Homeಕರೋನಾ ತಲ್ಲಣವಿದೇಶಕ್ಕೆ ತೆರಳುವವರಿಗೆ ಲಸಿಕೆ ಆದ್ಯತೆ: ಕೊವ್ಯಾಕ್ಸಿನ್ ಹಾಕಿಸಿಕೊಂಡವರು ವಿದೇಶಕ್ಕೆ ಹೋಗಲಾಗದು!

ವಿದೇಶಕ್ಕೆ ತೆರಳುವವರಿಗೆ ಲಸಿಕೆ ಆದ್ಯತೆ: ಕೊವ್ಯಾಕ್ಸಿನ್ ಹಾಕಿಸಿಕೊಂಡವರು ವಿದೇಶಕ್ಕೆ ಹೋಗಲಾಗದು!

- Advertisement -
- Advertisement -

18-44ರ ವಯೋಮಾನದಲ್ಲಿ ಲಸಿಕೆ ಪಡೆಯುವವರಲ್ಲಿ ವಿದೇಶಕ್ಕೆ ಉದ್ಯೋಗ ಮತ್ತು ವಿದ್ಯಾಭ್ಯಾಸಕ್ಕೆ ತೆರಳುವವರನ್ನು ಆದ್ಯತಾ ಪಟ್ಟಿಗೆ ಸೇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿಕೆ ಉಲ್ಲೇಖಿಸಿ ಇಂದು ಪ್ರಜಾವಾಣಿ ವರದಿ ಮಾಡಿದೆ.

ಆದರೆ ಅವರು ಯಾವ ಲಸಿಕೆ ಪಡೆಯಬೇಕೆಂದು ಎಲ್ಲೂ ಹೇಳಿಲ್ಲ. ಕೊವ್ಯಾಕ್ಸಿನ್ ಲಸಿಕೆ ಪಡೆದು ಸರ್ಟಿಫಿಕೇಟ್ ಪಡೆದರೆ ಅದಕ್ಕೆ ಬಹುತೇಕ ದೇಶಗಳಲ್ಲಿ ಮಾನ್ಯತೆ ಇಲ್ಲ.
ಹಾಗೆ ನೋಡಿದರೆ ತರಾತುರಿಯಲ್ಲಿ ಕೇಂದ್ರ ಸರ್ಕಾರ ಬಳಕೆಗೆ ಅನುಮತಿ ನೀಡಿದ ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್‌ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ಇನ್ನು ಸಿಕ್ಕಿಲ್ಲ. ಎಷ್ಟೋ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ಕೊವ್ಯಾಕ್ಸಿನ್ ಬದಲು ಕೋವಿಶೀಲ್ಡ್ ಹಾಕಿಸಿಕೊಳ್ಳಲು ಆದ್ಯತೆ ನೀಡುತ್ತಾರೆ ಎಂಬ ವರದಿಗಳು ಬರುತ್ತಲೇ ಇವೆ.

WHO ತನ್ನ ಅನುಮೋದಿತ ಪಟ್ಟಿಯಲ್ಲಿ ಫಿಜರ್, ಮಾಡೆರ್ನಾ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಹೊಂದಿದೆ. ಆದರೆ ಕೊವ್ಯಾಕ್ಸಿನ್ ಆ ಪಟ್ಟಿಯಲ್ಲಿ ಇಲ್ಲ. ಪಟ್ಟಿಯಲ್ಲಿ ಸೇರಿಸಲು “ಹೆಚ್ಚಿನ ಮಾಹಿತಿ, ಪುರಾವೆ ಅಗತ್ಯವಿದೆ” ಎಂದು WHO ಹೇಳುತ್ತದೆ.

ದೀರ್ಘಕಾಲದ ಕೋವಿಡ್ ನಿರ್ಬಂಧಗಳ ನಂತರ ಹಲವಾರು ದೇಶಗಳು ಪ್ರಯಾಣ ಮತ್ತು ಪ್ರವಾಸೋದ್ಯಮವನ್ನು ಕ್ರಮೇಣ ಮರುಪ್ರಾರಂಭಿಸಲು ತಯಾರಿ ನಡೆಸುತ್ತಿದ್ದಂತೆ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅನೇಕ ದೇಶಗಳು ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಅನ್ನು ಅನುಮೋದಿತ ಲಸಿಕೆಗಳಲ್ಲಿ ಪಟ್ಟಿ ಮಾಡದಿರುವ ಬಗ್ಗೆ ವಿದೇಶಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಲ್ಲಿ ಆತಂಕ ಶುರುವಾಗಿದೆ ಎಂದು ಮೂರು ದಿನದ ಹಿಂದೆ ಎನ್‌ಡಿಟಿವಿ ವರದಿ ಮಾಡಿದೆ.

