ಇಂದು ಬಿಡುಗಡೆಯಾದ 189 ಅಭ್ಯರ್ಥಿಗಳ ಬಿಜೆಪಿ ಪಟ್ಟಿಯಲ್ಲಿ ಸಚಿವ ವಿ.ಸೋಮಣ್ಣನವರ ಹೆಸರು ಕಡೆ ಬಂದಿದ್ದು, ಅವರು ವರುಣ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಘೋಷಿಸಿದೆ.
ಇದುವರೆಗೂ ವಿ.ಸೋಮಣ್ಣನವರು ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಆದರೆ ಈ ಬಾರಿ ಅವರನ್ನು ಸಿದ್ದರಾಮಯ್ಯನವರನ್ನು ಎದುರಿಸಲು ಬಿಜೆಪಿ ಕಳುಹಿಸಿದೆ. ಆದರೆ ವರುಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಎದುರು ಗೆಲುವು ಸುಲಭವಲ್ಲ ಎಂದು ಅರಿತು ಚಾಮರಾಜನರದಲ್ಲಿಯೂ ಕಣಕ್ಕಿಳಿಸಲು ಬಿಜೆಪಿ ಚಿಂತಿಸಿದೆ. ಈ ಮೊದಲು ವರುಣದಲ್ಲಿ ಬಿ.ಎಸ್ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಕೇಳಿಬಂದಿದ್ದವು. ಆದರೆ ಬಿ.ಎಸ್ ಯಡಿಯೂರಪ್ಪ ಅದನ್ನು ನಿರಾಕರಿಸಿದ್ದರು. ವಿಜಯೇಂದ್ರರವರಿಗೆ ಶಿಕಾರಿಪುರದಲ್ಲಿ ಟಿಕೆಟ್ ನೀಡಲಾಗಿದೆ.
ಅದೇ ರೀತಿ ಸಚಿವ ಆರ್ ಅಶೋಕ್ರವರು ಸಹ ಬೆಂಗಳೂರಿನ ಪದ್ಮನಾಭನಗರ ಮತ್ತು ಕನಕಪುರ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಕನಕಪುರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ರವರು ಪ್ರತಿನಿಧಿಸುವ ಕ್ಷೇತ್ರವಾಗಿದೆ.
ಅಶೋಕ್ರವರು ಶಿವಕುಮಾರ್ರನ್ನು, ಸೋಮಣ್ಣನವರು ಸಿದ್ದರಾಮಯ್ಯನವರನ್ನು ಮಣಿಸಲು ಸ್ಪರ್ಧಿಸುತ್ತಿರುವುದು ಸರಿ. ಆದರೆ ಅವರು ಬೇರೆ ಎರಡು ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುತ್ತಿರುವುದರಿಂದ ಇದು ಕೇವಲ ನಾಮಕವಸ್ತೆ ಸ್ಪರ್ಧೆಯಾಗಿದ್ದು, ಚುನಾವಣೆಗೂ ಮುನ್ನವೇ ಸೋಲೊಪ್ಪಿಕೊಂಡಂತೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.
ಇದನ್ನೂ ಓದಿ; 189 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ; ವರುಣಾದಿಂದ ಸೋಮಣ್ಣ ಸ್ಪರ್ಧೆ