Homeಕರ್ನಾಟಕಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

- Advertisement -
- Advertisement -

ಈಗಾಗಲೇ ನಿಮಗೆ ಗೊತ್ತಿರುವಂತೆ ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಮತ್ತು ಈ ದೇಶದ ದೊಡ್ಡ ಶ್ರೀಮಂತರಲ್ಲಿ ಒಬ್ಬರಾದ ವಿ.ಜಿ ಸಿದ್ಧಾರ್ಥ ಅವರು ನಾಪತ್ತೆ ಪ್ರಕರಣ ಸಾಕಷ್ಟು ಸುದ್ದಿಯಾಗಿದೆ. ಚಿಕ್ಕಮಗಳೂರಿನ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದ ಸಿದ್ಧಾರ್ಥ್ ನಂತರದಲ್ಲಿ ಎಸ್.ಎಂ ಕೃಷ್ಣರ ಅಳಿಯನಾಗಿದ್ದು, ಕಾಫಿ ಡೇ ಬ್ರಾಂಡ್ ನ ಎಬಿಸಿ ಕಂಪನಿಯನ್ನು ಶುರು ಮಾಡಿದ್ದು, ಮತ್ತು ಈಗ ಕಾಫಿಯಿಂದ ಆಚೆಗೆ ತನ್ನ ಸಾಮ್ರಾಜ್ಯವನ್ನು ಹಲವು ರೀತಿಯಲ್ಲಿ ವಿಸ್ತರಿಸಿಕೊಂಡಿದ್ದು, ದಕ್ಷಿಣ ಅಮೇರಿಕಾದ ಕಾಡುಗಳ ಒಡೆಯನಾಗಿದ್ದು ಇವೆಲ್ಲವುಗಳು ಕೂಡ ದೊಡ್ಡ ಇತಿಹಾಸ.

ಇಂತಹ ಸಿದ್ಧಾರ್ಥ್ ಯಾವಾಗಲೂ ತೆರೆಮರೆಯಲ್ಲಿಯೇ ಇರುತ್ತಿದ್ದು ಹಲವಾರು ರಾಜಕಾರಣಿಗಳೊಂದಿಗೆ ಸಖ್ಯವೂ ಇದ್ದಿತು. ಸಿದ್ಧಾರ್ಥ್ ರವರ ಉದ್ದಿಮಿಗಳ ಕಾರಣಕ್ಕಾಗಿಯೇ ಎಸ್.ಎಂ ಕೃಷ್ಣರವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡರು ಎಂಬ ಗುಲ್ಲು ಸಹ ಎದ್ದಿತ್ತು. ಆ ಸಿದ್ಧಾರ್ಥ್ ರವರು ನಿನ್ನೆ ಸಂಜೆಯಿಂದ ಮಂಗಳೂರಿನಲ್ಲಿ ನಿಗೂಢ ರೀತಿಯಲ್ಲಿ ಕಣ್ಮರೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಮೂಲಗಳು ಇನ್ನಿತರರನ್ನು ಸಂಪರ್ಕಿಸಿದಾಗ ಗೊತ್ತಾದುದ್ದು ಹಲವಾರು ಸಂದೇಹಗಳನ್ನು ಹುಟ್ಟಿಸುತ್ತಿದೆ.

