Homeಮುಖಪುಟಉತ್ತರಕಾಶಿ ಮಸೀದಿ ವಿವಾದ : ಹಿಂದುತ್ವ ಗುಂಪಿನ 'ಮಹಾಪಂಚಾಯತ್‌'ಗೆ ಅನುಮತಿ ನಿರಾಕರಣೆ

ಉತ್ತರಕಾಶಿ ಮಸೀದಿ ವಿವಾದ : ಹಿಂದುತ್ವ ಗುಂಪಿನ ‘ಮಹಾಪಂಚಾಯತ್‌’ಗೆ ಅನುಮತಿ ನಿರಾಕರಣೆ

- Advertisement -
- Advertisement -

ಸುನ್ನೀ ಮಸೀದಿಗೆ ಸಂಬಂಧಿಸಿ ಉಂಟಾದ ಉದ್ವಿಗ್ನತೆಯಿಂದ ಉತ್ತರಾಖಂಡದ ಉತ್ತರಕಾಶಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಸ್ಥಳೀಯ ಹಿಂದುತ್ವ ಗುಂಪಿನ ‘ಮಹಾಪಂಚಾಯತ್‌’ಗೆ ಅನುಮತಿ ನೀಡುವುದಿಲ್ಲ ಎಂದು ಬಿಜೆಪಿ ನೇತೃತ್ವದ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಸುನ್ನೀ ಮಸೀದಿಗೆ ರಕ್ಷಣೆ ನೀಡುವಂತೆ ಕೋರಿ ‘ಅಲ್ಪಸಂಖ್ಯಾತ ಸೇವಾ ಸಮಿತಿ’ ಹೈಕೋರ್ಟ್ ಮೊರೆ ಹೋಗಿತ್ತು. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನೋಜ್ ಕುಮಾರ್ ತಿವಾರಿ ಮತ್ತು ನ್ಯಾಯಮೂರ್ತಿ ವಿವೇಕ್ ಭಾರತಿ ಶರ್ಮಾ ಅವರಿದ್ದ ಉತ್ತರಾಖಂಡ ಹೈಕೋರ್ಟ್‌ನ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿದೆ.

ಈ ವೇಳೆ ಸರ್ಕಾರದ ಪರ ಹಾಜರಿದ್ದ ವಕೀಲರು, ಕಟ್ಟು ನಿಟ್ಟಾದ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ದಿನದ 24 ಗಂಟೆಯೂ ಮಸೀದಿ ಸುತ್ತಮುತ್ತ ಪೊಲೀಸರು ಕಣ್ಗಾವಲಿಟ್ಟಿದ್ದಾರೆ. ಡಿಸೆಂಬರ್ 1ರಂದು ಸ್ಥಳೀಯ ಹಿಂದುತ್ವ ಗುಂಪು ನಡೆಸಲು ಉದ್ದೇಶಿಸಿರುವ ಮಹಾಪಂಚಾಯತ್‌ಗೆ ಅನುಮತಿ ನೀಡುವುದಿಲ್ಲ ಎಂದಿದೆ.

ರಾಜ್ಯ ಸರ್ಕಾರ ಮಸೀದಿ ಪರಿಸರದಲ್ಲಿ ಬಿಗಿ ಭದ್ರತೆಯನ್ನು ಕಲ್ಪಿಸಿದೆ. ಆದರೂ, ಮಸೀದಿ ಮೇಲೆ ದಾಳಿ ನಡೆಯುವ ಆತಂಕವಿದೆ ಎಂದು ಅರ್ಜಿದಾರರ ಪರ ವಕೀಲ ಕಾರ್ತಿಕೇಯ ಹರಿ ಗುಪ್ತಾ ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ಉತ್ತರಕಾಶಿಯ ಭಟ್ವಾರಿ ರಸ್ತೆಯಲ್ಲಿರುವ ಸುನ್ನೀ ಮಸೀದಿಯನ್ನು ಸರ್ಕಾರಿ ಭೂಮಿಯನ್ನು ಅಧಿಕೃತವಾಗಿ ಕಟ್ಟಲಾಗಿದೆ. ಅದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಹಿಂದುತ್ವ ಗುಂಪು ಸೆಪ್ಟೆಂಬರ್ 6ರಂದು ಉತ್ತರಕಾಶಿ ಪಟ್ಟಣದಲ್ಲಿ ಮೊದಲ ರ‍್ಯಾಲಿ ನಡೆಸಿತ್ತು. ಆ ಬಳಿಕ ಮಸೀದಿ ಬಳಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

