Homeಮುಖಪುಟನಮಗೆ ಲಸಿಕೆ ಕೊರತೆ ಇರುವಾಗ ವಿದೇಶಗಳಿಗೆ 5 ಕೋಟಿ ಡೋಸ್ ಕೊಡುವುದರ ಅರ್ಥವೇನು?: ಪಂಜಾಬ್ ಸಿಎಂ...

ನಮಗೆ ಲಸಿಕೆ ಕೊರತೆ ಇರುವಾಗ ವಿದೇಶಗಳಿಗೆ 5 ಕೋಟಿ ಡೋಸ್ ಕೊಡುವುದರ ಅರ್ಥವೇನು?: ಪಂಜಾಬ್ ಸಿಎಂ ಪ್ರಶ್ನೆ

ಈಗ ಅವರು ದಿನಕ್ಕೆ ಎರಡು ಲಕ್ಷದವರೆಗೆ ಲಸಿಕೆ ಹಾಕಲು ಹೇಳುತ್ತಾರೆ ... ನಾನು ಅದನ್ನು ಮಾಡಿದರೆ, ನನಗೆ ಒಂದೂವರೆ ದಿನಗಳ ಪೂರೈಕೆಗೆ ಆಗುವಷ್ಟು ಲಸಿಕೆ ಮಾತ್ರ ಇದೆ- ಅಮರಿಂದರ್ ಸಿಂಗ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಲಸಿಕೆ ರಾಜತಾಂತ್ರಿಕ ನೀತಿಯನ್ನು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಟೀಕಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಪ್ರಧಾನಿಯವರ ಈ ರಾಜತಾಂತ್ರಿಕತೆಯ ಅಡಿ ಭಾರತದಲ್ಲಿ ತಯಾರಾದ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್‌ಗಳ ಕೋಟ್ಯಂತರ ಡೋಸ್‌ಗಳನ್ನು ಹಲವಾರು ದೇಶಗಳಿಗೆ ಉಡುಗೊರೆಯಾಗಿ ನೀಡಲಾಗಿದೆ. ದೇಶಾದ್ಯಂತ ಕೊರೋನಾ ಪ್ರಕರಣಗಳ ತೀವ್ರತೆಯ ಮಧ್ಯೆ ಹಲವಾರು ರಾಜ್ಯಗಳಲ್ಲಿ ಲಸಿಕೆಗಳ ಕೊರತೆಯನ್ನು ಎತ್ತಿ ತೋರಿಸಿದ ಅಮರಿಂದರ್‌ಸಿಂಗ್, “ಸದ್ಭಾವನೆ ಗೆಸ್ಚರ್” ಗಿಂತ ಭಾರತೀಯರಿಗೆ ಲಸಿಕೆಗಳನ್ನು ಒದಗಿಸಲು ಕೇಂದ್ರವು ಆದ್ಯತೆ ನೀಡಬೇಕು ಎಂದು ಅವರು ಸೂಚಿಸಿದರು.

“ಇತರ ದೇಶಗಳಿಗೆ 5 ಕೋಟಿ ಡೋಸ್ ಉಡುಗೊರೆಯಾಗಿ ಕೊಡುವುದರ ಅರ್ಥವೇನು? ನಮ್ಮ ಬಗ್ಗೆ ಏನು? ಭಾರತೀಯರ ಬಗ್ಗೆ ಏನು? ನಾವು ಅದನ್ನು ಮೊದಲು ಪಡೆಯುವುದಿಲ್ಲವೇ? ನಿಮ್ಮ ಬಳಿ ಇದ್ದರೆ ಅದನ್ನು (ಲಸಿಕೆಗಳನ್ನು) ನೀಡಬೇಡಿ ಎಂದು ನಾನು ಹೇಳುತ್ತಿಲ್ಲ, ಆದರೆ ನಿಮ್ಮ ಬಳಿ ಇಲ್ಲದಿದ್ದರೆ, ಆದ್ಯತೆಯು ಭಾರತೀಯರಿಗೆ ಲಸಿಕೆ ಒದಗಿಸುವುದು ಆಗಿರಬೇಕು, ಲಸಿಕೆಗಳನ್ನು ಇತರರಿಗೆ ಸ್ನೇಹಪೂರ್ವಕವಾಗಿ ನೀಡಬಾರದು. ಮೊದಲು ಲಸಿಕೆಯನ್ನು ನನಗೆ ನೀಡಿ ಎಂದು ಪ್ರಧಾನ ಮಂತ್ರಿಯವರಿಗೆ ಸಭೆಯೊಂದರಲ್ಲಿ ಕೇಳಿದ್ದೆ’ ಎಂದು ಪಂಜಾಬ್‌ ಸಿಎಂ ಹೇಳಿದ್ದಾರೆ.

