Homeಕರೋನಾ ತಲ್ಲಣಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

- Advertisement -
- Advertisement -

ತನ್ನ ಜವಾಬ್ದಾರಿಯಲ್ಲಿ ಎಲ್ಲ ಆಯಾಮಗಳಲ್ಲೂ ವಿಫಲವಾಗಿರುವ ಕೇಂದ್ರದ ಮೋದಿ ಸರ್ಕಾರವು ಲಸಿಕೆಯ ಜವಾಬ್ದಾರಿಯಿಂದ ನುಣುಚಿಕೊಂಡು ರಾಜ್ಯ ಸರ್ಕಾರಗಳ ಮೇಲೆ ಜವಾಬ್ದಾರಿ ವರ್ಗಾಯಿಸಲು ನೋಡುತ್ತಿದೆ. ಹಾಗಾಗಿ ಅದು ಭರ್ಜರಿಯಾಗಿ ಘೋಷಿಸಿಕೊಂಡಿದ್ದ, ನಾಳೆ ಆರಂಭವಾಗಬೇಕಿದ್ದ 18-44 ವಯೋಮಾನದವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಬಹುತೇಕ ರಾಜ್ಯಗಳಲ್ಲಿ ಆರಂಭವಾಗುತ್ತಿಲ್ಲ.

ಇದಕ್ಕೆ ಕೇಂದ್ರದ ಲಸಿಕಾ ನೀತಿಯೇ ಕಾರಣ. ಲಸಿಕೆಗಳನ್ನು ಎಲ್ಲರಿಗೂ ಉಚಿತವಾಗಿ ನೀಡಬೇಕಿದ್ದ ಅದು, ಎರಡೂ ಲಸಿಕಾ ಕಂಪನಿಗಳ ಪರ ನಿಂತು, ರಾಜ್ಯಗಳು ಈಗ ದುಬಾರಿ ದರ ತೆತ್ತು ಲಸಿಕೆ ಖರೀದಿಸುವಂತೆ ಮಾಡಿದೆ. ಇದರಿಂದಾಗಿ ಬಹುಪಾಲು ರಾಜ್ಯಗಳು ತಮ್ಮ ನಾಗರೀಕರಿಗೆ ಉಚಿತ ಲಸಿಕೆ ನೀಡಲು ನಿರ್ಧರಿಸಿದ್ದು, ಕಂಪನಿಗಳಿಗೆ ಆರ್ಡರ್ ನೀಡಿವೆ. ಆದರೆ, ಕಂಪನಿಗಳ ಉತ್ಪಾದನಾ ಸಾಮಥ್ಯ ಈ ಅಗತ್ಯವನ್ನು ಪೂರೈಸುತ್ತಿಲ್ಲ. ಅಥವಾ ಅವು ಈ ಹಿಂದೆ ಮೋದಿಯವರ ಮೂಲಕ ವಿದೇಶಗಳಿಗೆ ಕಳಿಸಿದ 5 ಕೋಟಿ ಡೋಸ್ ರಫ್ತು ಈಗ ಕಾಡತೊಡಗಿದೆ. ಜೊತೆಗೆ ಅವು ಈಗ ಹೆಚ್ಚಿನ ದರ ಸಿಗುವ ಖಾಸಗಿ ಆಸ್ಪತ್ರೆಗಳು ಮತ್ತು ಕಾರ್ಪೋರೇಟ್ ಕಂನಿಗಳಿಗೆ ಲಸಿಕೆ ಪೂರೈಕೆಯಲ್ಲಿ ಆಸಕ್ತಿ ಹೊಂದಿದ್ದು ಅವುಗಳ ಅತಿಯಾಶೆಗೆ ತಕ್ಕಂತೆಯೇ ಇದೆ. ಇದಕ್ಕೆ ನೀರೆರಿದಿದ್ದು ಮೋದಿ ಸರ್ಕಾರ ಎನ್ನುವುದಕ್ಕಿಂತ ಮೋದಿ ಸಾಹೇಬರೇ ಅನ್ನುವುದು ಸೂಕ್ತ.

