Homeಮುಖಪುಟರಾಜ್ಯ ಬಿಜೆಪಿ ಘಟಕದ ಬಿರುಕು, ಮುಂದಿನ ಚುನಾವಣೆಯಿಂದ ಉತ್ತರಾಖಂಡ ಸಿಎಂ ಸ್ಥಾನಕ್ಕೆ ಕುತ್ತು ಸಾಧ್ಯತೆ

ರಾಜ್ಯ ಬಿಜೆಪಿ ಘಟಕದ ಬಿರುಕು, ಮುಂದಿನ ಚುನಾವಣೆಯಿಂದ ಉತ್ತರಾಖಂಡ ಸಿಎಂ ಸ್ಥಾನಕ್ಕೆ ಕುತ್ತು ಸಾಧ್ಯತೆ

- Advertisement -
- Advertisement -

ಮುಖ್ಯಮಂತ್ರಿ ಪದವಿಗೆ ಏರಿದ ನಾಲ್ಕು ತಿಂಗಳಿನಿಂದ ವಿವಾದಗಳಿಂದಲೇ ಸುದ್ದಿಯಲ್ಲಿರುವ ಉತ್ತರಾಖಂಡ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್‌ಗೆ ತಮ್ಮ ಸಿಎಂ ಸ್ಥಾನ ಕಳೆದುಕೊಳ್ಳುವ ಭಯ ಎದುರಾಗಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಹೈಕಮಾಂಡ್‌ ಜೊತೆಗೆ ಬೀಡುಬಿಟ್ಟಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಚುನಾವಣೆ ಗೆಲ್ಲುವ ಅನಿವಾರ್ಯತೆ ಮತ್ತು ರಾಜ್ಯ ಬಿಜೆಪಿ ಘಟಕದಲ್ಲಿ ಉಂಟಾಗಿರುವ ಬಿರುಕು ಸರಿ ಪಡಿಸುವುದು ಅವರ ಮುಂದಿರುವ ಕಠಿಣ ಸವಾಲಾಗಿ ಪರಿಣಮಿಸಿದೆ. ಇವುಗಳ ಕಾರಣ ಎಲ್ಲಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ಬರುತ್ತದೋ ಎಂಬ ಆತಂಕ ತಿರತ್ ಸಿಂಗ್ ರಾವತ್ ಅವರಲ್ಲಿ ಮನೆ ಮಾಡಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್‌ ಅವರನ್ನು ಬಿಜೆಪಿ ನಾಯಕತ್ವ  ಬುಧವಾರ ದೆಹಲಿಗೆ ಕರೆಸಿಕೊಂಡಿದ್ದು, ಅಂದಿನಿಂದಲೂ ರಾಜ್ಯದ ಸ್ಥಿತಿಗತಿ ಮತ್ತು ಚುನಾವಣೆ ಬಗ್ಗೆ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ  ಜೊತೆಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮತದಾನ ನಂತರದ ಹಿಂಸಾಚಾರ: ಚುನಾವಣಾ ಆಯೋಗ, ಬಂಗಾಳ ಮತ್ತು ಒಕ್ಕೂಟ ಸರ್ಕಾರಕ್ಕೆ ಸುಪ್ರೀಂನಿಂದ ನೋಟಿಸ್‌

ತಿರತ್ ಸಿಂಗ್ ರಾವತ್‌ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆಯೇ ಎಂಬುದು ಚುನಾವಣಾ ಆಯೋಗದ ನಿರ್ಧಾರವನ್ನು ಅವಲಂಬಿಸಿದೆ.

ಉತ್ತರಾಖಂಡ ರಾಜ್ಯದ ಅಂದಿನ ಮುಖ್ಯಮಂತ್ರಿ ತ್ರಿವೇಂದ್ರ ರಾವತ್ ವಿರುದ್ಧ ಬಿಜೆಪಿ ರಾಜ್ಯ ಘಟಕದಲ್ಲಿ ತೀವ್ರ ಅಸಮಾಧಾನ ಉಂಟಾಗಿದ್ದರಿಂದ ಬಿಜೆಪಿ ಹೈಕಮಾಂಡ್, ಉತ್ತರಾಖಂಡ ಚುನಾವಣೆಗೆ ಕೇವಲ ಒಂದು ವರ್ಷವಿರುವಾಗಲೇ ಮಾರ್ಚ್‌ನಲ್ಲಿ ತಿರತ್ ಸಿಂಗ್ ರಾವತ್ ಅವರಿಗೆ ಅಧಿಕಾರ ಹಸ್ತಾಂತರಿಸಿತ್ತು.

