Homeಕರ್ನಾಟಕಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

- Advertisement -
- Advertisement -

ಈಗಾಗಲೇ ನಿಮಗೆ ಗೊತ್ತಿರುವಂತೆ ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಮತ್ತು ಈ ದೇಶದ ದೊಡ್ಡ ಶ್ರೀಮಂತರಲ್ಲಿ ಒಬ್ಬರಾದ ವಿ.ಜಿ ಸಿದ್ಧಾರ್ಥ ಅವರು ನಾಪತ್ತೆ ಪ್ರಕರಣ ಸಾಕಷ್ಟು ಸುದ್ದಿಯಾಗಿದೆ. ಚಿಕ್ಕಮಗಳೂರಿನ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದ ಸಿದ್ಧಾರ್ಥ್ ನಂತರದಲ್ಲಿ ಎಸ್.ಎಂ ಕೃಷ್ಣರ ಅಳಿಯನಾಗಿದ್ದು, ಕಾಫಿ ಡೇ ಬ್ರಾಂಡ್ ನ ಎಬಿಸಿ ಕಂಪನಿಯನ್ನು ಶುರು ಮಾಡಿದ್ದು, ಮತ್ತು ಈಗ ಕಾಫಿಯಿಂದ ಆಚೆಗೆ ತನ್ನ ಸಾಮ್ರಾಜ್ಯವನ್ನು ಹಲವು ರೀತಿಯಲ್ಲಿ ವಿಸ್ತರಿಸಿಕೊಂಡಿದ್ದು, ದಕ್ಷಿಣ ಅಮೇರಿಕಾದ ಕಾಡುಗಳ ಒಡೆಯನಾಗಿದ್ದು ಇವೆಲ್ಲವುಗಳು ಕೂಡ ದೊಡ್ಡ ಇತಿಹಾಸ.

ಇಂತಹ ಸಿದ್ಧಾರ್ಥ್ ಯಾವಾಗಲೂ ತೆರೆಮರೆಯಲ್ಲಿಯೇ ಇರುತ್ತಿದ್ದು ಹಲವಾರು ರಾಜಕಾರಣಿಗಳೊಂದಿಗೆ ಸಖ್ಯವೂ ಇದ್ದಿತು. ಸಿದ್ಧಾರ್ಥ್ ರವರ ಉದ್ದಿಮಿಗಳ ಕಾರಣಕ್ಕಾಗಿಯೇ ಎಸ್.ಎಂ ಕೃಷ್ಣರವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡರು ಎಂಬ ಗುಲ್ಲು ಸಹ ಎದ್ದಿತ್ತು. ಆ ಸಿದ್ಧಾರ್ಥ್ ರವರು ನಿನ್ನೆ ಸಂಜೆಯಿಂದ ಮಂಗಳೂರಿನಲ್ಲಿ ನಿಗೂಢ ರೀತಿಯಲ್ಲಿ ಕಣ್ಮರೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಮೂಲಗಳು ಇನ್ನಿತರರನ್ನು ಸಂಪರ್ಕಿಸಿದಾಗ ಗೊತ್ತಾದುದ್ದು ಹಲವಾರು ಸಂದೇಹಗಳನ್ನು ಹುಟ್ಟಿಸುತ್ತಿದೆ.

