Homeಕರ್ನಾಟಕಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

- Advertisement -
- Advertisement -

ಈಗಾಗಲೇ ನಿಮಗೆ ಗೊತ್ತಿರುವಂತೆ ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಮತ್ತು ಈ ದೇಶದ ದೊಡ್ಡ ಶ್ರೀಮಂತರಲ್ಲಿ ಒಬ್ಬರಾದ ವಿ.ಜಿ ಸಿದ್ಧಾರ್ಥ ಅವರು ನಾಪತ್ತೆ ಪ್ರಕರಣ ಸಾಕಷ್ಟು ಸುದ್ದಿಯಾಗಿದೆ. ಚಿಕ್ಕಮಗಳೂರಿನ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದ ಸಿದ್ಧಾರ್ಥ್ ನಂತರದಲ್ಲಿ ಎಸ್.ಎಂ ಕೃಷ್ಣರ ಅಳಿಯನಾಗಿದ್ದು, ಕಾಫಿ ಡೇ ಬ್ರಾಂಡ್ ನ ಎಬಿಸಿ ಕಂಪನಿಯನ್ನು ಶುರು ಮಾಡಿದ್ದು, ಮತ್ತು ಈಗ ಕಾಫಿಯಿಂದ ಆಚೆಗೆ ತನ್ನ ಸಾಮ್ರಾಜ್ಯವನ್ನು ಹಲವು ರೀತಿಯಲ್ಲಿ ವಿಸ್ತರಿಸಿಕೊಂಡಿದ್ದು, ದಕ್ಷಿಣ ಅಮೇರಿಕಾದ ಕಾಡುಗಳ ಒಡೆಯನಾಗಿದ್ದು ಇವೆಲ್ಲವುಗಳು ಕೂಡ ದೊಡ್ಡ ಇತಿಹಾಸ.

ಇಂತಹ ಸಿದ್ಧಾರ್ಥ್ ಯಾವಾಗಲೂ ತೆರೆಮರೆಯಲ್ಲಿಯೇ ಇರುತ್ತಿದ್ದು ಹಲವಾರು ರಾಜಕಾರಣಿಗಳೊಂದಿಗೆ ಸಖ್ಯವೂ ಇದ್ದಿತು. ಸಿದ್ಧಾರ್ಥ್ ರವರ ಉದ್ದಿಮಿಗಳ ಕಾರಣಕ್ಕಾಗಿಯೇ ಎಸ್.ಎಂ ಕೃಷ್ಣರವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡರು ಎಂಬ ಗುಲ್ಲು ಸಹ ಎದ್ದಿತ್ತು. ಆ ಸಿದ್ಧಾರ್ಥ್ ರವರು ನಿನ್ನೆ ಸಂಜೆಯಿಂದ ಮಂಗಳೂರಿನಲ್ಲಿ ನಿಗೂಢ ರೀತಿಯಲ್ಲಿ ಕಣ್ಮರೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಮೂಲಗಳು ಇನ್ನಿತರರನ್ನು ಸಂಪರ್ಕಿಸಿದಾಗ ಗೊತ್ತಾದುದ್ದು ಹಲವಾರು ಸಂದೇಹಗಳನ್ನು ಹುಟ್ಟಿಸುತ್ತಿದೆ.

