Homeಮುಖಪುಟರಾಜ್ಯ ಬಿಜೆಪಿ ಘಟಕದ ಬಿರುಕು, ಮುಂದಿನ ಚುನಾವಣೆಯಿಂದ ಉತ್ತರಾಖಂಡ ಸಿಎಂ ಸ್ಥಾನಕ್ಕೆ ಕುತ್ತು ಸಾಧ್ಯತೆ

ರಾಜ್ಯ ಬಿಜೆಪಿ ಘಟಕದ ಬಿರುಕು, ಮುಂದಿನ ಚುನಾವಣೆಯಿಂದ ಉತ್ತರಾಖಂಡ ಸಿಎಂ ಸ್ಥಾನಕ್ಕೆ ಕುತ್ತು ಸಾಧ್ಯತೆ

- Advertisement -
- Advertisement -

ಮುಖ್ಯಮಂತ್ರಿ ಪದವಿಗೆ ಏರಿದ ನಾಲ್ಕು ತಿಂಗಳಿನಿಂದ ವಿವಾದಗಳಿಂದಲೇ ಸುದ್ದಿಯಲ್ಲಿರುವ ಉತ್ತರಾಖಂಡ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್‌ಗೆ ತಮ್ಮ ಸಿಎಂ ಸ್ಥಾನ ಕಳೆದುಕೊಳ್ಳುವ ಭಯ ಎದುರಾಗಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಹೈಕಮಾಂಡ್‌ ಜೊತೆಗೆ ಬೀಡುಬಿಟ್ಟಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಚುನಾವಣೆ ಗೆಲ್ಲುವ ಅನಿವಾರ್ಯತೆ ಮತ್ತು ರಾಜ್ಯ ಬಿಜೆಪಿ ಘಟಕದಲ್ಲಿ ಉಂಟಾಗಿರುವ ಬಿರುಕು ಸರಿ ಪಡಿಸುವುದು ಅವರ ಮುಂದಿರುವ ಕಠಿಣ ಸವಾಲಾಗಿ ಪರಿಣಮಿಸಿದೆ. ಇವುಗಳ ಕಾರಣ ಎಲ್ಲಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ಬರುತ್ತದೋ ಎಂಬ ಆತಂಕ ತಿರತ್ ಸಿಂಗ್ ರಾವತ್ ಅವರಲ್ಲಿ ಮನೆ ಮಾಡಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್‌ ಅವರನ್ನು ಬಿಜೆಪಿ ನಾಯಕತ್ವ  ಬುಧವಾರ ದೆಹಲಿಗೆ ಕರೆಸಿಕೊಂಡಿದ್ದು, ಅಂದಿನಿಂದಲೂ ರಾಜ್ಯದ ಸ್ಥಿತಿಗತಿ ಮತ್ತು ಚುನಾವಣೆ ಬಗ್ಗೆ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ  ಜೊತೆಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮತದಾನ ನಂತರದ ಹಿಂಸಾಚಾರ: ಚುನಾವಣಾ ಆಯೋಗ, ಬಂಗಾಳ ಮತ್ತು ಒಕ್ಕೂಟ ಸರ್ಕಾರಕ್ಕೆ ಸುಪ್ರೀಂನಿಂದ ನೋಟಿಸ್‌

ತಿರತ್ ಸಿಂಗ್ ರಾವತ್‌ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆಯೇ ಎಂಬುದು ಚುನಾವಣಾ ಆಯೋಗದ ನಿರ್ಧಾರವನ್ನು ಅವಲಂಬಿಸಿದೆ.

ಉತ್ತರಾಖಂಡ ರಾಜ್ಯದ ಅಂದಿನ ಮುಖ್ಯಮಂತ್ರಿ ತ್ರಿವೇಂದ್ರ ರಾವತ್ ವಿರುದ್ಧ ಬಿಜೆಪಿ ರಾಜ್ಯ ಘಟಕದಲ್ಲಿ ತೀವ್ರ ಅಸಮಾಧಾನ ಉಂಟಾಗಿದ್ದರಿಂದ ಬಿಜೆಪಿ ಹೈಕಮಾಂಡ್, ಉತ್ತರಾಖಂಡ ಚುನಾವಣೆಗೆ ಕೇವಲ ಒಂದು ವರ್ಷವಿರುವಾಗಲೇ ಮಾರ್ಚ್‌ನಲ್ಲಿ ತಿರತ್ ಸಿಂಗ್ ರಾವತ್ ಅವರಿಗೆ ಅಧಿಕಾರ ಹಸ್ತಾಂತರಿಸಿತ್ತು.

