Homeಮುಖಪುಟನಮಗೆ ಲಸಿಕೆ ಕೊರತೆ ಇರುವಾಗ ವಿದೇಶಗಳಿಗೆ 5 ಕೋಟಿ ಡೋಸ್ ಕೊಡುವುದರ ಅರ್ಥವೇನು?: ಪಂಜಾಬ್ ಸಿಎಂ...

ನಮಗೆ ಲಸಿಕೆ ಕೊರತೆ ಇರುವಾಗ ವಿದೇಶಗಳಿಗೆ 5 ಕೋಟಿ ಡೋಸ್ ಕೊಡುವುದರ ಅರ್ಥವೇನು?: ಪಂಜಾಬ್ ಸಿಎಂ ಪ್ರಶ್ನೆ

ಈಗ ಅವರು ದಿನಕ್ಕೆ ಎರಡು ಲಕ್ಷದವರೆಗೆ ಲಸಿಕೆ ಹಾಕಲು ಹೇಳುತ್ತಾರೆ ... ನಾನು ಅದನ್ನು ಮಾಡಿದರೆ, ನನಗೆ ಒಂದೂವರೆ ದಿನಗಳ ಪೂರೈಕೆಗೆ ಆಗುವಷ್ಟು ಲಸಿಕೆ ಮಾತ್ರ ಇದೆ- ಅಮರಿಂದರ್ ಸಿಂಗ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಲಸಿಕೆ ರಾಜತಾಂತ್ರಿಕ ನೀತಿಯನ್ನು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಟೀಕಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಪ್ರಧಾನಿಯವರ ಈ ರಾಜತಾಂತ್ರಿಕತೆಯ ಅಡಿ ಭಾರತದಲ್ಲಿ ತಯಾರಾದ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್‌ಗಳ ಕೋಟ್ಯಂತರ ಡೋಸ್‌ಗಳನ್ನು ಹಲವಾರು ದೇಶಗಳಿಗೆ ಉಡುಗೊರೆಯಾಗಿ ನೀಡಲಾಗಿದೆ. ದೇಶಾದ್ಯಂತ ಕೊರೋನಾ ಪ್ರಕರಣಗಳ ತೀವ್ರತೆಯ ಮಧ್ಯೆ ಹಲವಾರು ರಾಜ್ಯಗಳಲ್ಲಿ ಲಸಿಕೆಗಳ ಕೊರತೆಯನ್ನು ಎತ್ತಿ ತೋರಿಸಿದ ಅಮರಿಂದರ್‌ಸಿಂಗ್, “ಸದ್ಭಾವನೆ ಗೆಸ್ಚರ್” ಗಿಂತ ಭಾರತೀಯರಿಗೆ ಲಸಿಕೆಗಳನ್ನು ಒದಗಿಸಲು ಕೇಂದ್ರವು ಆದ್ಯತೆ ನೀಡಬೇಕು ಎಂದು ಅವರು ಸೂಚಿಸಿದರು.

“ಇತರ ದೇಶಗಳಿಗೆ 5 ಕೋಟಿ ಡೋಸ್ ಉಡುಗೊರೆಯಾಗಿ ಕೊಡುವುದರ ಅರ್ಥವೇನು? ನಮ್ಮ ಬಗ್ಗೆ ಏನು? ಭಾರತೀಯರ ಬಗ್ಗೆ ಏನು? ನಾವು ಅದನ್ನು ಮೊದಲು ಪಡೆಯುವುದಿಲ್ಲವೇ? ನಿಮ್ಮ ಬಳಿ ಇದ್ದರೆ ಅದನ್ನು (ಲಸಿಕೆಗಳನ್ನು) ನೀಡಬೇಡಿ ಎಂದು ನಾನು ಹೇಳುತ್ತಿಲ್ಲ, ಆದರೆ ನಿಮ್ಮ ಬಳಿ ಇಲ್ಲದಿದ್ದರೆ, ಆದ್ಯತೆಯು ಭಾರತೀಯರಿಗೆ ಲಸಿಕೆ ಒದಗಿಸುವುದು ಆಗಿರಬೇಕು, ಲಸಿಕೆಗಳನ್ನು ಇತರರಿಗೆ ಸ್ನೇಹಪೂರ್ವಕವಾಗಿ ನೀಡಬಾರದು. ಮೊದಲು ಲಸಿಕೆಯನ್ನು ನನಗೆ ನೀಡಿ ಎಂದು ಪ್ರಧಾನ ಮಂತ್ರಿಯವರಿಗೆ ಸಭೆಯೊಂದರಲ್ಲಿ ಕೇಳಿದ್ದೆ’ ಎಂದು ಪಂಜಾಬ್‌ ಸಿಎಂ ಹೇಳಿದ್ದಾರೆ.

