Homeಮುಖಪುಟ8ನೇ ತರಗತಿ ಡ್ರಾಪ್‌ಔಟ್ ನಕಲಿ ವೈದ್ಯನಿಂದ ಸಿಸೇರಿಯನ್: ತಾಯಿ, ಹಸುಗೂಸು ಸಾವು

8ನೇ ತರಗತಿ ಡ್ರಾಪ್‌ಔಟ್ ನಕಲಿ ವೈದ್ಯನಿಂದ ಸಿಸೇರಿಯನ್: ತಾಯಿ, ಹಸುಗೂಸು ಸಾವು

- Advertisement -
- Advertisement -

ಕೇವಲ 8ನೇ ತರಗತಿ ಓದಿ ಅರ್ಧಕ್ಕೆ ಶಾಲೆ ಬಿಟ್ಟು, ತಾನು ಡಾಕ್ಟರ್‌ ಎಂದು ಹೇಳಿಕೊಂಡಿದ್ದ ವ್ಯಕ್ತಿ, ಕ್ಷೌರದ ರೇಜರ್ ಬ್ಲೇಡ್ ಬಳಸಿ ಮಹಿಳೆಗೆ “ಸಿಸೇರಿಯನ್” ಮಾಡಿದ ಪರಿಣಾಮ, ತಾಯಿ-ಹಸುಗೂಸು ಇಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಸುಲ್ತಾನಪುರ ಜಿಲ್ಲೆಯ ಖಾಸಗಿ ನರ್ಸಿಂಗ್ ಹೋಂನಲ್ಲಿ ನಡೆದಿದೆ.

ಎಂಟನೇ ತರಗತಿಯವರೆಗೆ ವ್ಯಾಸಂಗ ಮಾಡಿರುವ 30 ವರ್ಷದ ರಾಜೇಂದ್ರ ಶುಕ್ಲಾ ಮತ್ತು ಮಾ ಶಾರದಾ ಆಸ್ಪತ್ರೆಯ ಮಾಲೀಕ ರಾಜೇಶ್ ಸಾಹ್ನಿ ಈ ಪ್ರಕರಣದ ಆರೋಪಿಗಳಾಗಿದ್ದಾರೆ. ಶಸ್ತ್ರ ಚಿಕಿತ್ಸಕ ಎಂದು ಹೇಳಿಕೊಂಡಿರುವ ರಾಜೇಂದ್ರ ಶುಕ್ಲಾ ಗರ್ಭಿಣಿಯ ಆಪರೇಷನ್ ಮಾಡಿದ, ಒಂದು ಗಂಟೆಯಲ್ಲಿ ತಾಯಿ-ಮಗು ಇಬ್ಬರು ಪ್ರಾಣ ಬಿಟ್ಟಿದ್ದಾರೆ.

ಸುಲ್ತಾನಪುರ ಜಿಲ್ಲೆಯ ಸೈನಿ ಗ್ರಾಮದಲ್ಲಿರುವ ಮಾ ಶಾರದಾ ಖಾಸಗಿ ನರ್ಸಿಂಗ್ ಹೋಂ ಇಟ್ಟುಕೊಂಡಿರುವ ಈ ಇಬ್ಬರೂ ಕೂಡ ವೈದ್ಯಕೀಯ ಶಿಕ್ಷಣ ಪಡೆದಿಲ್ಲ. ಆರೋಪಿ ರಾಜೇಂದ್ರ ಶುಕ್ಲಾ ಎಂಟನೇ ತರಗತಿಯವರೆಗೆ ವ್ಯಾಸಂಗ ಮಾಡಿದ್ದರೇ, ಮಾ ಶಾರದಾ ಆಸ್ಪತ್ರೆಯ ಮಾಲೀಕ ರಾಜೇಶ್ ಸಾಹ್ನಿ 12ನೇ ತರಗತಿ ವ್ಯಾಸಂಗ ಮಾಡಿದ್ದಾರೆ.

