Homeಕರೋನಾ ತಲ್ಲಣವಿದೇಶಕ್ಕೆ ತೆರಳುವವರಿಗೆ ಲಸಿಕೆ ಆದ್ಯತೆ: ಕೊವ್ಯಾಕ್ಸಿನ್ ಹಾಕಿಸಿಕೊಂಡವರು ವಿದೇಶಕ್ಕೆ ಹೋಗಲಾಗದು!

ವಿದೇಶಕ್ಕೆ ತೆರಳುವವರಿಗೆ ಲಸಿಕೆ ಆದ್ಯತೆ: ಕೊವ್ಯಾಕ್ಸಿನ್ ಹಾಕಿಸಿಕೊಂಡವರು ವಿದೇಶಕ್ಕೆ ಹೋಗಲಾಗದು!

- Advertisement -
- Advertisement -

18-44ರ ವಯೋಮಾನದಲ್ಲಿ ಲಸಿಕೆ ಪಡೆಯುವವರಲ್ಲಿ ವಿದೇಶಕ್ಕೆ ಉದ್ಯೋಗ ಮತ್ತು ವಿದ್ಯಾಭ್ಯಾಸಕ್ಕೆ ತೆರಳುವವರನ್ನು ಆದ್ಯತಾ ಪಟ್ಟಿಗೆ ಸೇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿಕೆ ಉಲ್ಲೇಖಿಸಿ ಇಂದು ಪ್ರಜಾವಾಣಿ ವರದಿ ಮಾಡಿದೆ.

ಆದರೆ ಅವರು ಯಾವ ಲಸಿಕೆ ಪಡೆಯಬೇಕೆಂದು ಎಲ್ಲೂ ಹೇಳಿಲ್ಲ. ಕೊವ್ಯಾಕ್ಸಿನ್ ಲಸಿಕೆ ಪಡೆದು ಸರ್ಟಿಫಿಕೇಟ್ ಪಡೆದರೆ ಅದಕ್ಕೆ ಬಹುತೇಕ ದೇಶಗಳಲ್ಲಿ ಮಾನ್ಯತೆ ಇಲ್ಲ.
ಹಾಗೆ ನೋಡಿದರೆ ತರಾತುರಿಯಲ್ಲಿ ಕೇಂದ್ರ ಸರ್ಕಾರ ಬಳಕೆಗೆ ಅನುಮತಿ ನೀಡಿದ ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್‌ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ಇನ್ನು ಸಿಕ್ಕಿಲ್ಲ. ಎಷ್ಟೋ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ಕೊವ್ಯಾಕ್ಸಿನ್ ಬದಲು ಕೋವಿಶೀಲ್ಡ್ ಹಾಕಿಸಿಕೊಳ್ಳಲು ಆದ್ಯತೆ ನೀಡುತ್ತಾರೆ ಎಂಬ ವರದಿಗಳು ಬರುತ್ತಲೇ ಇವೆ.

WHO ತನ್ನ ಅನುಮೋದಿತ ಪಟ್ಟಿಯಲ್ಲಿ ಫಿಜರ್, ಮಾಡೆರ್ನಾ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಹೊಂದಿದೆ. ಆದರೆ ಕೊವ್ಯಾಕ್ಸಿನ್ ಆ ಪಟ್ಟಿಯಲ್ಲಿ ಇಲ್ಲ. ಪಟ್ಟಿಯಲ್ಲಿ ಸೇರಿಸಲು “ಹೆಚ್ಚಿನ ಮಾಹಿತಿ, ಪುರಾವೆ ಅಗತ್ಯವಿದೆ” ಎಂದು WHO ಹೇಳುತ್ತದೆ.

ದೀರ್ಘಕಾಲದ ಕೋವಿಡ್ ನಿರ್ಬಂಧಗಳ ನಂತರ ಹಲವಾರು ದೇಶಗಳು ಪ್ರಯಾಣ ಮತ್ತು ಪ್ರವಾಸೋದ್ಯಮವನ್ನು ಕ್ರಮೇಣ ಮರುಪ್ರಾರಂಭಿಸಲು ತಯಾರಿ ನಡೆಸುತ್ತಿದ್ದಂತೆ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅನೇಕ ದೇಶಗಳು ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಅನ್ನು ಅನುಮೋದಿತ ಲಸಿಕೆಗಳಲ್ಲಿ ಪಟ್ಟಿ ಮಾಡದಿರುವ ಬಗ್ಗೆ ವಿದೇಶಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಲ್ಲಿ ಆತಂಕ ಶುರುವಾಗಿದೆ ಎಂದು ಮೂರು ದಿನದ ಹಿಂದೆ ಎನ್‌ಡಿಟಿವಿ ವರದಿ ಮಾಡಿದೆ.

