Homeಕರೋನಾ ತಲ್ಲಣವಿದೇಶಕ್ಕೆ ತೆರಳುವವರಿಗೆ ಲಸಿಕೆ ಆದ್ಯತೆ: ಕೊವ್ಯಾಕ್ಸಿನ್ ಹಾಕಿಸಿಕೊಂಡವರು ವಿದೇಶಕ್ಕೆ ಹೋಗಲಾಗದು!

ವಿದೇಶಕ್ಕೆ ತೆರಳುವವರಿಗೆ ಲಸಿಕೆ ಆದ್ಯತೆ: ಕೊವ್ಯಾಕ್ಸಿನ್ ಹಾಕಿಸಿಕೊಂಡವರು ವಿದೇಶಕ್ಕೆ ಹೋಗಲಾಗದು!

- Advertisement -
- Advertisement -

18-44ರ ವಯೋಮಾನದಲ್ಲಿ ಲಸಿಕೆ ಪಡೆಯುವವರಲ್ಲಿ ವಿದೇಶಕ್ಕೆ ಉದ್ಯೋಗ ಮತ್ತು ವಿದ್ಯಾಭ್ಯಾಸಕ್ಕೆ ತೆರಳುವವರನ್ನು ಆದ್ಯತಾ ಪಟ್ಟಿಗೆ ಸೇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿಕೆ ಉಲ್ಲೇಖಿಸಿ ಇಂದು ಪ್ರಜಾವಾಣಿ ವರದಿ ಮಾಡಿದೆ.

ಆದರೆ ಅವರು ಯಾವ ಲಸಿಕೆ ಪಡೆಯಬೇಕೆಂದು ಎಲ್ಲೂ ಹೇಳಿಲ್ಲ. ಕೊವ್ಯಾಕ್ಸಿನ್ ಲಸಿಕೆ ಪಡೆದು ಸರ್ಟಿಫಿಕೇಟ್ ಪಡೆದರೆ ಅದಕ್ಕೆ ಬಹುತೇಕ ದೇಶಗಳಲ್ಲಿ ಮಾನ್ಯತೆ ಇಲ್ಲ.
ಹಾಗೆ ನೋಡಿದರೆ ತರಾತುರಿಯಲ್ಲಿ ಕೇಂದ್ರ ಸರ್ಕಾರ ಬಳಕೆಗೆ ಅನುಮತಿ ನೀಡಿದ ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್‌ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ಇನ್ನು ಸಿಕ್ಕಿಲ್ಲ. ಎಷ್ಟೋ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ಕೊವ್ಯಾಕ್ಸಿನ್ ಬದಲು ಕೋವಿಶೀಲ್ಡ್ ಹಾಕಿಸಿಕೊಳ್ಳಲು ಆದ್ಯತೆ ನೀಡುತ್ತಾರೆ ಎಂಬ ವರದಿಗಳು ಬರುತ್ತಲೇ ಇವೆ.

WHO ತನ್ನ ಅನುಮೋದಿತ ಪಟ್ಟಿಯಲ್ಲಿ ಫಿಜರ್, ಮಾಡೆರ್ನಾ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಹೊಂದಿದೆ. ಆದರೆ ಕೊವ್ಯಾಕ್ಸಿನ್ ಆ ಪಟ್ಟಿಯಲ್ಲಿ ಇಲ್ಲ. ಪಟ್ಟಿಯಲ್ಲಿ ಸೇರಿಸಲು “ಹೆಚ್ಚಿನ ಮಾಹಿತಿ, ಪುರಾವೆ ಅಗತ್ಯವಿದೆ” ಎಂದು WHO ಹೇಳುತ್ತದೆ.

ದೀರ್ಘಕಾಲದ ಕೋವಿಡ್ ನಿರ್ಬಂಧಗಳ ನಂತರ ಹಲವಾರು ದೇಶಗಳು ಪ್ರಯಾಣ ಮತ್ತು ಪ್ರವಾಸೋದ್ಯಮವನ್ನು ಕ್ರಮೇಣ ಮರುಪ್ರಾರಂಭಿಸಲು ತಯಾರಿ ನಡೆಸುತ್ತಿದ್ದಂತೆ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅನೇಕ ದೇಶಗಳು ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಅನ್ನು ಅನುಮೋದಿತ ಲಸಿಕೆಗಳಲ್ಲಿ ಪಟ್ಟಿ ಮಾಡದಿರುವ ಬಗ್ಗೆ ವಿದೇಶಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಲ್ಲಿ ಆತಂಕ ಶುರುವಾಗಿದೆ ಎಂದು ಮೂರು ದಿನದ ಹಿಂದೆ ಎನ್‌ಡಿಟಿವಿ ವರದಿ ಮಾಡಿದೆ.

