Homeಕರೋನಾ ತಲ್ಲಣವಿದೇಶಕ್ಕೆ ತೆರಳುವವರಿಗೆ ಲಸಿಕೆ ಆದ್ಯತೆ: ಕೊವ್ಯಾಕ್ಸಿನ್ ಹಾಕಿಸಿಕೊಂಡವರು ವಿದೇಶಕ್ಕೆ ಹೋಗಲಾಗದು!

ವಿದೇಶಕ್ಕೆ ತೆರಳುವವರಿಗೆ ಲಸಿಕೆ ಆದ್ಯತೆ: ಕೊವ್ಯಾಕ್ಸಿನ್ ಹಾಕಿಸಿಕೊಂಡವರು ವಿದೇಶಕ್ಕೆ ಹೋಗಲಾಗದು!

- Advertisement -
- Advertisement -

18-44ರ ವಯೋಮಾನದಲ್ಲಿ ಲಸಿಕೆ ಪಡೆಯುವವರಲ್ಲಿ ವಿದೇಶಕ್ಕೆ ಉದ್ಯೋಗ ಮತ್ತು ವಿದ್ಯಾಭ್ಯಾಸಕ್ಕೆ ತೆರಳುವವರನ್ನು ಆದ್ಯತಾ ಪಟ್ಟಿಗೆ ಸೇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿಕೆ ಉಲ್ಲೇಖಿಸಿ ಇಂದು ಪ್ರಜಾವಾಣಿ ವರದಿ ಮಾಡಿದೆ.

ಆದರೆ ಅವರು ಯಾವ ಲಸಿಕೆ ಪಡೆಯಬೇಕೆಂದು ಎಲ್ಲೂ ಹೇಳಿಲ್ಲ. ಕೊವ್ಯಾಕ್ಸಿನ್ ಲಸಿಕೆ ಪಡೆದು ಸರ್ಟಿಫಿಕೇಟ್ ಪಡೆದರೆ ಅದಕ್ಕೆ ಬಹುತೇಕ ದೇಶಗಳಲ್ಲಿ ಮಾನ್ಯತೆ ಇಲ್ಲ.
ಹಾಗೆ ನೋಡಿದರೆ ತರಾತುರಿಯಲ್ಲಿ ಕೇಂದ್ರ ಸರ್ಕಾರ ಬಳಕೆಗೆ ಅನುಮತಿ ನೀಡಿದ ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್‌ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ಇನ್ನು ಸಿಕ್ಕಿಲ್ಲ. ಎಷ್ಟೋ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ಕೊವ್ಯಾಕ್ಸಿನ್ ಬದಲು ಕೋವಿಶೀಲ್ಡ್ ಹಾಕಿಸಿಕೊಳ್ಳಲು ಆದ್ಯತೆ ನೀಡುತ್ತಾರೆ ಎಂಬ ವರದಿಗಳು ಬರುತ್ತಲೇ ಇವೆ.

WHO ತನ್ನ ಅನುಮೋದಿತ ಪಟ್ಟಿಯಲ್ಲಿ ಫಿಜರ್, ಮಾಡೆರ್ನಾ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಹೊಂದಿದೆ. ಆದರೆ ಕೊವ್ಯಾಕ್ಸಿನ್ ಆ ಪಟ್ಟಿಯಲ್ಲಿ ಇಲ್ಲ. ಪಟ್ಟಿಯಲ್ಲಿ ಸೇರಿಸಲು “ಹೆಚ್ಚಿನ ಮಾಹಿತಿ, ಪುರಾವೆ ಅಗತ್ಯವಿದೆ” ಎಂದು WHO ಹೇಳುತ್ತದೆ.

ದೀರ್ಘಕಾಲದ ಕೋವಿಡ್ ನಿರ್ಬಂಧಗಳ ನಂತರ ಹಲವಾರು ದೇಶಗಳು ಪ್ರಯಾಣ ಮತ್ತು ಪ್ರವಾಸೋದ್ಯಮವನ್ನು ಕ್ರಮೇಣ ಮರುಪ್ರಾರಂಭಿಸಲು ತಯಾರಿ ನಡೆಸುತ್ತಿದ್ದಂತೆ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅನೇಕ ದೇಶಗಳು ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಅನ್ನು ಅನುಮೋದಿತ ಲಸಿಕೆಗಳಲ್ಲಿ ಪಟ್ಟಿ ಮಾಡದಿರುವ ಬಗ್ಗೆ ವಿದೇಶಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಲ್ಲಿ ಆತಂಕ ಶುರುವಾಗಿದೆ ಎಂದು ಮೂರು ದಿನದ ಹಿಂದೆ ಎನ್‌ಡಿಟಿವಿ ವರದಿ ಮಾಡಿದೆ.

