Homeಮುಖಪುಟ"ರೊಟ್ಟಿಗೆ ಉಪ್ಪು ಮಾತ್ರ": ಯುಪಿ ಶಾಲೆಗಳ ಬಡತನ ತೋರಿಸಿದ ಪತ್ರಕರ್ತನ ವಿರುದ್ಧ ಎಫ್ಐಆರ್!!

“ರೊಟ್ಟಿಗೆ ಉಪ್ಪು ಮಾತ್ರ”: ಯುಪಿ ಶಾಲೆಗಳ ಬಡತನ ತೋರಿಸಿದ ಪತ್ರಕರ್ತನ ವಿರುದ್ಧ ಎಫ್ಐಆರ್!!

- Advertisement -
- Advertisement -

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪು ಮತ್ತು ರೊಟ್ಟಿ ನೀಡಲಾಗುತ್ತಿರುವ ವಿಡಿಯೋವನ್ನು ರೆಕಾರ್ಡ್ ಮಾಡುವ ಮೂಲಕ ಉತ್ತರ ಪ್ರದೇಶ ಸರ್ಕಾರದ ಚಿತ್ರಣವನ್ನು ದೇಶಕ್ಕೆ ತೋರಿಸಿದ ಪತ್ರಕರ್ತ ಪವನ್ ಕುಮಾರ್ ಜೈಸ್ವಾಲ್ ಮೇಲೆ ದೂರು ದಾಖಲಾಗಿದ್ದು ಎಫ್ಐಆರ್ ಹಾಕಿರುವ ಘಟನೆ ವರದಿಯಾಗಿದೆ.

ಈ ವಿಡಿಯೋ ಮಾಡುವು ಮೂಲಕ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಿ ಅಹಿರೌರಾ ಪೊಲೀಸ್ ಠಾಣೆಯಲ್ಲಿ ಮಿರ್ಜಾಪುರ ಬ್ಲಾಕ್ ಶಿಕ್ಷಣ ಅಧಿಕಾರಿ ಪ್ರೇಮ್ ಶಂಕರ್ ರಾಮ್ ಅವರ ದೂರಿನ ಮೇರೆಗೆ ಶನಿವಾರ ಎಫ್ಐಆರ್ ದಾಖಲಿಸಲಾಗಿದೆ.

ಪತ್ರಕರ್ತ ಪವನ್ ಕುಮಾರ್ ಜೈಸ್ವಾಲ್, ಗ್ರಾಮದ ಮುಖ್ಯ ಪ್ರತಿನಿಧಿ ರಾಜ್‌ಕುಮಾರ್ ಪಾಲ್ ಮತ್ತು ಇನ್ನೂ ಹಲವು ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), 186 (ಸರ್ಕಾರಿ ನೌಕರನನ್ನು ಕರ್ತವ್ಯ ನಿರ್ವಹಿಸುವಲ್ಲಿ ಅಡ್ಡಿಪಡಿಸುವುದು), 193 (ಸುಳ್ಳು ಪುರಾವೆಗಳು) ಮತ್ತು 420 (ಮೋಸ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೂರಿನ ಪ್ರಕಾರ, ಜೈಸ್ವಾಲ್ ಮತ್ತು ಪಾಲ್ ಸಂಚು ರೂಪಿಸಿ ಉದ್ದೇಶಪೂರ್ವಕವಾಗಿ ವಿಡಿಯೋವನ್ನು ಯೋಜಿತ ರೀತಿಯಲ್ಲಿ ತಯಾರಿಸಿದ್ದಾರೆ ಮತ್ತು ರಾಜ್ಯ ಸರ್ಕಾರದ ಚಿತ್ರಣವನ್ನು ಕೆಡಿಸುವ “ತಿರಸ್ಕಾರದ ಕೆಲಸ” ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ರೊಟ್ಟಿ ಮಾತ್ರ ಬೇಯಿಸಲಾಗುತ್ತದೆ ಮತ್ತು ಶಾಲೆಯಲ್ಲಿ ತರಕಾರಿ ಬೇಯಿಸುವುದಿಲ್ಲ ಎಂದು ಪಾಲ್ ಗೆ ಮೊದಲೇ ತಿಳಿದಿತ್ತು. ಆದರೆ “ಅದನ್ನು ಸರಿಪಡಿಸುವ ಬದಲು” ಅವರು ಮುದ್ರಣ ಮಾಧ್ಯಮದಲ್ಲಿ ಕೆಲಸ ಮಾಡುವ ಪತ್ರಕರ್ತನನ್ನು ಕರೆದು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಅದನ್ನು ತೋರಿಸುವಂತೆ ಒತ್ತಾಯಿಸಿದರು. ಇದರಿಂದಾಗಿ “ಪತ್ರಕರ್ತ ತನ್ನ ಮೊಬೈಲ್ನಲ್ಲಿ ವೀಡಿಯೊವನ್ನು ಚಿತ್ರೀಕರಿಸಿದ್ದಾನೆ ಮತ್ತು ಅದನ್ನು ಎಲೆಕ್ಟ್ರಾನಿಕ್ ಮಾಧ್ಯಮ ಸಂಸ್ಥೆಗಳಿಗೆ ಹಂಚಿಕೊಂಡಿದ್ದಾನೆ” ಎಂದು ಆರೋಪಿಸಲಾಗಿದೆ.

