Homeಕರೋನಾ ತಲ್ಲಣಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

- Advertisement -
- Advertisement -

ತನ್ನ ಜವಾಬ್ದಾರಿಯಲ್ಲಿ ಎಲ್ಲ ಆಯಾಮಗಳಲ್ಲೂ ವಿಫಲವಾಗಿರುವ ಕೇಂದ್ರದ ಮೋದಿ ಸರ್ಕಾರವು ಲಸಿಕೆಯ ಜವಾಬ್ದಾರಿಯಿಂದ ನುಣುಚಿಕೊಂಡು ರಾಜ್ಯ ಸರ್ಕಾರಗಳ ಮೇಲೆ ಜವಾಬ್ದಾರಿ ವರ್ಗಾಯಿಸಲು ನೋಡುತ್ತಿದೆ. ಹಾಗಾಗಿ ಅದು ಭರ್ಜರಿಯಾಗಿ ಘೋಷಿಸಿಕೊಂಡಿದ್ದ, ನಾಳೆ ಆರಂಭವಾಗಬೇಕಿದ್ದ 18-44 ವಯೋಮಾನದವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಬಹುತೇಕ ರಾಜ್ಯಗಳಲ್ಲಿ ಆರಂಭವಾಗುತ್ತಿಲ್ಲ.

ಇದಕ್ಕೆ ಕೇಂದ್ರದ ಲಸಿಕಾ ನೀತಿಯೇ ಕಾರಣ. ಲಸಿಕೆಗಳನ್ನು ಎಲ್ಲರಿಗೂ ಉಚಿತವಾಗಿ ನೀಡಬೇಕಿದ್ದ ಅದು, ಎರಡೂ ಲಸಿಕಾ ಕಂಪನಿಗಳ ಪರ ನಿಂತು, ರಾಜ್ಯಗಳು ಈಗ ದುಬಾರಿ ದರ ತೆತ್ತು ಲಸಿಕೆ ಖರೀದಿಸುವಂತೆ ಮಾಡಿದೆ. ಇದರಿಂದಾಗಿ ಬಹುಪಾಲು ರಾಜ್ಯಗಳು ತಮ್ಮ ನಾಗರೀಕರಿಗೆ ಉಚಿತ ಲಸಿಕೆ ನೀಡಲು ನಿರ್ಧರಿಸಿದ್ದು, ಕಂಪನಿಗಳಿಗೆ ಆರ್ಡರ್ ನೀಡಿವೆ. ಆದರೆ, ಕಂಪನಿಗಳ ಉತ್ಪಾದನಾ ಸಾಮಥ್ಯ ಈ ಅಗತ್ಯವನ್ನು ಪೂರೈಸುತ್ತಿಲ್ಲ. ಅಥವಾ ಅವು ಈ ಹಿಂದೆ ಮೋದಿಯವರ ಮೂಲಕ ವಿದೇಶಗಳಿಗೆ ಕಳಿಸಿದ 5 ಕೋಟಿ ಡೋಸ್ ರಫ್ತು ಈಗ ಕಾಡತೊಡಗಿದೆ. ಜೊತೆಗೆ ಅವು ಈಗ ಹೆಚ್ಚಿನ ದರ ಸಿಗುವ ಖಾಸಗಿ ಆಸ್ಪತ್ರೆಗಳು ಮತ್ತು ಕಾರ್ಪೋರೇಟ್ ಕಂನಿಗಳಿಗೆ ಲಸಿಕೆ ಪೂರೈಕೆಯಲ್ಲಿ ಆಸಕ್ತಿ ಹೊಂದಿದ್ದು ಅವುಗಳ ಅತಿಯಾಶೆಗೆ ತಕ್ಕಂತೆಯೇ ಇದೆ. ಇದಕ್ಕೆ ನೀರೆರಿದಿದ್ದು ಮೋದಿ ಸರ್ಕಾರ ಎನ್ನುವುದಕ್ಕಿಂತ ಮೋದಿ ಸಾಹೇಬರೇ ಅನ್ನುವುದು ಸೂಕ್ತ.

