Homeಮುಖಪುಟಉತ್ತರಾಖಂಡ | ಹಿಂಸಾಚಾರಕ್ಕೆ ತಿರುಗಿದ ಮಸೀದಿ ವಿರೋಧಿ ಪ್ರತಿಭಟನೆ, ಮುಸ್ಲಿಮರ ಅಂಗಡಿಗಳು ಧ್ವಂಸ

ಉತ್ತರಾಖಂಡ | ಹಿಂಸಾಚಾರಕ್ಕೆ ತಿರುಗಿದ ಮಸೀದಿ ವಿರೋಧಿ ಪ್ರತಿಭಟನೆ, ಮುಸ್ಲಿಮರ ಅಂಗಡಿಗಳು ಧ್ವಂಸ

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿ ಪಟ್ಟಣದಲ್ಲಿ ಗುರುವಾರ ಹಿಂದುತ್ವ ಗುಂಪುಗಳ ನೇತೃತ್ವದಲ್ಲಿ ಕಾಶಿ ವಿಶ್ವನಾಥ ದೇವಸ್ಥಾನದ ಬಳಿ 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಒತ್ತಾಯಿಸಿ ನಡೆಸಿದ್ದ ರ್ಯಾಲಿಯಲ್ಲಿ ಹಿಂಸಾತ್ಮಕ ಘರ್ಷಣೆಗಳು ಸಂಭವಿಸಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಘರ್ಷಣೆಯಲ್ಲಿ ಮುಸ್ಲಿಂ ಒಡೆತನದ ಅಂಗಡಿಗಳನ್ನು ಧ್ವಂಸಗೊಳಿಸಲಾಯಿತು ಮತ್ತು ನಾಲ್ವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಸಂಯುಕ್ತ ಸನಾತನ ಧರ್ಮ ರಕ್ಷಕ ಸಂಘದ ಅಡಿಯಲ್ಲಿ ಆಯೋಜಿಸಲಾದ ಪ್ರತಿಭಟನೆಯಲ್ಲಿ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಮತ್ತು ಇತರ ಹಿಂದುತ್ವ ಗುಂಪುಗಳು ಮಸೀದಿಯನ್ನು “ಕಾನೂನುಬಾಹಿರವಾಗಿ ನಿರ್ಮಿಸಲಾಗಿದೆ” ಎಂದು ಪ್ರತಿಪಾದಿಸಿದ್ದರು. ಆದಾಗ್ಯೂ, ಜಿಲ್ಲಾಡಳಿತವು ಇತ್ತೀಚೆಗೆ ಮಸೀದಿಯ ಕಾನೂನುಬದ್ಧತೆಯನ್ನು ದೃಢಪಡಿಸಿದ್ದು, 1969 ರಲ್ಲಿ ಅದರ ನೋಂದಣಿ ಮಾಡಲಾಗಿದೆ ಎಂದು ಅದು ಹೇಳಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪೊಲೀಸ್ ಬ್ಯಾರಿಕೇಡ್‌ಗಳನ್ನು ಸಮೀಪಿಸುತ್ತಿದ್ದಂತೆ ಗುಂಪು ಕ್ಷೋಭೆಗೊಂಡಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಶ್ರೀವಾಸ್ತವ ಹೇಳಿದ್ದಾರೆ. ಪ್ರತಿಭಟನಾಕಾರರು ಪ್ರತಿಭಟನಾ ಮೆರವಣಿಗೆಯ ಗೊತ್ತುಪಡಿಸಿದ ಮಾರ್ಗದ ಬದಲಿಗೆ ಮಸೀದಿಯ ಕಡೆಗೆ ತಿರುಗಿಸಲು ಪ್ರಯತ್ನಿಸಿದರು, ಹಾಗಾಗಿ ಅಧಿಕಾರಿಗಳು ಮಧ್ಯಪ್ರವೇಶಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

“ಮಸೀದಿ ಕಡೆಗೆ ತೆರಳದಂತೆ ಅವರನ್ನು ನಿರ್ಬಂಧಿಸಿದಾಗ, ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲುಗಳನ್ನು ಎಸೆಯಲು ಪ್ರಾರಂಭಿಸಿದರು. ಇದರಿಂದ ನಾಲ್ವರು ಅಧಿಕಾರಿಗಳು ಗಾಯಗೊಂಡರು” ಎಂದು ಶ್ರೀವಾಸ್ತವ ಹೇಳಿದ್ದಾರೆ. ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಪೊಲೀಸರು ಭದ್ರತಾ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ದೇವಭೂಮಿ ರಕ್ಷಾ ಅಭಿಯಾನದ ಮುಖ್ಯಸ್ಥ ದರ್ಶನ್ ಭಾರತಿ ಸೇರಿದಂತೆ ಸುಮಾರು 30 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಮಸೀದಿಯ ವಿರುದ್ಧ ತಿಂಗಳುಗಟ್ಟಲೆ ಸಂಘಟಿತ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ. ಇದೀಗ ಪ್ರತಿಭಟನೆ ಉಲ್ಬಣಗೊಂಡಿವೆ. ಬಿಜೆಪಿ ಪರ ಕಾರ್ಯಕರ್ತರು ಧರಣಿಗಳನ್ನು ನಡೆಸಿದ್ದು, ಮಸೀದಿಯನ್ನು ಕೆಡವಲು ಒತ್ತಾಯಿಸಿ ಜಿಲ್ಲೆಯ ಅಧಿಕಾರಿಗಳಿಗೆ ಪದೇ ಪದೇ ಮನವಿ ಸಲ್ಲಿಸಿದ್ದಾರೆ.

