Homeಮುಖಪುಟಉತ್ತರಕಾಶಿ ಮಸೀದಿ ವಿವಾದ : ಹಿಂದುತ್ವ ಗುಂಪಿನ 'ಮಹಾಪಂಚಾಯತ್‌'ಗೆ ಅನುಮತಿ ನಿರಾಕರಣೆ

ಉತ್ತರಕಾಶಿ ಮಸೀದಿ ವಿವಾದ : ಹಿಂದುತ್ವ ಗುಂಪಿನ ‘ಮಹಾಪಂಚಾಯತ್‌’ಗೆ ಅನುಮತಿ ನಿರಾಕರಣೆ

- Advertisement -
- Advertisement -

ಸುನ್ನೀ ಮಸೀದಿಗೆ ಸಂಬಂಧಿಸಿ ಉಂಟಾದ ಉದ್ವಿಗ್ನತೆಯಿಂದ ಉತ್ತರಾಖಂಡದ ಉತ್ತರಕಾಶಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಸ್ಥಳೀಯ ಹಿಂದುತ್ವ ಗುಂಪಿನ ‘ಮಹಾಪಂಚಾಯತ್‌’ಗೆ ಅನುಮತಿ ನೀಡುವುದಿಲ್ಲ ಎಂದು ಬಿಜೆಪಿ ನೇತೃತ್ವದ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಸುನ್ನೀ ಮಸೀದಿಗೆ ರಕ್ಷಣೆ ನೀಡುವಂತೆ ಕೋರಿ ‘ಅಲ್ಪಸಂಖ್ಯಾತ ಸೇವಾ ಸಮಿತಿ’ ಹೈಕೋರ್ಟ್ ಮೊರೆ ಹೋಗಿತ್ತು. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನೋಜ್ ಕುಮಾರ್ ತಿವಾರಿ ಮತ್ತು ನ್ಯಾಯಮೂರ್ತಿ ವಿವೇಕ್ ಭಾರತಿ ಶರ್ಮಾ ಅವರಿದ್ದ ಉತ್ತರಾಖಂಡ ಹೈಕೋರ್ಟ್‌ನ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿದೆ.

ಈ ವೇಳೆ ಸರ್ಕಾರದ ಪರ ಹಾಜರಿದ್ದ ವಕೀಲರು, ಕಟ್ಟು ನಿಟ್ಟಾದ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ದಿನದ 24 ಗಂಟೆಯೂ ಮಸೀದಿ ಸುತ್ತಮುತ್ತ ಪೊಲೀಸರು ಕಣ್ಗಾವಲಿಟ್ಟಿದ್ದಾರೆ. ಡಿಸೆಂಬರ್ 1ರಂದು ಸ್ಥಳೀಯ ಹಿಂದುತ್ವ ಗುಂಪು ನಡೆಸಲು ಉದ್ದೇಶಿಸಿರುವ ಮಹಾಪಂಚಾಯತ್‌ಗೆ ಅನುಮತಿ ನೀಡುವುದಿಲ್ಲ ಎಂದಿದೆ.

ರಾಜ್ಯ ಸರ್ಕಾರ ಮಸೀದಿ ಪರಿಸರದಲ್ಲಿ ಬಿಗಿ ಭದ್ರತೆಯನ್ನು ಕಲ್ಪಿಸಿದೆ. ಆದರೂ, ಮಸೀದಿ ಮೇಲೆ ದಾಳಿ ನಡೆಯುವ ಆತಂಕವಿದೆ ಎಂದು ಅರ್ಜಿದಾರರ ಪರ ವಕೀಲ ಕಾರ್ತಿಕೇಯ ಹರಿ ಗುಪ್ತಾ ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ಉತ್ತರಕಾಶಿಯ ಭಟ್ವಾರಿ ರಸ್ತೆಯಲ್ಲಿರುವ ಸುನ್ನೀ ಮಸೀದಿಯನ್ನು ಸರ್ಕಾರಿ ಭೂಮಿಯನ್ನು ಅಧಿಕೃತವಾಗಿ ಕಟ್ಟಲಾಗಿದೆ. ಅದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಹಿಂದುತ್ವ ಗುಂಪು ಸೆಪ್ಟೆಂಬರ್ 6ರಂದು ಉತ್ತರಕಾಶಿ ಪಟ್ಟಣದಲ್ಲಿ ಮೊದಲ ರ‍್ಯಾಲಿ ನಡೆಸಿತ್ತು. ಆ ಬಳಿಕ ಮಸೀದಿ ಬಳಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

