Homeಕರ್ನಾಟಕಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

- Advertisement -
- Advertisement -

ಈಗಾಗಲೇ ನಿಮಗೆ ಗೊತ್ತಿರುವಂತೆ ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಮತ್ತು ಈ ದೇಶದ ದೊಡ್ಡ ಶ್ರೀಮಂತರಲ್ಲಿ ಒಬ್ಬರಾದ ವಿ.ಜಿ ಸಿದ್ಧಾರ್ಥ ಅವರು ನಾಪತ್ತೆ ಪ್ರಕರಣ ಸಾಕಷ್ಟು ಸುದ್ದಿಯಾಗಿದೆ. ಚಿಕ್ಕಮಗಳೂರಿನ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದ ಸಿದ್ಧಾರ್ಥ್ ನಂತರದಲ್ಲಿ ಎಸ್.ಎಂ ಕೃಷ್ಣರ ಅಳಿಯನಾಗಿದ್ದು, ಕಾಫಿ ಡೇ ಬ್ರಾಂಡ್ ನ ಎಬಿಸಿ ಕಂಪನಿಯನ್ನು ಶುರು ಮಾಡಿದ್ದು, ಮತ್ತು ಈಗ ಕಾಫಿಯಿಂದ ಆಚೆಗೆ ತನ್ನ ಸಾಮ್ರಾಜ್ಯವನ್ನು ಹಲವು ರೀತಿಯಲ್ಲಿ ವಿಸ್ತರಿಸಿಕೊಂಡಿದ್ದು, ದಕ್ಷಿಣ ಅಮೇರಿಕಾದ ಕಾಡುಗಳ ಒಡೆಯನಾಗಿದ್ದು ಇವೆಲ್ಲವುಗಳು ಕೂಡ ದೊಡ್ಡ ಇತಿಹಾಸ.

ಇಂತಹ ಸಿದ್ಧಾರ್ಥ್ ಯಾವಾಗಲೂ ತೆರೆಮರೆಯಲ್ಲಿಯೇ ಇರುತ್ತಿದ್ದು ಹಲವಾರು ರಾಜಕಾರಣಿಗಳೊಂದಿಗೆ ಸಖ್ಯವೂ ಇದ್ದಿತು. ಸಿದ್ಧಾರ್ಥ್ ರವರ ಉದ್ದಿಮಿಗಳ ಕಾರಣಕ್ಕಾಗಿಯೇ ಎಸ್.ಎಂ ಕೃಷ್ಣರವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡರು ಎಂಬ ಗುಲ್ಲು ಸಹ ಎದ್ದಿತ್ತು. ಆ ಸಿದ್ಧಾರ್ಥ್ ರವರು ನಿನ್ನೆ ಸಂಜೆಯಿಂದ ಮಂಗಳೂರಿನಲ್ಲಿ ನಿಗೂಢ ರೀತಿಯಲ್ಲಿ ಕಣ್ಮರೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಮೂಲಗಳು ಇನ್ನಿತರರನ್ನು ಸಂಪರ್ಕಿಸಿದಾಗ ಗೊತ್ತಾದುದ್ದು ಹಲವಾರು ಸಂದೇಹಗಳನ್ನು ಹುಟ್ಟಿಸುತ್ತಿದೆ.

