Homeಮುಖಪುಟನಮಗೆ ಲಸಿಕೆ ಕೊರತೆ ಇರುವಾಗ ವಿದೇಶಗಳಿಗೆ 5 ಕೋಟಿ ಡೋಸ್ ಕೊಡುವುದರ ಅರ್ಥವೇನು?: ಪಂಜಾಬ್ ಸಿಎಂ...

ನಮಗೆ ಲಸಿಕೆ ಕೊರತೆ ಇರುವಾಗ ವಿದೇಶಗಳಿಗೆ 5 ಕೋಟಿ ಡೋಸ್ ಕೊಡುವುದರ ಅರ್ಥವೇನು?: ಪಂಜಾಬ್ ಸಿಎಂ ಪ್ರಶ್ನೆ

ಈಗ ಅವರು ದಿನಕ್ಕೆ ಎರಡು ಲಕ್ಷದವರೆಗೆ ಲಸಿಕೆ ಹಾಕಲು ಹೇಳುತ್ತಾರೆ ... ನಾನು ಅದನ್ನು ಮಾಡಿದರೆ, ನನಗೆ ಒಂದೂವರೆ ದಿನಗಳ ಪೂರೈಕೆಗೆ ಆಗುವಷ್ಟು ಲಸಿಕೆ ಮಾತ್ರ ಇದೆ- ಅಮರಿಂದರ್ ಸಿಂಗ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಲಸಿಕೆ ರಾಜತಾಂತ್ರಿಕ ನೀತಿಯನ್ನು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಟೀಕಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಪ್ರಧಾನಿಯವರ ಈ ರಾಜತಾಂತ್ರಿಕತೆಯ ಅಡಿ ಭಾರತದಲ್ಲಿ ತಯಾರಾದ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್‌ಗಳ ಕೋಟ್ಯಂತರ ಡೋಸ್‌ಗಳನ್ನು ಹಲವಾರು ದೇಶಗಳಿಗೆ ಉಡುಗೊರೆಯಾಗಿ ನೀಡಲಾಗಿದೆ. ದೇಶಾದ್ಯಂತ ಕೊರೋನಾ ಪ್ರಕರಣಗಳ ತೀವ್ರತೆಯ ಮಧ್ಯೆ ಹಲವಾರು ರಾಜ್ಯಗಳಲ್ಲಿ ಲಸಿಕೆಗಳ ಕೊರತೆಯನ್ನು ಎತ್ತಿ ತೋರಿಸಿದ ಅಮರಿಂದರ್‌ಸಿಂಗ್, “ಸದ್ಭಾವನೆ ಗೆಸ್ಚರ್” ಗಿಂತ ಭಾರತೀಯರಿಗೆ ಲಸಿಕೆಗಳನ್ನು ಒದಗಿಸಲು ಕೇಂದ್ರವು ಆದ್ಯತೆ ನೀಡಬೇಕು ಎಂದು ಅವರು ಸೂಚಿಸಿದರು.

“ಇತರ ದೇಶಗಳಿಗೆ 5 ಕೋಟಿ ಡೋಸ್ ಉಡುಗೊರೆಯಾಗಿ ಕೊಡುವುದರ ಅರ್ಥವೇನು? ನಮ್ಮ ಬಗ್ಗೆ ಏನು? ಭಾರತೀಯರ ಬಗ್ಗೆ ಏನು? ನಾವು ಅದನ್ನು ಮೊದಲು ಪಡೆಯುವುದಿಲ್ಲವೇ? ನಿಮ್ಮ ಬಳಿ ಇದ್ದರೆ ಅದನ್ನು (ಲಸಿಕೆಗಳನ್ನು) ನೀಡಬೇಡಿ ಎಂದು ನಾನು ಹೇಳುತ್ತಿಲ್ಲ, ಆದರೆ ನಿಮ್ಮ ಬಳಿ ಇಲ್ಲದಿದ್ದರೆ, ಆದ್ಯತೆಯು ಭಾರತೀಯರಿಗೆ ಲಸಿಕೆ ಒದಗಿಸುವುದು ಆಗಿರಬೇಕು, ಲಸಿಕೆಗಳನ್ನು ಇತರರಿಗೆ ಸ್ನೇಹಪೂರ್ವಕವಾಗಿ ನೀಡಬಾರದು. ಮೊದಲು ಲಸಿಕೆಯನ್ನು ನನಗೆ ನೀಡಿ ಎಂದು ಪ್ರಧಾನ ಮಂತ್ರಿಯವರಿಗೆ ಸಭೆಯೊಂದರಲ್ಲಿ ಕೇಳಿದ್ದೆ’ ಎಂದು ಪಂಜಾಬ್‌ ಸಿಎಂ ಹೇಳಿದ್ದಾರೆ.

