Homeಕರ್ನಾಟಕಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

- Advertisement -
- Advertisement -

ಈಗಾಗಲೇ ನಿಮಗೆ ಗೊತ್ತಿರುವಂತೆ ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಮತ್ತು ಈ ದೇಶದ ದೊಡ್ಡ ಶ್ರೀಮಂತರಲ್ಲಿ ಒಬ್ಬರಾದ ವಿ.ಜಿ ಸಿದ್ಧಾರ್ಥ ಅವರು ನಾಪತ್ತೆ ಪ್ರಕರಣ ಸಾಕಷ್ಟು ಸುದ್ದಿಯಾಗಿದೆ. ಚಿಕ್ಕಮಗಳೂರಿನ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದ ಸಿದ್ಧಾರ್ಥ್ ನಂತರದಲ್ಲಿ ಎಸ್.ಎಂ ಕೃಷ್ಣರ ಅಳಿಯನಾಗಿದ್ದು, ಕಾಫಿ ಡೇ ಬ್ರಾಂಡ್ ನ ಎಬಿಸಿ ಕಂಪನಿಯನ್ನು ಶುರು ಮಾಡಿದ್ದು, ಮತ್ತು ಈಗ ಕಾಫಿಯಿಂದ ಆಚೆಗೆ ತನ್ನ ಸಾಮ್ರಾಜ್ಯವನ್ನು ಹಲವು ರೀತಿಯಲ್ಲಿ ವಿಸ್ತರಿಸಿಕೊಂಡಿದ್ದು, ದಕ್ಷಿಣ ಅಮೇರಿಕಾದ ಕಾಡುಗಳ ಒಡೆಯನಾಗಿದ್ದು ಇವೆಲ್ಲವುಗಳು ಕೂಡ ದೊಡ್ಡ ಇತಿಹಾಸ.

ಇಂತಹ ಸಿದ್ಧಾರ್ಥ್ ಯಾವಾಗಲೂ ತೆರೆಮರೆಯಲ್ಲಿಯೇ ಇರುತ್ತಿದ್ದು ಹಲವಾರು ರಾಜಕಾರಣಿಗಳೊಂದಿಗೆ ಸಖ್ಯವೂ ಇದ್ದಿತು. ಸಿದ್ಧಾರ್ಥ್ ರವರ ಉದ್ದಿಮಿಗಳ ಕಾರಣಕ್ಕಾಗಿಯೇ ಎಸ್.ಎಂ ಕೃಷ್ಣರವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡರು ಎಂಬ ಗುಲ್ಲು ಸಹ ಎದ್ದಿತ್ತು. ಆ ಸಿದ್ಧಾರ್ಥ್ ರವರು ನಿನ್ನೆ ಸಂಜೆಯಿಂದ ಮಂಗಳೂರಿನಲ್ಲಿ ನಿಗೂಢ ರೀತಿಯಲ್ಲಿ ಕಣ್ಮರೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಮೂಲಗಳು ಇನ್ನಿತರರನ್ನು ಸಂಪರ್ಕಿಸಿದಾಗ ಗೊತ್ತಾದುದ್ದು ಹಲವಾರು ಸಂದೇಹಗಳನ್ನು ಹುಟ್ಟಿಸುತ್ತಿದೆ.

