Homeಕರ್ನಾಟಕವಿ. ಶ್ರೀನಿವಾಸ್ ಪ್ರಸಾದ್ ನಿಧನ: ಸಿದ್ದರಾಮಯ್ಯ, ಖರ್ಗೆ, ಮಹದೇವಪ್ಪ ಸೇರಿದಂತೆ ಹಲವರಿಂದ ಸಂತಾಪ

ವಿ. ಶ್ರೀನಿವಾಸ್ ಪ್ರಸಾದ್ ನಿಧನ: ಸಿದ್ದರಾಮಯ್ಯ, ಖರ್ಗೆ, ಮಹದೇವಪ್ಪ ಸೇರಿದಂತೆ ಹಲವರಿಂದ ಸಂತಾಪ

- Advertisement -
- Advertisement -

ದಲಿತ ಚಳವಳಿಯ ಹಿರಿಯ ನಾಯಕ, ರಾಜಕಾರಣಿ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಅವರ ಬಹುಕಾಲದ ಒಡನಾಡಿಯಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಎಚ್‌.ಸಿ. ಮಹದೇವಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಪ್ರಮುಖ ರಾಜಕಾರಣಿಗಳು, ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ.

ಶ್ರೀನಿವಾಸ್ ಪ್ರಸಾದ್ ನಿಧನರಾದ ನಂತರ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ದಲಿತ ದಮನಿತರ ಪರವಾದ ದಿಟ್ಟ ದನಿ, ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ’ ಎಂದು ಹೇಳಿದ್ದಾರೆ.

“ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ. ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಿಎಂ ನೋವು ತೋಡಿಕೊಂಡಿದ್ದಾರೆ.

‘ಸ್ನೇಹಿತ, ಸಂಸದರು, ಕರ್ನಾಟಕ ಕಂಡಂತಹ ಶ್ರೇಷ್ಠ ಮುತ್ಸದ್ದಿ ನಾಯಕರಲ್ಲಿ ಒಬ್ಬರಾದ ಶ್ರೀ ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆಯು ಅಪಾರ ನೋವನ್ನುಂಟುಮಾಡಿದೆ. ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನು ಅಳವಡಿಸಿಕೊಂಡು ಶೋಷಿತರ ಏಳಿಗೆಗಾಗಿ ಹಾಗೂ ಅನ್ಯಾಯ, ಅಸಮಾನತೆಯ ವಿರುದ್ಧದ ಹೋರಾಟಕ್ಕೆ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಶ್ರೀನಿವಾಸ್ ಪ್ರಸಾದ್ ಅವರು ಆದರ್ಶವಾಗಿ ಇದ್ದಂತಹ ನಾಯಕರು. ಅವರ ಹೋರಾಟದ ಹಾಗೂ ಸಚ್ಚಾರಿತ್ರ್ಯದ ಬದುಕು ಯುವಕರಿಗೆ ಸದಾ ಸ್ಫೂರ್ತಿ ನೀಡುವಂತಹದ್ದು, ಸಾಮಾಜಿಕ ನ್ಯಾಯದ ಪರವಾದ ರಾಜಕಾರಣಕ್ಕೆ ಅವರ ಸೇವೆ ಇನ್ನಷ್ಟು ಅಗತ್ಯವಿತ್ತು, ಕೇಂದ್ರ ಸಚಿವರಾಗಿ, ರಾಜ್ಯದ ಸಚಿವರಾಗಿ ಸಂಸದರಾಗಿ ಅವರ ಸೇವೆ ಅನನ್ಯವಾದುದು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶ್ರೀನಿವಾಸ್ ಪ್ರಸಾಧ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇತ್ತೀಚೆಗೆ ವಿ. ಶ್ರೀನಿವಾಸ್ ಪ್ರಸಾದ್ ಅವರನ್ನು ಮೈಸೂರಿನ ಅವರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ.