ಭಾರತದ ಲಸಿಕೆ ಉಪಕ್ರಮವು ವಿಶ್ವ ಆರೋಗ್ಯ ಸಂಸ್ಥೆ ಸೇರಿದಂತೆ ಜಾಗತಿಕ ಸಮುದಾಯದ ಪ್ರಶಂಸೆಯನ್ನು ಪಡೆಯಿತು. ದೇಶದ ಮಾನವೀಯ ಭಾವಸೂಚಕವು ಕಳೆದ ತಿಂಗಳು ಹಲವು ರಾಜ್ಯಗಳಿಗೆ ಮಾರಕವಾಗಿ ಪರಿಣಮಿಸಿತು, ಈಗಲೂ ಅದು ಸಮಸ್ಯೆಯಾಗಿಯೇ ಇದೆ. ಏಕೆಂದರೆ ಕೆಟ್ಟದಾಗಿ ಹಾನಿಗೊಳಗಾದ ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ಲಸಿಕಾ ಅಭಿಯಾನವನ್ನು ಹೆಚ್ಚಿಸಲು ಯೋಜಿಸಿದ್ದರಿಂದ ತೀವ್ರ ಲಸಿಕೆ ಕೊರತೆ ಎದುರಾಗಿದೆ.

“ಈಗ ಅವರು ದಿನಕ್ಕೆ ಎರಡು ಲಕ್ಷದವರೆಗೆ ಲಸಿಕೆ ಹಾಕಲು ಹೇಳುತ್ತಾರೆ … ನಾನು ಅದನ್ನು ಮಾಡಿದರೆ, ನನಗೆ ಒಂದೂವರೆ ದಿನಗಳ ಪೂರೈಕೆಗೆ ಆಗುವಷ್ಟು ಲಸಿಕೆ ಮಾತ್ರ ಇದೆ” ಎಂದು ಸಿಂಗ್ ಹೇಳಿದರು.

ಲಸಿಕಾ ಅಭಿಯಾನದಲ್ಲಿ ಆದ್ಯತೆ ನೀಡಬೇಕಾದ ನಿರ್ದಿಷ್ಟ ಗುಂಪುಗಳನ್ನು ನಿರ್ಧರಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಬೇಕು ಎಂದು ಅಮರಿಂದರ್ ಸಿಂಗ್ ಒತ್ತಾಯಿಸಿದರು.

“ಅದನ್ನು ನಿರ್ಧರಿಸಲು ರಾಜ್ಯಗಳಿಗೆ ಬಿಡಿ. ದೆಹಲಿಗಿಂತ ನಮಗೆ ಬೇರೆ ಸಮಸ್ಯೆ ಇರಬಹುದು. ದೆಹಲಿ ಸಮಸ್ಯೆ ಮಹಾರಾಷ್ಟ್ರಕ್ಕಿಂತ ಭಿನ್ನವಾಗಿರಬಹುದು. ಕೇರಳದ ಸಮಸ್ಯೆಯೇ ಬೇರೆ ಇರಬಹುದು. ಲಸಿಕೆ ಬಳಕೆಯ ನಿರ್ಧಾರವನ್ನು ರಾಜ್ಯಗಳೇ ಮಾಡಿಕೊಳ್ಳೋಣ” ಎಂದು ಅವರು ಹೇಳಿದರು.

ಪ್ರಸ್ತುತ, ಕೇಂದ್ರವು 45 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ವ್ಯಾಕ್ಸಿನೇಷನ್ ಮಾಡಲು ಅನುಮತಿಸುತ್ತದೆ. ಮಹಾರಾಷ್ಟ್ರ ಮತ್ತು ದೆಹಲಿ ಸೇರಿದಂತೆ ಹಲವಾರು ರಾಜ್ಯಗಳು ಲಸಿಕಾ ಅಭಿಯಾನವನ್ನು ಇತರ ವಯೋಮಾನದವರಿಗೂ ತೆರೆಯುವಂತೆ ಕೇಂದ್ರವನ್ನು ಒತ್ತಾಯಿಸಿವೆ.
ಎರಡನೇ ಕೋವಿಡ್ ಅಲೆಯಿಂದ ತತ್ತರಿಸಿದ ಭಾರತವು ಸತತ ಮೂರು ದಿನಗಳಿಂದ ದೈನಿಕ 2 ಲಕ್ಷಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳನ್ನು ಮತ್ತು ದೈನಿಕ 1000 ಕ್ಕೂ ಹೆಚ್ಚು ಸಾವುಗಳನ್ನು ವರದಿ ಮಾಡಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಶೇಕಡಾ 86 ರಷ್ಟು ಸಾವುಗಳು ಸಂಭವಿಸಿದ 10 ರಾಜ್ಯಗಳಲ್ಲಿ ಪಂಜಾಬ್ ಕೂಡ ಒಂದು.


ಇದನ್ನೂ ಓದಿ: ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಕೊರತೆ: ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಾದುದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...