Homeಮುಖಪುಟನಮಗೆ ಲಸಿಕೆ ಕೊರತೆ ಇರುವಾಗ ವಿದೇಶಗಳಿಗೆ 5 ಕೋಟಿ ಡೋಸ್ ಕೊಡುವುದರ ಅರ್ಥವೇನು?: ಪಂಜಾಬ್ ಸಿಎಂ...

ನಮಗೆ ಲಸಿಕೆ ಕೊರತೆ ಇರುವಾಗ ವಿದೇಶಗಳಿಗೆ 5 ಕೋಟಿ ಡೋಸ್ ಕೊಡುವುದರ ಅರ್ಥವೇನು?: ಪಂಜಾಬ್ ಸಿಎಂ ಪ್ರಶ್ನೆ

ಈಗ ಅವರು ದಿನಕ್ಕೆ ಎರಡು ಲಕ್ಷದವರೆಗೆ ಲಸಿಕೆ ಹಾಕಲು ಹೇಳುತ್ತಾರೆ ... ನಾನು ಅದನ್ನು ಮಾಡಿದರೆ, ನನಗೆ ಒಂದೂವರೆ ದಿನಗಳ ಪೂರೈಕೆಗೆ ಆಗುವಷ್ಟು ಲಸಿಕೆ ಮಾತ್ರ ಇದೆ- ಅಮರಿಂದರ್ ಸಿಂಗ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಲಸಿಕೆ ರಾಜತಾಂತ್ರಿಕ ನೀತಿಯನ್ನು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಟೀಕಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಪ್ರಧಾನಿಯವರ ಈ ರಾಜತಾಂತ್ರಿಕತೆಯ ಅಡಿ ಭಾರತದಲ್ಲಿ ತಯಾರಾದ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್‌ಗಳ ಕೋಟ್ಯಂತರ ಡೋಸ್‌ಗಳನ್ನು ಹಲವಾರು ದೇಶಗಳಿಗೆ ಉಡುಗೊರೆಯಾಗಿ ನೀಡಲಾಗಿದೆ. ದೇಶಾದ್ಯಂತ ಕೊರೋನಾ ಪ್ರಕರಣಗಳ ತೀವ್ರತೆಯ ಮಧ್ಯೆ ಹಲವಾರು ರಾಜ್ಯಗಳಲ್ಲಿ ಲಸಿಕೆಗಳ ಕೊರತೆಯನ್ನು ಎತ್ತಿ ತೋರಿಸಿದ ಅಮರಿಂದರ್‌ಸಿಂಗ್, “ಸದ್ಭಾವನೆ ಗೆಸ್ಚರ್” ಗಿಂತ ಭಾರತೀಯರಿಗೆ ಲಸಿಕೆಗಳನ್ನು ಒದಗಿಸಲು ಕೇಂದ್ರವು ಆದ್ಯತೆ ನೀಡಬೇಕು ಎಂದು ಅವರು ಸೂಚಿಸಿದರು.

“ಇತರ ದೇಶಗಳಿಗೆ 5 ಕೋಟಿ ಡೋಸ್ ಉಡುಗೊರೆಯಾಗಿ ಕೊಡುವುದರ ಅರ್ಥವೇನು? ನಮ್ಮ ಬಗ್ಗೆ ಏನು? ಭಾರತೀಯರ ಬಗ್ಗೆ ಏನು? ನಾವು ಅದನ್ನು ಮೊದಲು ಪಡೆಯುವುದಿಲ್ಲವೇ? ನಿಮ್ಮ ಬಳಿ ಇದ್ದರೆ ಅದನ್ನು (ಲಸಿಕೆಗಳನ್ನು) ನೀಡಬೇಡಿ ಎಂದು ನಾನು ಹೇಳುತ್ತಿಲ್ಲ, ಆದರೆ ನಿಮ್ಮ ಬಳಿ ಇಲ್ಲದಿದ್ದರೆ, ಆದ್ಯತೆಯು ಭಾರತೀಯರಿಗೆ ಲಸಿಕೆ ಒದಗಿಸುವುದು ಆಗಿರಬೇಕು, ಲಸಿಕೆಗಳನ್ನು ಇತರರಿಗೆ ಸ್ನೇಹಪೂರ್ವಕವಾಗಿ ನೀಡಬಾರದು. ಮೊದಲು ಲಸಿಕೆಯನ್ನು ನನಗೆ ನೀಡಿ ಎಂದು ಪ್ರಧಾನ ಮಂತ್ರಿಯವರಿಗೆ ಸಭೆಯೊಂದರಲ್ಲಿ ಕೇಳಿದ್ದೆ’ ಎಂದು ಪಂಜಾಬ್‌ ಸಿಎಂ ಹೇಳಿದ್ದಾರೆ.

