Homeಕರೋನಾ ತಲ್ಲಣವಿದೇಶಕ್ಕೆ ತೆರಳುವವರಿಗೆ ಲಸಿಕೆ ಆದ್ಯತೆ: ಕೊವ್ಯಾಕ್ಸಿನ್ ಹಾಕಿಸಿಕೊಂಡವರು ವಿದೇಶಕ್ಕೆ ಹೋಗಲಾಗದು!

ವಿದೇಶಕ್ಕೆ ತೆರಳುವವರಿಗೆ ಲಸಿಕೆ ಆದ್ಯತೆ: ಕೊವ್ಯಾಕ್ಸಿನ್ ಹಾಕಿಸಿಕೊಂಡವರು ವಿದೇಶಕ್ಕೆ ಹೋಗಲಾಗದು!

- Advertisement -
- Advertisement -

18-44ರ ವಯೋಮಾನದಲ್ಲಿ ಲಸಿಕೆ ಪಡೆಯುವವರಲ್ಲಿ ವಿದೇಶಕ್ಕೆ ಉದ್ಯೋಗ ಮತ್ತು ವಿದ್ಯಾಭ್ಯಾಸಕ್ಕೆ ತೆರಳುವವರನ್ನು ಆದ್ಯತಾ ಪಟ್ಟಿಗೆ ಸೇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿಕೆ ಉಲ್ಲೇಖಿಸಿ ಇಂದು ಪ್ರಜಾವಾಣಿ ವರದಿ ಮಾಡಿದೆ.

ಆದರೆ ಅವರು ಯಾವ ಲಸಿಕೆ ಪಡೆಯಬೇಕೆಂದು ಎಲ್ಲೂ ಹೇಳಿಲ್ಲ. ಕೊವ್ಯಾಕ್ಸಿನ್ ಲಸಿಕೆ ಪಡೆದು ಸರ್ಟಿಫಿಕೇಟ್ ಪಡೆದರೆ ಅದಕ್ಕೆ ಬಹುತೇಕ ದೇಶಗಳಲ್ಲಿ ಮಾನ್ಯತೆ ಇಲ್ಲ.
ಹಾಗೆ ನೋಡಿದರೆ ತರಾತುರಿಯಲ್ಲಿ ಕೇಂದ್ರ ಸರ್ಕಾರ ಬಳಕೆಗೆ ಅನುಮತಿ ನೀಡಿದ ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್‌ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ಇನ್ನು ಸಿಕ್ಕಿಲ್ಲ. ಎಷ್ಟೋ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ಕೊವ್ಯಾಕ್ಸಿನ್ ಬದಲು ಕೋವಿಶೀಲ್ಡ್ ಹಾಕಿಸಿಕೊಳ್ಳಲು ಆದ್ಯತೆ ನೀಡುತ್ತಾರೆ ಎಂಬ ವರದಿಗಳು ಬರುತ್ತಲೇ ಇವೆ.

WHO ತನ್ನ ಅನುಮೋದಿತ ಪಟ್ಟಿಯಲ್ಲಿ ಫಿಜರ್, ಮಾಡೆರ್ನಾ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಹೊಂದಿದೆ. ಆದರೆ ಕೊವ್ಯಾಕ್ಸಿನ್ ಆ ಪಟ್ಟಿಯಲ್ಲಿ ಇಲ್ಲ. ಪಟ್ಟಿಯಲ್ಲಿ ಸೇರಿಸಲು “ಹೆಚ್ಚಿನ ಮಾಹಿತಿ, ಪುರಾವೆ ಅಗತ್ಯವಿದೆ” ಎಂದು WHO ಹೇಳುತ್ತದೆ.

ದೀರ್ಘಕಾಲದ ಕೋವಿಡ್ ನಿರ್ಬಂಧಗಳ ನಂತರ ಹಲವಾರು ದೇಶಗಳು ಪ್ರಯಾಣ ಮತ್ತು ಪ್ರವಾಸೋದ್ಯಮವನ್ನು ಕ್ರಮೇಣ ಮರುಪ್ರಾರಂಭಿಸಲು ತಯಾರಿ ನಡೆಸುತ್ತಿದ್ದಂತೆ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅನೇಕ ದೇಶಗಳು ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಅನ್ನು ಅನುಮೋದಿತ ಲಸಿಕೆಗಳಲ್ಲಿ ಪಟ್ಟಿ ಮಾಡದಿರುವ ಬಗ್ಗೆ ವಿದೇಶಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಲ್ಲಿ ಆತಂಕ ಶುರುವಾಗಿದೆ ಎಂದು ಮೂರು ದಿನದ ಹಿಂದೆ ಎನ್‌ಡಿಟಿವಿ ವರದಿ ಮಾಡಿದೆ.