ನವೆಂಬರ್ 3ರಂದು ಹಿಂದುತ್ವ ಗುಂಪು ಮತ್ತೊಂದು ರ‍್ಯಾಲಿ ನಡೆಸಿದಾಗ, ಅದು ಹಿಂಸಾಚಾರಕ್ಕೆ ತಿರುಗಿದೆ. ಮಸೀದಿಯನ್ನು ಕೆಡವುತ್ತೇವೆ ಎಂದು ಹಿಂದುತ್ವವಾದಿಗಳು ಮಸೀದಿ ಬಳಿ ಬಂದಾಗ ಪೊಲೀಸರು ಅವರನ್ನು ಹಿಮ್ಮೆಟ್ಟಿಸಿದ್ದಾರೆ. ಈ ವೇಳೆ ಘರ್ಷಣೆ ನಡೆದು ನಾಲ್ವರು ಪೊಲೀಸರಿಗೆ ಗಾಯಗಳಾಗಿವೆ. ಪೊಲೀಸರು ಲಾಠಿ ಚಾರ್ಜ್ ಮಾಡಿ ಜನರನ್ನು ಚದುರಿಸಿದ್ದಾರೆ. ಬಳಿ ಶಾಂತಿ ಸುವ್ಯವಸ್ಥೆ ಕಾಪಾಡಲುವ ಸಲುವಾಗಿ ಪಟ್ಟಣದಲ್ಲಿ ಪೊಲೀಸರು ಧ್ವಜ ಮೆರವಣಿಗೆ ನಡೆಸಿದ್ದಾರೆ.

1969 ರಲ್ಲಿ ಕಾನೂನುಬದ್ಧವಾಗಿ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ. 1986 ರಲ್ಲಿ ವಕ್ಫ್ ಆಯುಕ್ತರು ಮಸೀದಿಯನ್ನು ಪರಿಶೀಲಿಸಿದ್ದ, ಅದರ ಕಾನೂನುಬದ್ಧತೆಯನ್ನು ದೃಢಪಡಿಸಿದ್ದಾರೆ ಎಂದು ಅಲ್ಪಸಂಖ್ಯಾತ ಸೇವಾ ಸಮಿತಿ ಪರ ವಕೀಲ ಗುಪ್ತಾ ನ್ಯಾಯಾಲಯಕ್ಕೆ ಹೇಳಿದ್ದಾರೆ. ಕಟ್ಟಡದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅವರು ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.

ಯಾವುದೇ ಅಹಿತರಕರ ಘಟನೆಗಳು ನಡೆಯದಂತೆ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಶಾಂತಿ, ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ರಾಜ್ಯ ಸರ್ಕಾರದ ಹೇಳಿಕೆಯನ್ನು ಪರಿಗಣಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನ ಡಿಸೆಂಬರ್ 5ಕ್ಕೆ ಮುಂದೂಡಿದೆ.

ಇದನ್ನೂ ಓದಿ : ‘ಬುಲ್ಡೋಜರ್’ ತೀರ್ಪಿನ ಬಳಿಕ ‘ಯುಪಿ ದರೋಡೆಕೋರ’ ಕಾಯಿದೆಯನ್ನು ಪರೀಕ್ಷಿಸಲು ಸುಪ್ರೀಂ ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...