ಇವತ್ತು ಮುಂಜಾನೆ ರಾಜ್ಯ ಆರೋಗ್ಯ ಸಚಿವ ಡಾ,ಸುಧಾಕರ್, ‘ಲಸಿಕೆಗಳ ಕೊರತೆಯಿಂದ ನಾಳೆಯಿಂದ ನಡೆಯಬೇಕಿದ್ದ 18-44 ವಯೋಮಾನದವರಿಗೆ ಲಸಿಕೆ ನೀಡುವ ಅಭಿಯಾನ ಶುರು ಮಾಡುತ್ತಿಲ್ಲ. ಅಗತ್ಯ ಲಸಿಕೆ ದೊರೆತ ನಂತರ ಆರಂಭಿಸಲಾಗುವುದು’ ಎಂದಿದ್ದಾರೆ.
ಇದು ಕರ್ನಾಟಕದ ಸಮಸ್ಯೆ ಅಷ್ಟೇ ಅಲ್ಲ. ಇಲ್ಲಿಯಂತೆ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ, ಗುಜರಾತ್ ಸರ್ಕಾರಗಳು ಕೂಡ ಮೇ1 ರಿಂದ 18-44 ವಯೋಮಾನದವರಿಗೆ ಲಸಿಕೆ ಅಭಿಯಾನ ಶುರು ಮಾಡಲಾಗದು ಎಂದಿವೆ. ಬಿಜೆಪಿಯೇತರ ಸರ್ಕಾರಗಳಿರುವ ದೆಹಲಿ, ಮಹಾರಾಷ್ಟ್ರ ಕೇರಳ, ಪಂಜಾಬ್-ಇನ್ನೂ ಹಲವು ರಾಜ್ಯಗಳು ಇದೇ ರೀತಿ ಘೋಷಣೆ ಮಾಡಿವೆ.

ಮಹಾರಾಷ್ಟ್ರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ (ಭಾನುವಾರದವರೆಗೆ) 45 ಮೇಲ್ಪಟ್ಟವರಿಗೆ ನಡೆಸುತ್ತಿದ್ದ ಲಸಿಕಾ ಅಭಿಯಾನವನ್ನೂ ನಿಲ್ಲಿಸಲಾಗಿದೆ. ಏಕೆಂದರೆ ರಾಜ್ಯಗಳ ಬಳಿ ಲಸಿಕೆಗಳ ಸಂಗ್ರಹಣೆ ಅಗತ್ಯ ಪ್ರಮಾಣದಲ್ಲಿ ಇಲ್ಲ. ಹಾಗೆಯೇ ಅವು ಸೀರಂ ಮತ್ತು ಭಾರತ್ ಬಯೋಟೆಕ್ ಕಂಪನಿಗಳಿಗೆ ಆರ್ಡರ್ ಕಳಿಸಿ ಕಾಯುವ ಪರಿಸ್ಥಿತಿಯಿದೆ.
ಇದಕ್ಕೆ ಯಾರು ಕಾರಣ? ಮತ್ತೆ ಅದು ತಲುಪುವುದು ಮೋದಿ ಸರ್ಕಾರದ ಗೊಂದಲದ ನೀತಿಗಳಿಗೆ ಅಷ್ಟೇ ಅಲ್ಲ, ಅದರ ಕಾರ್ಪೋರೇಟ್ ಪರ ಒಲುವುಗಳಿಗೂ ಅದು ಸಾಕ್ಷಿಯಾಗಿದೆ.
ಲಸಿಕೆ ಅವ್ಯವಸ್ಥೆಗೆ ಕಾರಣಗಳೇನು? ಇಲ್ಲಿಯೂ ಕೆಲವರ ಹಿತಾಸಕ್ತಿ ಮುಖ್ಯವಾಗಿದೆಯೇ ಎಂಬುದನ್ನು ನೋಡೋಣ.