ಮೂಲಗಳ ಪ್ರಕಾರ ಮಂಗಳೂರಿನ ಜಪ್ಪಿನಮೊಗರು ಬಳಿ ಇರುವ ನೇತ್ರಾವತಿ ಸೇತುವೆಯ ಬಳಿ ಸಿದ್ಧಾರ್ಥ್ ತನ್ನ ಡ್ರೈವರ್ ಗೆ ಕಾರು ನಿಲ್ಲಿಸಲು  ಹೇಳಿ ಅಲ್ಲಿ ಸೇತುವೆಯ ಬಳಿ ಹತ್ತುವುದು ಇಳಿಯುವುದು ಮಾಡುತ್ತಿದ್ದರು. ಮಾಧ್ಯಮಗಳಲ್ಲಿ ಬಂದಿರುವುದಕ್ಕೆ ವ್ಯತಿರಿಕ್ತವಾಗಿ ಅವರು ಕಣ್ಮರೆಯಾದ ಸಂದರ್ಭದಲ್ಲಿಯೂ ಸಹ ಕಾರು ಡ್ರೈವರ್ ಅವರನ್ನು ನೋಡುತ್ತಲೇ ಇದ್ದರು. ಆಗ ನೋಡನೋಡುತ್ತಿದ್ದಂತೆಯೇ ಸೇತುವೆಯ ಬಳಿ ಸಿದ್ಧಾರ್ಥ್ ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿದ್ದಾರೆ. ಈ ಕಾರಣದಿಂದಾಗ ಅವರು ನೇತ್ರಾವತಿ ನದಿಗೆ ಬಿದ್ದಿರಬಹುದಾಗಿದ್ದು ಇದು ಆತ್ಮಹತ್ಯೆಯೇ, ಅಥವಾ ಆಕಸ್ಮಿಕವೇ? ಏನು ಎಂಬುದು ಖಚಿತವಾಗಿಲ್ಲ. ಆದರೆ ಬೆಂಗಳೂರಿನಿಂದ ಕಾರಿನಲ್ಲಿ (ಕೆಎ-03, ಎನ್.ಸಿ 2592) ಅಲ್ಲಿಗೆ ಪ್ರಯಾಣ ಮಾಡಿರುವುದು, ಅಲ್ಲಿ ನೇತ್ರಾವತಿ ಬಳಿ ಕಾರು ನಿಲ್ಲಿಸುವಂತೆ ಹೇಳಿದ್ದು, ಮತ್ತು ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿರುವುದು ಇವೆಲ್ಲವೂ ಇದು ಬಹುತೇಕ ಆತ್ಮಹತ್ಯೆಯೇ ಆಗಿರುವ ಸಾಧ್ಯತೆಯಿದೆ ಎಂಬ ಅನುಮಾನಗಳೀಗೆ ದಾರಿ ಮಾಡಿಕೊಟ್ಟಿದೆ.

ತನ್ನ ಉದ್ದಿಮೆಯಲ್ಲಿ ಬಂದ ನೂರಾರು ಸವಾಲುಗಳನ್ನು ಎದುರಿಸಿ ಬೃಹತ್ ಆಗಿ ಬೆಳೆದ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಯಲ್ಲಿದ್ದಾರೆ ಎನ್ನುವುದಕ್ಕೆ ಹೆಚ್ಚು ತರ್ಕ ಕಾಣುತ್ತಿಲ್ಲ. ಆದರೆ ಯಾವುದೇ ವ್ಯಕ್ತಿಯ ವ್ಯಕ್ತಿಗತ ತುಮುಲಗಳು, ಇಂತಹ ಉದ್ದಿಮೆಗಳಲ್ಲಿ ಬರಬಹುದಾದ ನೂರೆಂಟು ಸಮಸ್ಯೆಗಳು ಇವೆಲ್ಲವೂ ಕೂಡ ಇದರ ಕುರಿತು ಅನುಮಾನಗಳು ಬರುವುದು ಸಹಜ. ಇದರಾಚೆಗೆ ಅಪಹರಣ ಆಗಿರುವ ಕುರಿತ ಶಂಕೆಯನ್ನು ಹರಿಯಬಿಟ್ಟಿವೆ. ಆದರೆ ಸದ್ಯದಲ್ಲಿ ಹೇಳಬಹುದಾದುಷ್ಟು ಇಷ್ಟೇ. ನೇತ್ರಾವತಿ ಸೇತುವೆಯ ಮೇಲೆ ಇದ್ದಕ್ಕಿದ್ದ ಹಾಗೆ ಸಿದ್ಧಾರ್ಥ್ ನಾಪತ್ತೆ ಆಗಿರುವ ಕುರಿತು ಹೆಚ್ಚಿನ ತನಿಖೆಯ ಅಗತ್ಯವಿದೆ. ಬಹುಶಃ ಇಂದು ಅಥವಾ ನಾಳೆಯೊಳಗೆ ಸುಳಿವು ಸಿಗಬಹುದು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...