Homeಕರ್ನಾಟಕವಿ. ಶ್ರೀನಿವಾಸ್ ಪ್ರಸಾದ್ ನಿಧನ: ಸಿದ್ದರಾಮಯ್ಯ, ಖರ್ಗೆ, ಮಹದೇವಪ್ಪ ಸೇರಿದಂತೆ ಹಲವರಿಂದ ಸಂತಾಪ

ವಿ. ಶ್ರೀನಿವಾಸ್ ಪ್ರಸಾದ್ ನಿಧನ: ಸಿದ್ದರಾಮಯ್ಯ, ಖರ್ಗೆ, ಮಹದೇವಪ್ಪ ಸೇರಿದಂತೆ ಹಲವರಿಂದ ಸಂತಾಪ

- Advertisement -
- Advertisement -

ದಲಿತ ಚಳವಳಿಯ ಹಿರಿಯ ನಾಯಕ, ರಾಜಕಾರಣಿ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಅವರ ಬಹುಕಾಲದ ಒಡನಾಡಿಯಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಎಚ್‌.ಸಿ. ಮಹದೇವಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಪ್ರಮುಖ ರಾಜಕಾರಣಿಗಳು, ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ.

ಶ್ರೀನಿವಾಸ್ ಪ್ರಸಾದ್ ನಿಧನರಾದ ನಂತರ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ದಲಿತ ದಮನಿತರ ಪರವಾದ ದಿಟ್ಟ ದನಿ, ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ’ ಎಂದು ಹೇಳಿದ್ದಾರೆ.

“ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ. ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಿಎಂ ನೋವು ತೋಡಿಕೊಂಡಿದ್ದಾರೆ.

‘ಸ್ನೇಹಿತ, ಸಂಸದರು, ಕರ್ನಾಟಕ ಕಂಡಂತಹ ಶ್ರೇಷ್ಠ ಮುತ್ಸದ್ದಿ ನಾಯಕರಲ್ಲಿ ಒಬ್ಬರಾದ ಶ್ರೀ ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆಯು ಅಪಾರ ನೋವನ್ನುಂಟುಮಾಡಿದೆ. ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನು ಅಳವಡಿಸಿಕೊಂಡು ಶೋಷಿತರ ಏಳಿಗೆಗಾಗಿ ಹಾಗೂ ಅನ್ಯಾಯ, ಅಸಮಾನತೆಯ ವಿರುದ್ಧದ ಹೋರಾಟಕ್ಕೆ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಶ್ರೀನಿವಾಸ್ ಪ್ರಸಾದ್ ಅವರು ಆದರ್ಶವಾಗಿ ಇದ್ದಂತಹ ನಾಯಕರು. ಅವರ ಹೋರಾಟದ ಹಾಗೂ ಸಚ್ಚಾರಿತ್ರ್ಯದ ಬದುಕು ಯುವಕರಿಗೆ ಸದಾ ಸ್ಫೂರ್ತಿ ನೀಡುವಂತಹದ್ದು, ಸಾಮಾಜಿಕ ನ್ಯಾಯದ ಪರವಾದ ರಾಜಕಾರಣಕ್ಕೆ ಅವರ ಸೇವೆ ಇನ್ನಷ್ಟು ಅಗತ್ಯವಿತ್ತು, ಕೇಂದ್ರ ಸಚಿವರಾಗಿ, ರಾಜ್ಯದ ಸಚಿವರಾಗಿ ಸಂಸದರಾಗಿ ಅವರ ಸೇವೆ ಅನನ್ಯವಾದುದು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶ್ರೀನಿವಾಸ್ ಪ್ರಸಾಧ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಇತ್ತೀಚೆಗೆ ವಿ. ಶ್ರೀನಿವಾಸ್ ಪ್ರಸಾದ್ ಅವರನ್ನು ಮೈಸೂರಿನ ಅವರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ.