ಭಾರತದ ಲಸಿಕೆ ಉಪಕ್ರಮವು ವಿಶ್ವ ಆರೋಗ್ಯ ಸಂಸ್ಥೆ ಸೇರಿದಂತೆ ಜಾಗತಿಕ ಸಮುದಾಯದ ಪ್ರಶಂಸೆಯನ್ನು ಪಡೆಯಿತು. ದೇಶದ ಮಾನವೀಯ ಭಾವಸೂಚಕವು ಕಳೆದ ತಿಂಗಳು ಹಲವು ರಾಜ್ಯಗಳಿಗೆ ಮಾರಕವಾಗಿ ಪರಿಣಮಿಸಿತು, ಈಗಲೂ ಅದು ಸಮಸ್ಯೆಯಾಗಿಯೇ ಇದೆ. ಏಕೆಂದರೆ ಕೆಟ್ಟದಾಗಿ ಹಾನಿಗೊಳಗಾದ ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ಲಸಿಕಾ ಅಭಿಯಾನವನ್ನು ಹೆಚ್ಚಿಸಲು ಯೋಜಿಸಿದ್ದರಿಂದ ತೀವ್ರ ಲಸಿಕೆ ಕೊರತೆ ಎದುರಾಗಿದೆ.

“ಈಗ ಅವರು ದಿನಕ್ಕೆ ಎರಡು ಲಕ್ಷದವರೆಗೆ ಲಸಿಕೆ ಹಾಕಲು ಹೇಳುತ್ತಾರೆ … ನಾನು ಅದನ್ನು ಮಾಡಿದರೆ, ನನಗೆ ಒಂದೂವರೆ ದಿನಗಳ ಪೂರೈಕೆಗೆ ಆಗುವಷ್ಟು ಲಸಿಕೆ ಮಾತ್ರ ಇದೆ” ಎಂದು ಸಿಂಗ್ ಹೇಳಿದರು.

ಲಸಿಕಾ ಅಭಿಯಾನದಲ್ಲಿ ಆದ್ಯತೆ ನೀಡಬೇಕಾದ ನಿರ್ದಿಷ್ಟ ಗುಂಪುಗಳನ್ನು ನಿರ್ಧರಿಸಲು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಅವಕಾಶ ನೀಡಬೇಕು ಎಂದು ಅಮರಿಂದರ್ ಸಿಂಗ್ ಒತ್ತಾಯಿಸಿದರು.

“ಅದನ್ನು ನಿರ್ಧರಿಸಲು ರಾಜ್ಯಗಳಿಗೆ ಬಿಡಿ. ದೆಹಲಿಗಿಂತ ನಮಗೆ ಬೇರೆ ಸಮಸ್ಯೆ ಇರಬಹುದು. ದೆಹಲಿ ಸಮಸ್ಯೆ ಮಹಾರಾಷ್ಟ್ರಕ್ಕಿಂತ ಭಿನ್ನವಾಗಿರಬಹುದು. ಕೇರಳದ ಸಮಸ್ಯೆಯೇ ಬೇರೆ ಇರಬಹುದು. ಲಸಿಕೆ ಬಳಕೆಯ ನಿರ್ಧಾರವನ್ನು ರಾಜ್ಯಗಳೇ ಮಾಡಿಕೊಳ್ಳೋಣ” ಎಂದು ಅವರು ಹೇಳಿದರು.

ಪ್ರಸ್ತುತ, ಕೇಂದ್ರವು 45 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ವ್ಯಾಕ್ಸಿನೇಷನ್ ಮಾಡಲು ಅನುಮತಿಸುತ್ತದೆ. ಮಹಾರಾಷ್ಟ್ರ ಮತ್ತು ದೆಹಲಿ ಸೇರಿದಂತೆ ಹಲವಾರು ರಾಜ್ಯಗಳು ಲಸಿಕಾ ಅಭಿಯಾನವನ್ನು ಇತರ ವಯೋಮಾನದವರಿಗೂ ತೆರೆಯುವಂತೆ ಕೇಂದ್ರವನ್ನು ಒತ್ತಾಯಿಸಿವೆ.
ಎರಡನೇ ಕೋವಿಡ್ ಅಲೆಯಿಂದ ತತ್ತರಿಸಿದ ಭಾರತವು ಸತತ ಮೂರು ದಿನಗಳಿಂದ ದೈನಿಕ 2 ಲಕ್ಷಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳನ್ನು ಮತ್ತು ದೈನಿಕ 1000 ಕ್ಕೂ ಹೆಚ್ಚು ಸಾವುಗಳನ್ನು ವರದಿ ಮಾಡಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಶೇಕಡಾ 86 ರಷ್ಟು ಸಾವುಗಳು ಸಂಭವಿಸಿದ 10 ರಾಜ್ಯಗಳಲ್ಲಿ ಪಂಜಾಬ್ ಕೂಡ ಒಂದು.


ಇದನ್ನೂ ಓದಿ: ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಕೊರತೆ: ಸರ್ಕಾರ ಮಾಡುತ್ತಿರುವುದೇನು? ಮಾಡಬೇಕಾದುದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...