ಭಾರತದ ಲಸಿಕೆ ಉಪಕ್ರಮವು ವಿಶ್ವ ಆರೋಗ್ಯ ಸಂಸ್ಥೆ ಸೇರಿದಂತೆ ಜಾಗತಿಕ ಸಮುದಾಯದ ಪ್ರಶಂಸೆಯನ್ನು ಪಡೆಯಿತು. ದೇಶದ ಮಾನವೀಯ ಭಾವಸೂಚಕವು ಕಳೆದ ತಿಂಗಳು ಹಲವು ರಾಜ್ಯಗಳಿಗೆ ಮಾರಕವಾಗಿ ಪರಿಣಮಿಸಿತು, ಈಗಲೂ ಅದು ಸಮಸ್ಯೆಯಾಗಿಯೇ ಇದೆ. ಏಕೆಂದರೆ ಕೆಟ್ಟದಾಗಿ ಹಾನಿಗೊಳಗಾದ ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ಲಸಿಕಾ ಅಭಿಯಾನವನ್ನು ಹೆಚ್ಚಿಸಲು ಯೋಜಿಸಿದ್ದರಿಂದ ತೀವ್ರ ಲಸಿಕೆ ಕೊರತೆ ಎದುರಾಗಿದೆ.

“ಈಗ ಅವರು ದಿನಕ್ಕೆ ಎರಡು ಲಕ್ಷದವರೆಗೆ ಲಸಿಕೆ ಹಾಕಲು ಹೇಳುತ್ತಾರೆ … ನಾನು ಅದನ್ನು ಮಾಡಿದರೆ, ನನಗೆ ಒಂದೂವರೆ ದಿನಗಳ ಪೂರೈಕೆಗೆ ಆಗುವಷ್ಟು ಲಸಿಕೆ ಮಾತ್ರ ಇದೆ” ಎಂದು ಸಿಂಗ್ ಹೇಳಿದರು.

ಲಸಿಕಾ ಅಭಿಯಾನದಲ್ಲಿ ಆದ್ಯತೆ ನೀಡಬೇಕಾದ ನಿರ್ದಿಷ್ಟ ಗುಂಪುಗಳನ್ನು ನಿರ್ಧರಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಬೇಕು ಎಂದು ಅಮರಿಂದರ್ ಸಿಂಗ್ ಒತ್ತಾಯಿಸಿದರು.

“ಅದನ್ನು ನಿರ್ಧರಿಸಲು ರಾಜ್ಯಗಳಿಗೆ ಬಿಡಿ. ದೆಹಲಿಗಿಂತ ನಮಗೆ ಬೇರೆ ಸಮಸ್ಯೆ ಇರಬಹುದು. ದೆಹಲಿ ಸಮಸ್ಯೆ ಮಹಾರಾಷ್ಟ್ರಕ್ಕಿಂತ ಭಿನ್ನವಾಗಿರಬಹುದು. ಕೇರಳದ ಸಮಸ್ಯೆಯೇ ಬೇರೆ ಇರಬಹುದು. ಲಸಿಕೆ ಬಳಕೆಯ ನಿರ್ಧಾರವನ್ನು ರಾಜ್ಯಗಳೇ ಮಾಡಿಕೊಳ್ಳೋಣ” ಎಂದು ಅವರು ಹೇಳಿದರು.

ಪ್ರಸ್ತುತ, ಕೇಂದ್ರವು 45 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ವ್ಯಾಕ್ಸಿನೇಷನ್ ಮಾಡಲು ಅನುಮತಿಸುತ್ತದೆ. ಮಹಾರಾಷ್ಟ್ರ ಮತ್ತು ದೆಹಲಿ ಸೇರಿದಂತೆ ಹಲವಾರು ರಾಜ್ಯಗಳು ಲಸಿಕಾ ಅಭಿಯಾನವನ್ನು ಇತರ ವಯೋಮಾನದವರಿಗೂ ತೆರೆಯುವಂತೆ ಕೇಂದ್ರವನ್ನು ಒತ್ತಾಯಿಸಿವೆ.
ಎರಡನೇ ಕೋವಿಡ್ ಅಲೆಯಿಂದ ತತ್ತರಿಸಿದ ಭಾರತವು ಸತತ ಮೂರು ದಿನಗಳಿಂದ ದೈನಿಕ 2 ಲಕ್ಷಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳನ್ನು ಮತ್ತು ದೈನಿಕ 1000 ಕ್ಕೂ ಹೆಚ್ಚು ಸಾವುಗಳನ್ನು ವರದಿ ಮಾಡಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಶೇಕಡಾ 86 ರಷ್ಟು ಸಾವುಗಳು ಸಂಭವಿಸಿದ 10 ರಾಜ್ಯಗಳಲ್ಲಿ ಪಂಜಾಬ್ ಕೂಡ ಒಂದು.


ಇದನ್ನೂ ಓದಿ: ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಕೊರತೆ: ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಾದುದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...