ಮೂಲಗಳ ಪ್ರಕಾರ ಮಂಗಳೂರಿನ ಜಪ್ಪಿನಮೊಗರು ಬಳಿ ಇರುವ ನೇತ್ರಾವತಿ ಸೇತುವೆಯ ಬಳಿ ಸಿದ್ಧಾರ್ಥ್ ತನ್ನ ಡ್ರೈವರ್ ಗೆ ಕಾರು ನಿಲ್ಲಿಸಲು  ಹೇಳಿ ಅಲ್ಲಿ ಸೇತುವೆಯ ಬಳಿ ಹತ್ತುವುದು ಇಳಿಯುವುದು ಮಾಡುತ್ತಿದ್ದರು. ಮಾಧ್ಯಮಗಳಲ್ಲಿ ಬಂದಿರುವುದಕ್ಕೆ ವ್ಯತಿರಿಕ್ತವಾಗಿ ಅವರು ಕಣ್ಮರೆಯಾದ ಸಂದರ್ಭದಲ್ಲಿಯೂ ಸಹ ಕಾರು ಡ್ರೈವರ್ ಅವರನ್ನು ನೋಡುತ್ತಲೇ ಇದ್ದರು. ಆಗ ನೋಡನೋಡುತ್ತಿದ್ದಂತೆಯೇ ಸೇತುವೆಯ ಬಳಿ ಸಿದ್ಧಾರ್ಥ್ ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿದ್ದಾರೆ. ಈ ಕಾರಣದಿಂದಾಗ ಅವರು ನೇತ್ರಾವತಿ ನದಿಗೆ ಬಿದ್ದಿರಬಹುದಾಗಿದ್ದು ಇದು ಆತ್ಮಹತ್ಯೆಯೇ, ಅಥವಾ ಆಕಸ್ಮಿಕವೇ? ಏನು ಎಂಬುದು ಖಚಿತವಾಗಿಲ್ಲ. ಆದರೆ ಬೆಂಗಳೂರಿನಿಂದ ಕಾರಿನಲ್ಲಿ (ಕೆಎ-03, ಎನ್.ಸಿ 2592) ಅಲ್ಲಿಗೆ ಪ್ರಯಾಣ ಮಾಡಿರುವುದು, ಅಲ್ಲಿ ನೇತ್ರಾವತಿ ಬಳಿ ಕಾರು ನಿಲ್ಲಿಸುವಂತೆ ಹೇಳಿದ್ದು, ಮತ್ತು ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿರುವುದು ಇವೆಲ್ಲವೂ ಇದು ಬಹುತೇಕ ಆತ್ಮಹತ್ಯೆಯೇ ಆಗಿರುವ ಸಾಧ್ಯತೆಯಿದೆ ಎಂಬ ಅನುಮಾನಗಳೀಗೆ ದಾರಿ ಮಾಡಿಕೊಟ್ಟಿದೆ.

ತನ್ನ ಉದ್ದಿಮೆಯಲ್ಲಿ ಬಂದ ನೂರಾರು ಸವಾಲುಗಳನ್ನು ಎದುರಿಸಿ ಬೃಹತ್ ಆಗಿ ಬೆಳೆದ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಯಲ್ಲಿದ್ದಾರೆ ಎನ್ನುವುದಕ್ಕೆ ಹೆಚ್ಚು ತರ್ಕ ಕಾಣುತ್ತಿಲ್ಲ. ಆದರೆ ಯಾವುದೇ ವ್ಯಕ್ತಿಯ ವ್ಯಕ್ತಿಗತ ತುಮುಲಗಳು, ಇಂತಹ ಉದ್ದಿಮೆಗಳಲ್ಲಿ ಬರಬಹುದಾದ ನೂರೆಂಟು ಸಮಸ್ಯೆಗಳು ಇವೆಲ್ಲವೂ ಕೂಡ ಇದರ ಕುರಿತು ಅನುಮಾನಗಳು ಬರುವುದು ಸಹಜ. ಇದರಾಚೆಗೆ ಅಪಹರಣ ಆಗಿರುವ ಕುರಿತ ಶಂಕೆಯನ್ನು ಹರಿಯಬಿಟ್ಟಿವೆ. ಆದರೆ ಸದ್ಯದಲ್ಲಿ ಹೇಳಬಹುದಾದುಷ್ಟು ಇಷ್ಟೇ. ನೇತ್ರಾವತಿ ಸೇತುವೆಯ ಮೇಲೆ ಇದ್ದಕ್ಕಿದ್ದ ಹಾಗೆ ಸಿದ್ಧಾರ್ಥ್ ನಾಪತ್ತೆ ಆಗಿರುವ ಕುರಿತು ಹೆಚ್ಚಿನ ತನಿಖೆಯ ಅಗತ್ಯವಿದೆ. ಬಹುಶಃ ಇಂದು ಅಥವಾ ನಾಳೆಯೊಳಗೆ ಸುಳಿವು ಸಿಗಬಹುದು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...