Homeಮುಖಪುಟಉತ್ತರಾಖಂಡ | ಹಿಂಸಾಚಾರಕ್ಕೆ ತಿರುಗಿದ ಮಸೀದಿ ವಿರೋಧಿ ಪ್ರತಿಭಟನೆ, ಮುಸ್ಲಿಮರ ಅಂಗಡಿಗಳು ಧ್ವಂಸ

ಉತ್ತರಾಖಂಡ | ಹಿಂಸಾಚಾರಕ್ಕೆ ತಿರುಗಿದ ಮಸೀದಿ ವಿರೋಧಿ ಪ್ರತಿಭಟನೆ, ಮುಸ್ಲಿಮರ ಅಂಗಡಿಗಳು ಧ್ವಂಸ

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿ ಪಟ್ಟಣದಲ್ಲಿ ಗುರುವಾರ ಹಿಂದುತ್ವ ಗುಂಪುಗಳ ನೇತೃತ್ವದಲ್ಲಿ ಕಾಶಿ ವಿಶ್ವನಾಥ ದೇವಸ್ಥಾನದ ಬಳಿ 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಒತ್ತಾಯಿಸಿ ನಡೆಸಿದ್ದ ರ್ಯಾಲಿಯಲ್ಲಿ ಹಿಂಸಾತ್ಮಕ ಘರ್ಷಣೆಗಳು ಸಂಭವಿಸಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಘರ್ಷಣೆಯಲ್ಲಿ ಮುಸ್ಲಿಂ ಒಡೆತನದ ಅಂಗಡಿಗಳನ್ನು ಧ್ವಂಸಗೊಳಿಸಲಾಯಿತು ಮತ್ತು ನಾಲ್ವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

ಸಂಯುಕ್ತ ಸನಾತನ ಧರ್ಮ ರಕ್ಷಕ ಸಂಘದ ಅಡಿಯಲ್ಲಿ ಆಯೋಜಿಸಲಾದ ಪ್ರತಿಭಟನೆಯಲ್ಲಿ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಮತ್ತು ಇತರ ಹಿಂದುತ್ವ ಗುಂಪುಗಳು ಮಸೀದಿಯನ್ನು “ಕಾನೂನುಬಾಹಿರವಾಗಿ ನಿರ್ಮಿಸಲಾಗಿದೆ” ಎಂದು ಪ್ರತಿಪಾದಿಸಿದ್ದರು. ಆದಾಗ್ಯೂ, ಜಿಲ್ಲಾಡಳಿತವು ಇತ್ತೀಚೆಗೆ ಮಸೀದಿಯ ಕಾನೂನುಬದ್ಧತೆಯನ್ನು ದೃಢಪಡಿಸಿದ್ದು, 1969 ರಲ್ಲಿ ಅದರ ನೋಂದಣಿ ಮಾಡಲಾಗಿದೆ ಎಂದು ಅದು ಹೇಳಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪೊಲೀಸ್ ಬ್ಯಾರಿಕೇಡ್‌ಗಳನ್ನು ಸಮೀಪಿಸುತ್ತಿದ್ದಂತೆ ಗುಂಪು ಕ್ಷೋಭೆಗೊಂಡಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಶ್ರೀವಾಸ್ತವ ಹೇಳಿದ್ದಾರೆ. ಪ್ರತಿಭಟನಾಕಾರರು ಪ್ರತಿಭಟನಾ ಮೆರವಣಿಗೆಯ ಗೊತ್ತುಪಡಿಸಿದ ಮಾರ್ಗದ ಬದಲಿಗೆ ಮಸೀದಿಯ ಕಡೆಗೆ ತಿರುಗಿಸಲು ಪ್ರಯತ್ನಿಸಿದರು, ಹಾಗಾಗಿ ಅಧಿಕಾರಿಗಳು ಮಧ್ಯಪ್ರವೇಶಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

“ಮಸೀದಿ ಕಡೆಗೆ ತೆರಳದಂತೆ ಅವರನ್ನು ನಿರ್ಬಂಧಿಸಿದಾಗ, ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲುಗಳನ್ನು ಎಸೆಯಲು ಪ್ರಾರಂಭಿಸಿದರು. ಇದರಿಂದ ನಾಲ್ವರು ಅಧಿಕಾರಿಗಳು ಗಾಯಗೊಂಡರು” ಎಂದು ಶ್ರೀವಾಸ್ತವ ಹೇಳಿದ್ದಾರೆ. ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಪೊಲೀಸರು ಭದ್ರತಾ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ದೇವಭೂಮಿ ರಕ್ಷಾ ಅಭಿಯಾನದ ಮುಖ್ಯಸ್ಥ ದರ್ಶನ್ ಭಾರತಿ ಸೇರಿದಂತೆ ಸುಮಾರು 30 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಮಸೀದಿಯ ವಿರುದ್ಧ ತಿಂಗಳುಗಟ್ಟಲೆ ಸಂಘಟಿತ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ. ಇದೀಗ ಪ್ರತಿಭಟನೆ ಉಲ್ಬಣಗೊಂಡಿವೆ. ಬಿಜೆಪಿ ಪರ ಕಾರ್ಯಕರ್ತರು ಧರಣಿಗಳನ್ನು ನಡೆಸಿದ್ದು, ಮಸೀದಿಯನ್ನು ಕೆಡವಲು ಒತ್ತಾಯಿಸಿ ಜಿಲ್ಲೆಯ ಅಧಿಕಾರಿಗಳಿಗೆ ಪದೇ ಪದೇ ಮನವಿ ಸಲ್ಲಿಸಿದ್ದಾರೆ.