ಈ ಪೈಕಿ ಈಗಾಗಲೇ ಕೆಲವರು ಕೊವಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಐರ್ಲೆಂಡ್ ಮತ್ತು ಯುರೋಪಿಯನ್ ಒಕ್ಕೂಟದ ದೇಶಗಳು ಕೋವಾಕ್ಸಿನ್ ಅನ್ನು ತಮ್ಮ ಅನುಮೋದಿತ ಲಸಿಕೆಗಳ ಪಟ್ಟಿಯಲ್ಲಿ ಹೊಂದಿಲ್ಲ. ಉನ್ನತ ವಿಶ್ವವಿದ್ಯಾಲಯಗಳು, ಆಯಾ ದೇಶಗಳು ಅಥವಾ ಡಬ್ಲ್ಯುಎಚ್‌ಒ ಅನುಮೋದಿಸಿದ ಲಸಿಕೆಗಳನ್ನು ಪಡೆದವರಿಗೆ ಅವಕಾಶ ನೀಡುತ್ತಿವೆ ಎಂದು ವರದಿಯಾಗಿದೆ.

“ಕೊವ್ಯಾಕ್ಸಿನ್ ಅನುಮೋದಿತ ಪಟ್ಟಿಯಲ್ಲಿಲ್ಲ, ಇದರರ್ಥ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಹೋಟೆಲ್ ಕ್ಯಾರೆಂಟೈನ್‌ನಿಂದ ಮುಕ್ತಗೊಳಿಸಲಾಗುವುದಿಲ್ಲ. 14 ದಿನಗಳ ಕಾಲ ಹೋಟೆಲ್‌ನಲ್ಲಿ ಉಳಿಯುವುದು ತುಂಬಾ ದುಬಾರಿಯಾಗಿದೆ” ಎಂದು ಲಿಮೆರಿಕ್ ವಿಶ್ವವಿದ್ಯಾಲಯದ ಅಧ್ಯಯನ ಸಲಹೆಗಾರ್ತಿ ಸೌಮ್ಯಾ ಪಾಂಡೆ ಹೇಳಿದ್ದಾರೆ.

ಅಮೆರಿಕ, ಬ್ರೆಜಿಲ್ ಮತ್ತು ಹಂಗೇರಿ ಸೇರಿದಂತೆ “60 ಕ್ಕೂ ಹೆಚ್ಚು ದೇಶಗಳಲ್ಲಿ” ಕೊವ್ಯಾಕ್ಸಿನ್‌ನ ಅನುಮೋದನೆಗಳು ಪ್ರಕ್ರಿಯೆಯಲ್ಲಿವೆ ಎಂದು ಭಾರತ್ ಬಯೋಟೆಕ್ ಹೇಳಿಕೆಯಲ್ಲಿ ತಿಳಿಸಿದೆ.
“13 ದೇಶಗಳಲ್ಲಿ ತುರ್ತು ಬಳಕೆಯ ದೃಢೀಕರಣಗಳನ್ನು ಪಡೆಯಲಾಗಿದೆ. ತುರ್ತು ಬಳಕೆ ಪಟ್ಟಿಗೆ ಅರ್ಜಿಯನ್ನು ಡಬ್ಲ್ಯುಎಚ್‌ಒ ಜಿನೀವಾ ಕಚೇರಿಗೆ ಸಲ್ಲಿಸಲಾಗಿದೆ ಮತ್ತು ಜುಲೈ-ಸೆಪ್ಟೆಂಬರ್‌ನಲ್ಲಿ ನಿಯಂತ್ರಕ ಅನುಮೋದನೆಗಳನ್ನು ನಿರೀಕ್ಷಿಸಲಾಗಿದೆ” ಎಂದು ಕಂಪನಿ ತಿಳಿಸಿದೆ.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಶೈಕ್ಷಣಿಕ ಅವಧಿಗಳು ಪ್ರಾರಂಭವಾಗಲಿವೆ.

ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವಿಶೀಲ್ಡ್ ಎರಡು ಲಸಿಕೆಗಳು ಈಗ ದೇಶದಲ್ಲಿ ಬಳಕೆಯಲ್ಲಿವೆ. ರಷ್ಯಾದ ಸ್ಪುಟ್ನಿಕ್ ಮೂರನೇ ಸ್ಥಾನ ಪಡೆಯಲಿದೆ. ಕೊವ್ಯಾಕ್ಸಿನ್ ಅನ್ನು ಪೂರ್ಣ ಕ್ಲಿನಿಕಲ್ ಮಾಹಿತಿಯಿಲ್ಲದೆ ಜನವರಿಯಲ್ಲಿ ತುರ್ತು ಬಳಕೆಗಾಗಿ ಅನುಮೋದಿಸಲಾಯಿತು. ಇದು ಸಾಕಷ್ಟು ವಿವಾದಗಳಿಗೆ ಕಾರಣವಾಯಿತು ಮತ್ತು ರಾಷ್ಟ್ರವ್ಯಾಪಿ ಲಸಿಕೆ ಚಾಲನೆಯ ಆರಂಭಿಕ ಹಂತಗಳಲ್ಲಿ ಈ ಲಸಿಕೆ ಪಡೆಯಲು ಸಾವಿರಾರು ಜನರು ಮುಖ್ಯವಾಗಿ ವೈದ್ಯಕೀಯ ಸಿಬ್ಬಂದಿ ಹಿಂಜರಿಕೆ ತೋರಿದರು.


ಇದನ್ನೂ ಓದಿ: ದೆಹಲಿ ವಾಸ್ತು- ಹಿನ್ನೋಟ; ಭವ್ಯ ಕಟ್ಟಡವೊಂದಕ್ಕೆ ಪರಂಪರೆಯ ನೆಲಸಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...