Homeಮುಖಪುಟ"ರೊಟ್ಟಿಗೆ ಉಪ್ಪು ಮಾತ್ರ": ಯುಪಿ ಶಾಲೆಗಳ ಬಡತನ ತೋರಿಸಿದ ಪತ್ರಕರ್ತನ ವಿರುದ್ಧ ಎಫ್ಐಆರ್!!

“ರೊಟ್ಟಿಗೆ ಉಪ್ಪು ಮಾತ್ರ”: ಯುಪಿ ಶಾಲೆಗಳ ಬಡತನ ತೋರಿಸಿದ ಪತ್ರಕರ್ತನ ವಿರುದ್ಧ ಎಫ್ಐಆರ್!!

- Advertisement -
- Advertisement -

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪು ಮತ್ತು ರೊಟ್ಟಿ ನೀಡಲಾಗುತ್ತಿರುವ ವಿಡಿಯೋವನ್ನು ರೆಕಾರ್ಡ್ ಮಾಡುವ ಮೂಲಕ ಉತ್ತರ ಪ್ರದೇಶ ಸರ್ಕಾರದ ಚಿತ್ರಣವನ್ನು ದೇಶಕ್ಕೆ ತೋರಿಸಿದ ಪತ್ರಕರ್ತ ಪವನ್ ಕುಮಾರ್ ಜೈಸ್ವಾಲ್ ಮೇಲೆ ದೂರು ದಾಖಲಾಗಿದ್ದು ಎಫ್ಐಆರ್ ಹಾಕಿರುವ ಘಟನೆ ವರದಿಯಾಗಿದೆ.

ಈ ವಿಡಿಯೋ ಮಾಡುವು ಮೂಲಕ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಿ ಅಹಿರೌರಾ ಪೊಲೀಸ್ ಠಾಣೆಯಲ್ಲಿ ಮಿರ್ಜಾಪುರ ಬ್ಲಾಕ್ ಶಿಕ್ಷಣ ಅಧಿಕಾರಿ ಪ್ರೇಮ್ ಶಂಕರ್ ರಾಮ್ ಅವರ ದೂರಿನ ಮೇರೆಗೆ ಶನಿವಾರ ಎಫ್ಐಆರ್ ದಾಖಲಿಸಲಾಗಿದೆ.

ಪತ್ರಕರ್ತ ಪವನ್ ಕುಮಾರ್ ಜೈಸ್ವಾಲ್, ಗ್ರಾಮದ ಮುಖ್ಯ ಪ್ರತಿನಿಧಿ ರಾಜ್‌ಕುಮಾರ್ ಪಾಲ್ ಮತ್ತು ಇನ್ನೂ ಹಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), 186 (ಸರ್ಕಾರಿ ನೌಕರನನ್ನು ಕರ್ತವ್ಯ ನಿರ್ವಹಿಸುವಲ್ಲಿ ಅಡ್ಡಿಪಡಿಸುವುದು), 193 (ಸುಳ್ಳು ಪುರಾವೆಗಳು) ಮತ್ತು 420 (ಮೋಸ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೂರಿನ ಪ್ರಕಾರ, ಜೈಸ್ವಾಲ್ ಮತ್ತು ಪಾಲ್ ಸಂಚು ರೂಪಿಸಿ ಉದ್ದೇಶಪೂರ್ವಕವಾಗಿ ವಿಡಿಯೋವನ್ನು ಯೋಜಿತ ರೀತಿಯಲ್ಲಿ ತಯಾರಿಸಿದ್ದಾರೆ ಮತ್ತು ರಾಜ್ಯ ಸರ್ಕಾರದ ಚಿತ್ರಣವನ್ನು ಕೆಡಿಸುವ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ರೊಟ್ಟಿ ಮಾತ್ರ ಬೇಯಿಸಲಾಗುತ್ತದೆ ಮತ್ತು ಶಾಲೆಯಲ್ಲಿ ತರಕಾರಿ ಬೇಯಿಸುವುದಿಲ್ಲ ಎಂದು ಪಾಲ್ ಗೆ ಮೊದಲೇ ತಿಳಿದಿತ್ತು. ಆದರೆ “ಅದನ್ನು ಸರಿಪಡಿಸುವ ಬದಲು” ಅವರು ಮುದ್ರಣ ಮಾಧ್ಯಮದಲ್ಲಿ ಕೆಲಸ ಮಾಡುವ ಪತ್ರಕರ್ತನನ್ನು ಕರೆದು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಅದನ್ನು ತೋರಿಸುವಂತೆ ಒತ್ತಾಯಿಸಿದರು. ಇದರಿಂದಾಗಿ “ಪತ್ರಕರ್ತ ತನ್ನ ಮೊಬೈಲ್ನಲ್ಲಿ ವೀಡಿಯೊವನ್ನು ಚಿತ್ರೀಕರಿಸಿದ್ದಾನೆ ಮತ್ತು ಅದನ್ನು ಎಲೆಕ್ಟ್ರಾನಿಕ್ ಮಾಧ್ಯಮ ಸಂಸ್ಥೆಗಳಿಗೆ ಹಂಚಿಕೊಂಡಿದ್ದಾನೆ” ಎಂದು ಆರೋಪಿಸಲಾಗಿದೆ.