ಇವತ್ತು ಮುಂಜಾನೆ ರಾಜ್ಯ ಆರೋಗ್ಯ ಸಚಿವ ಡಾ,ಸುಧಾಕರ್, ‘ಲಸಿಕೆಗಳ ಕೊರತೆಯಿಂದ ನಾಳೆಯಿಂದ ನಡೆಯಬೇಕಿದ್ದ 18-44 ವಯೋಮಾನದವರಿಗೆ ಲಸಿಕೆ ನೀಡುವ ಅಭಿಯಾನ ಶುರು ಮಾಡುತ್ತಿಲ್ಲ. ಅಗತ್ಯ ಲಸಿಕೆ ದೊರೆತ ನಂತರ ಆರಂಭಿಸಲಾಗುವುದು’ ಎಂದಿದ್ದಾರೆ.
ಇದು ಕರ್ನಾಟಕದ ಸಮಸ್ಯೆ ಅಷ್ಟೇ ಅಲ್ಲ. ಇಲ್ಲಿಯಂತೆ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ, ಗುಜರಾತ್ ಸರ್ಕಾರಗಳು ಕೂಡ ಮೇ1 ರಿಂದ 18-44 ವಯೋಮಾನದವರಿಗೆ ಲಸಿಕೆ ಅಭಿಯಾನ ಶುರು ಮಾಡಲಾಗದು ಎಂದಿವೆ. ಬಿಜೆಪಿಯೇತರ ಸರ್ಕಾರಗಳಿರುವ ದೆಹಲಿ, ಮಹಾರಾಷ್ಟ್ರ ಕೇರಳ, ಪಂಜಾಬ್-ಇನ್ನೂ ಹಲವು ರಾಜ್ಯಗಳು ಇದೇ ರೀತಿ ಘೋಷಣೆ ಮಾಡಿವೆ.

ಮಹಾರಾಷ್ಟ್ರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ (ಭಾನುವಾರದವರೆಗೆ) 45 ಮೇಲ್ಪಟ್ಟವರಿಗೆ ನಡೆಸುತ್ತಿದ್ದ ಲಸಿಕಾ ಅಭಿಯಾನವನ್ನೂ ನಿಲ್ಲಿಸಲಾಗಿದೆ. ಏಕೆಂದರೆ ರಾಜ್ಯಗಳ ಬಳಿ ಲಸಿಕೆಗಳ ಸಂಗ್ರಹಣೆ ಅಗತ್ಯ ಪ್ರಮಾಣದಲ್ಲಿ ಇಲ್ಲ. ಹಾಗೆಯೇ ಅವು ಸೀರಂ ಮತ್ತು ಭಾರತ್ ಬಯೋಟೆಕ್ ಕಂಪನಿಗಳಿಗೆ ಆರ್ಡರ್ ಕಳಿಸಿ ಕಾಯುವ ಪರಿಸ್ಥಿತಿಯಿದೆ.
ಇದಕ್ಕೆ ಯಾರು ಕಾರಣ? ಮತ್ತೆ ಅದು ತಲುಪುವುದು ಮೋದಿ ಸರ್ಕಾರದ ಗೊಂದಲದ ನೀತಿಗಳಿಗೆ ಅಷ್ಟೇ ಅಲ್ಲ, ಅದರ ಕಾರ್ಪೋರೇಟ್ ಪರ ಒಲುವುಗಳಿಗೂ ಅದು ಸಾಕ್ಷಿಯಾಗಿದೆ.
ಲಸಿಕೆ ಅವ್ಯವಸ್ಥೆಗೆ ಕಾರಣಗಳೇನು? ಇಲ್ಲಿಯೂ ಕೆಲವರ ಹಿತಾಸಕ್ತಿ ಮುಖ್ಯವಾಗಿದೆಯೇ ಎಂಬುದನ್ನು ನೋಡೋಣ.

