Homeಕರ್ನಾಟಕಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

- Advertisement -
- Advertisement -

ಈಗಾಗಲೇ ನಿಮಗೆ ಗೊತ್ತಿರುವಂತೆ ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಮತ್ತು ಈ ದೇಶದ ದೊಡ್ಡ ಶ್ರೀಮಂತರಲ್ಲಿ ಒಬ್ಬರಾದ ವಿ.ಜಿ ಸಿದ್ಧಾರ್ಥ ಅವರು ನಾಪತ್ತೆ ಪ್ರಕರಣ ಸಾಕಷ್ಟು ಸುದ್ದಿಯಾಗಿದೆ. ಚಿಕ್ಕಮಗಳೂರಿನ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದ ಸಿದ್ಧಾರ್ಥ್ ನಂತರದಲ್ಲಿ ಎಸ್.ಎಂ ಕೃಷ್ಣರ ಅಳಿಯನಾಗಿದ್ದು, ಕಾಫಿ ಡೇ ಬ್ರಾಂಡ್ ನ ಎಬಿಸಿ ಕಂಪನಿಯನ್ನು ಶುರು ಮಾಡಿದ್ದು, ಮತ್ತು ಈಗ ಕಾಫಿಯಿಂದ ಆಚೆಗೆ ತನ್ನ ಸಾಮ್ರಾಜ್ಯವನ್ನು ಹಲವು ರೀತಿಯಲ್ಲಿ ವಿಸ್ತರಿಸಿಕೊಂಡಿದ್ದು, ದಕ್ಷಿಣ ಅಮೇರಿಕಾದ ಕಾಡುಗಳ ಒಡೆಯನಾಗಿದ್ದು ಇವೆಲ್ಲವುಗಳು ಕೂಡ ದೊಡ್ಡ ಇತಿಹಾಸ.

ಇಂತಹ ಸಿದ್ಧಾರ್ಥ್ ಯಾವಾಗಲೂ ತೆರೆಮರೆಯಲ್ಲಿಯೇ ಇರುತ್ತಿದ್ದು ಹಲವಾರು ರಾಜಕಾರಣಿಗಳೊಂದಿಗೆ ಸಖ್ಯವೂ ಇದ್ದಿತು. ಸಿದ್ಧಾರ್ಥ್ ರವರ ಉದ್ದಿಮಿಗಳ ಕಾರಣಕ್ಕಾಗಿಯೇ ಎಸ್.ಎಂ ಕೃಷ್ಣರವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡರು ಎಂಬ ಗುಲ್ಲು ಸಹ ಎದ್ದಿತ್ತು. ಆ ಸಿದ್ಧಾರ್ಥ್ ರವರು ನಿನ್ನೆ ಸಂಜೆಯಿಂದ ಮಂಗಳೂರಿನಲ್ಲಿ ನಿಗೂಢ ರೀತಿಯಲ್ಲಿ ಕಣ್ಮರೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಮೂಲಗಳು ಇನ್ನಿತರರನ್ನು ಸಂಪರ್ಕಿಸಿದಾಗ ಗೊತ್ತಾದುದ್ದು ಹಲವಾರು ಸಂದೇಹಗಳನ್ನು ಹುಟ್ಟಿಸುತ್ತಿದೆ.

