Homeಕರ್ನಾಟಕಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

- Advertisement -
- Advertisement -

ಈಗಾಗಲೇ ನಿಮಗೆ ಗೊತ್ತಿರುವಂತೆ ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಮತ್ತು ಈ ದೇಶದ ದೊಡ್ಡ ಶ್ರೀಮಂತರಲ್ಲಿ ಒಬ್ಬರಾದ ವಿ.ಜಿ ಸಿದ್ಧಾರ್ಥ ಅವರು ನಾಪತ್ತೆ ಪ್ರಕರಣ ಸಾಕಷ್ಟು ಸುದ್ದಿಯಾಗಿದೆ. ಚಿಕ್ಕಮಗಳೂರಿನ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದ ಸಿದ್ಧಾರ್ಥ್ ನಂತರದಲ್ಲಿ ಎಸ್.ಎಂ ಕೃಷ್ಣರ ಅಳಿಯನಾಗಿದ್ದು, ಕಾಫಿ ಡೇ ಬ್ರಾಂಡ್ ನ ಎಬಿಸಿ ಕಂಪನಿಯನ್ನು ಶುರು ಮಾಡಿದ್ದು, ಮತ್ತು ಈಗ ಕಾಫಿಯಿಂದ ಆಚೆಗೆ ತನ್ನ ಸಾಮ್ರಾಜ್ಯವನ್ನು ಹಲವು ರೀತಿಯಲ್ಲಿ ವಿಸ್ತರಿಸಿಕೊಂಡಿದ್ದು, ದಕ್ಷಿಣ ಅಮೇರಿಕಾದ ಕಾಡುಗಳ ಒಡೆಯನಾಗಿದ್ದು ಇವೆಲ್ಲವುಗಳು ಕೂಡ ದೊಡ್ಡ ಇತಿಹಾಸ.

ಇಂತಹ ಸಿದ್ಧಾರ್ಥ್ ಯಾವಾಗಲೂ ತೆರೆಮರೆಯಲ್ಲಿಯೇ ಇರುತ್ತಿದ್ದು ಹಲವಾರು ರಾಜಕಾರಣಿಗಳೊಂದಿಗೆ ಸಖ್ಯವೂ ಇದ್ದಿತು. ಸಿದ್ಧಾರ್ಥ್ ರವರ ಉದ್ದಿಮಿಗಳ ಕಾರಣಕ್ಕಾಗಿಯೇ ಎಸ್.ಎಂ ಕೃಷ್ಣರವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡರು ಎಂಬ ಗುಲ್ಲು ಸಹ ಎದ್ದಿತ್ತು. ಆ ಸಿದ್ಧಾರ್ಥ್ ರವರು ನಿನ್ನೆ ಸಂಜೆಯಿಂದ ಮಂಗಳೂರಿನಲ್ಲಿ ನಿಗೂಢ ರೀತಿಯಲ್ಲಿ ಕಣ್ಮರೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಮೂಲಗಳು ಇನ್ನಿತರರನ್ನು ಸಂಪರ್ಕಿಸಿದಾಗ ಗೊತ್ತಾದುದ್ದು ಹಲವಾರು ಸಂದೇಹಗಳನ್ನು ಹುಟ್ಟಿಸುತ್ತಿದೆ.