ಆದರೆ, ಮುಖ್ಯಮಂತ್ರಿ  ಸ್ಥಾನ ಉಳಿಸಿಕೊಳ್ಳಲು ಸಂಸದರಾಗಿರುವ ತಿರತ್ ಸಿಂಗ್ ರಾವತ್ ಅವರು ವಿಧಾನಸಭಾ ಸ್ಥಾನವನ್ನು ಗೆದ್ದು ಸೆಪ್ಟೆಂಬರ್ 10 ರೊಳಗೆ ಉತ್ತರಾಖಂಡ ಶಾಸಕಾಂಗ ಸಭೆಯ ಸದಸ್ಯರಾಗಬೇಕಾಗಿದೆ.

ಕೋವಿಡ್ ಬಿಕ್ಕಟ್ಟು ಮತ್ತು ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ಚುನಾವಣೆಯ ದೊಡ್ಡ ವಿವಾದ ಹೊತ್ತಿರುವ ಚುನಾವನಾ ಆಯೋಗ ಇದನ್ನು ಹೇಗೆ ಪರಿಹರಿಸುತ್ತದೆಯೋ ನೋಡಬೇಕಾಗಿದೆ. ಚುನಾವಣೆಯ ಕುರಿತು ವಿವಿಧ ರಾಜ್ಯಗಳೊಂದಿಗೆ ಸಮಾಲೋಚಿಸುತ್ತಿದೆ ಎಂದು ಚುನಾವಣಾ ಆಯೋಗದ ಮೂಲಗಳನ್ನು ಎನ್‌ಡಿಟಿವಿ  ಉಲ್ಲೇಖಿಸಿದೆ. ಅನೇಕ ಉಪಚುನಾವಣೆಗಳು ಬಾಕಿ ಉಳಿದಿದ್ದು, ಕೋವಿಡ್ ಪರಿಸ್ಥಿತಿ ಪ್ರಮುಖವಾದ ಪರಿಗಣನೆಯಾಗಿದೆ, ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಪದವಿ ವಹಿಸಿಕೊಂಡ ಮಾರ್ಚ್‌ನಿಂದಲೂ ತಿರತ್ ಸಿಂಗ್ ರಾವತ್‌  ಸರಣಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಬಿಜೆಪಿಯ ಉತ್ತರಾಖಂಡ ನಾಯಕರು ದೆಹಲಿ ನಾಯಕತ್ವಕ್ಕೆ ಅವರ ಹೇಳಿಕೆಗಳ ಬಗ್ಗೆ ಸಾರ್ವಜನಿಕರಲ್ಲಿ ಉಂಟಾಗಿರುವ ಆಕ್ರೋಶದ ಬಗ್ಗೆ ದೂರು ನೀಡಿದ್ದಾರೆ. ಜೊತೆಗೆ ಬಿಜೆಪಿಯ ಹಿಂದಿನ ನೀತಿ ನಿರ್ಧಾರಗಳನ್ನು ಟೀಕಿಸುವ ಮೂಲಕ ತಮ್ಮದೇ ಪಕ್ಷವನ್ನು ಮುಜುಗರಕ್ಕೀಡು ಮಾಡಿದ್ದಾರೆ.

ಅಧಿಕಾರ ವಹಿಸಿಕೊಂಡ ಕೂಡಲೇ, ರಾವತ್ ಅವರು ‘ರಿಪ್ಪಡ್‌ ಜೀನ್ಸ್ ಪ್ಯಾಂಟ್‌‌’  ಧರಿಸಿದ ಮಹಿಳೆಯರ ಬಗ್ಗೆ ಹೇಳಿಕೆ ನೀಡಿ, ವ್ಯಾಪಕ ಆಕ್ರೋಶವನ್ನು ಎದುರಿಸಿದ್ದರು. ಜೊತೆಗೆ 200 ವರ್ಷಗಳ ಕಾಲ ಭಾರತವನ್ನು ಬ್ರಿಟನ್ ಅಲ್ಲ, ಅಮೆರಿಕಾ ಆಳ್ವಿಕೆ ಮಾಡಿತ್ತು ಎಂದಿದ್ದರು.

ಇನ್ನು, ಕೊರೊನಾ ಉಲ್ಬಣದಲ್ಲಿದ್ದ ದಿನಗಳಲ್ಲಿ ಕುಂಭಮೇಳವನ್ನು ಆಯೋಜಿಸಿ, “ಯಾವುದೇ ಆರ್‌ಟಿ-ಪಿಸಿಆರ್ ಪರೀಕ್ಷೆಯ ಅಗತ್ಯವಿಲ್ಲ” ಎಂಬ ಅಭಿಪ್ರಾಯ ಹೊರ ಹಾಕಿದ್ದರು. ಈ ಎಲ್ಲಾ ವಿವಾದಗಳು ಮತ್ತು ಬಿಜೆಪಿ ರಾಜ್ಯ ಘಟಕದಲ್ಲಿನ ಭಾರಿ ಬಿರುಕು ಇವರ ಸ್ಥಾನಕ್ಕೆ ಕುತ್ತು ತರಬಹುದು ಎನ್ನಲಾಗಿದೆ.


ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಉತ್ತರಾಖಂಡ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...