Homeಮುಖಪುಟರಾಜ್ಯ ಬಿಜೆಪಿ ಘಟಕದ ಬಿರುಕು, ಮುಂದಿನ ಚುನಾವಣೆಯಿಂದ ಉತ್ತರಾಖಂಡ ಸಿಎಂ ಸ್ಥಾನಕ್ಕೆ ಕುತ್ತು ಸಾಧ್ಯತೆ

ರಾಜ್ಯ ಬಿಜೆಪಿ ಘಟಕದ ಬಿರುಕು, ಮುಂದಿನ ಚುನಾವಣೆಯಿಂದ ಉತ್ತರಾಖಂಡ ಸಿಎಂ ಸ್ಥಾನಕ್ಕೆ ಕುತ್ತು ಸಾಧ್ಯತೆ

- Advertisement -
- Advertisement -

ಮುಖ್ಯಮಂತ್ರಿ ಪದವಿಗೆ ಏರಿದ ನಾಲ್ಕು ತಿಂಗಳಿನಿಂದ ವಿವಾದಗಳಿಂದಲೇ ಸುದ್ದಿಯಲ್ಲಿರುವ ಉತ್ತರಾಖಂಡ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್‌ಗೆ ತಮ್ಮ ಸಿಎಂ ಸ್ಥಾನ ಕಳೆದುಕೊಳ್ಳುವ ಭಯ ಎದುರಾಗಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಹೈಕಮಾಂಡ್‌ ಜೊತೆಗೆ ಬೀಡುಬಿಟ್ಟಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಚುನಾವಣೆ ಗೆಲ್ಲುವ ಅನಿವಾರ್ಯತೆ ಮತ್ತು ರಾಜ್ಯ ಬಿಜೆಪಿ ಘಟಕದಲ್ಲಿ ಉಂಟಾಗಿರುವ ಬಿರುಕು ಸರಿ ಪಡಿಸುವುದು ಅವರ ಮುಂದಿರುವ ಕಠಿಣ ಸವಾಲಾಗಿ ಪರಿಣಮಿಸಿದೆ. ಇವುಗಳ ಕಾರಣ ಎಲ್ಲಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ಬರುತ್ತದೋ ಎಂಬ ಆತಂಕ ತಿರತ್ ಸಿಂಗ್ ರಾವತ್ ಅವರಲ್ಲಿ ಮನೆ ಮಾಡಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್‌ ಅವರನ್ನು ಬಿಜೆಪಿ ನಾಯಕತ್ವ  ಬುಧವಾರ ದೆಹಲಿಗೆ ಕರೆಸಿಕೊಂಡಿದ್ದು, ಅಂದಿನಿಂದಲೂ ರಾಜ್ಯದ ಸ್ಥಿತಿಗತಿ ಮತ್ತು ಚುನಾವಣೆ ಬಗ್ಗೆ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ  ಜೊತೆಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮತದಾನ ನಂತರದ ಹಿಂಸಾಚಾರ: ಚುನಾವಣಾ ಆಯೋಗ, ಬಂಗಾಳ ಮತ್ತು ಒಕ್ಕೂಟ ಸರ್ಕಾರಕ್ಕೆ ಸುಪ್ರೀಂನಿಂದ ನೋಟಿಸ್‌

ತಿರತ್ ಸಿಂಗ್ ರಾವತ್‌ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆಯೇ ಎಂಬುದು ಚುನಾವಣಾ ಆಯೋಗದ ನಿರ್ಧಾರವನ್ನು ಅವಲಂಬಿಸಿದೆ.

ಉತ್ತರಾಖಂಡ ರಾಜ್ಯದ ಅಂದಿನ ಮುಖ್ಯಮಂತ್ರಿ ತ್ರಿವೇಂದ್ರ ರಾವತ್ ವಿರುದ್ಧ ಬಿಜೆಪಿ ರಾಜ್ಯ ಘಟಕದಲ್ಲಿ ತೀವ್ರ ಅಸಮಾಧಾನ ಉಂಟಾಗಿದ್ದರಿಂದ ಬಿಜೆಪಿ ಹೈಕಮಾಂಡ್, ಉತ್ತರಾಖಂಡ ಚುನಾವಣೆಗೆ ಕೇವಲ ಒಂದು ವರ್ಷವಿರುವಾಗಲೇ ಮಾರ್ಚ್‌ನಲ್ಲಿ ತಿರತ್ ಸಿಂಗ್ ರಾವತ್ ಅವರಿಗೆ ಅಧಿಕಾರ ಹಸ್ತಾಂತರಿಸಿತ್ತು.

