Homeಮುಖಪುಟನಮಗೆ ಲಸಿಕೆ ಕೊರತೆ ಇರುವಾಗ ವಿದೇಶಗಳಿಗೆ 5 ಕೋಟಿ ಡೋಸ್ ಕೊಡುವುದರ ಅರ್ಥವೇನು?: ಪಂಜಾಬ್ ಸಿಎಂ...

ನಮಗೆ ಲಸಿಕೆ ಕೊರತೆ ಇರುವಾಗ ವಿದೇಶಗಳಿಗೆ 5 ಕೋಟಿ ಡೋಸ್ ಕೊಡುವುದರ ಅರ್ಥವೇನು?: ಪಂಜಾಬ್ ಸಿಎಂ ಪ್ರಶ್ನೆ

ಈಗ ಅವರು ದಿನಕ್ಕೆ ಎರಡು ಲಕ್ಷದವರೆಗೆ ಲಸಿಕೆ ಹಾಕಲು ಹೇಳುತ್ತಾರೆ ... ನಾನು ಅದನ್ನು ಮಾಡಿದರೆ, ನನಗೆ ಒಂದೂವರೆ ದಿನಗಳ ಪೂರೈಕೆಗೆ ಆಗುವಷ್ಟು ಲಸಿಕೆ ಮಾತ್ರ ಇದೆ- ಅಮರಿಂದರ್ ಸಿಂಗ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಲಸಿಕೆ ರಾಜತಾಂತ್ರಿಕ ನೀತಿಯನ್ನು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಟೀಕಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಪ್ರಧಾನಿಯವರ ಈ ರಾಜತಾಂತ್ರಿಕತೆಯ ಅಡಿ ಭಾರತದಲ್ಲಿ ತಯಾರಾದ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್‌ಗಳ ಕೋಟ್ಯಂತರ ಡೋಸ್‌ಗಳನ್ನು ಹಲವಾರು ದೇಶಗಳಿಗೆ ಉಡುಗೊರೆಯಾಗಿ ನೀಡಲಾಗಿದೆ. ದೇಶಾದ್ಯಂತ ಕೊರೋನಾ ಪ್ರಕರಣಗಳ ತೀವ್ರತೆಯ ಮಧ್ಯೆ ಹಲವಾರು ರಾಜ್ಯಗಳಲ್ಲಿ ಲಸಿಕೆಗಳ ಕೊರತೆಯನ್ನು ಎತ್ತಿ ತೋರಿಸಿದ ಅಮರಿಂದರ್‌ಸಿಂಗ್, “ಸದ್ಭಾವನೆ ಗೆಸ್ಚರ್” ಗಿಂತ ಭಾರತೀಯರಿಗೆ ಲಸಿಕೆಗಳನ್ನು ಒದಗಿಸಲು ಕೇಂದ್ರವು ಆದ್ಯತೆ ನೀಡಬೇಕು ಎಂದು ಅವರು ಸೂಚಿಸಿದರು.

“ಇತರ ದೇಶಗಳಿಗೆ 5 ಕೋಟಿ ಡೋಸ್ ಉಡುಗೊರೆಯಾಗಿ ಕೊಡುವುದರ ಅರ್ಥವೇನು? ನಮ್ಮ ಬಗ್ಗೆ ಏನು? ಭಾರತೀಯರ ಬಗ್ಗೆ ಏನು? ನಾವು ಅದನ್ನು ಮೊದಲು ಪಡೆಯುವುದಿಲ್ಲವೇ? ನಿಮ್ಮ ಬಳಿ ಇದ್ದರೆ ಅದನ್ನು (ಲಸಿಕೆಗಳನ್ನು) ನೀಡಬೇಡಿ ಎಂದು ನಾನು ಹೇಳುತ್ತಿಲ್ಲ, ಆದರೆ ನಿಮ್ಮ ಬಳಿ ಇಲ್ಲದಿದ್ದರೆ, ಆದ್ಯತೆಯು ಭಾರತೀಯರಿಗೆ ಲಸಿಕೆ ಒದಗಿಸುವುದು ಆಗಿರಬೇಕು, ಲಸಿಕೆಗಳನ್ನು ಇತರರಿಗೆ ಸ್ನೇಹಪೂರ್ವಕವಾಗಿ ನೀಡಬಾರದು. ಮೊದಲು ಲಸಿಕೆಯನ್ನು ನನಗೆ ನೀಡಿ ಎಂದು ಪ್ರಧಾನ ಮಂತ್ರಿಯವರಿಗೆ ಸಭೆಯೊಂದರಲ್ಲಿ ಕೇಳಿದ್ದೆ’ ಎಂದು ಪಂಜಾಬ್‌ ಸಿಎಂ ಹೇಳಿದ್ದಾರೆ.