ಸಾಂಕ್ರಾಮಿಕ ಲಸಿಕೆ ಮಾರಾಟಕ್ಕೆ: ದೇಶದಲ್ಲೇ ಮೊದಲ ಸಲ…

ಮೊದಲನೆದಾಗಿ, ನಾಳೆ 18-45 ವಯೋಮಾನದವರಿಗೆ ಲಸಿಕಾ ಅಭಿಯಾನ ಚಾಲೂ ಮಾಡಲು ಆಗದ್ದಕ್ಕೆ ಮೋದಿ ಸರ್ಕಾರದ ನೀತಿಗಳೇ ಕಾರಣ. ಅದು ಭಾರತದಲ್ಲಿ ಲಸಿಕೆ ತಯಾರಿಕೆ ಆರಂಭವಾದಾಗಿನಿಂದ ತನ್ನ ಸಾಕು ಮೀಡಿಯಾಗಳನ್ನು ಬಳಸಿಕೊಂಡು, ಮೋದಿಯೇ ಲಸಿಕೆ ಕಂಡು ಹಿಡಿದರು ಎಂದು ಪರೋಕ್ಷವಾಗಿ ಅನಿಸುವಂತೆ ಪ್ರಸಾರ ಮಾಡಿಸುತ್ತ ಬಂದಿತು. ಅಲ್ಲದೇ ಉಚಿತ ಲಸಿಕೆ ನೀಡುವುದಾಗಿ ಚುನಾವಣಾ ಪ್ರಚಾರದಲ್ಲಿ, ಪ್ರಣಾಳಿಕೆಯಲ್ಲಿ ಘೋಷಿಸಲಾಯಿತು! ಕೋವಿಡ್ ಮೊದಲ ಅಲೆ ಸಂದರ್ಭದಲ್ಲೇ ಈ ಸರ್ಕಾರ ತರಾತುರಿಯಲ್ಲಿ ಆಗಸ್ಟ್ 15ರಂದು ಕೆಂಪುಕೋಟೆ ಮೇಲೆ ಮೋದಿಯವರ ಕಡೆಯಿಂದ ಲಸಿಕೆ ಉದ್ಘಾಟಿಸುವ ಹೀನಾತಿಹೀನ ಯೋಚನೆಯನ್ನೂ ಮಾಡಿತ್ತು.

ಟ್ರಯಲ್ಸ್‌ಗಳಿಲ್ಲದೇ ಹಾಗೆ ಮಾಡಿದರೆ ಕಟಕಟೆಯಲ್ಲಿ ನಿಲ್ಲಬೇಕಾಗುತ್ತದೆ ಎಂದು ಹೆದರಿದ ಕಂಪನಿಗಳು ಸಾಧ್ಯವಿಲ್ಲ ಎಂದವು.

ಎರಡನೆಯ ಸಮಸ್ಯೆ ಎಂದರೆ, ಭಾರತೀಯರೆಲ್ಲರಿಗೂ ಈ ಎರಡು ಕಂಪನಿಗಳೇ ತ್ವರಿತವಾಗಿ ಲಸಿಕೆ ಉತ್ಪಾದನೆ ಮಾಡುತ್ತವೆ ಎಂಬ ಹುಸಿ ನಂಬಿಕೆಯಲ್ಲಿ ಕಾಲ ಕಳೆದಿದ್ದು.

ಎರಡನೇ ಅಲೆ ಶುರುವಾಗುವ ಸಂದರ್ಭದಲ್ಲಿ ಚುನಾವಣೆಗಳತ್ತಲೇ ಎಲ್ಲ ಗಮನ ಕೇಂದ್ರಿಕರಿಸಿದ ಸರ್ಕಾರ 60 ದಾಟಿದವರಿಗೆ, 45 ದಾಟಿದವರಿಗೆ ಎಂದು ಎರಡು ಹಂತಗಳ ಲಸಿಕಾ ಅಭಿಯಾನ ಮಾಡಿತು. ಆದರೆ ಈಗ ಒಂದು ಡೋಸ್ ಲಸಿಕೆ ಪಡೆದವರಿಗೆ ಎರಡನೇ ಡೋಸ್ ಕೊಡುವುದು ಕಷ್ಟವಿದೆ. ಈಗ ಕೇಂದ್ರ ತನ್ನ ಸಾಂವಿಧಾನಿಕ ಜವಾಬ್ದಾರಿಯಿಂದ ನುಣುಚಿಕೊಂಡು, ರಾಜ್ಯಗಳಿಗೆ ಲಸಿಕೆ ಖರೀದಿಸಿಕೊಳ್ಳಿ ಎನ್ನುವ ಮೂಲಕ ಕಾರ್ಪೋರೇಟ್ ಔಷಧಿ ಕಂಪನಿಗಳ ಪರ ನಿಂತಿದೆ.