ಸೆಪ್ಟೆಂಬರ್ ಆರಂಭದಲ್ಲಿ ಮಸೀದಿಯು ವಿವಾದಿತ ಭೂಮಿಯನ್ನು ಆಕ್ರಮಿಸಿಕೊಂಡಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ಸಣ್ಣ ರ್ಯಾಲಿಯನ್ನು ನಡೆಸಿದ್ದರು. ಜಿಲ್ಲಾಡಳಿತವು ಇತ್ತೀಚೆಗೆ ಮಸೀದಿಯ ನ್ಯಾಯಸಮ್ಮತತೆಯನ್ನು ಎತ್ತಿ ಹಿಡಿದಿದ್ದರೂ, ಬಿಜೆಪಿ ಪರ ಗುಂಪುಗಳು ಅದನ್ನು ತಳ್ಳಿಹಾಕಿವೆ.

“ಈ ಮಸೀದಿಯು ಕಾನೂನುಬಾಹಿರವಾಗಿದೆ ಎಂಬುವುದನ್ನು ಸಮರ್ಥಿಸಲು ನಮ್ಮ ಬಳಿ ದಾಖಲೆಗಳಿವೆ. ನಾವು ಅವುಗಳನ್ನು ಸಾರ್ವಜನಿಕವಾಗಿ ಪ್ರಸ್ತುತಪಡಿಸುತ್ತೇವೆ” ಎಂದು ಸಂಯುಕ್ತ ಸನಾತನ ಧರ್ಮ ರಕ್ಷಕ ಸಂಘ ಹೇಳಿಕೆಯಲ್ಲಿ ತಿಳಿಸಿದೆ. ಗುರುವಾರ, ಉತ್ತರಕಾಶಿ ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿ ರ್ಯಾಲಿ ನಡೆಸಲಾಗಿದ್ದು, ಅದರಲ್ಲಿ ಭಾಗವಹಿಸಿದವರು ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಡೆಹ್ರಾಡೂನ್ ಮೂಲದ ಮುಸ್ಲಿಂ ಸೇವಾ ಸಂಘಟನೆಯ ಅಧ್ಯಕ್ಷ ನಯೀಮ್ ಖುರೇಷಿ ಹಿಂಸಾಚಾರವನ್ನು ಖಂಡಿಸಿದ್ದು, ಆಡಳಿತದ ಪ್ರತಿಕ್ರಿಯೆಯನ್ನು ಟೀಕಿಸಿದ್ದಾರೆ. “ಈ ರ್ಯಾಲಿ ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ನಿರ್ಲಕ್ಷ್ಯವನ್ನು ತೋರಿಸುತ್ತದೆ…ಹಿಂಸಾಚಾರವು ಉದ್ವಿಗ್ನತೆಯನ್ನು ಸೃಷ್ಟಿಸುವ ಮತ್ತು ಹಿಂದೂ ರಾಷ್ಟ್ರಕ್ಕಾಗಿ ಮಾಡುವ ಕಾರ್ಯಸೂಚಿಯ ಭಾಗವಾಗಿದೆ” ಎಂದು ಅವರು ಹೇಳಿದ್ದಾರೆ. ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ.

ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೆಹರ್ಬನ್ ಸಿಂಗ್ ಬಿಶ್ತ್, ಈ ತಿಂಗಳ ಆರಂಭದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮಸೀದಿಯು ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದೆ ಮತ್ತು ವಕ್ಫ್ ಮಂಡಳಿಯಿಂದ ನೋಂದಾಯಿಸಲ್ಪಟ್ಟಿದೆ ಎಂದು ಹೇಳಿದ್ದರು.

“ಕೆಲವು ಬಲಪಂಥೀಯ ಸಂಘಟನೆಗಳು ಇದು ಅಕ್ರಮ ಮಸೀದಿ ಎಂದು ಹೇಳಿಕೊಂಡು ಜಿಲ್ಲಾಡಳಿತಕ್ಕೆ ಮನವಿ ನೀಡಿವೆ. ನಮ್ಮ ದಾಖಲೆಗಳ ಪ್ರಕಾರ, ಇದು ನೋಂದಾಯಿತ ಭೂಮಿಯಲ್ಲಿ ನಿರ್ಮಿಸಲ್ಪಟ್ಟಿದೆ ಮತ್ತು ಇದು ಅಕ್ರಮವಲ್ಲ. ನಾಲ್ಕು ಜನರ ಹೆಸರಿನಲ್ಲಿ ನೋಂದಣಿಯಾಗಿದೆ. ಜಿಲ್ಲಾಡಳಿತ ಕೂಡಾ ಇದನ್ನೆ ಹೇಳಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಶ್ರೀವಾಸ್ತವ ಹೇಳಿದ್ದಾರೆ.

ಇದನ್ನೂ ಓದಿ: ಪುಣೆ ಪೋರ್ಷೆ ಅಪಘಾತ ಪ್ರಕರಣ: ಸಾಸೂನ್ ಆಸ್ಪತ್ರೆ ಸಿಬ್ಬಂದಿಗಳ ವಿಚಾರಣೆಗೆ ಮಹಾರಾಷ್ಟ್ರ ಸರ್ಕಾರ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...