Homeಮುಖಪುಟಉತ್ತರಖಂಡ ಯುವತಿ ಕೊಲೆ ಪ್ರಕರಣ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್, ಬಿಜೆಪಿ ಶಾಸಕನ ಕಾರಿಗೆ ಬೆಂಕಿ

ಉತ್ತರಖಂಡ ಯುವತಿ ಕೊಲೆ ಪ್ರಕರಣ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್, ಬಿಜೆಪಿ ಶಾಸಕನ ಕಾರಿಗೆ ಬೆಂಕಿ

ಕೊಲೆ ಆರೋಪಿಯ ತಂದೆ ವಿನೋದ್ ಆರ್ಯ ಮತ್ತು ಸಹೋದರ ಅಂಕಿತ್ ಆರ್ಯನನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ

- Advertisement -
- Advertisement -

ಉತ್ತರಖಂಡ ರಾಜ್ಯದ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡ ವಿನೋದ್ ಆರ್ಯರವರ ಮಗ ಪುಲ್ಕಿತ್ ಆರ್ಯನನ್ನು 19 ವರ್ಷದ ಯುವತಿಯ ಕೊಲೆಗೈದ ನಂತರ ಹಿಂಸಾಚಾರ ಭುಗಿಲೆದ್ದಿದೆ. ಕೋಪಗೊಂಡ ಸ್ಥಳೀಯರು ಆತನ ರೆಸಾರ್ಟ್ ಮತ್ತು ಸ್ಥಳೀಯ ಬಿಜೆಪಿ ಶಾಸಕ ರೇಣು ಬಿಸ್ತ ಅವರ ಕಾರಿಗೆ ಬೆಂಕಿ ಹಾಕಿದ್ದಾರೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ದಾಮಿ ಆದೇಶದ ಮೇರೆಗೆ ವಿನೋದ್ ಆರ್ಯರವರ ಮಗ ಪುಲ್ಕಿತ್ ಆರ್ಯ ಒಡೆತನದ ರೆಸಾರ್ಟ್ ಮೇಲೆ ಪೊಲೀಸರು ಬುಲ್ಡೋಜರ್ ದಾಳಿ ನಡೆಸಿದ್ದಾರೆ. ಅಲ್ಲದೆ ಬಿಜೆಪಿ ಮುಖಂಡರಾದ ಅವರ ತಂದೆ ವಿನೋದ್ ಆರ್ಯ ಮತ್ತು ಸಹೋದರ ಅಂಕಿತ್ ಆರ್ಯನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣದ ಹಿನ್ನೆಲೆ

ಪುಲ್ಕಿತ್ ಆರ್ಯನ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಸೆಪ್ಟಂಬರ್ 18ರಂದು ಕಾಣೆಯಾಗಿದ್ದರು. ಸ್ವತಃ ಪುಲ್ಕಿತ್ ಆರ್ಯನೇ ಪೊಲೀಸ್ ಠಾಣೆಯಲ್ಲಿ ಯುವತಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದನು. ಆದರೆ 5 ದಿನದ ನಂತರ ಪುಲ್ಕಿತ್ ಆರ್ಯ ಇಬ್ಬರು ಸಿಬ್ಬಂದಿಯೊಡನೆ ಸೇರಿ ಯುವತಿಯನ್ನು ಕೊಂದಿದ್ದಾನೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸಂತ್ರಸ್ತ ಯುವತಿಯ ಕುಟುಂಬವು ಮೊದಲಿನಿಂದಲೂ ಪುಲ್ಕಿತ್ ಆರ್ಯನ ಮೇಲೆ ಸಂಶಯ ವ್ಯಕ್ತಪಡಿಸಿತ್ತು. ಏಕೆಂದರೆ ಪ್ರಕರಣದ ಬಗ್ಗೆ ಆತ ಆರಂಭದಲ್ಲಿ ದೂರು ನೀಡಲು ನಿರಾಕರಿಸಿದ್ದ ಎಂದು ಹೇಳಲಾಗಿದೆ. ಮೃತ ದೇಹವನ್ನು ಪಕ್ಕದ ಕಾಲುವೆಯಲ್ಲಿ ಪತ್ತೆಹಚ್ಚಲಾಗಿದ್ದು, ಯುವತಿಯ ಸಂಬಂಧಿಕರನ್ನು ಗುರುತು ಪತ್ತೆ ಹಚ್ಚಲು ಕರೆಯಲಾಗಿದೆ ಎಂದು ವರದಿಯಾಗಿದೆ.

ಈ ನಡವೆ ಆರೋಪಿಯು ಹಿರಿಯ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡನ ಮಗನಾಗಿದ್ದರಿಂದ ಪೊಲೀಸರು ತನಿಖೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ ವೈರಲ್ ಆದ ನಂತರ ಪೊಲೀಸರು ಮುಖ್ಯ ಆರೋಪಿ ಪುಲ್ಕಿತ್ ಮತ್ತು ಇಬ್ಬರು ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.