ನವೆಂಬರ್ 3ರಂದು ಹಿಂದುತ್ವ ಗುಂಪು ಮತ್ತೊಂದು ರ‍್ಯಾಲಿ ನಡೆಸಿದಾಗ, ಅದು ಹಿಂಸಾಚಾರಕ್ಕೆ ತಿರುಗಿದೆ. ಮಸೀದಿಯನ್ನು ಕೆಡವುತ್ತೇವೆ ಎಂದು ಹಿಂದುತ್ವವಾದಿಗಳು ಮಸೀದಿ ಬಳಿ ಬಂದಾಗ ಪೊಲೀಸರು ಅವರನ್ನು ಹಿಮ್ಮೆಟ್ಟಿಸಿದ್ದಾರೆ. ಈ ವೇಳೆ ಘರ್ಷಣೆ ನಡೆದು ನಾಲ್ವರು ಪೊಲೀಸರಿಗೆ ಗಾಯಗಳಾಗಿವೆ. ಪೊಲೀಸರು ಲಾಠಿ ಚಾರ್ಜ್ ಮಾಡಿ ಜನರನ್ನು ಚದುರಿಸಿದ್ದಾರೆ. ಬಳಿ ಶಾಂತಿ ಸುವ್ಯವಸ್ಥೆ ಕಾಪಾಡಲುವ ಸಲುವಾಗಿ ಪಟ್ಟಣದಲ್ಲಿ ಪೊಲೀಸರು ಧ್ವಜ ಮೆರವಣಿಗೆ ನಡೆಸಿದ್ದಾರೆ.

1969 ರಲ್ಲಿ ಕಾನೂನುಬದ್ಧವಾಗಿ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ. 1986 ರಲ್ಲಿ ವಕ್ಫ್ ಆಯುಕ್ತರು ಮಸೀದಿಯನ್ನು ಪರಿಶೀಲಿಸಿದ್ದ, ಅದರ ಕಾನೂನುಬದ್ಧತೆಯನ್ನು ದೃಢಪಡಿಸಿದ್ದಾರೆ ಎಂದು ಅಲ್ಪಸಂಖ್ಯಾತ ಸೇವಾ ಸಮಿತಿ ಪರ ವಕೀಲ ಗುಪ್ತಾ ನ್ಯಾಯಾಲಯಕ್ಕೆ ಹೇಳಿದ್ದಾರೆ. ಕಟ್ಟಡದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅವರು ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.

ಯಾವುದೇ ಅಹಿತರಕರ ಘಟನೆಗಳು ನಡೆಯದಂತೆ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಶಾಂತಿ, ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ರಾಜ್ಯ ಸರ್ಕಾರದ ಹೇಳಿಕೆಯನ್ನು ಪರಿಗಣಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನ ಡಿಸೆಂಬರ್ 5ಕ್ಕೆ ಮುಂದೂಡಿದೆ.

ಇದನ್ನೂ ಓದಿ : ‘ಬುಲ್ಡೋಜರ್’ ತೀರ್ಪಿನ ಬಳಿಕ ‘ಯುಪಿ ದರೋಡೆಕೋರ’ ಕಾಯಿದೆಯನ್ನು ಪರೀಕ್ಷಿಸಲು ಸುಪ್ರೀಂ ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...