ಇದನ್ನೂ ಓದಿ: ಅಸ್ಸಾಂ ವಿಧಾನಸಭಾ ಚುನಾವಣೆ – ಕಾಂಗ್ರೆಸ್ ಪ್ರಣಾಳಿಕೆ ಇಂದು ಬಿಡುಗಡೆ; ನೀಡಿದ ಭರವಸೆಗಳೇನು? 

ಪ್ರಕರಣದ ಬಗ್ಗೆ  ರಾಜರಾಂ ಎಂಬ ಸೈನಿ ಗ್ರಾಮಸ್ಥ ತನ್ನ ಪತ್ನಿ ಪೂನಂ (33) ಮತ್ತು ನವಜಾತ ಶಿಶು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ದೂರ ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ. ರಾಜೇಂದ್ರ ಶುಕ್ಲಾ ಮತ್ತು ರಾಜೇಶ್ ಸಾಹ್ನಿ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಸುಲ್ತಾನಪುರ ಎಸ್ಪಿ ಅರವಿಂದ ಚತುರ್ವೇದಿ ತಿಳಿಸಿದ್ದಾರೆ.

“ಈ ಮಾ ಶಾರದಾ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯನ್ನು ಮಾಡಲು ಯಾವುದೇ ಮೂಲಸೌಕರ್ಯಗಳಿಲ್ಲದ ಮತ್ತು ಇದೊಂದು ನೋಂದಾಯಿಸದ ಆಸ್ಪತ್ರೆ ಎಂದು ನಾವು ಕಂಡುಕೊಂಡಿದ್ದೇವೆ. ಸಿಸೇರಿಯನ್ ನಡೆಸಲು ಕ್ವಾಕ್ಸ್ ರೇಜರ್ ಬ್ಲೇಡ್‌ಗಳನ್ನು ಬಳಸಲಾಗಿದೆ” ಎಂದು ಅರವಿಂದ ಚತುರ್ವೇದಿ ಹೇಳಿದ್ದಾರೆ.

“ಬುಧವಾರ ರಾತ್ರಿ ಗರ್ಭಿಣಿ ಪೂನಂ ಹೆರಿಗೆ ನೋವಿನಲ್ಲಿರುವಾಗ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು,  ದೀಹ್ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಶಸ್ತ್ರಚಿಕಿತ್ಸ ವೇಳೆ ಪೂನಂಗೆ ರಕ್ತಸ್ರಾವ ಹೆಚ್ಚಾದಾಗ ಆಕೆಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ಆರೋಪಿ ರಾಜೇಂದ್ರ ಶುಕ್ಲಾ ತಿಳಿಸಿದ್ದರು. ಹತ್ತಿರದಲ್ಲಿ ಆಕೆಗೆ ಚಿಕಿತ್ಸೆ ನೀಡಲು ಯಾವುದೇ ಆಸ್ಪತ್ರೆಯಿಲ್ಲದ ಕಾರಣ, ಆಕೆಯನ್ನು 140 ಕಿ.ಮೀ ದೂರದಲ್ಲಿ ಲಕ್ನೋದ ಕೆಜಿಎಂಯು ಕೇಂದ್ರಕ್ಕೆ ಕರೆದೊಯ್ಯಲಾಯಿತು, ಆದರೆ ಅಲ್ಲಿ ಆಕೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಅಕ್ರಮ ಚಿಕಿತ್ಸಾಲಯಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರು ಮುಖ್ಯ ವೈದ್ಯಕೀಯ ಅಧಿಕಾರಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ರಾಜ್ಯದ ಥಿಯೇಟರ್‌ಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶವೆಂಬ ಪ್ರಸ್ತಾಪವಿಲ್ಲ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಉತ್ತರ ಪ್ರದೇಶದಲ್ಲಿ ಎಲ್ಲ ರೀತಿಯ ಅಪರಾಧಗಳೂ ವಿಜೃಂಭಿಸುತ್ತಿವೆ.

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...