಲಿ ಗುರುವಾರ ಹಿಂದುತ್ವ ಗುಂಪುಗಳ ನೇತೃತ್ವದಲ್ಲಿ ಕಾಶಿ ವಿಶ್ವನಾಥ ದೇವಸ್ಥಾನದ ಬಳಿ 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಒತ್ತಾಯಿಸಿ ನಡೆಸಿದ್ದ ರ್ಯಾಲಿಯಲ್ಲಿ ಹಿಂಸಾತ್ಮಕ ಘರ್ಷಣೆಗಳು ಸಂಭವಿಸಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಘರ್ಷಣೆಯಲ್ಲಿ ಮುಸ್ಲಿಂ ಒಡೆತನದ ಅಂಗಡಿಗಳನ್ನು ಧ್ವಂಸಗೊಳಿಸಲಾಯಿತು ಮತ್ತು ನಾಲ್ವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಸಂಯುಕ್ತ ಸನಾತನ ಧರ್ಮ ರಕ್ಷಕ ಸಂಘದ ಅಡಿಯಲ್ಲಿ ಆಯೋಜಿಸಲಾದ ಪ್ರತಿಭಟನೆಯಲ್ಲಿ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಮತ್ತು ಇತರ ಹಿಂದುತ್ವ ಗುಂಪುಗಳು ಮಸೀದಿಯನ್ನು “ಕಾನೂನುಬಾಹಿರವಾಗಿ ನಿರ್ಮಿಸಲಾಗಿದೆ” ಎಂದು ಪ್ರತಿಪಾದಿಸಿದ್ದರು. ಆದಾಗ್ಯೂ, ಜಿಲ್ಲಾಡಳಿತವು ಇತ್ತೀಚೆಗೆ ಮಸೀದಿಯ ಕಾನೂನುಬದ್ಧತೆಯನ್ನು ದೃಢಪಡಿಸಿದ್ದು, 1969 ರಲ್ಲಿ ಅದರ ನೋಂದಣಿ ಮಾಡಲಾಗಿದೆ ಎಂದು ಅದು ಹೇಳಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪೊಲೀಸ್ ಬ್ಯಾರಿಕೇಡ್‌ಗಳನ್ನು ಸಮೀಪಿಸುತ್ತಿದ್ದಂತೆ ಗುಂಪು ಕ್ಷೋಭೆಗೊಂಡಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಶ್ರೀವಾಸ್ತವ ಹೇಳಿದ್ದಾರೆ. ಪ್ರತಿಭಟನಾಕಾರರು ಪ್ರತಿಭಟನಾ ಮೆರವಣಿಗೆಯ ಗೊತ್ತುಪಡಿಸಿದ ಮಾರ್ಗದ ಬದಲಿಗೆ ಮಸೀದಿಯ ಕಡೆಗೆ ತಿರುಗಿಸಲು ಪ್ರಯತ್ನಿಸಿದರು, ಹಾಗಾಗಿ ಅಧಿಕಾರಿಗಳು ಮಧ್ಯಪ್ರವೇಶಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

“ಮಸೀದಿ ಕಡೆಗೆ ತೆರಳದಂತೆ ಅವರನ್ನು ನಿರ್ಬಂಧಿಸಿದಾಗ, ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲುಗಳನ್ನು ಎಸೆಯಲು ಪ್ರಾರಂಭಿಸಿದರು. ಇದರಿಂದ ನಾಲ್ವರು ಅಧಿಕಾರಿಗಳು ಗಾಯಗೊಂಡರು” ಎಂದು ಶ್ರೀವಾಸ್ತವ ಹೇಳಿದ್ದಾರೆ. ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಪೊಲೀಸರು ಭದ್ರತಾ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ದೇವಭೂಮಿ ರಕ್ಷಾ ಅಭಿಯಾನದ ಮುಖ್ಯಸ್ಥ ದರ್ಶನ್ ಭಾರತಿ ಸೇರಿದಂತೆ ಸುಮಾರು 30 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಮಸೀದಿಯ ವಿರುದ್ಧ ತಿಂಗಳುಗಟ್ಟಲೆ ಸಂಘಟಿತ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ. ಇದೀಗ ಪ್ರತಿಭಟನೆ ಉಲ್ಬಣಗೊಂಡಿವೆ. ಬಿಜೆಪಿ ಪರ ಕಾರ್ಯಕರ್ತರು ಧರಣಿಗಳನ್ನು ನಡೆಸಿದ್ದು, ಮಸೀದಿಯನ್ನು ಕೆಡವಲು ಒತ್ತಾಯಿಸಿ ಜಿಲ್ಲೆಯ ಅಧಿಕಾರಿಗಳಿಗೆ ಪದೇ ಪದೇ ಮನವಿ ಸಲ್ಲಿಸಿದ್ದಾರೆ.