ಈ ಪೈಕಿ ಈಗಾಗಲೇ ಕೆಲವರು ಕೊವಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಐರ್ಲೆಂಡ್ ಮತ್ತು ಯುರೋಪಿಯನ್ ಒಕ್ಕೂಟದ ದೇಶಗಳು ಕೋವಾಕ್ಸಿನ್ ಅನ್ನು ತಮ್ಮ ಅನುಮೋದಿತ ಲಸಿಕೆಗಳ ಪಟ್ಟಿಯಲ್ಲಿ ಹೊಂದಿಲ್ಲ. ಉನ್ನತ ವಿಶ್ವವಿದ್ಯಾಲಯಗಳು, ಆಯಾ ದೇಶಗಳು ಅಥವಾ ಡಬ್ಲ್ಯುಎಚ್‌ಒ ಅನುಮೋದಿಸಿದ ಲಸಿಕೆಗಳನ್ನು ಪಡೆದವರಿಗೆ ಅವಕಾಶ ನೀಡುತ್ತಿವೆ ಎಂದು ವರದಿಯಾಗಿದೆ.

“ಕೊವ್ಯಾಕ್ಸಿನ್ ಅನುಮೋದಿತ ಪಟ್ಟಿಯಲ್ಲಿಲ್ಲ, ಇದರರ್ಥ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಹೋಟೆಲ್ ಕ್ಯಾರೆಂಟೈನ್‌ನಿಂದ ಮುಕ್ತಗೊಳಿಸಲಾಗುವುದಿಲ್ಲ. 14 ದಿನಗಳ ಕಾಲ ಹೋಟೆಲ್‌ನಲ್ಲಿ ಉಳಿಯುವುದು ತುಂಬಾ ದುಬಾರಿಯಾಗಿದೆ” ಎಂದು ಲಿಮೆರಿಕ್ ವಿಶ್ವವಿದ್ಯಾಲಯದ ಅಧ್ಯಯನ ಸಲಹೆಗಾರ್ತಿ ಸೌಮ್ಯಾ ಪಾಂಡೆ ಹೇಳಿದ್ದಾರೆ.

ಅಮೆರಿಕ, ಬ್ರೆಜಿಲ್ ಮತ್ತು ಹಂಗೇರಿ ಸೇರಿದಂತೆ “60 ಕ್ಕೂ ಹೆಚ್ಚು ದೇಶಗಳಲ್ಲಿ” ಕೊವ್ಯಾಕ್ಸಿನ್‌ನ ಅನುಮೋದನೆಗಳು ಪ್ರಕ್ರಿಯೆಯಲ್ಲಿವೆ ಎಂದು ಭಾರತ್ ಬಯೋಟೆಕ್ ಹೇಳಿಕೆಯಲ್ಲಿ ತಿಳಿಸಿದೆ.
“13 ದೇಶಗಳಲ್ಲಿ ತುರ್ತು ಬಳಕೆಯ ದೃಢೀಕರಣಗಳನ್ನು ಪಡೆಯಲಾಗಿದೆ. ತುರ್ತು ಬಳಕೆ ಪಟ್ಟಿಗೆ ಅರ್ಜಿಯನ್ನು ಡಬ್ಲ್ಯುಎಚ್‌ಒ ಜಿನೀವಾ ಕಚೇರಿಗೆ ಸಲ್ಲಿಸಲಾಗಿದೆ ಮತ್ತು ಜುಲೈ-ಸೆಪ್ಟೆಂಬರ್‌ನಲ್ಲಿ ನಿಯಂತ್ರಕ ಅನುಮೋದನೆಗಳನ್ನು ನಿರೀಕ್ಷಿಸಲಾಗಿದೆ” ಎಂದು ಕಂಪನಿ ತಿಳಿಸಿದೆ.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಶೈಕ್ಷಣಿಕ ಅವಧಿಗಳು ಪ್ರಾರಂಭವಾಗಲಿವೆ.

ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವಿಶೀಲ್ಡ್ ಎರಡು ಲಸಿಕೆಗಳು ಈಗ ದೇಶದಲ್ಲಿ ಬಳಕೆಯಲ್ಲಿವೆ. ರಷ್ಯಾದ ಸ್ಪುಟ್ನಿಕ್ ಮೂರನೇ ಸ್ಥಾನ ಪಡೆಯಲಿದೆ. ಕೊವ್ಯಾಕ್ಸಿನ್ ಅನ್ನು ಪೂರ್ಣ ಕ್ಲಿನಿಕಲ್ ಮಾಹಿತಿಯಿಲ್ಲದೆ ಜನವರಿಯಲ್ಲಿ ತುರ್ತು ಬಳಕೆಗಾಗಿ ಅನುಮೋದಿಸಲಾಯಿತು. ಇದು ಸಾಕಷ್ಟು ವಿವಾದಗಳಿಗೆ ಕಾರಣವಾಯಿತು ಮತ್ತು ರಾಷ್ಟ್ರವ್ಯಾಪಿ ಲಸಿಕೆ ಚಾಲನೆಯ ಆರಂಭಿಕ ಹಂತಗಳಲ್ಲಿ ಈ ಲಸಿಕೆ ಪಡೆಯಲು ಸಾವಿರಾರು ಜನರು ಮುಖ್ಯವಾಗಿ ವೈದ್ಯಕೀಯ ಸಿಬ್ಬಂದಿ ಹಿಂಜರಿಕೆ ತೋರಿದರು.


ಇದನ್ನೂ ಓದಿ: ದೆಹಲಿ ವಾಸ್ತು- ಹಿನ್ನೋಟ; ಭವ್ಯ ಕಟ್ಟಡವೊಂದಕ್ಕೆ ಪರಂಪರೆಯ ನೆಲಸಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...