‘ಅವರ ನೇರ, ನಿಷ್ಠುರ ಹಾಗೂ ಪ್ರಾಮಾಣಿಕ ವ್ಯಕ್ತಿತ್ವ ಹಾಗೂ ಬಾಬಾ ಸಾಹೇಬರ ಸಮಸಮಾಜದ ನಿರ್ಮಾಣದ ಬಗೆಗಿನ ಅವರ ಬದ್ಧತೆ ಹಾಗೂ ಹೋರಾಟ ಸದಾ ಸ್ಪೂರ್ತಿದಾಯಕ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗ ಹಾಗೂ ಅಪಾರ ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದು ಖರ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ದಲಿತ ಚಳವಳಿಯಲ್ಲಿ ಶ್ರೀನಿವಾಸ್ ಪರಸಾದ್ ಅವರ ಬಹುಕಾಲದ ಒಡನಾಡಿಯಾಗಿದ್ದ ಸಚಿವ ಮಹದೇವಪ್ಪ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, “ಸಾಕಷ್ಟು ಮನುಷ್ಯ ಪ್ರೀತಿಯನ್ನು ಇಟ್ಟುಕೊಂಡು, ಸೈದ್ಧಾಂತಿಕ ವಿಷಯದಲ್ಲಿ ಎಂದೂ ರಾಜಿ‌ಮಾಡಿಕೊಳ್ಳದೇ, ಶೋಷಿತ ಸಮುದಾಯಗಳ ಹಿತಾಸಕ್ತಿಯ ಪರವಾಗಿದ್ದ ಧೀಮಂತ ನಾಯಕ, ದಲಿತರ ಸ್ವಾಭಿಮಾನದ ದನಿಯಾಗಿದ್ದ ಶ್ರೀನಿವಾಸ್ ಪ್ರಸಾದ್ ಅವರು ನಮ್ಮನ್ನು ಅಗಲಿದ್ದು ಅವರಿಗೆ ನನ್ನ ಭಾವಪೂರ್ಣ ನಮನಗಳು. ಇತ್ತೀಚೆಗಷ್ಟೇ ರಾಜಕೀಯ ನಿವೃತ್ತಿ ಘೋಷಿಸಿದ್ದ ಅವರಿಗೆ ಶುಭಕೋರಿ ಅವರ ಯೋಗಕ್ಷೇಮ ವಿಚಾರಿಸುವ ಸಲುವಾಗಿ ತೆರಳಿದ್ದ ವೇಳೆ ಸುಮಾರು ಹೊತ್ತು ಅವರೊಂದಿಗೆ ಚರ್ಚಿಸಿದ್ದೆನು. ಸಮಾನ ಮನಸ್ಕರಾದ ನೀವೆಲ್ಲರೂ ಬಂದಿದ್ದು ನನಗೆ ತೀವ್ರ ಸಂತೋಷ ತಂದಿದೆ ಎಂದು ಪ್ರಸಾದ್ ಅವರು ನನ್ನೆಡೆ ಆಪ್ತ ಭಾವನೆಯಿಂದ ನೋಡಿದ್ದನ್ನು ನಾನು ಎಂದಿಗೂ ಮರೆಯಲಾರೆ” ಎಂದು ಬರೆದುಕೊಂಡಿದ್ದಾರೆ.

“ಸರಳತೆ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಶ್ರೀ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನ ನನಗೆ ನೋವುಂಟು ಮಾಡಿದೆ. ತಮ್ಮ ಜೀವಿತಾವಧಿಯಲ್ಲಿ 14 ಚುನಾವಣೆಗಳನ್ನು ಎದುರಿಸಿದ್ದ ಅವರ ರಾಜಕೀಯ ಜೀವನ ಮಾದರಿಯ ಹಾದಿ. ಆರು ಅವಧಿಗೆ ಸಂಸದರಾಗಿ, ಎರಡು ಅವಧಿಗೆ ಶಾಸಕರಾಗಿ ಅನನ್ಯ ಸೇವೆ ಸಲ್ಲಿಸಿರುವ ಶ್ರೀ ಪ್ರಸಾದ್ ಅವರು; 27 ವರ್ಷಗಳ ಸುದೀರ್ಘ ಸಂಸತ್ ಸದಸ್ಯರಾಗಿ 7 ಪ್ರಧಾನಿಗಳನ್ನು ಕಂಡಿದ್ದರು. ಅವರು ಅಪರೂಪದಲ್ಲಿ ಅಪರೂಪದ ಜನನಾಯಕರಾಗಿದ್ದರು. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

“ಸಮಸಮಾಜದ ಗಟ್ಟಿ ಪ್ರತಿಪಾದಕರು, ರಾಜ್ಯ ಕಂಡ ಮೇರು ನಾಯಕರಲ್ಲಿ ಒಬ್ಬರಾದ ಶ್ರೀನಿವಾಸ ಪ್ರಸಾದ್ ಅವರ ಅಕಾಲಿಕ ನಿಧನ ನಾಡಿಗೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದಿಂದ ರಾಜ್ಯದಲ್ಲಿ ಪ್ರಗತಿಪರ ರಾಜಕಾರಣದ ಕೊಂಡಿ ಕಳಚಿದಂತಾಗಿದೆ. ಬುದ್ದ ಬಸವ ಅಂಬೇಡ್ಕರ್ ತತ್ವಗಳ ಆಧಾರದಲ್ಲಿ ಅನ್ಯಾಯದ ವಿರುದ್ಧದ ಹೋರಾಟದ ಹಾದಿಯನ್ನೇ ಬದುಕಾಗಿಸಿದ್ದ, ವಯಕ್ತಿಕವಾಗಿ ಮಾರ್ಗದರ್ಶಕರಾಗಿದ್ದ ಅವರ ಜೀವನ ನಾಡಿನ ಮುಂದಿನ ಪೀಳಿಗೆಗೆ ಸದಾ ನಂದಾದೀಪದಂತೆ ಉಳಿಯಲಿದೆ. ಇವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅಪಾರ ಅಭಿಮಾನ ವರ್ಗಕ್ಕೆ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಚಾಮರಾಜನಗರ ಸಂಸದ, ಹಿರಿಯ ರಾಜಕಾರಣಿ ವಿ. ಶ್ರೀನಿವಾಸ್ ಪ್ರಸಾದ್ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....