ಈ ಪೈಕಿ ಈಗಾಗಲೇ ಕೆಲವರು ಕೊವಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಐರ್ಲೆಂಡ್ ಮತ್ತು ಯುರೋಪಿಯನ್ ಒಕ್ಕೂಟದ ದೇಶಗಳು ಕೋವಾಕ್ಸಿನ್ ಅನ್ನು ತಮ್ಮ ಅನುಮೋದಿತ ಲಸಿಕೆಗಳ ಪಟ್ಟಿಯಲ್ಲಿ ಹೊಂದಿಲ್ಲ. ಉನ್ನತ ವಿಶ್ವವಿದ್ಯಾಲಯಗಳು, ಆಯಾ ದೇಶಗಳು ಅಥವಾ ಡಬ್ಲ್ಯುಎಚ್‌ಒ ಅನುಮೋದಿಸಿದ ಲಸಿಕೆಗಳನ್ನು ಪಡೆದವರಿಗೆ ಅವಕಾಶ ನೀಡುತ್ತಿವೆ ಎಂದು ವರದಿಯಾಗಿದೆ.

“ಕೊವ್ಯಾಕ್ಸಿನ್ ಅನುಮೋದಿತ ಪಟ್ಟಿಯಲ್ಲಿಲ್ಲ, ಇದರರ್ಥ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಹೋಟೆಲ್ ಕ್ಯಾರೆಂಟೈನ್‌ನಿಂದ ಮುಕ್ತಗೊಳಿಸಲಾಗುವುದಿಲ್ಲ. 14 ದಿನಗಳ ಕಾಲ ಹೋಟೆಲ್‌ನಲ್ಲಿ ಉಳಿಯುವುದು ತುಂಬಾ ದುಬಾರಿಯಾಗಿದೆ” ಎಂದು ಲಿಮೆರಿಕ್ ವಿಶ್ವವಿದ್ಯಾಲಯದ ಅಧ್ಯಯನ ಸಲಹೆಗಾರ್ತಿ ಸೌಮ್ಯಾ ಪಾಂಡೆ ಹೇಳಿದ್ದಾರೆ.

ಅಮೆರಿಕ, ಬ್ರೆಜಿಲ್ ಮತ್ತು ಹಂಗೇರಿ ಸೇರಿದಂತೆ “60 ಕ್ಕೂ ಹೆಚ್ಚು ದೇಶಗಳಲ್ಲಿ” ಕೊವ್ಯಾಕ್ಸಿನ್‌ನ ಅನುಮೋದನೆಗಳು ಪ್ರಕ್ರಿಯೆಯಲ್ಲಿವೆ ಎಂದು ಭಾರತ್ ಬಯೋಟೆಕ್ ಹೇಳಿಕೆಯಲ್ಲಿ ತಿಳಿಸಿದೆ.
“13 ದೇಶಗಳಲ್ಲಿ ತುರ್ತು ಬಳಕೆಯ ದೃಢೀಕರಣಗಳನ್ನು ಪಡೆಯಲಾಗಿದೆ. ತುರ್ತು ಬಳಕೆ ಪಟ್ಟಿಗೆ ಅರ್ಜಿಯನ್ನು ಡಬ್ಲ್ಯುಎಚ್‌ಒ ಜಿನೀವಾ ಕಚೇರಿಗೆ ಸಲ್ಲಿಸಲಾಗಿದೆ ಮತ್ತು ಜುಲೈ-ಸೆಪ್ಟೆಂಬರ್‌ನಲ್ಲಿ ನಿಯಂತ್ರಕ ಅನುಮೋದನೆಗಳನ್ನು ನಿರೀಕ್ಷಿಸಲಾಗಿದೆ” ಎಂದು ಕಂಪನಿ ತಿಳಿಸಿದೆ.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಶೈಕ್ಷಣಿಕ ಅವಧಿಗಳು ಪ್ರಾರಂಭವಾಗಲಿವೆ.

ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವಿಶೀಲ್ಡ್ ಎರಡು ಲಸಿಕೆಗಳು ಈಗ ದೇಶದಲ್ಲಿ ಬಳಕೆಯಲ್ಲಿವೆ. ರಷ್ಯಾದ ಸ್ಪುಟ್ನಿಕ್ ಮೂರನೇ ಸ್ಥಾನ ಪಡೆಯಲಿದೆ. ಕೊವ್ಯಾಕ್ಸಿನ್ ಅನ್ನು ಪೂರ್ಣ ಕ್ಲಿನಿಕಲ್ ಮಾಹಿತಿಯಿಲ್ಲದೆ ಜನವರಿಯಲ್ಲಿ ತುರ್ತು ಬಳಕೆಗಾಗಿ ಅನುಮೋದಿಸಲಾಯಿತು. ಇದು ಸಾಕಷ್ಟು ವಿವಾದಗಳಿಗೆ ಕಾರಣವಾಯಿತು ಮತ್ತು ರಾಷ್ಟ್ರವ್ಯಾಪಿ ಲಸಿಕೆ ಚಾಲನೆಯ ಆರಂಭಿಕ ಹಂತಗಳಲ್ಲಿ ಈ ಲಸಿಕೆ ಪಡೆಯಲು ಸಾವಿರಾರು ಜನರು ಮುಖ್ಯವಾಗಿ ವೈದ್ಯಕೀಯ ಸಿಬ್ಬಂದಿ ಹಿಂಜರಿಕೆ ತೋರಿದರು.


ಇದನ್ನೂ ಓದಿ: ದೆಹಲಿ ವಾಸ್ತು- ಹಿನ್ನೋಟ; ಭವ್ಯ ಕಟ್ಟಡವೊಂದಕ್ಕೆ ಪರಂಪರೆಯ ನೆಲಸಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...