“ಈ ವಿಷಯವು ನಮ್ಮ ಗಮನಕ್ಕೆ ಬಂದಿದೆ ಮತ್ತು ಸಮಸ್ಯೆಯ ಕುರಿತು ತನಿಖೆಗೆ ಆದೇಶಿಸಲಾಗಿತ್ತು. ರೊಟ್ಟಿ ಮತ್ತು ಉಪ್ಪನ್ನು ಬಡಿಸಿದ ಆರೋಪ ನಿಜವೆಂದು ತಿಳಿದುಬಂದ ನಂತರ, ಮುರಾರಿ ಮತ್ತು ಅರವಿಂದ ತ್ರಿಪಾಠಿ ಎಂಬ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು ”ಎಂದು ಮಿರ್ಜಾಪುರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುರಾಗ್ ಪಟೇಲ್ ಹೇಳಿದ್ದಾರೆ.

ಮಿರ್ಜಾಪುರ ಜಿಲ್ಲೆಯ ಜಮಾಲ್‌ಪುರ ಬ್ಲಾಕ್‌ನಲ್ಲಿರುವ ಸಿಯೂರ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಮ್ಮ ಮಧ್ಯಾಹ್ನ  ಊಟದಲ್ಲಿ ಉಪ್ಪು ಮತ್ತು ರೊಟ್ಟಿ ಮಾತ್ರ ತಿನ್ನುತ್ತಿರುವ ವಿಡಿಯೋ ಆಗಸ್ಟ್ 22 ರಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.

ಪ್ರಮುಖ ಪೌಷ್ಠಿಕಾಂಶ ಯೋಜನೆಯಡಿಯ ಮಾನದಂಡಗಳ ಪ್ರಕಾರ, ದ್ವಿದಳ ಧಾನ್ಯಗಳು, ಅಕ್ಕಿ, ರೊಟ್ಟಿ ಮತ್ತು ತರಕಾರಿಗಳು, ಕೆಲವು ದಿನಗಳಲ್ಲಿ ಹಣ್ಣುಗಳು ಮತ್ತು ಹಾಲಿನೊಂದಿಗೆ ಶಾಲೆಗೆ ಹೋಗುವ ಮಕ್ಕಳಿಗೆ ಅಗತ್ಯವಾದ ಪೌಷ್ಠಿಕಾಂಶವುಳ್ಳ ಆಹಾರವನ್ನು ನೀಡಬೇಕಾಗಿತ್ತು.

ಜೈಸ್ವಾಲ್ ವಿರುದ್ಧ ಎಫ್‌ಐಆರ್ ಹಾಕಿದ ಸುದ್ದಿ ಹೊರಬಿದ್ದ ನಂತರ, ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಅವರನ್ನು ಬೆಂಬಲಿಸಿದ್ದಾರೆ. ನೇಹಾ ದೀಕ್ಷಿತ್ ಮತ್ತು ರೋಹಿಣಿ ಸಿಂಗ್ ಸೇರಿದಂತೆ ಹಲವಾರು ಪತ್ರಕರ್ತರು ಎಫ್‌ಐಆರ್ ಅನ್ನು ಟೀಕಿಸುತ್ತಿದ್ದಲ್ಲದೇ ಜೈಸ್ವಾಲ್ ರವರ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅಲ್ಲಿ ಅವರು ಕಂಡದ್ದನ್ನು ವರದಿ ಮಾಡಿದ್ದಾರೆ ಇದರಲ್ಲಿ ತಪ್ಪೇನು ಎಂದು ಪುನರುಚ್ಚರಿಸಿದ್ದಾರೆ. ಕ್ರಮ ತೆಗೆದುಕೊಳ್ಳಬೇಕಿರುವುದು ಸರ್ಕಾರದ ಮೇಲೆ, ಶಿಕ್ಷಣ ಇಲಾಖೆಯ ಅಧಿಕಾರಗಳ ವಿರುದ್ಧವೇ ಹೊರತು ಪ್ರಾಮಾಣಿಕ ಪತ್ರಕರ್ತರ ಮೇಲಲ್ಲ ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...