‘ಅವರ ನೇರ, ನಿಷ್ಠುರ ಹಾಗೂ ಪ್ರಾಮಾಣಿಕ ವ್ಯಕ್ತಿತ್ವ ಹಾಗೂ ಬಾಬಾ ಸಾಹೇಬರ ಸಮಸಮಾಜದ ನಿರ್ಮಾಣದ ಬಗೆಗಿನ ಅವರ ಬದ್ಧತೆ ಹಾಗೂ ಹೋರಾಟ ಸದಾ ಸ್ಪೂರ್ತಿದಾಯಕ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗ ಹಾಗೂ ಅಪಾರ ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದು ಖರ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ದಲಿತ ಚಳವಳಿಯಲ್ಲಿ ಶ್ರೀನಿವಾಸ್ ಪರಸಾದ್ ಅವರ ಬಹುಕಾಲದ ಒಡನಾಡಿಯಾಗಿದ್ದ ಸಚಿವ ಮಹದೇವಪ್ಪ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, “ಸಾಕಷ್ಟು ಮನುಷ್ಯ ಪ್ರೀತಿಯನ್ನು ಇಟ್ಟುಕೊಂಡು, ಸೈದ್ಧಾಂತಿಕ ವಿಷಯದಲ್ಲಿ ಎಂದೂ ರಾಜಿ‌ಮಾಡಿಕೊಳ್ಳದೇ, ಶೋಷಿತ ಸಮುದಾಯಗಳ ಹಿತಾಸಕ್ತಿಯ ಪರವಾಗಿದ್ದ ಧೀಮಂತ ನಾಯಕ, ದಲಿತರ ಸ್ವಾಭಿಮಾನದ ದನಿಯಾಗಿದ್ದ ಶ್ರೀನಿವಾಸ್ ಪ್ರಸಾದ್ ಅವರು ನಮ್ಮನ್ನು ಅಗಲಿದ್ದು ಅವರಿಗೆ ನನ್ನ ಭಾವಪೂರ್ಣ ನಮನಗಳು. ಇತ್ತೀಚೆಗಷ್ಟೇ ರಾಜಕೀಯ ನಿವೃತ್ತಿ ಘೋಷಿಸಿದ್ದ ಅವರಿಗೆ ಶುಭಕೋರಿ ಅವರ ಯೋಗಕ್ಷೇಮ ವಿಚಾರಿಸುವ ಸಲುವಾಗಿ ತೆರಳಿದ್ದ ವೇಳೆ ಸುಮಾರು ಹೊತ್ತು ಅವರೊಂದಿಗೆ ಚರ್ಚಿಸಿದ್ದೆನು. ಸಮಾನ ಮನಸ್ಕರಾದ ನೀವೆಲ್ಲರೂ ಬಂದಿದ್ದು ನನಗೆ ತೀವ್ರ ಸಂತೋಷ ತಂದಿದೆ ಎಂದು ಪ್ರಸಾದ್ ಅವರು ನನ್ನೆಡೆ ಆಪ್ತ ಭಾವನೆಯಿಂದ ನೋಡಿದ್ದನ್ನು ನಾನು ಎಂದಿಗೂ ಮರೆಯಲಾರೆ” ಎಂದು ಬರೆದುಕೊಂಡಿದ್ದಾರೆ.

“ಸರಳತೆ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಶ್ರೀ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನ ನನಗೆ ನೋವುಂಟು ಮಾಡಿದೆ. ತಮ್ಮ ಜೀವಿತಾವಧಿಯಲ್ಲಿ 14 ಚುನಾವಣೆಗಳನ್ನು ಎದುರಿಸಿದ್ದ ಅವರ ರಾಜಕೀಯ ಜೀವನ ಮಾದರಿಯ ಹಾದಿ. ಆರು ಅವಧಿಗೆ ಸಂಸದರಾಗಿ, ಎರಡು ಅವಧಿಗೆ ಶಾಸಕರಾಗಿ ಅನನ್ಯ ಸೇವೆ ಸಲ್ಲಿಸಿರುವ ಶ್ರೀ ಪ್ರಸಾದ್ ಅವರು; 27 ವರ್ಷಗಳ ಸುದೀರ್ಘ ಸಂಸತ್ ಸದಸ್ಯರಾಗಿ 7 ಪ್ರಧಾನಿಗಳನ್ನು ಕಂಡಿದ್ದರು. ಅವರು ಅಪರೂಪದಲ್ಲಿ ಅಪರೂಪದ ಜನನಾಯಕರಾಗಿದ್ದರು. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

“ಸಮಸಮಾಜದ ಗಟ್ಟಿ ಪ್ರತಿಪಾದಕರು, ರಾಜ್ಯ ಕಂಡ ಮೇರು ನಾಯಕರಲ್ಲಿ ಒಬ್ಬರಾದ ಶ್ರೀನಿವಾಸ ಪ್ರಸಾದ್ ಅವರ ಅಕಾಲಿಕ ನಿಧನ ನಾಡಿಗೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದಿಂದ ರಾಜ್ಯದಲ್ಲಿ ಪ್ರಗತಿಪರ ರಾಜಕಾರಣದ ಕೊಂಡಿ ಕಳಚಿದಂತಾಗಿದೆ. ಬುದ್ದ ಬಸವ ಅಂಬೇಡ್ಕರ್ ತತ್ವಗಳ ಆಧಾರದಲ್ಲಿ ಅನ್ಯಾಯದ ವಿರುದ್ಧದ ಹೋರಾಟದ ಹಾದಿಯನ್ನೇ ಬದುಕಾಗಿಸಿದ್ದ, ವಯಕ್ತಿಕವಾಗಿ ಮಾರ್ಗದರ್ಶಕರಾಗಿದ್ದ ಅವರ ಜೀವನ ನಾಡಿನ ಮುಂದಿನ ಪೀಳಿಗೆಗೆ ಸದಾ ನಂದಾದೀಪದಂತೆ ಉಳಿಯಲಿದೆ. ಇವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅಪಾರ ಅಭಿಮಾನ ವರ್ಗಕ್ಕೆ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಚಾಮರಾಜನಗರ ಸಂಸದ, ಹಿರಿಯ ರಾಜಕಾರಣಿ ವಿ. ಶ್ರೀನಿವಾಸ್ ಪ್ರಸಾದ್ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...