ಆದರೆ, ಮುಖ್ಯಮಂತ್ರಿ  ಸ್ಥಾನ ಉಳಿಸಿಕೊಳ್ಳಲು ಸಂಸದರಾಗಿರುವ ತಿರತ್ ಸಿಂಗ್ ರಾವತ್ ಅವರು ವಿಧಾನಸಭಾ ಸ್ಥಾನವನ್ನು ಗೆದ್ದು ಸೆಪ್ಟೆಂಬರ್ 10 ರೊಳಗೆ ಉತ್ತರಾಖಂಡ ಶಾಸಕಾಂಗ ಸಭೆಯ ಸದಸ್ಯರಾಗಬೇಕಾಗಿದೆ.

ಕೋವಿಡ್ ಬಿಕ್ಕಟ್ಟು ಮತ್ತು ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ಚುನಾವಣೆಯ ದೊಡ್ಡ ವಿವಾದ ಹೊತ್ತಿರುವ ಚುನಾವನಾ ಆಯೋಗ ಇದನ್ನು ಹೇಗೆ ಪರಿಹರಿಸುತ್ತದೆಯೋ ನೋಡಬೇಕಾಗಿದೆ. ಚುನಾವಣೆಯ ಕುರಿತು ವಿವಿಧ ರಾಜ್ಯಗಳೊಂದಿಗೆ ಸಮಾಲೋಚಿಸುತ್ತಿದೆ ಎಂದು ಚುನಾವಣಾ ಆಯೋಗದ ಮೂಲಗಳನ್ನು ಎನ್‌ಡಿಟಿವಿ  ಉಲ್ಲೇಖಿಸಿದೆ. ಅನೇಕ ಉಪಚುನಾವಣೆಗಳು ಬಾಕಿ ಉಳಿದಿದ್ದು, ಕೋವಿಡ್ ಪರಿಸ್ಥಿತಿ ಪ್ರಮುಖವಾದ ಪರಿಗಣನೆಯಾಗಿದೆ, ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಪದವಿ ವಹಿಸಿಕೊಂಡ ಮಾರ್ಚ್‌ನಿಂದಲೂ ತಿರತ್ ಸಿಂಗ್ ರಾವತ್‌  ಸರಣಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಬಿಜೆಪಿಯ ಉತ್ತರಾಖಂಡ ನಾಯಕರು ದೆಹಲಿ ನಾಯಕತ್ವಕ್ಕೆ ಅವರ ಹೇಳಿಕೆಗಳ ಬಗ್ಗೆ ಸಾರ್ವಜನಿಕರಲ್ಲಿ ಉಂಟಾಗಿರುವ ಆಕ್ರೋಶದ ಬಗ್ಗೆ ದೂರು ನೀಡಿದ್ದಾರೆ. ಜೊತೆಗೆ ಬಿಜೆಪಿಯ ಹಿಂದಿನ ನೀತಿ ನಿರ್ಧಾರಗಳನ್ನು ಟೀಕಿಸುವ ಮೂಲಕ ತಮ್ಮದೇ ಪಕ್ಷವನ್ನು ಮುಜುಗರಕ್ಕೀಡು ಮಾಡಿದ್ದಾರೆ.

ಅಧಿಕಾರ ವಹಿಸಿಕೊಂಡ ಕೂಡಲೇ, ರಾವತ್ ಅವರು ‘ರಿಪ್ಪಡ್‌ ಜೀನ್ಸ್ ಪ್ಯಾಂಟ್‌‌’  ಧರಿಸಿದ ಮಹಿಳೆಯರ ಬಗ್ಗೆ ಹೇಳಿಕೆ ನೀಡಿ, ವ್ಯಾಪಕ ಆಕ್ರೋಶವನ್ನು ಎದುರಿಸಿದ್ದರು. ಜೊತೆಗೆ 200 ವರ್ಷಗಳ ಕಾಲ ಭಾರತವನ್ನು ಬ್ರಿಟನ್ ಅಲ್ಲ, ಅಮೆರಿಕಾ ಆಳ್ವಿಕೆ ಮಾಡಿತ್ತು ಎಂದಿದ್ದರು.

ಇನ್ನು, ಕೊರೊನಾ ಉಲ್ಬಣದಲ್ಲಿದ್ದ ದಿನಗಳಲ್ಲಿ ಕುಂಭಮೇಳವನ್ನು ಆಯೋಜಿಸಿ, “ಯಾವುದೇ ಆರ್‌ಟಿ-ಪಿಸಿಆರ್ ಪರೀಕ್ಷೆಯ ಅಗತ್ಯವಿಲ್ಲ” ಎಂಬ ಅಭಿಪ್ರಾಯ ಹೊರ ಹಾಕಿದ್ದರು. ಈ ಎಲ್ಲಾ ವಿವಾದಗಳು ಮತ್ತು ಬಿಜೆಪಿ ರಾಜ್ಯ ಘಟಕದಲ್ಲಿನ ಭಾರಿ ಬಿರುಕು ಇವರ ಸ್ಥಾನಕ್ಕೆ ಕುತ್ತು ತರಬಹುದು ಎನ್ನಲಾಗಿದೆ.


ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಉತ್ತರಾಖಂಡ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...