ಮೂಲಗಳ ಪ್ರಕಾರ ಮಂಗಳೂರಿನ ಜಪ್ಪಿನಮೊಗರು ಬಳಿ ಇರುವ ನೇತ್ರಾವತಿ ಸೇತುವೆಯ ಬಳಿ ಸಿದ್ಧಾರ್ಥ್ ತನ್ನ ಡ್ರೈವರ್ ಗೆ ಕಾರು ನಿಲ್ಲಿಸಲು  ಹೇಳಿ ಅಲ್ಲಿ ಸೇತುವೆಯ ಬಳಿ ಹತ್ತುವುದು ಇಳಿಯುವುದು ಮಾಡುತ್ತಿದ್ದರು. ಮಾಧ್ಯಮಗಳಲ್ಲಿ ಬಂದಿರುವುದಕ್ಕೆ ವ್ಯತಿರಿಕ್ತವಾಗಿ ಅವರು ಕಣ್ಮರೆಯಾದ ಸಂದರ್ಭದಲ್ಲಿಯೂ ಸಹ ಕಾರು ಡ್ರೈವರ್ ಅವರನ್ನು ನೋಡುತ್ತಲೇ ಇದ್ದರು. ಆಗ ನೋಡನೋಡುತ್ತಿದ್ದಂತೆಯೇ ಸೇತುವೆಯ ಬಳಿ ಸಿದ್ಧಾರ್ಥ್ ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿದ್ದಾರೆ. ಈ ಕಾರಣದಿಂದಾಗ ಅವರು ನೇತ್ರಾವತಿ ನದಿಗೆ ಬಿದ್ದಿರಬಹುದಾಗಿದ್ದು ಇದು ಆತ್ಮಹತ್ಯೆಯೇ, ಅಥವಾ ಆಕಸ್ಮಿಕವೇ? ಏನು ಎಂಬುದು ಖಚಿತವಾಗಿಲ್ಲ. ಆದರೆ ಬೆಂಗಳೂರಿನಿಂದ ಕಾರಿನಲ್ಲಿ (ಕೆಎ-03, ಎನ್.ಸಿ 2592) ಅಲ್ಲಿಗೆ ಪ್ರಯಾಣ ಮಾಡಿರುವುದು, ಅಲ್ಲಿ ನೇತ್ರಾವತಿ ಬಳಿ ಕಾರು ನಿಲ್ಲಿಸುವಂತೆ ಹೇಳಿದ್ದು, ಮತ್ತು ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿರುವುದು ಇವೆಲ್ಲವೂ ಇದು ಬಹುತೇಕ ಆತ್ಮಹತ್ಯೆಯೇ ಆಗಿರುವ ಸಾಧ್ಯತೆಯಿದೆ ಎಂಬ ಅನುಮಾನಗಳೀಗೆ ದಾರಿ ಮಾಡಿಕೊಟ್ಟಿದೆ.

ತನ್ನ ಉದ್ದಿಮೆಯಲ್ಲಿ ಬಂದ ನೂರಾರು ಸವಾಲುಗಳನ್ನು ಎದುರಿಸಿ ಬೃಹತ್ ಆಗಿ ಬೆಳೆದ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಯಲ್ಲಿದ್ದಾರೆ ಎನ್ನುವುದಕ್ಕೆ ಹೆಚ್ಚು ತರ್ಕ ಕಾಣುತ್ತಿಲ್ಲ. ಆದರೆ ಯಾವುದೇ ವ್ಯಕ್ತಿಯ ವ್ಯಕ್ತಿಗತ ತುಮುಲಗಳು, ಇಂತಹ ಉದ್ದಿಮೆಗಳಲ್ಲಿ ಬರಬಹುದಾದ ನೂರೆಂಟು ಸಮಸ್ಯೆಗಳು ಇವೆಲ್ಲವೂ ಕೂಡ ಇದರ ಕುರಿತು ಅನುಮಾನಗಳು ಬರುವುದು ಸಹಜ. ಇದರಾಚೆಗೆ ಅಪಹರಣ ಆಗಿರುವ ಕುರಿತ ಶಂಕೆಯನ್ನು ಹರಿಯಬಿಟ್ಟಿವೆ. ಆದರೆ ಸದ್ಯದಲ್ಲಿ ಹೇಳಬಹುದಾದುಷ್ಟು ಇಷ್ಟೇ. ನೇತ್ರಾವತಿ ಸೇತುವೆಯ ಮೇಲೆ ಇದ್ದಕ್ಕಿದ್ದ ಹಾಗೆ ಸಿದ್ಧಾರ್ಥ್ ನಾಪತ್ತೆ ಆಗಿರುವ ಕುರಿತು ಹೆಚ್ಚಿನ ತನಿಖೆಯ ಅಗತ್ಯವಿದೆ. ಬಹುಶಃ ಇಂದು ಅಥವಾ ನಾಳೆಯೊಳಗೆ ಸುಳಿವು ಸಿಗಬಹುದು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...