ಸೆಪ್ಟೆಂಬರ್ ಆರಂಭದಲ್ಲಿ ಮಸೀದಿಯು ವಿವಾದಿತ ಭೂಮಿಯನ್ನು ಆಕ್ರಮಿಸಿಕೊಂಡಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ಸಣ್ಣ ರ್ಯಾಲಿಯನ್ನು ನಡೆಸಿದ್ದರು. ಜಿಲ್ಲಾಡಳಿತವು ಇತ್ತೀಚೆಗೆ ಮಸೀದಿಯ ನ್ಯಾಯಸಮ್ಮತತೆಯನ್ನು ಎತ್ತಿ ಹಿಡಿದಿದ್ದರೂ, ಬಿಜೆಪಿ ಪರ ಗುಂಪುಗಳು ಅದನ್ನು ತಳ್ಳಿಹಾಕಿವೆ.

“ಈ ಮಸೀದಿಯು ಕಾನೂನುಬಾಹಿರವಾಗಿದೆ ಎಂಬುವುದನ್ನು ಸಮರ್ಥಿಸಲು ನಮ್ಮ ಬಳಿ ದಾಖಲೆಗಳಿವೆ. ನಾವು ಅವುಗಳನ್ನು ಸಾರ್ವಜನಿಕವಾಗಿ ಪ್ರಸ್ತುತಪಡಿಸುತ್ತೇವೆ” ಎಂದು ಸಂಯುಕ್ತ ಸನಾತನ ಧರ್ಮ ರಕ್ಷಕ ಸಂಘ ಹೇಳಿಕೆಯಲ್ಲಿ ತಿಳಿಸಿದೆ. ಗುರುವಾರ, ಉತ್ತರಕಾಶಿ ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿ ರ್ಯಾಲಿ ನಡೆಸಲಾಗಿದ್ದು, ಅದರಲ್ಲಿ ಭಾಗವಹಿಸಿದವರು ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಡೆಹ್ರಾಡೂನ್ ಮೂಲದ ಮುಸ್ಲಿಂ ಸೇವಾ ಸಂಘಟನೆಯ ಅಧ್ಯಕ್ಷ ನಯೀಮ್ ಖುರೇಷಿ ಹಿಂಸಾಚಾರವನ್ನು ಖಂಡಿಸಿದ್ದು, ಆಡಳಿತದ ಪ್ರತಿಕ್ರಿಯೆಯನ್ನು ಟೀಕಿಸಿದ್ದಾರೆ. “ಈ ರ್ಯಾಲಿ ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ನಿರ್ಲಕ್ಷ್ಯವನ್ನು ತೋರಿಸುತ್ತದೆ…ಹಿಂಸಾಚಾರವು ಉದ್ವಿಗ್ನತೆಯನ್ನು ಸೃಷ್ಟಿಸುವ ಮತ್ತು ಹಿಂದೂ ರಾಷ್ಟ್ರಕ್ಕಾಗಿ ಮಾಡುವ ಕಾರ್ಯಸೂಚಿಯ ಭಾಗವಾಗಿದೆ” ಎಂದು ಅವರು ಹೇಳಿದ್ದಾರೆ. ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ.

ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೆಹರ್ಬನ್ ಸಿಂಗ್ ಬಿಶ್ತ್, ಈ ತಿಂಗಳ ಆರಂಭದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮಸೀದಿಯು ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದೆ ಮತ್ತು ವಕ್ಫ್ ಮಂಡಳಿಯಿಂದ ನೋಂದಾಯಿಸಲ್ಪಟ್ಟಿದೆ ಎಂದು ಹೇಳಿದ್ದರು.

“ಕೆಲವು ಬಲಪಂಥೀಯ ಸಂಘಟನೆಗಳು ಇದು ಅಕ್ರಮ ಮಸೀದಿ ಎಂದು ಹೇಳಿಕೊಂಡು ಜಿಲ್ಲಾಡಳಿತಕ್ಕೆ ಮನವಿ ನೀಡಿವೆ. ನಮ್ಮ ದಾಖಲೆಗಳ ಪ್ರಕಾರ, ಇದು ನೋಂದಾಯಿತ ಭೂಮಿಯಲ್ಲಿ ನಿರ್ಮಿಸಲ್ಪಟ್ಟಿದೆ ಮತ್ತು ಇದು ಅಕ್ರಮವಲ್ಲ. ನಾಲ್ಕು ಜನರ ಹೆಸರಿನಲ್ಲಿ ನೋಂದಣಿಯಾಗಿದೆ. ಜಿಲ್ಲಾಡಳಿತ ಕೂಡಾ ಇದನ್ನೆ ಹೇಳಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಶ್ರೀವಾಸ್ತವ ಹೇಳಿದ್ದಾರೆ.

ಇದನ್ನೂ ಓದಿ: ಪುಣೆ ಪೋರ್ಷೆ ಅಪಘಾತ ಪ್ರಕರಣ: ಸಾಸೂನ್ ಆಸ್ಪತ್ರೆ ಸಿಬ್ಬಂದಿಗಳ ವಿಚಾರಣೆಗೆ ಮಹಾರಾಷ್ಟ್ರ ಸರ್ಕಾರ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...