Homeಮುಖಪುಟ8ನೇ ತರಗತಿ ಡ್ರಾಪ್‌ಔಟ್ ನಕಲಿ ವೈದ್ಯನಿಂದ ಸಿಸೇರಿಯನ್: ತಾಯಿ, ಹಸುಗೂಸು ಸಾವು

8ನೇ ತರಗತಿ ಡ್ರಾಪ್‌ಔಟ್ ನಕಲಿ ವೈದ್ಯನಿಂದ ಸಿಸೇರಿಯನ್: ತಾಯಿ, ಹಸುಗೂಸು ಸಾವು

- Advertisement -
- Advertisement -

ಕೇವಲ 8ನೇ ತರಗತಿ ಓದಿ ಅರ್ಧಕ್ಕೆ ಶಾಲೆ ಬಿಟ್ಟು, ತಾನು ಡಾಕ್ಟರ್‌ ಎಂದು ಹೇಳಿಕೊಂಡಿದ್ದ ವ್ಯಕ್ತಿ, ಕ್ಷೌರದ ರೇಜರ್ ಬ್ಲೇಡ್ ಬಳಸಿ ಮಹಿಳೆಗೆ “ಸಿಸೇರಿಯನ್” ಮಾಡಿದ ಪರಿಣಾಮ, ತಾಯಿ-ಹಸುಗೂಸು ಇಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಸುಲ್ತಾನಪುರ ಜಿಲ್ಲೆಯ ಖಾಸಗಿ ನರ್ಸಿಂಗ್ ಹೋಂನಲ್ಲಿ ನಡೆದಿದೆ.

ಎಂಟನೇ ತರಗತಿಯವರೆಗೆ ವ್ಯಾಸಂಗ ಮಾಡಿರುವ 30 ವರ್ಷದ ರಾಜೇಂದ್ರ ಶುಕ್ಲಾ ಮತ್ತು ಮಾ ಶಾರದಾ ಆಸ್ಪತ್ರೆಯ ಮಾಲೀಕ ರಾಜೇಶ್ ಸಾಹ್ನಿ ಈ ಪ್ರಕರಣದ ಆರೋಪಿಗಳಾಗಿದ್ದಾರೆ. ಶಸ್ತ್ರ ಚಿಕಿತ್ಸಕ ಎಂದು ಹೇಳಿಕೊಂಡಿರುವ ರಾಜೇಂದ್ರ ಶುಕ್ಲಾ ಗರ್ಭಿಣಿಯ ಆಪರೇಷನ್ ಮಾಡಿದ, ಒಂದು ಗಂಟೆಯಲ್ಲಿ ತಾಯಿ-ಮಗು ಇಬ್ಬರು ಪ್ರಾಣ ಬಿಟ್ಟಿದ್ದಾರೆ.

ಸುಲ್ತಾನಪುರ ಜಿಲ್ಲೆಯ ಸೈನಿ ಗ್ರಾಮದಲ್ಲಿರುವ ಮಾ ಶಾರದಾ ಖಾಸಗಿ ನರ್ಸಿಂಗ್ ಹೋಂ ಇಟ್ಟುಕೊಂಡಿರುವ ಈ ಇಬ್ಬರೂ ಕೂಡ ವೈದ್ಯಕೀಯ ಶಿಕ್ಷಣ ಪಡೆದಿಲ್ಲ. ಆರೋಪಿ ರಾಜೇಂದ್ರ ಶುಕ್ಲಾ ಎಂಟನೇ ತರಗತಿಯವರೆಗೆ ವ್ಯಾಸಂಗ ಮಾಡಿದ್ದರೇ, ಮಾ ಶಾರದಾ ಆಸ್ಪತ್ರೆಯ ಮಾಲೀಕ ರಾಜೇಶ್ ಸಾಹ್ನಿ 12ನೇ ತರಗತಿ ವ್ಯಾಸಂಗ ಮಾಡಿದ್ದಾರೆ.