ಆ ಯುವತಿಯ ಕೊಲೆಯ ಹಿಂದಿನ ಕಾರಣಗಳ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಆಪಾದಿತ ರೆಸಾರ್ಟ್‌ನಲ್ಲಿ ಹುಡುಗಿಯರನ್ನು ವೇಶ್ಯಾವಾಟಿಕೆಗೆ ದೂಡಲಾಗುತ್ತಿದೆ. ಅದಕ್ಕೆ ಸಂತ್ರಸ್ತ ಯುವತಿಯನ್ನು ಕೂಡಾ ಬಲವಂತಪಡಿಸಲಾಗುತ್ತಿತ್ತು ಎಂಬ ಆರೋಪಗಳು ಕೇಳಿಬಂದಿದ್ದು, ಪೊಲೀಸರು ಈ ಕುರಿತು ಮಾಹಿತಿ ನೀಡಿಲ್ಲ.

“ಪೊಲೀಸರು ತನಿಖೆಯಲ್ಲಿ ಲೋಪವೆಸಗುತ್ತಿದ್ದಾರೆ. ಸೆಪ್ಟಂಬರ್ 18ರಂದು ಯುವತಿ ಕಾಣೆಯಾಗಿದ್ದರು ಸಹ ಸೆಪ್ಟಂಬರ್ 21 ರಂದು ಎಫ್‌ಐಆರ್ ದಾಖಲಿಸಿದ್ದು ಏಕೆ? ಎಲ್ಲಿಯವರೆಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡರು ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ?” ಎಂದು ಕಾಂಗ್ರೆಸ್ ವಕ್ತಾರ ಗರಿಮ ಮೆಹ್ರ ದುಸಾನಿ ಪ್ರಶ್ನಿಸಿದ್ದಾರೆ.

ರಾಜ್ಯ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ಮಾತನಾಡಿ, “ರೆಸಾರ್ಟ್ ಇರುವ ಜಾಗ ರಿಷಿಕೇಶ್ ಪಟ್ಟಣದಿಂದ 10 ಕಿ.ಮೀ ದೂರವಿದ್ದು ಅಲ್ಲಿ ಸಾಮಾನ್ಯ ಪೊಲೀಸರನ್ನು ನಿಯೋಜಿಸಿರಲಿಲ್ಲ. ನಮ್ಮಲ್ಲಿ ಕಂದಾಯ ಅಧಿಕಾರಿಗಳು ಎಫ್‌ಐಆರ್ ದಾಖಲಿಸುವ ಪದ್ದತಿ ಇದೆ. ಅದರಂತೆ ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯನ ದೂರಿನ ಅನ್ವಯ ಕಾಣೆಯಾಗಿದ್ದಾರೆ ಎಂಬ ದೂರು ದಾಖಲಿಸಿಕೊಂಡಿದ್ದರು. ಆದರೆ ಜಿಲ್ಲಾ ನ್ಯಾಯಾಧೀಶರು ಪ್ರಕರಣವನ್ನು ನಮಗೆ ವರ್ಗಾಯಿಸಿದ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದೇವೆ. ದೂರುದಾರನೇ ಆರೋಪಿಯಾಗಿ ಬದಲಾಗಿದ್ದಾನೆ” ಎಂದು ತಿಳಿಸಿದ್ದಾರೆ.

ಬಂಧನದ ವೇಳೆ ಪುಲ್ಕಿತ್ ಆರ್ಯನ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರು ಪೊಲೀಸ್ ವಾಹನದ ಮೇಲೆ ದಾಳಿ ನಡೆಸಿ ಜಖಂಗೊಳಿಸಿದ್ದಾರೆ ಎಂದು ವರದಿಯಾಗಿದೆ. ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ಮ್ಯಾನೇಜರ್ ಅಂಕಿತ್ ಗುಪ್ತಾ ಎಂಬುವವರನ್ನು ಸಹ ಬಂಧಿಸಿದ್ದೇವೆ. ಆರಂಭದಲ್ಲಿ ಅವರು ಪೊಲೀಸರನ್ನು ದಿಕ್ಕು ತಪ್ಪಿಸಲು ಯತ್ನಿಸಿದರು. ಆದರೆ ಧೀರ್ಘ ವಿಚಾರಣೆಯ ಸಂದರ್ಭದಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಉತ್ತರಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರು ತಿಳಿಸಿದ್ದಾರೆ. “ಇದು ಬಹಳ ಹೀನ ಕೃತ್ಯವಾಗಿದ್ದು, ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಸಿಎಂ ಆದೇಶದ ಮೇರೆಗೆ ಸ್ಥಳೀಯ ಆಡಳಿತಾಧಿಕಾರಿಗಳು ರೆಸಾರ್ಟ್ ಅನ್ನು ಬುಲ್ಡೋಜರ್‌ನಿಂದ ನೆಲಸಮಗೊಳಿಸಲು ಮುಂದಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಅಲ್ಲದೆ ರಾಜ್ಯದ ಎಲ್ಲಾ ರೆಸಾರ್ಟ್‌ಗಳ ಮೇಲೆ ತನಿಖೆ ನಡೆಸಬೇಕೆಂದು ಆದೇಶಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...