ಭಾರತದ ಲಸಿಕೆ ಉಪಕ್ರಮವು ವಿಶ್ವ ಆರೋಗ್ಯ ಸಂಸ್ಥೆ ಸೇರಿದಂತೆ ಜಾಗತಿಕ ಸಮುದಾಯದ ಪ್ರಶಂಸೆಯನ್ನು ಪಡೆಯಿತು. ದೇಶದ ಮಾನವೀಯ ಭಾವಸೂಚಕವು ಕಳೆದ ತಿಂಗಳು ಹಲವು ರಾಜ್ಯಗಳಿಗೆ ಮಾರಕವಾಗಿ ಪರಿಣಮಿಸಿತು, ಈಗಲೂ ಅದು ಸಮಸ್ಯೆಯಾಗಿಯೇ ಇದೆ. ಏಕೆಂದರೆ ಕೆಟ್ಟದಾಗಿ ಹಾನಿಗೊಳಗಾದ ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ಲಸಿಕಾ ಅಭಿಯಾನವನ್ನು ಹೆಚ್ಚಿಸಲು ಯೋಜಿಸಿದ್ದರಿಂದ ತೀವ್ರ ಲಸಿಕೆ ಕೊರತೆ ಎದುರಾಗಿದೆ.

“ಈಗ ಅವರು ದಿನಕ್ಕೆ ಎರಡು ಲಕ್ಷದವರೆಗೆ ಲಸಿಕೆ ಹಾಕಲು ಹೇಳುತ್ತಾರೆ … ನಾನು ಅದನ್ನು ಮಾಡಿದರೆ, ನನಗೆ ಒಂದೂವರೆ ದಿನಗಳ ಪೂರೈಕೆಗೆ ಆಗುವಷ್ಟು ಲಸಿಕೆ ಮಾತ್ರ ಇದೆ” ಎಂದು ಸಿಂಗ್ ಹೇಳಿದರು.

ಲಸಿಕಾ ಅಭಿಯಾನದಲ್ಲಿ ಆದ್ಯತೆ ನೀಡಬೇಕಾದ ನಿರ್ದಿಷ್ಟ ಗುಂಪುಗಳನ್ನು ನಿರ್ಧರಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಬೇಕು ಎಂದು ಅಮರಿಂದರ್ ಸಿಂಗ್ ಒತ್ತಾಯಿಸಿದರು.

“ಅದನ್ನು ನಿರ್ಧರಿಸಲು ರಾಜ್ಯಗಳಿಗೆ ಬಿಡಿ. ದೆಹಲಿಗಿಂತ ನಮಗೆ ಬೇರೆ ಸಮಸ್ಯೆ ಇರಬಹುದು. ದೆಹಲಿ ಸಮಸ್ಯೆ ಮಹಾರಾಷ್ಟ್ರಕ್ಕಿಂತ ಭಿನ್ನವಾಗಿರಬಹುದು. ಕೇರಳದ ಸಮಸ್ಯೆಯೇ ಬೇರೆ ಇರಬಹುದು. ಲಸಿಕೆ ಬಳಕೆಯ ನಿರ್ಧಾರವನ್ನು ರಾಜ್ಯಗಳೇ ಮಾಡಿಕೊಳ್ಳೋಣ” ಎಂದು ಅವರು ಹೇಳಿದರು.

ಪ್ರಸ್ತುತ, ಕೇಂದ್ರವು 45 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ವ್ಯಾಕ್ಸಿನೇಷನ್ ಮಾಡಲು ಅನುಮತಿಸುತ್ತದೆ. ಮಹಾರಾಷ್ಟ್ರ ಮತ್ತು ದೆಹಲಿ ಸೇರಿದಂತೆ ಹಲವಾರು ರಾಜ್ಯಗಳು ಲಸಿಕಾ ಅಭಿಯಾನವನ್ನು ಇತರ ವಯೋಮಾನದವರಿಗೂ ತೆರೆಯುವಂತೆ ಕೇಂದ್ರವನ್ನು ಒತ್ತಾಯಿಸಿವೆ.
ಎರಡನೇ ಕೋವಿಡ್ ಅಲೆಯಿಂದ ತತ್ತರಿಸಿದ ಭಾರತವು ಸತತ ಮೂರು ದಿನಗಳಿಂದ ದೈನಿಕ 2 ಲಕ್ಷಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳನ್ನು ಮತ್ತು ದೈನಿಕ 1000 ಕ್ಕೂ ಹೆಚ್ಚು ಸಾವುಗಳನ್ನು ವರದಿ ಮಾಡಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಶೇಕಡಾ 86 ರಷ್ಟು ಸಾವುಗಳು ಸಂಭವಿಸಿದ 10 ರಾಜ್ಯಗಳಲ್ಲಿ ಪಂಜಾಬ್ ಕೂಡ ಒಂದು.


ಇದನ್ನೂ ಓದಿ: ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಕೊರತೆ: ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಾದುದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...