ಸಾಂಕ್ರಾಮಿಕ ಲಸಿಕೆ ಮಾರಾಟಕ್ಕೆ: ದೇಶದಲ್ಲೇ ಮೊದಲ ಸಲ…

ಮೊದಲನೆದಾಗಿ, ನಾಳೆ 18-45 ವಯೋಮಾನದವರಿಗೆ ಲಸಿಕಾ ಅಭಿಯಾನ ಚಾಲೂ ಮಾಡಲು ಆಗದ್ದಕ್ಕೆ ಮೋದಿ ಸರ್ಕಾರದ ನೀತಿಗಳೇ ಕಾರಣ. ಅದು ಭಾರತದಲ್ಲಿ ಲಸಿಕೆ ತಯಾರಿಕೆ ಆರಂಭವಾದಾಗಿನಿಂದ ತನ್ನ ಸಾಕು ಮೀಡಿಯಾಗಳನ್ನು ಬಳಸಿಕೊಂಡು, ಮೋದಿಯೇ ಲಸಿಕೆ ಕಂಡು ಹಿಡಿದರು ಎಂದು ಪರೋಕ್ಷವಾಗಿ ಅನಿಸುವಂತೆ ಪ್ರಸಾರ ಮಾಡಿಸುತ್ತ ಬಂದಿತು. ಅಲ್ಲದೇ ಉಚಿತ ಲಸಿಕೆ ನೀಡುವುದಾಗಿ ಚುನಾವಣಾ ಪ್ರಚಾರದಲ್ಲಿ, ಪ್ರಣಾಳಿಕೆಯಲ್ಲಿ ಘೋಷಿಸಲಾಯಿತು! ಕೋವಿಡ್ ಮೊದಲ ಅಲೆ ಸಂದರ್ಭದಲ್ಲೇ ಈ ಸರ್ಕಾರ ತರಾತುರಿಯಲ್ಲಿ ಆಗಸ್ಟ್ 15ರಂದು ಕೆಂಪುಕೋಟೆ ಮೇಲೆ ಮೋದಿಯವರ ಕಡೆಯಿಂದ ಲಸಿಕೆ ಉದ್ಘಾಟಿಸುವ ಹೀನಾತಿಹೀನ ಯೋಚನೆಯನ್ನೂ ಮಾಡಿತ್ತು.

ಟ್ರಯಲ್ಸ್‌ಗಳಿಲ್ಲದೇ ಹಾಗೆ ಮಾಡಿದರೆ ಕಟಕಟೆಯಲ್ಲಿ ನಿಲ್ಲಬೇಕಾಗುತ್ತದೆ ಎಂದು ಹೆದರಿದ ಕಂಪನಿಗಳು ಸಾಧ್ಯವಿಲ್ಲ ಎಂದವು.

ಎರಡನೆಯ ಸಮಸ್ಯೆ ಎಂದರೆ, ಭಾರತೀಯರೆಲ್ಲರಿಗೂ ಈ ಎರಡು ಕಂಪನಿಗಳೇ ತ್ವರಿತವಾಗಿ ಲಸಿಕೆ ಉತ್ಪಾದನೆ ಮಾಡುತ್ತವೆ ಎಂಬ ಹುಸಿ ನಂಬಿಕೆಯಲ್ಲಿ ಕಾಲ ಕಳೆದಿದ್ದು.

ಎರಡನೇ ಅಲೆ ಶುರುವಾಗುವ ಸಂದರ್ಭದಲ್ಲಿ ಚುನಾವಣೆಗಳತ್ತಲೇ ಎಲ್ಲ ಗಮನ ಕೇಂದ್ರಿಕರಿಸಿದ ಸರ್ಕಾರ 60 ದಾಟಿದವರಿಗೆ, 45 ದಾಟಿದವರಿಗೆ ಎಂದು ಎರಡು ಹಂತಗಳ ಲಸಿಕಾ ಅಭಿಯಾನ ಮಾಡಿತು. ಆದರೆ ಈಗ ಒಂದು ಡೋಸ್ ಲಸಿಕೆ ಪಡೆದವರಿಗೆ ಎರಡನೇ ಡೋಸ್ ಕೊಡುವುದು ಕಷ್ಟವಿದೆ. ಈಗ ಕೇಂದ್ರ ತನ್ನ ಸಾಂವಿಧಾನಿಕ ಜವಾಬ್ದಾರಿಯಿಂದ ನುಣುಚಿಕೊಂಡು, ರಾಜ್ಯಗಳಿಗೆ ಲಸಿಕೆ ಖರೀದಿಸಿಕೊಳ್ಳಿ ಎನ್ನುವ ಮೂಲಕ ಕಾರ್ಪೋರೇಟ್ ಔಷಧಿ ಕಂಪನಿಗಳ ಪರ ನಿಂತಿದೆ.