ಆದರೆ, ಮುಖ್ಯಮಂತ್ರಿ  ಸ್ಥಾನ ಉಳಿಸಿಕೊಳ್ಳಲು ಸಂಸದರಾಗಿರುವ ತಿರತ್ ಸಿಂಗ್ ರಾವತ್ ಅವರು ವಿಧಾನಸಭಾ ಸ್ಥಾನವನ್ನು ಗೆದ್ದು ಸೆಪ್ಟೆಂಬರ್ 10 ರೊಳಗೆ ಉತ್ತರಾಖಂಡ ಶಾಸಕಾಂಗ ಸಭೆಯ ಸದಸ್ಯರಾಗಬೇಕಾಗಿದೆ.

ಕೋವಿಡ್ ಬಿಕ್ಕಟ್ಟು ಮತ್ತು ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ಚುನಾವಣೆಯ ದೊಡ್ಡ ವಿವಾದ ಹೊತ್ತಿರುವ ಚುನಾವನಾ ಆಯೋಗ ಇದನ್ನು ಹೇಗೆ ಪರಿಹರಿಸುತ್ತದೆಯೋ ನೋಡಬೇಕಾಗಿದೆ. ಚುನಾವಣೆಯ ಕುರಿತು ವಿವಿಧ ರಾಜ್ಯಗಳೊಂದಿಗೆ ಸಮಾಲೋಚಿಸುತ್ತಿದೆ ಎಂದು ಚುನಾವಣಾ ಆಯೋಗದ ಮೂಲಗಳನ್ನು ಎನ್‌ಡಿಟಿವಿ  ಉಲ್ಲೇಖಿಸಿದೆ. ಅನೇಕ ಉಪಚುನಾವಣೆಗಳು ಬಾಕಿ ಉಳಿದಿದ್ದು, ಕೋವಿಡ್ ಪರಿಸ್ಥಿತಿ ಪ್ರಮುಖವಾದ ಪರಿಗಣನೆಯಾಗಿದೆ, ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಪದವಿ ವಹಿಸಿಕೊಂಡ ಮಾರ್ಚ್‌ನಿಂದಲೂ ತಿರತ್ ಸಿಂಗ್ ರಾವತ್‌  ಸರಣಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಬಿಜೆಪಿಯ ಉತ್ತರಾಖಂಡ ನಾಯಕರು ದೆಹಲಿ ನಾಯಕತ್ವಕ್ಕೆ ಅವರ ಹೇಳಿಕೆಗಳ ಬಗ್ಗೆ ಸಾರ್ವಜನಿಕರಲ್ಲಿ ಉಂಟಾಗಿರುವ ಆಕ್ರೋಶದ ಬಗ್ಗೆ ದೂರು ನೀಡಿದ್ದಾರೆ. ಜೊತೆಗೆ ಬಿಜೆಪಿಯ ಹಿಂದಿನ ನೀತಿ ನಿರ್ಧಾರಗಳನ್ನು ಟೀಕಿಸುವ ಮೂಲಕ ತಮ್ಮದೇ ಪಕ್ಷವನ್ನು ಮುಜುಗರಕ್ಕೀಡು ಮಾಡಿದ್ದಾರೆ.

ಅಧಿಕಾರ ವಹಿಸಿಕೊಂಡ ಕೂಡಲೇ, ರಾವತ್ ಅವರು ‘ರಿಪ್ಪಡ್‌ ಜೀನ್ಸ್ ಪ್ಯಾಂಟ್‌‌’  ಧರಿಸಿದ ಮಹಿಳೆಯರ ಬಗ್ಗೆ ಹೇಳಿಕೆ ನೀಡಿ, ವ್ಯಾಪಕ ಆಕ್ರೋಶವನ್ನು ಎದುರಿಸಿದ್ದರು. ಜೊತೆಗೆ 200 ವರ್ಷಗಳ ಕಾಲ ಭಾರತವನ್ನು ಬ್ರಿಟನ್ ಅಲ್ಲ, ಅಮೆರಿಕಾ ಆಳ್ವಿಕೆ ಮಾಡಿತ್ತು ಎಂದಿದ್ದರು.

ಇನ್ನು, ಕೊರೊನಾ ಉಲ್ಬಣದಲ್ಲಿದ್ದ ದಿನಗಳಲ್ಲಿ ಕುಂಭಮೇಳವನ್ನು ಆಯೋಜಿಸಿ, “ಯಾವುದೇ ಆರ್‌ಟಿ-ಪಿಸಿಆರ್ ಪರೀಕ್ಷೆಯ ಅಗತ್ಯವಿಲ್ಲ” ಎಂಬ ಅಭಿಪ್ರಾಯ ಹೊರ ಹಾಕಿದ್ದರು. ಈ ಎಲ್ಲಾ ವಿವಾದಗಳು ಮತ್ತು ಬಿಜೆಪಿ ರಾಜ್ಯ ಘಟಕದಲ್ಲಿನ ಭಾರಿ ಬಿರುಕು ಇವರ ಸ್ಥಾನಕ್ಕೆ ಕುತ್ತು ತರಬಹುದು ಎನ್ನಲಾಗಿದೆ.


ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಉತ್ತರಾಖಂಡ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...