ಸೆಪ್ಟೆಂಬರ್ ಆರಂಭದಲ್ಲಿ ಮಸೀದಿಯು ವಿವಾದಿತ ಭೂಮಿಯನ್ನು ಆಕ್ರಮಿಸಿಕೊಂಡಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ಸಣ್ಣ ರ್ಯಾಲಿಯನ್ನು ನಡೆಸಿದ್ದರು. ಜಿಲ್ಲಾಡಳಿತವು ಇತ್ತೀಚೆಗೆ ಮಸೀದಿಯ ನ್ಯಾಯಸಮ್ಮತತೆಯನ್ನು ಎತ್ತಿ ಹಿಡಿದಿದ್ದರೂ, ಬಿಜೆಪಿ ಪರ ಗುಂಪುಗಳು ಅದನ್ನು ತಳ್ಳಿಹಾಕಿವೆ.

“ಈ ಮಸೀದಿಯು ಕಾನೂನುಬಾಹಿರವಾಗಿದೆ ಎಂಬುವುದನ್ನು ಸಮರ್ಥಿಸಲು ನಮ್ಮ ಬಳಿ ದಾಖಲೆಗಳಿವೆ. ನಾವು ಅವುಗಳನ್ನು ಸಾರ್ವಜನಿಕವಾಗಿ ಪ್ರಸ್ತುತಪಡಿಸುತ್ತೇವೆ” ಎಂದು ಸಂಯುಕ್ತ ಸನಾತನ ಧರ್ಮ ರಕ್ಷಕ ಸಂಘ ಹೇಳಿಕೆಯಲ್ಲಿ ತಿಳಿಸಿದೆ. ಗುರುವಾರ, ಉತ್ತರಕಾಶಿ ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿ ರ್ಯಾಲಿ ನಡೆಸಲಾಗಿದ್ದು, ಅದರಲ್ಲಿ ಭಾಗವಹಿಸಿದವರು ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಡೆಹ್ರಾಡೂನ್ ಮೂಲದ ಮುಸ್ಲಿಂ ಸೇವಾ ಸಂಘಟನೆಯ ಅಧ್ಯಕ್ಷ ನಯೀಮ್ ಖುರೇಷಿ ಹಿಂಸಾಚಾರವನ್ನು ಖಂಡಿಸಿದ್ದು, ಆಡಳಿತದ ಪ್ರತಿಕ್ರಿಯೆಯನ್ನು ಟೀಕಿಸಿದ್ದಾರೆ. “ಈ ರ್ಯಾಲಿ ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ನಿರ್ಲಕ್ಷ್ಯವನ್ನು ತೋರಿಸುತ್ತದೆ…ಹಿಂಸಾಚಾರವು ಉದ್ವಿಗ್ನತೆಯನ್ನು ಸೃಷ್ಟಿಸುವ ಮತ್ತು ಹಿಂದೂ ರಾಷ್ಟ್ರಕ್ಕಾಗಿ ಮಾಡುವ ಕಾರ್ಯಸೂಚಿಯ ಭಾಗವಾಗಿದೆ” ಎಂದು ಅವರು ಹೇಳಿದ್ದಾರೆ. ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ.

ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೆಹರ್ಬನ್ ಸಿಂಗ್ ಬಿಶ್ತ್, ಈ ತಿಂಗಳ ಆರಂಭದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮಸೀದಿಯು ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದೆ ಮತ್ತು ವಕ್ಫ್ ಮಂಡಳಿಯಿಂದ ನೋಂದಾಯಿಸಲ್ಪಟ್ಟಿದೆ ಎಂದು ಹೇಳಿದ್ದರು.

“ಕೆಲವು ಬಲಪಂಥೀಯ ಸಂಘಟನೆಗಳು ಇದು ಅಕ್ರಮ ಮಸೀದಿ ಎಂದು ಹೇಳಿಕೊಂಡು ಜಿಲ್ಲಾಡಳಿತಕ್ಕೆ ಮನವಿ ನೀಡಿವೆ. ನಮ್ಮ ದಾಖಲೆಗಳ ಪ್ರಕಾರ, ಇದು ನೋಂದಾಯಿತ ಭೂಮಿಯಲ್ಲಿ ನಿರ್ಮಿಸಲ್ಪಟ್ಟಿದೆ ಮತ್ತು ಇದು ಅಕ್ರಮವಲ್ಲ. ನಾಲ್ಕು ಜನರ ಹೆಸರಿನಲ್ಲಿ ನೋಂದಣಿಯಾಗಿದೆ. ಜಿಲ್ಲಾಡಳಿತ ಕೂಡಾ ಇದನ್ನೆ ಹೇಳಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಶ್ರೀವಾಸ್ತವ ಹೇಳಿದ್ದಾರೆ.

ಇದನ್ನೂ ಓದಿ: ಪುಣೆ ಪೋರ್ಷೆ ಅಪಘಾತ ಪ್ರಕರಣ: ಸಾಸೂನ್ ಆಸ್ಪತ್ರೆ ಸಿಬ್ಬಂದಿಗಳ ವಿಚಾರಣೆಗೆ ಮಹಾರಾಷ್ಟ್ರ ಸರ್ಕಾರ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...