ಭಾರತದ ಲಸಿಕೆ ಉಪಕ್ರಮವು ವಿಶ್ವ ಆರೋಗ್ಯ ಸಂಸ್ಥೆ ಸೇರಿದಂತೆ ಜಾಗತಿಕ ಸಮುದಾಯದ ಪ್ರಶಂಸೆಯನ್ನು ಪಡೆಯಿತು. ದೇಶದ ಮಾನವೀಯ ಭಾವಸೂಚಕವು ಕಳೆದ ತಿಂಗಳು ಹಲವು ರಾಜ್ಯಗಳಿಗೆ ಮಾರಕವಾಗಿ ಪರಿಣಮಿಸಿತು, ಈಗಲೂ ಅದು ಸಮಸ್ಯೆಯಾಗಿಯೇ ಇದೆ. ಏಕೆಂದರೆ ಕೆಟ್ಟದಾಗಿ ಹಾನಿಗೊಳಗಾದ ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ಲಸಿಕಾ ಅಭಿಯಾನವನ್ನು ಹೆಚ್ಚಿಸಲು ಯೋಜಿಸಿದ್ದರಿಂದ ತೀವ್ರ ಲಸಿಕೆ ಕೊರತೆ ಎದುರಾಗಿದೆ.

“ಈಗ ಅವರು ದಿನಕ್ಕೆ ಎರಡು ಲಕ್ಷದವರೆಗೆ ಲಸಿಕೆ ಹಾಕಲು ಹೇಳುತ್ತಾರೆ … ನಾನು ಅದನ್ನು ಮಾಡಿದರೆ, ನನಗೆ ಒಂದೂವರೆ ದಿನಗಳ ಪೂರೈಕೆಗೆ ಆಗುವಷ್ಟು ಲಸಿಕೆ ಮಾತ್ರ ಇದೆ” ಎಂದು ಸಿಂಗ್ ಹೇಳಿದರು.

ಲಸಿಕಾ ಅಭಿಯಾನದಲ್ಲಿ ಆದ್ಯತೆ ನೀಡಬೇಕಾದ ನಿರ್ದಿಷ್ಟ ಗುಂಪುಗಳನ್ನು ನಿರ್ಧರಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಬೇಕು ಎಂದು ಅಮರಿಂದರ್ ಸಿಂಗ್ ಒತ್ತಾಯಿಸಿದರು.

“ಅದನ್ನು ನಿರ್ಧರಿಸಲು ರಾಜ್ಯಗಳಿಗೆ ಬಿಡಿ. ದೆಹಲಿಗಿಂತ ನಮಗೆ ಬೇರೆ ಸಮಸ್ಯೆ ಇರಬಹುದು. ದೆಹಲಿ ಸಮಸ್ಯೆ ಮಹಾರಾಷ್ಟ್ರಕ್ಕಿಂತ ಭಿನ್ನವಾಗಿರಬಹುದು. ಕೇರಳದ ಸಮಸ್ಯೆಯೇ ಬೇರೆ ಇರಬಹುದು. ಲಸಿಕೆ ಬಳಕೆಯ ನಿರ್ಧಾರವನ್ನು ರಾಜ್ಯಗಳೇ ಮಾಡಿಕೊಳ್ಳೋಣ” ಎಂದು ಅವರು ಹೇಳಿದರು.

ಪ್ರಸ್ತುತ, ಕೇಂದ್ರವು 45 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ವ್ಯಾಕ್ಸಿನೇಷನ್ ಮಾಡಲು ಅನುಮತಿಸುತ್ತದೆ. ಮಹಾರಾಷ್ಟ್ರ ಮತ್ತು ದೆಹಲಿ ಸೇರಿದಂತೆ ಹಲವಾರು ರಾಜ್ಯಗಳು ಲಸಿಕಾ ಅಭಿಯಾನವನ್ನು ಇತರ ವಯೋಮಾನದವರಿಗೂ ತೆರೆಯುವಂತೆ ಕೇಂದ್ರವನ್ನು ಒತ್ತಾಯಿಸಿವೆ.
ಎರಡನೇ ಕೋವಿಡ್ ಅಲೆಯಿಂದ ತತ್ತರಿಸಿದ ಭಾರತವು ಸತತ ಮೂರು ದಿನಗಳಿಂದ ದೈನಿಕ 2 ಲಕ್ಷಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳನ್ನು ಮತ್ತು ದೈನಿಕ 1000 ಕ್ಕೂ ಹೆಚ್ಚು ಸಾವುಗಳನ್ನು ವರದಿ ಮಾಡಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಶೇಕಡಾ 86 ರಷ್ಟು ಸಾವುಗಳು ಸಂಭವಿಸಿದ 10 ರಾಜ್ಯಗಳಲ್ಲಿ ಪಂಜಾಬ್ ಕೂಡ ಒಂದು.


ಇದನ್ನೂ ಓದಿ: ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಕೊರತೆ: ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಾದುದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...