ಈಗ ಬಿಜೆಪಿ ಆಡಳಿತ ಇರುವ ರಾಜ್ಯಗಳೇ ನಾಳೆಯಿಂದ 3ನೆ ಹಂತದ ಲಸಿಕಾ ಅಭಿಯಾನ ಶುರು ಮಾಡಲಾಗುವುದಿಲ್ಲ ಎಂದು ಘೋಷಿಸಿವೆ. ಅಂದರೆ ನಿಗದಿತ ಅವಧಿಯಲ್ಲಿ ಹಣ ಪಾವತಿಸಿದರೂ ಲಸಿಕೆ ಲಭ್ಯವಾಗುತ್ತಿಲ್ಲ! ಮತ್ತೆ ಇದಕ್ಕೆಲ್ಲ ಯಾರು ಕಾರಣ, ಹೇಳಬೇಕೆ ಅದನ್ನೂ…. ಬೇಡ ಅಲ್ಲವೇ?

ತಜ್ಞರ ಮಾತಿಗೆ ಮನ್ನಣೆ ಇಲ್ಲ!

ಎಲ್ಲರಿಗೂ ಉಚಿತ ಲಸಿಕೆ ಒದಗಿಸುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ರಾಹುಲ್ ಗಾಂಧಿ ಹೇಳಿದ್ದು ಈ ಸರ್ಕಾರಕ್ಕೆ ಅಪಥ್ಯದ ವಿಷಯ. ಆದರೆ ತಜ್ಞರು ಹೇಳಿದ ಮಾತಿಗೂ ಕಿವಿಗೊಡದೇ ಲಸಿಕೆಗಳಿಗೆ ಮೂರು ಬಗೆಯ ದರಗಳನ್ನು ವಿಧಿಸಲು ಕಂಪನಿಗಳಿಗೆ ಮೋದಿ ಸರ್ಕಾರ ಅವಕಾಶ ನೀಡಿತು.

ಕೇಂದ್ರ ಆರೋಗ್ಯ ಇಲಾಖೆಯ ನಿವೃತ್ತ ಕಾರ್ಯದರ್ಶಿ ಕೆ. ಸುಜಾತಾರಾವ್‌ರಂತಹ ಆಡಳಿತಾತ್ಮಕ ಅನುಭವ ಇರುವವರು, ಸಾಂಕ್ರಾಮಿಕ ರೋಗ ಶಾಸ್ತ್ರಜ್ಞರು-ಹೀಗೆ ಬಹುತೇಕರೆಲ್ಲ ಎಲ್ಲರಿಗೂ ಉಚಿತ ಲಸಿಕೆ ನೀಡಬೇಕು ಎಂದೇ ಆಗ್ರಹಿಸಿದ್ದಾರೆ.

ಈಗ ಲಸಿಕಾ ಅಭಿಯಾನ ಶುರುವಾಗಿ 100 ದಿನಗಳು ದಾಟಿವೆ. 14 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ, ಅವರಲ್ಲಿ ಕೇವಲ ಶೇ.10 ಮಾತ್ರ ಎರಡೂ ಡೋಸ್ ಪಡೆದಿದ್ದಾರೆ.
ಹೀಗಿರುವಾಗ, ಮೇ 1ರಿಂದ ಮೂರನೇ ಹಂತದ ಲಸಿಕಾ ಅಭಿಯಾನ ಘೋಷಿಸುವ ಅಗತ್ಯವಿತ್ತೇ? ನಿಜ, ಆದಷ್ಟೂ ಬೇಗ ಆಗಬೇಕು, ಆದರೆ ನಮ್ಮ ಲಸಿಕಾ ಕಂಪನಿಗಳಿಗೆ ಅಷ್ಟು ಉತ್ಪಾದನಾ ಸಾಮರ್ಥ್ಯವೇ ಇಲ್ಲದಿರುವಾಗ? ವಿದೇಶಿ ಲಸಿಕೆಗಳನ್ನು ತರಿಸುವ ನಿರ್ಧಾರವನ್ನೂ ಚುನಾವಣೆಯ ಅಂತ್ಯದಲ್ಲಿ ಬಿಡುವಾದಾಗ ತೆಗೆದುಕೊಳ್ಳಲಾಗಿತು.