ಈ ಪೈಕಿ ಈಗಾಗಲೇ ಕೆಲವರು ಕೊವಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಐರ್ಲೆಂಡ್ ಮತ್ತು ಯುರೋಪಿಯನ್ ಒಕ್ಕೂಟದ ದೇಶಗಳು ಕೋವಾಕ್ಸಿನ್ ಅನ್ನು ತಮ್ಮ ಅನುಮೋದಿತ ಲಸಿಕೆಗಳ ಪಟ್ಟಿಯಲ್ಲಿ ಹೊಂದಿಲ್ಲ. ಉನ್ನತ ವಿಶ್ವವಿದ್ಯಾಲಯಗಳು, ಆಯಾ ದೇಶಗಳು ಅಥವಾ ಡಬ್ಲ್ಯುಎಚ್‌ಒ ಅನುಮೋದಿಸಿದ ಲಸಿಕೆಗಳನ್ನು ಪಡೆದವರಿಗೆ ಅವಕಾಶ ನೀಡುತ್ತಿವೆ ಎಂದು ವರದಿಯಾಗಿದೆ.

“ಕೊವ್ಯಾಕ್ಸಿನ್ ಅನುಮೋದಿತ ಪಟ್ಟಿಯಲ್ಲಿಲ್ಲ, ಇದರರ್ಥ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಹೋಟೆಲ್ ಕ್ಯಾರೆಂಟೈನ್‌ನಿಂದ ಮುಕ್ತಗೊಳಿಸಲಾಗುವುದಿಲ್ಲ. 14 ದಿನಗಳ ಕಾಲ ಹೋಟೆಲ್‌ನಲ್ಲಿ ಉಳಿಯುವುದು ತುಂಬಾ ದುಬಾರಿಯಾಗಿದೆ” ಎಂದು ಲಿಮೆರಿಕ್ ವಿಶ್ವವಿದ್ಯಾಲಯದ ಅಧ್ಯಯನ ಸಲಹೆಗಾರ್ತಿ ಸೌಮ್ಯಾ ಪಾಂಡೆ ಹೇಳಿದ್ದಾರೆ.

ಅಮೆರಿಕ, ಬ್ರೆಜಿಲ್ ಮತ್ತು ಹಂಗೇರಿ ಸೇರಿದಂತೆ “60 ಕ್ಕೂ ಹೆಚ್ಚು ದೇಶಗಳಲ್ಲಿ” ಕೊವ್ಯಾಕ್ಸಿನ್‌ನ ಅನುಮೋದನೆಗಳು ಪ್ರಕ್ರಿಯೆಯಲ್ಲಿವೆ ಎಂದು ಭಾರತ್ ಬಯೋಟೆಕ್ ಹೇಳಿಕೆಯಲ್ಲಿ ತಿಳಿಸಿದೆ.
“13 ದೇಶಗಳಲ್ಲಿ ತುರ್ತು ಬಳಕೆಯ ದೃಢೀಕರಣಗಳನ್ನು ಪಡೆಯಲಾಗಿದೆ. ತುರ್ತು ಬಳಕೆ ಪಟ್ಟಿಗೆ ಅರ್ಜಿಯನ್ನು ಡಬ್ಲ್ಯುಎಚ್‌ಒ ಜಿನೀವಾ ಕಚೇರಿಗೆ ಸಲ್ಲಿಸಲಾಗಿದೆ ಮತ್ತು ಜುಲೈ-ಸೆಪ್ಟೆಂಬರ್‌ನಲ್ಲಿ ನಿಯಂತ್ರಕ ಅನುಮೋದನೆಗಳನ್ನು ನಿರೀಕ್ಷಿಸಲಾಗಿದೆ” ಎಂದು ಕಂಪನಿ ತಿಳಿಸಿದೆ.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಶೈಕ್ಷಣಿಕ ಅವಧಿಗಳು ಪ್ರಾರಂಭವಾಗಲಿವೆ.

ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವಿಶೀಲ್ಡ್ ಎರಡು ಲಸಿಕೆಗಳು ಈಗ ದೇಶದಲ್ಲಿ ಬಳಕೆಯಲ್ಲಿವೆ. ರಷ್ಯಾದ ಸ್ಪುಟ್ನಿಕ್ ಮೂರನೇ ಸ್ಥಾನ ಪಡೆಯಲಿದೆ. ಕೊವ್ಯಾಕ್ಸಿನ್ ಅನ್ನು ಪೂರ್ಣ ಕ್ಲಿನಿಕಲ್ ಮಾಹಿತಿಯಿಲ್ಲದೆ ಜನವರಿಯಲ್ಲಿ ತುರ್ತು ಬಳಕೆಗಾಗಿ ಅನುಮೋದಿಸಲಾಯಿತು. ಇದು ಸಾಕಷ್ಟು ವಿವಾದಗಳಿಗೆ ಕಾರಣವಾಯಿತು ಮತ್ತು ರಾಷ್ಟ್ರವ್ಯಾಪಿ ಲಸಿಕೆ ಚಾಲನೆಯ ಆರಂಭಿಕ ಹಂತಗಳಲ್ಲಿ ಈ ಲಸಿಕೆ ಪಡೆಯಲು ಸಾವಿರಾರು ಜನರು ಮುಖ್ಯವಾಗಿ ವೈದ್ಯಕೀಯ ಸಿಬ್ಬಂದಿ ಹಿಂಜರಿಕೆ ತೋರಿದರು.


ಇದನ್ನೂ ಓದಿ: ದೆಹಲಿ ವಾಸ್ತು- ಹಿನ್ನೋಟ; ಭವ್ಯ ಕಟ್ಟಡವೊಂದಕ್ಕೆ ಪರಂಪರೆಯ ನೆಲಸಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...