ಮೂಲಗಳ ಪ್ರಕಾರ ಮಂಗಳೂರಿನ ಜಪ್ಪಿನಮೊಗರು ಬಳಿ ಇರುವ ನೇತ್ರಾವತಿ ಸೇತುವೆಯ ಬಳಿ ಸಿದ್ಧಾರ್ಥ್ ತನ್ನ ಡ್ರೈವರ್ ಗೆ ಕಾರು ನಿಲ್ಲಿಸಲು  ಹೇಳಿ ಅಲ್ಲಿ ಸೇತುವೆಯ ಬಳಿ ಹತ್ತುವುದು ಇಳಿಯುವುದು ಮಾಡುತ್ತಿದ್ದರು. ಮಾಧ್ಯಮಗಳಲ್ಲಿ ಬಂದಿರುವುದಕ್ಕೆ ವ್ಯತಿರಿಕ್ತವಾಗಿ ಅವರು ಕಣ್ಮರೆಯಾದ ಸಂದರ್ಭದಲ್ಲಿಯೂ ಸಹ ಕಾರು ಡ್ರೈವರ್ ಅವರನ್ನು ನೋಡುತ್ತಲೇ ಇದ್ದರು. ಆಗ ನೋಡನೋಡುತ್ತಿದ್ದಂತೆಯೇ ಸೇತುವೆಯ ಬಳಿ ಸಿದ್ಧಾರ್ಥ್ ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿದ್ದಾರೆ. ಈ ಕಾರಣದಿಂದಾಗ ಅವರು ನೇತ್ರಾವತಿ ನದಿಗೆ ಬಿದ್ದಿರಬಹುದಾಗಿದ್ದು ಇದು ಆತ್ಮಹತ್ಯೆಯೇ, ಅಥವಾ ಆಕಸ್ಮಿಕವೇ? ಏನು ಎಂಬುದು ಖಚಿತವಾಗಿಲ್ಲ. ಆದರೆ ಬೆಂಗಳೂರಿನಿಂದ ಕಾರಿನಲ್ಲಿ (ಕೆಎ-03, ಎನ್.ಸಿ 2592) ಅಲ್ಲಿಗೆ ಪ್ರಯಾಣ ಮಾಡಿರುವುದು, ಅಲ್ಲಿ ನೇತ್ರಾವತಿ ಬಳಿ ಕಾರು ನಿಲ್ಲಿಸುವಂತೆ ಹೇಳಿದ್ದು, ಮತ್ತು ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿರುವುದು ಇವೆಲ್ಲವೂ ಇದು ಬಹುತೇಕ ಆತ್ಮಹತ್ಯೆಯೇ ಆಗಿರುವ ಸಾಧ್ಯತೆಯಿದೆ ಎಂಬ ಅನುಮಾನಗಳೀಗೆ ದಾರಿ ಮಾಡಿಕೊಟ್ಟಿದೆ.

ತನ್ನ ಉದ್ದಿಮೆಯಲ್ಲಿ ಬಂದ ನೂರಾರು ಸವಾಲುಗಳನ್ನು ಎದುರಿಸಿ ಬೃಹತ್ ಆಗಿ ಬೆಳೆದ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಯಲ್ಲಿದ್ದಾರೆ ಎನ್ನುವುದಕ್ಕೆ ಹೆಚ್ಚು ತರ್ಕ ಕಾಣುತ್ತಿಲ್ಲ. ಆದರೆ ಯಾವುದೇ ವ್ಯಕ್ತಿಯ ವ್ಯಕ್ತಿಗತ ತುಮುಲಗಳು, ಇಂತಹ ಉದ್ದಿಮೆಗಳಲ್ಲಿ ಬರಬಹುದಾದ ನೂರೆಂಟು ಸಮಸ್ಯೆಗಳು ಇವೆಲ್ಲವೂ ಕೂಡ ಇದರ ಕುರಿತು ಅನುಮಾನಗಳು ಬರುವುದು ಸಹಜ. ಇದರಾಚೆಗೆ ಅಪಹರಣ ಆಗಿರುವ ಕುರಿತ ಶಂಕೆಯನ್ನು ಹರಿಯಬಿಟ್ಟಿವೆ. ಆದರೆ ಸದ್ಯದಲ್ಲಿ ಹೇಳಬಹುದಾದುಷ್ಟು ಇಷ್ಟೇ. ನೇತ್ರಾವತಿ ಸೇತುವೆಯ ಮೇಲೆ ಇದ್ದಕ್ಕಿದ್ದ ಹಾಗೆ ಸಿದ್ಧಾರ್ಥ್ ನಾಪತ್ತೆ ಆಗಿರುವ ಕುರಿತು ಹೆಚ್ಚಿನ ತನಿಖೆಯ ಅಗತ್ಯವಿದೆ. ಬಹುಶಃ ಇಂದು ಅಥವಾ ನಾಳೆಯೊಳಗೆ ಸುಳಿವು ಸಿಗಬಹುದು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...