ಈ ಪೈಕಿ ಈಗಾಗಲೇ ಕೆಲವರು ಕೊವಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಐರ್ಲೆಂಡ್ ಮತ್ತು ಯುರೋಪಿಯನ್ ಒಕ್ಕೂಟದ ದೇಶಗಳು ಕೋವಾಕ್ಸಿನ್ ಅನ್ನು ತಮ್ಮ ಅನುಮೋದಿತ ಲಸಿಕೆಗಳ ಪಟ್ಟಿಯಲ್ಲಿ ಹೊಂದಿಲ್ಲ. ಉನ್ನತ ವಿಶ್ವವಿದ್ಯಾಲಯಗಳು, ಆಯಾ ದೇಶಗಳು ಅಥವಾ ಡಬ್ಲ್ಯುಎಚ್‌ಒ ಅನುಮೋದಿಸಿದ ಲಸಿಕೆಗಳನ್ನು ಪಡೆದವರಿಗೆ ಅವಕಾಶ ನೀಡುತ್ತಿವೆ ಎಂದು ವರದಿಯಾಗಿದೆ.

“ಕೊವ್ಯಾಕ್ಸಿನ್ ಅನುಮೋದಿತ ಪಟ್ಟಿಯಲ್ಲಿಲ್ಲ, ಇದರರ್ಥ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಹೋಟೆಲ್ ಕ್ಯಾರೆಂಟೈನ್‌ನಿಂದ ಮುಕ್ತಗೊಳಿಸಲಾಗುವುದಿಲ್ಲ. 14 ದಿನಗಳ ಕಾಲ ಹೋಟೆಲ್‌ನಲ್ಲಿ ಉಳಿಯುವುದು ತುಂಬಾ ದುಬಾರಿಯಾಗಿದೆ” ಎಂದು ಲಿಮೆರಿಕ್ ವಿಶ್ವವಿದ್ಯಾಲಯದ ಅಧ್ಯಯನ ಸಲಹೆಗಾರ್ತಿ ಸೌಮ್ಯಾ ಪಾಂಡೆ ಹೇಳಿದ್ದಾರೆ.

ಅಮೆರಿಕ, ಬ್ರೆಜಿಲ್ ಮತ್ತು ಹಂಗೇರಿ ಸೇರಿದಂತೆ “60 ಕ್ಕೂ ಹೆಚ್ಚು ದೇಶಗಳಲ್ಲಿ” ಕೊವ್ಯಾಕ್ಸಿನ್‌ನ ಅನುಮೋದನೆಗಳು ಪ್ರಕ್ರಿಯೆಯಲ್ಲಿವೆ ಎಂದು ಭಾರತ್ ಬಯೋಟೆಕ್ ಹೇಳಿಕೆಯಲ್ಲಿ ತಿಳಿಸಿದೆ.
“13 ದೇಶಗಳಲ್ಲಿ ತುರ್ತು ಬಳಕೆಯ ದೃಢೀಕರಣಗಳನ್ನು ಪಡೆಯಲಾಗಿದೆ. ತುರ್ತು ಬಳಕೆ ಪಟ್ಟಿಗೆ ಅರ್ಜಿಯನ್ನು ಡಬ್ಲ್ಯುಎಚ್‌ಒ ಜಿನೀವಾ ಕಚೇರಿಗೆ ಸಲ್ಲಿಸಲಾಗಿದೆ ಮತ್ತು ಜುಲೈ-ಸೆಪ್ಟೆಂಬರ್‌ನಲ್ಲಿ ನಿಯಂತ್ರಕ ಅನುಮೋದನೆಗಳನ್ನು ನಿರೀಕ್ಷಿಸಲಾಗಿದೆ” ಎಂದು ಕಂಪನಿ ತಿಳಿಸಿದೆ.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಶೈಕ್ಷಣಿಕ ಅವಧಿಗಳು ಪ್ರಾರಂಭವಾಗಲಿವೆ.

ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವಿಶೀಲ್ಡ್ ಎರಡು ಲಸಿಕೆಗಳು ಈಗ ದೇಶದಲ್ಲಿ ಬಳಕೆಯಲ್ಲಿವೆ. ರಷ್ಯಾದ ಸ್ಪುಟ್ನಿಕ್ ಮೂರನೇ ಸ್ಥಾನ ಪಡೆಯಲಿದೆ. ಕೊವ್ಯಾಕ್ಸಿನ್ ಅನ್ನು ಪೂರ್ಣ ಕ್ಲಿನಿಕಲ್ ಮಾಹಿತಿಯಿಲ್ಲದೆ ಜನವರಿಯಲ್ಲಿ ತುರ್ತು ಬಳಕೆಗಾಗಿ ಅನುಮೋದಿಸಲಾಯಿತು. ಇದು ಸಾಕಷ್ಟು ವಿವಾದಗಳಿಗೆ ಕಾರಣವಾಯಿತು ಮತ್ತು ರಾಷ್ಟ್ರವ್ಯಾಪಿ ಲಸಿಕೆ ಚಾಲನೆಯ ಆರಂಭಿಕ ಹಂತಗಳಲ್ಲಿ ಈ ಲಸಿಕೆ ಪಡೆಯಲು ಸಾವಿರಾರು ಜನರು ಮುಖ್ಯವಾಗಿ ವೈದ್ಯಕೀಯ ಸಿಬ್ಬಂದಿ ಹಿಂಜರಿಕೆ ತೋರಿದರು.


ಇದನ್ನೂ ಓದಿ: ದೆಹಲಿ ವಾಸ್ತು- ಹಿನ್ನೋಟ; ಭವ್ಯ ಕಟ್ಟಡವೊಂದಕ್ಕೆ ಪರಂಪರೆಯ ನೆಲಸಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...