ಮೂಲಗಳ ಪ್ರಕಾರ ಮಂಗಳೂರಿನ ಜಪ್ಪಿನಮೊಗರು ಬಳಿ ಇರುವ ನೇತ್ರಾವತಿ ಸೇತುವೆಯ ಬಳಿ ಸಿದ್ಧಾರ್ಥ್ ತನ್ನ ಡ್ರೈವರ್ ಗೆ ಕಾರು ನಿಲ್ಲಿಸಲು  ಹೇಳಿ ಅಲ್ಲಿ ಸೇತುವೆಯ ಬಳಿ ಹತ್ತುವುದು ಇಳಿಯುವುದು ಮಾಡುತ್ತಿದ್ದರು. ಮಾಧ್ಯಮಗಳಲ್ಲಿ ಬಂದಿರುವುದಕ್ಕೆ ವ್ಯತಿರಿಕ್ತವಾಗಿ ಅವರು ಕಣ್ಮರೆಯಾದ ಸಂದರ್ಭದಲ್ಲಿಯೂ ಸಹ ಕಾರು ಡ್ರೈವರ್ ಅವರನ್ನು ನೋಡುತ್ತಲೇ ಇದ್ದರು. ಆಗ ನೋಡನೋಡುತ್ತಿದ್ದಂತೆಯೇ ಸೇತುವೆಯ ಬಳಿ ಸಿದ್ಧಾರ್ಥ್ ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿದ್ದಾರೆ. ಈ ಕಾರಣದಿಂದಾಗ ಅವರು ನೇತ್ರಾವತಿ ನದಿಗೆ ಬಿದ್ದಿರಬಹುದಾಗಿದ್ದು ಇದು ಆತ್ಮಹತ್ಯೆಯೇ, ಅಥವಾ ಆಕಸ್ಮಿಕವೇ? ಏನು ಎಂಬುದು ಖಚಿತವಾಗಿಲ್ಲ. ಆದರೆ ಬೆಂಗಳೂರಿನಿಂದ ಕಾರಿನಲ್ಲಿ (ಕೆಎ-03, ಎನ್.ಸಿ 2592) ಅಲ್ಲಿಗೆ ಪ್ರಯಾಣ ಮಾಡಿರುವುದು, ಅಲ್ಲಿ ನೇತ್ರಾವತಿ ಬಳಿ ಕಾರು ನಿಲ್ಲಿಸುವಂತೆ ಹೇಳಿದ್ದು, ಮತ್ತು ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿರುವುದು ಇವೆಲ್ಲವೂ ಇದು ಬಹುತೇಕ ಆತ್ಮಹತ್ಯೆಯೇ ಆಗಿರುವ ಸಾಧ್ಯತೆಯಿದೆ ಎಂಬ ಅನುಮಾನಗಳೀಗೆ ದಾರಿ ಮಾಡಿಕೊಟ್ಟಿದೆ.

ತನ್ನ ಉದ್ದಿಮೆಯಲ್ಲಿ ಬಂದ ನೂರಾರು ಸವಾಲುಗಳನ್ನು ಎದುರಿಸಿ ಬೃಹತ್ ಆಗಿ ಬೆಳೆದ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಯಲ್ಲಿದ್ದಾರೆ ಎನ್ನುವುದಕ್ಕೆ ಹೆಚ್ಚು ತರ್ಕ ಕಾಣುತ್ತಿಲ್ಲ. ಆದರೆ ಯಾವುದೇ ವ್ಯಕ್ತಿಯ ವ್ಯಕ್ತಿಗತ ತುಮುಲಗಳು, ಇಂತಹ ಉದ್ದಿಮೆಗಳಲ್ಲಿ ಬರಬಹುದಾದ ನೂರೆಂಟು ಸಮಸ್ಯೆಗಳು ಇವೆಲ್ಲವೂ ಕೂಡ ಇದರ ಕುರಿತು ಅನುಮಾನಗಳು ಬರುವುದು ಸಹಜ. ಇದರಾಚೆಗೆ ಅಪಹರಣ ಆಗಿರುವ ಕುರಿತ ಶಂಕೆಯನ್ನು ಹರಿಯಬಿಟ್ಟಿವೆ. ಆದರೆ ಸದ್ಯದಲ್ಲಿ ಹೇಳಬಹುದಾದುಷ್ಟು ಇಷ್ಟೇ. ನೇತ್ರಾವತಿ ಸೇತುವೆಯ ಮೇಲೆ ಇದ್ದಕ್ಕಿದ್ದ ಹಾಗೆ ಸಿದ್ಧಾರ್ಥ್ ನಾಪತ್ತೆ ಆಗಿರುವ ಕುರಿತು ಹೆಚ್ಚಿನ ತನಿಖೆಯ ಅಗತ್ಯವಿದೆ. ಬಹುಶಃ ಇಂದು ಅಥವಾ ನಾಳೆಯೊಳಗೆ ಸುಳಿವು ಸಿಗಬಹುದು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...