“ಈ ವಿಷಯವು ನಮ್ಮ ಗಮನಕ್ಕೆ ಬಂದಿದೆ ಮತ್ತು ಸಮಸ್ಯೆಯ ಕುರಿತು ತನಿಖೆಗೆ ಆದೇಶಿಸಲಾಗಿತ್ತು. ರೊಟ್ಟಿ ಮತ್ತು ಉಪ್ಪನ್ನು ಬಡಿಸಿದ ಆರೋಪ ನಿಜವೆಂದು ತಿಳಿದುಬಂದ ನಂತರ, ಮುರಾರಿ ಮತ್ತು ಅರವಿಂದ ತ್ರಿಪಾಠಿ ಎಂಬ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು ”ಎಂದು ಮಿರ್ಜಾಪುರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುರಾಗ್ ಪಟೇಲ್ ಹೇಳಿದ್ದಾರೆ.

ಮಿರ್ಜಾಪುರ ಜಿಲ್ಲೆಯ ಜಮಾಲ್‌ಪುರ ಬ್ಲಾಕ್‌ನಲ್ಲಿರುವ ಸಿಯೂರ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಮ್ಮ ಮಧ್ಯಾಹ್ನ  ಊಟದಲ್ಲಿ ಉಪ್ಪು ಮತ್ತು ರೊಟ್ಟಿ ಮಾತ್ರ ತಿನ್ನುತ್ತಿರುವ ವಿಡಿಯೋ ಆಗಸ್ಟ್ 22 ರಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.

ಪ್ರಮುಖ ಪೌಷ್ಠಿಕಾಂಶ ಯೋಜನೆಯಡಿಯ ಮಾನದಂಡಗಳ ಪ್ರಕಾರ, ದ್ವಿದಳ ಧಾನ್ಯಗಳು, ಅಕ್ಕಿ, ರೊಟ್ಟಿ ಮತ್ತು ತರಕಾರಿಗಳು, ಕೆಲವು ದಿನಗಳಲ್ಲಿ ಹಣ್ಣುಗಳು ಮತ್ತು ಹಾಲಿನೊಂದಿಗೆ ಶಾಲೆಗೆ ಹೋಗುವ ಮಕ್ಕಳಿಗೆ ಅಗತ್ಯವಾದ ಪೌಷ್ಠಿಕಾಂಶವುಳ್ಳ ಆಹಾರವನ್ನು ನೀಡಬೇಕಾಗಿತ್ತು.

ಜೈಸ್ವಾಲ್ ವಿರುದ್ಧ ಎಫ್‌ಐಆರ್ ಹಾಕಿದ ಸುದ್ದಿ ಹೊರಬಿದ್ದ ನಂತರ, ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಅವರನ್ನು ಬೆಂಬಲಿಸಿದ್ದಾರೆ. ನೇಹಾ ದೀಕ್ಷಿತ್ ಮತ್ತು ರೋಹಿಣಿ ಸಿಂಗ್ ಸೇರಿದಂತೆ ಹಲವಾರು ಪತ್ರಕರ್ತರು ಎಫ್‌ಐಆರ್ ಅನ್ನು ಟೀಕಿಸುತ್ತಿದ್ದಲ್ಲದೇ ಜೈಸ್ವಾಲ್ ರವರ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅಲ್ಲಿ ಅವರು ಕಂಡದ್ದನ್ನು ವರದಿ ಮಾಡಿದ್ದಾರೆ ಇದರಲ್ಲಿ ತಪ್ಪೇನು ಎಂದು ಪುನರುಚ್ಚರಿಸಿದ್ದಾರೆ. ಕ್ರಮ ತೆಗೆದುಕೊಳ್ಳಬೇಕಿರುವುದು ಸರ್ಕಾರದ ಮೇಲೆ, ಶಿಕ್ಷಣ ಇಲಾಖೆಯ ಅಧಿಕಾರಗಳ ವಿರುದ್ಧವೇ ಹೊರತು ಪ್ರಾಮಾಣಿಕ ಪತ್ರಕರ್ತರ ಮೇಲಲ್ಲ ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...