ಇದನ್ನೂ ಓದಿ: ಅಸ್ಸಾಂ ವಿಧಾನಸಭಾ ಚುನಾವಣೆ – ಕಾಂಗ್ರೆಸ್ ಪ್ರಣಾಳಿಕೆ ಇಂದು ಬಿಡುಗಡೆ; ನೀಡಿದ ಭರವಸೆಗಳೇನು? 

ಪ್ರಕರಣದ ಬಗ್ಗೆ  ರಾಜರಾಂ ಎಂಬ ಸೈನಿ ಗ್ರಾಮಸ್ಥ ತನ್ನ ಪತ್ನಿ ಪೂನಂ (33) ಮತ್ತು ನವಜಾತ ಶಿಶು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ದೂರ ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ. ರಾಜೇಂದ್ರ ಶುಕ್ಲಾ ಮತ್ತು ರಾಜೇಶ್ ಸಾಹ್ನಿ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಸುಲ್ತಾನಪುರ ಎಸ್ಪಿ ಅರವಿಂದ ಚತುರ್ವೇದಿ ತಿಳಿಸಿದ್ದಾರೆ.

“ಈ ಮಾ ಶಾರದಾ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯನ್ನು ಮಾಡಲು ಯಾವುದೇ ಮೂಲಸೌಕರ್ಯಗಳಿಲ್ಲದ ಮತ್ತು ಇದೊಂದು ನೋಂದಾಯಿಸದ ಆಸ್ಪತ್ರೆ ಎಂದು ನಾವು ಕಂಡುಕೊಂಡಿದ್ದೇವೆ. ಸಿಸೇರಿಯನ್ ನಡೆಸಲು ಕ್ವಾಕ್ಸ್ ರೇಜರ್ ಬ್ಲೇಡ್‌ಗಳನ್ನು ಬಳಸಲಾಗಿದೆ” ಎಂದು ಅರವಿಂದ ಚತುರ್ವೇದಿ ಹೇಳಿದ್ದಾರೆ.

“ಬುಧವಾರ ರಾತ್ರಿ ಗರ್ಭಿಣಿ ಪೂನಂ ಹೆರಿಗೆ ನೋವಿನಲ್ಲಿರುವಾಗ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು,  ದೀಹ್ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಶಸ್ತ್ರಚಿಕಿತ್ಸ ವೇಳೆ ಪೂನಂಗೆ ರಕ್ತಸ್ರಾವ ಹೆಚ್ಚಾದಾಗ ಆಕೆಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ಆರೋಪಿ ರಾಜೇಂದ್ರ ಶುಕ್ಲಾ ತಿಳಿಸಿದ್ದರು. ಹತ್ತಿರದಲ್ಲಿ ಆಕೆಗೆ ಚಿಕಿತ್ಸೆ ನೀಡಲು ಯಾವುದೇ ಆಸ್ಪತ್ರೆಯಿಲ್ಲದ ಕಾರಣ, ಆಕೆಯನ್ನು 140 ಕಿ.ಮೀ ದೂರದಲ್ಲಿ ಲಕ್ನೋದ ಕೆಜಿಎಂಯು ಕೇಂದ್ರಕ್ಕೆ ಕರೆದೊಯ್ಯಲಾಯಿತು, ಆದರೆ ಅಲ್ಲಿ ಆಕೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಅಕ್ರಮ ಚಿಕಿತ್ಸಾಲಯಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರು ಮುಖ್ಯ ವೈದ್ಯಕೀಯ ಅಧಿಕಾರಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ರಾಜ್ಯದ ಥಿಯೇಟರ್‌ಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶವೆಂಬ ಪ್ರಸ್ತಾಪವಿಲ್ಲ: ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಉತ್ತರ ಪ್ರದೇಶದಲ್ಲಿ ಎಲ್ಲ ರೀತಿಯ ಅಪರಾಧಗಳೂ ವಿಜೃಂಭಿಸುತ್ತಿವೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...