ಈಗ ಬಿಜೆಪಿ ಆಡಳಿತ ಇರುವ ರಾಜ್ಯಗಳೇ ನಾಳೆಯಿಂದ 3ನೆ ಹಂತದ ಲಸಿಕಾ ಅಭಿಯಾನ ಶುರು ಮಾಡಲಾಗುವುದಿಲ್ಲ ಎಂದು ಘೋಷಿಸಿವೆ. ಅಂದರೆ ನಿಗದಿತ ಅವಧಿಯಲ್ಲಿ ಹಣ ಪಾವತಿಸಿದರೂ ಲಸಿಕೆ ಲಭ್ಯವಾಗುತ್ತಿಲ್ಲ! ಮತ್ತೆ ಇದಕ್ಕೆಲ್ಲ ಯಾರು ಕಾರಣ, ಹೇಳಬೇಕೆ ಅದನ್ನೂ…. ಬೇಡ ಅಲ್ಲವೇ?

ತಜ್ಞರ ಮಾತಿಗೆ ಮನ್ನಣೆ ಇಲ್ಲ!

ಎಲ್ಲರಿಗೂ ಉಚಿತ ಲಸಿಕೆ ಒದಗಿಸುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ರಾಹುಲ್ ಗಾಂಧಿ ಹೇಳಿದ್ದು ಈ ಸರ್ಕಾರಕ್ಕೆ ಅಪಥ್ಯದ ವಿಷಯ. ಆದರೆ ತಜ್ಞರು ಹೇಳಿದ ಮಾತಿಗೂ ಕಿವಿಗೊಡದೇ ಲಸಿಕೆಗಳಿಗೆ ಮೂರು ಬಗೆಯ ದರಗಳನ್ನು ವಿಧಿಸಲು ಕಂಪನಿಗಳಿಗೆ ಮೋದಿ ಸರ್ಕಾರ ಅವಕಾಶ ನೀಡಿತು.

ಕೇಂದ್ರ ಆರೋಗ್ಯ ಇಲಾಖೆಯ ನಿವೃತ್ತ ಕಾರ್ಯದರ್ಶಿ ಕೆ. ಸುಜಾತಾರಾವ್‌ರಂತಹ ಆಡಳಿತಾತ್ಮಕ ಅನುಭವ ಇರುವವರು, ಸಾಂಕ್ರಾಮಿಕ ರೋಗ ಶಾಸ್ತ್ರಜ್ಞರು-ಹೀಗೆ ಬಹುತೇಕರೆಲ್ಲ ಎಲ್ಲರಿಗೂ ಉಚಿತ ಲಸಿಕೆ ನೀಡಬೇಕು ಎಂದೇ ಆಗ್ರಹಿಸಿದ್ದಾರೆ.

ಈಗ ಲಸಿಕಾ ಅಭಿಯಾನ ಶುರುವಾಗಿ 100 ದಿನಗಳು ದಾಟಿವೆ. 14 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ, ಅವರಲ್ಲಿ ಕೇವಲ ಶೇ.10 ಮಾತ್ರ ಎರಡೂ ಡೋಸ್ ಪಡೆದಿದ್ದಾರೆ.
ಹೀಗಿರುವಾಗ, ಮೇ 1ರಿಂದ ಮೂರನೇ ಹಂತದ ಲಸಿಕಾ ಅಭಿಯಾನ ಘೋಷಿಸುವ ಅಗತ್ಯವಿತ್ತೇ? ನಿಜ, ಆದಷ್ಟೂ ಬೇಗ ಆಗಬೇಕು, ಆದರೆ ನಮ್ಮ ಲಸಿಕಾ ಕಂಪನಿಗಳಿಗೆ ಅಷ್ಟು ಉತ್ಪಾದನಾ ಸಾಮರ್ಥ್ಯವೇ ಇಲ್ಲದಿರುವಾಗ? ವಿದೇಶಿ ಲಸಿಕೆಗಳನ್ನು ತರಿಸುವ ನಿರ್ಧಾರವನ್ನೂ ಚುನಾವಣೆಯ ಅಂತ್ಯದಲ್ಲಿ ಬಿಡುವಾದಾಗ ತೆಗೆದುಕೊಳ್ಳಲಾಗಿತು.