ಮೂಲಗಳ ಪ್ರಕಾರ ಮಂಗಳೂರಿನ ಜಪ್ಪಿನಮೊಗರು ಬಳಿ ಇರುವ ನೇತ್ರಾವತಿ ಸೇತುವೆಯ ಬಳಿ ಸಿದ್ಧಾರ್ಥ್ ತನ್ನ ಡ್ರೈವರ್ ಗೆ ಕಾರು ನಿಲ್ಲಿಸಲು  ಹೇಳಿ ಅಲ್ಲಿ ಸೇತುವೆಯ ಬಳಿ ಹತ್ತುವುದು ಇಳಿಯುವುದು ಮಾಡುತ್ತಿದ್ದರು. ಮಾಧ್ಯಮಗಳಲ್ಲಿ ಬಂದಿರುವುದಕ್ಕೆ ವ್ಯತಿರಿಕ್ತವಾಗಿ ಅವರು ಕಣ್ಮರೆಯಾದ ಸಂದರ್ಭದಲ್ಲಿಯೂ ಸಹ ಕಾರು ಡ್ರೈವರ್ ಅವರನ್ನು ನೋಡುತ್ತಲೇ ಇದ್ದರು. ಆಗ ನೋಡನೋಡುತ್ತಿದ್ದಂತೆಯೇ ಸೇತುವೆಯ ಬಳಿ ಸಿದ್ಧಾರ್ಥ್ ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿದ್ದಾರೆ. ಈ ಕಾರಣದಿಂದಾಗ ಅವರು ನೇತ್ರಾವತಿ ನದಿಗೆ ಬಿದ್ದಿರಬಹುದಾಗಿದ್ದು ಇದು ಆತ್ಮಹತ್ಯೆಯೇ, ಅಥವಾ ಆಕಸ್ಮಿಕವೇ? ಏನು ಎಂಬುದು ಖಚಿತವಾಗಿಲ್ಲ. ಆದರೆ ಬೆಂಗಳೂರಿನಿಂದ ಕಾರಿನಲ್ಲಿ (ಕೆಎ-03, ಎನ್.ಸಿ 2592) ಅಲ್ಲಿಗೆ ಪ್ರಯಾಣ ಮಾಡಿರುವುದು, ಅಲ್ಲಿ ನೇತ್ರಾವತಿ ಬಳಿ ಕಾರು ನಿಲ್ಲಿಸುವಂತೆ ಹೇಳಿದ್ದು, ಮತ್ತು ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿರುವುದು ಇವೆಲ್ಲವೂ ಇದು ಬಹುತೇಕ ಆತ್ಮಹತ್ಯೆಯೇ ಆಗಿರುವ ಸಾಧ್ಯತೆಯಿದೆ ಎಂಬ ಅನುಮಾನಗಳೀಗೆ ದಾರಿ ಮಾಡಿಕೊಟ್ಟಿದೆ.

ತನ್ನ ಉದ್ದಿಮೆಯಲ್ಲಿ ಬಂದ ನೂರಾರು ಸವಾಲುಗಳನ್ನು ಎದುರಿಸಿ ಬೃಹತ್ ಆಗಿ ಬೆಳೆದ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಯಲ್ಲಿದ್ದಾರೆ ಎನ್ನುವುದಕ್ಕೆ ಹೆಚ್ಚು ತರ್ಕ ಕಾಣುತ್ತಿಲ್ಲ. ಆದರೆ ಯಾವುದೇ ವ್ಯಕ್ತಿಯ ವ್ಯಕ್ತಿಗತ ತುಮುಲಗಳು, ಇಂತಹ ಉದ್ದಿಮೆಗಳಲ್ಲಿ ಬರಬಹುದಾದ ನೂರೆಂಟು ಸಮಸ್ಯೆಗಳು ಇವೆಲ್ಲವೂ ಕೂಡ ಇದರ ಕುರಿತು ಅನುಮಾನಗಳು ಬರುವುದು ಸಹಜ. ಇದರಾಚೆಗೆ ಅಪಹರಣ ಆಗಿರುವ ಕುರಿತ ಶಂಕೆಯನ್ನು ಹರಿಯಬಿಟ್ಟಿವೆ. ಆದರೆ ಸದ್ಯದಲ್ಲಿ ಹೇಳಬಹುದಾದುಷ್ಟು ಇಷ್ಟೇ. ನೇತ್ರಾವತಿ ಸೇತುವೆಯ ಮೇಲೆ ಇದ್ದಕ್ಕಿದ್ದ ಹಾಗೆ ಸಿದ್ಧಾರ್ಥ್ ನಾಪತ್ತೆ ಆಗಿರುವ ಕುರಿತು ಹೆಚ್ಚಿನ ತನಿಖೆಯ ಅಗತ್ಯವಿದೆ. ಬಹುಶಃ ಇಂದು ಅಥವಾ ನಾಳೆಯೊಳಗೆ ಸುಳಿವು ಸಿಗಬಹುದು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...