ಮೂಲಗಳ ಪ್ರಕಾರ ಮಂಗಳೂರಿನ ಜಪ್ಪಿನಮೊಗರು ಬಳಿ ಇರುವ ನೇತ್ರಾವತಿ ಸೇತುವೆಯ ಬಳಿ ಸಿದ್ಧಾರ್ಥ್ ತನ್ನ ಡ್ರೈವರ್ ಗೆ ಕಾರು ನಿಲ್ಲಿಸಲು  ಹೇಳಿ ಅಲ್ಲಿ ಸೇತುವೆಯ ಬಳಿ ಹತ್ತುವುದು ಇಳಿಯುವುದು ಮಾಡುತ್ತಿದ್ದರು. ಮಾಧ್ಯಮಗಳಲ್ಲಿ ಬಂದಿರುವುದಕ್ಕೆ ವ್ಯತಿರಿಕ್ತವಾಗಿ ಅವರು ಕಣ್ಮರೆಯಾದ ಸಂದರ್ಭದಲ್ಲಿಯೂ ಸಹ ಕಾರು ಡ್ರೈವರ್ ಅವರನ್ನು ನೋಡುತ್ತಲೇ ಇದ್ದರು. ಆಗ ನೋಡನೋಡುತ್ತಿದ್ದಂತೆಯೇ ಸೇತುವೆಯ ಬಳಿ ಸಿದ್ಧಾರ್ಥ್ ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿದ್ದಾರೆ. ಈ ಕಾರಣದಿಂದಾಗ ಅವರು ನೇತ್ರಾವತಿ ನದಿಗೆ ಬಿದ್ದಿರಬಹುದಾಗಿದ್ದು ಇದು ಆತ್ಮಹತ್ಯೆಯೇ, ಅಥವಾ ಆಕಸ್ಮಿಕವೇ? ಏನು ಎಂಬುದು ಖಚಿತವಾಗಿಲ್ಲ. ಆದರೆ ಬೆಂಗಳೂರಿನಿಂದ ಕಾರಿನಲ್ಲಿ (ಕೆಎ-03, ಎನ್.ಸಿ 2592) ಅಲ್ಲಿಗೆ ಪ್ರಯಾಣ ಮಾಡಿರುವುದು, ಅಲ್ಲಿ ನೇತ್ರಾವತಿ ಬಳಿ ಕಾರು ನಿಲ್ಲಿಸುವಂತೆ ಹೇಳಿದ್ದು, ಮತ್ತು ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿರುವುದು ಇವೆಲ್ಲವೂ ಇದು ಬಹುತೇಕ ಆತ್ಮಹತ್ಯೆಯೇ ಆಗಿರುವ ಸಾಧ್ಯತೆಯಿದೆ ಎಂಬ ಅನುಮಾನಗಳೀಗೆ ದಾರಿ ಮಾಡಿಕೊಟ್ಟಿದೆ.

ತನ್ನ ಉದ್ದಿಮೆಯಲ್ಲಿ ಬಂದ ನೂರಾರು ಸವಾಲುಗಳನ್ನು ಎದುರಿಸಿ ಬೃಹತ್ ಆಗಿ ಬೆಳೆದ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಯಲ್ಲಿದ್ದಾರೆ ಎನ್ನುವುದಕ್ಕೆ ಹೆಚ್ಚು ತರ್ಕ ಕಾಣುತ್ತಿಲ್ಲ. ಆದರೆ ಯಾವುದೇ ವ್ಯಕ್ತಿಯ ವ್ಯಕ್ತಿಗತ ತುಮುಲಗಳು, ಇಂತಹ ಉದ್ದಿಮೆಗಳಲ್ಲಿ ಬರಬಹುದಾದ ನೂರೆಂಟು ಸಮಸ್ಯೆಗಳು ಇವೆಲ್ಲವೂ ಕೂಡ ಇದರ ಕುರಿತು ಅನುಮಾನಗಳು ಬರುವುದು ಸಹಜ. ಇದರಾಚೆಗೆ ಅಪಹರಣ ಆಗಿರುವ ಕುರಿತ ಶಂಕೆಯನ್ನು ಹರಿಯಬಿಟ್ಟಿವೆ. ಆದರೆ ಸದ್ಯದಲ್ಲಿ ಹೇಳಬಹುದಾದುಷ್ಟು ಇಷ್ಟೇ. ನೇತ್ರಾವತಿ ಸೇತುವೆಯ ಮೇಲೆ ಇದ್ದಕ್ಕಿದ್ದ ಹಾಗೆ ಸಿದ್ಧಾರ್ಥ್ ನಾಪತ್ತೆ ಆಗಿರುವ ಕುರಿತು ಹೆಚ್ಚಿನ ತನಿಖೆಯ ಅಗತ್ಯವಿದೆ. ಬಹುಶಃ ಇಂದು ಅಥವಾ ನಾಳೆಯೊಳಗೆ ಸುಳಿವು ಸಿಗಬಹುದು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...