ಕೇಂದ್ರ ಬಜೆಟ್ 2021-22 ರಲ್ಲಿ ಲಸಿಕಾ ಅಭಿಯಾನಕ್ಕೆಂದೇ 35,000 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಆದರೆ, ಕೇವಲ ಶೇ.10 ಜನಸಂಖ್ಯೆಗೆ ಲಸಿಕೆ ಹಾಕಿದ ನಂತರ, ಕೇಂದ್ರವು ಏಕೆ ಹಿಂದೆ ಸರಿಯಿತು, ರಾಜ್ಯಗಳ ಮೇಲೆ ಏಕೆ ಭಾರ ಹಾಕಿತು? ಬಜೆಟ್ ಅನುದಾನ ಮತ್ತು ಪಿಎಂ ಕೇರ್ಸ್ ಹಣ ಬಳಸಿ ವಿದೇಶಿ ಲಸಿಕೆಗಳನ್ನು ತುರ್ತಾಗಿ ತರಿಸಿಕೊಳ್ಳಲಿಲ್ಲವೇಕೆ? -ಹೀಗೆ ಕಾಂಗ್ರೆಸ್, ಆಮ್ ಆದ್ಮಿ, ಎಡಪಕ್ಷಗಳು, ತಜ್ಞರು ಮತ್ತು ಇತ್ತೀಚೆಗೆ ಪ್ರಜ್ಞಾವಂತ ಜನರು ಕೇಳುತ್ತಿರುವ ಪ್ರಶ್ನೆಗಳಿಗೆ ಮೋದಿ ಸರ್ಕಾರದ ಬಳಿ ಉತ್ತರವೇ ಇಲ್ಲ.

ಅದು ಒಕ್ಕೂಟ ವ್ಯವಸ್ಥೆಗೆ ಬಲವಾದ ಏಟು ಕೊಟ್ಟಿದೆ, ಬಂಡವಾಳಶಾಹಿಗಳ ಹಿಂಬಾಲಕನಂತೆ ವರ್ತಿಸುವ ಮೂಲಕ ಒಕ್ಕೂಟದ ಎಲ್ಲ ರಾಜ್ಯಗಳಿಗೂ, ಆ ಮೂಲಕ ಎಲ್ಲ ದೇಶವಾಸಿಗಳಿಗೂ ಮಹಾದ್ರೋಹ ಬಗೆದಿದೆ ಅಲ್ಲವೇ?

ದೇಶದಲ್ಲಿ ಮೊದಲ ಬಾರಿಗೆ ಸಾಂಕ್ರಾಮಿಕ ರೋಗದ ಲಸಿಕೆಯನ್ನು ಮಾರಾಟಕ್ಕಿಟ್ಟ, ಆ ಮೂಲಕ ಔಷಧಿ ಕಂಪನಿಗಳ ದಲ್ಲಾಳಿಯಂತೆ ವರ್ತಿಸುತ್ತ, ರಾಜ್ಯ ಸರ್ಕಾರಗಳನ್ನು ಇಕ್ಕಟ್ಟಿಗೆ ಸಿಲುಕಿಸಿದ ಏಕೈಕ ಪ್ರಧಾನಿ ಎಂದು ಇತಿಹಾಸದಲ್ಲಿ ಮೋದಿ ಹೆಸರು ಉಳಿಯಲಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...