ಕೇಂದ್ರ ಬಜೆಟ್ 2021-22 ರಲ್ಲಿ ಲಸಿಕಾ ಅಭಿಯಾನಕ್ಕೆಂದೇ 35,000 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಆದರೆ, ಕೇವಲ ಶೇ.10 ಜನಸಂಖ್ಯೆಗೆ ಲಸಿಕೆ ಹಾಕಿದ ನಂತರ, ಕೇಂದ್ರವು ಏಕೆ ಹಿಂದೆ ಸರಿಯಿತು, ರಾಜ್ಯಗಳ ಮೇಲೆ ಏಕೆ ಭಾರ ಹಾಕಿತು? ಬಜೆಟ್ ಅನುದಾನ ಮತ್ತು ಪಿಎಂ ಕೇರ್ಸ್ ಹಣ ಬಳಸಿ ವಿದೇಶಿ ಲಸಿಕೆಗಳನ್ನು ತುರ್ತಾಗಿ ತರಿಸಿಕೊಳ್ಳಲಿಲ್ಲವೇಕೆ? -ಹೀಗೆ ಕಾಂಗ್ರೆಸ್, ಆಮ್ ಆದ್ಮಿ, ಎಡಪಕ್ಷಗಳು, ತಜ್ಞರು ಮತ್ತು ಇತ್ತೀಚೆಗೆ ಪ್ರಜ್ಞಾವಂತ ಜನರು ಕೇಳುತ್ತಿರುವ ಪ್ರಶ್ನೆಗಳಿಗೆ ಮೋದಿ ಸರ್ಕಾರದ ಬಳಿ ಉತ್ತರವೇ ಇಲ್ಲ.

ಅದು ಒಕ್ಕೂಟ ವ್ಯವಸ್ಥೆಗೆ ಬಲವಾದ ಏಟು ಕೊಟ್ಟಿದೆ, ಬಂಡವಾಳಶಾಹಿಗಳ ಹಿಂಬಾಲಕನಂತೆ ವರ್ತಿಸುವ ಮೂಲಕ ಒಕ್ಕೂಟದ ಎಲ್ಲ ರಾಜ್ಯಗಳಿಗೂ, ಆ ಮೂಲಕ ಎಲ್ಲ ದೇಶವಾಸಿಗಳಿಗೂ ಮಹಾದ್ರೋಹ ಬಗೆದಿದೆ ಅಲ್ಲವೇ?

ದೇಶದಲ್ಲಿ ಮೊದಲ ಬಾರಿಗೆ ಸಾಂಕ್ರಾಮಿಕ ರೋಗದ ಲಸಿಕೆಯನ್ನು ಮಾರಾಟಕ್ಕಿಟ್ಟ, ಆ ಮೂಲಕ ಔಷಧಿ ಕಂಪನಿಗಳ ದಲ್ಲಾಳಿಯಂತೆ ವರ್ತಿಸುತ್ತ, ರಾಜ್ಯ ಸರ್ಕಾರಗಳನ್ನು ಇಕ್ಕಟ್ಟಿಗೆ ಸಿಲುಕಿಸಿದ ಏಕೈಕ ಪ್ರಧಾನಿ ಎಂದು ಇತಿಹಾಸದಲ್ಲಿ ಮೋದಿ ಹೆಸರು ಉಳಿಯಲಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...