Homeಕರೋನಾ ತಲ್ಲಣಲಸಿಕೆ ಉತ್ಸವಕ್ಕೆ ಪ್ರಧಾನಿ ಕರೆ: ಲಸಿಕೆ ಕೊರತೆ ಗಂಭೀರ ವಿಚಾರ, ಉತ್ಸವ ಅಲ್ಲ ಎಂದ ರಾಹುಲ್...

ಲಸಿಕೆ ಉತ್ಸವಕ್ಕೆ ಪ್ರಧಾನಿ ಕರೆ: ಲಸಿಕೆ ಕೊರತೆ ಗಂಭೀರ ವಿಚಾರ, ಉತ್ಸವ ಅಲ್ಲ ಎಂದ ರಾಹುಲ್ ಗಾಂಧಿ

- Advertisement -
- Advertisement -

ದೇಶದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ನಡುವೆ ಲಸಿಕೆ ಅಭಿಯಾನವು ನಡೆಯುತ್ತಿದೆ. ಲಸಿಕೆ ಕೊರತೆ ಬಗ್ಗೆ ರಾಜ್ಯಗಳು ಪದೇ ಪದೇ ಹೇಳುತ್ತಿದ್ದರೂ ಲಸಿಕೆ ಕೊರತೆ ಆಗಿಲ್ಲ ಎಂದು ಕೇಂದ್ರ ಸರ್ಕಾರ ವಾದಿಸುತ್ತಿದೆ. ಈ ನಡುವೆ ಲಸಿಕೆ ಅಭಿಯಾನದ ಭಾಗವಾಗಿ ಏಪ್ರಿಲ್ 11 ರಿಂದ 14 ರ ವರೆಗೆ ಲಸಿಕೆ ಉತ್ಸವ ನಡೆಸಲು ಪ್ರಧಾನಿ ಮೋದಿ ಕರೆಕೊಟ್ಟಿದ್ದಾರೆ.

ಲಸಿಕೆ ಉತ್ಸವಕ್ಕೆ ಕರೆ ನೀಡಿರುವ ಪ್ರಧಾನಿ ಹೇಳಿಕೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. “ಕೊರೊನಾ ವಿರುದ್ಧ ಲಸಿಕೆ ಪ್ರಮಾಣಗಳ ಕೊರತೆಯು ಗಂಭೀರ ವಿಷಯವಾಗಿದೆ. ಇದು ಉತ್ಸವ ಅಲ್ಲ” ಎಂದು ಪ್ರಧಾನಿ ಮೋದಿ ಕರೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನಡೆಸಿದ ಸಭೆಯಲ್ಲಿ ಉತ್ಸವ ನಡೆಸಲು ಕರೆ ನೀಡಲಾಗಿತ್ತು. ಲಸಿಕೆ ಕೊರತೆ ಹಿನ್ನೆಲೆ ದೇಶದಲ್ಲೇ ಅತಿಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಲಸಿಕಾ ಕೇಂದ್ರಗಳಿಗೆ ಬೀಗ ಹಾಕಲಾಗಿದೆ. ಜೊತೆಗೆ ಕೇಂದ್ರ ಸರ್ಕಾರ ಮಹಾರಾಷ್ಟ್ರ ವಿಚಾರದಲ್ಲಿ ತಾರತಮ್ಯ ನಡೆಸುತ್ತಿದೆ ಎಂದು ಮಹಾರಾಷ್ಟ್ರ ಆರೋಪಿಸಿದೆ. ಇಂತಹ ಸಮಯದಲ್ಲಿ ಪ್ರಧಾನಿಗಳು ಉತ್ಸವದ ಮಾತನಾಡಿದ್ದಾರೆ.

ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ: ಕೇಂದ್ರದ ಜಾಣ ಕುರುಡು, ನೂರಾರು ಲಸಿಕಾ ಕೇಂದ್ರಗಳಿಗೆ ಬೀಗ

ಇಂದು ಬೆಳಗ್ಗೆ ಟ್ವಿಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಕೊರೊನಾ ಸಾಂಕ್ರಾಮಿಕ ಹೆಚ್ಚುತ್ತಿರುವ ಈ ಬಿಕ್ಕಟ್ಟಿನಲ್ಲಿ ಲಸಿಕೆ ಕೊರತೆಯು ಬಹಳ ಗಂಭೀರ ಸಮಸ್ಯೆಯಾಗಿದೆ, ‘ಉತ್ಸವ’ ಅಲ್ಲ” ಎಂದಿದ್ದಾರೆ. ದೇಶದ ಜನರ ಪ್ರಾಣವನ್ನು ಅಪಾಯಕ್ಕೆ ತಳ್ಳುವ ಮೂಲಕ ಲಸಿಕೆಗಳನ್ನು ರಫ್ತು ಮಾಡುವುದು ಸರಿಯೇ? ಎಂದು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ವಿಚಾರದಲ್ಲಿ ಕೇಂದ್ರ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “ಕೇಂದ್ರ ಸರ್ಕಾರ ಪಕ್ಷಪಾತವಿಲ್ಲದೆ ಎಲ್ಲ ರಾಜ್ಯಗಳಿಗೆ ಸಹಾಯ ಮಾಡಬೇಕು. ನಾವೆಲ್ಲರೂ ಒಟ್ಟಾಗಿ ಈ ಸಾಂಕ್ರಾಮಿಕವನ್ನು ಸೋಲಿಸಬೇಕು” ಎಂದಿದ್ದಾರೆ.

ಕೇಂದ್ರವು ಮಹಾರಾಷ್ಟ್ರದ ವಿರುದ್ಧ ಏಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಗ್ಯ ಸಚಿವ ರಾಜೇಶ್ ತೋಪೆ ಪ್ರಶ್ನಿಸಿದ್ದರು. ಜನಸಂಖ್ಯೆಯ ಪ್ರಕಾರ ರಾಜ್ಯಕ್ಕೆ ವಾರಕ್ಕೆ 40 ಲಕ್ಷ ಡೋಸ್ ಮತ್ತು ತಿಂಗಳಿಗೆ 1.6 ಕೋಟಿ ಲಸಿಕೆಗಳು ಬೇಕಾಗುತ್ತವೆ. ಇನ್ನು “ಮಹಾರಾಷ್ಟ್ರವು ಗುಜರಾತ್ ಜನಸಂಖ್ಯೆಗಿಂತ ದುಪ್ಪಟ್ಟು ಜನಸಂಖ್ಯೆಯನ್ನು ಹೊಂದಿದೆ. ಆದರೂ ಗುಜರಾತ್ ಮತ್ತು ನಮ್ಮ ರಾಜ್ಯಕ್ಕೆ ಸರಿ ಸಮಾನವಾಗಿ ಒಂದು ಕೋಟಿ ಡೋಸ್ ಸಿಕ್ಕಿದೆ” ಎಂದಿದ್ದರು.

ಹೆಚ್ಚು ಸಕ್ರಿಯ ಪ್ರಕರಣಗಳಿರುವ ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳಲ್ಲಿನ ಲಸಿಕೆ ಕೇಂದ್ರಗಳು  ಸ್ಥಗಿತಗೊಳ್ಳುತ್ತಿವೆ ಮತ್ತು ಸರಬರಾಜು ಮುಗಿಯುತ್ತಿದ್ದಂತೆ ಜನರನ್ನು ವಾಪಸ್ ಕಳಿಸಲಾಗುತ್ತಿದೆ ಇಂತಹ ಸಮಯದಲ್ಲಿಯೂ ಲಸಿಕೆಗಳ ರಫ್ತು ಕುರಿತು ಕಾಂಗ್ರೆಸ್ ಸಂಸದರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ವ್ಯಾಕ್ಸಿನೇಷನ್‌ ಕೇಂದ್ರಗಳಲ್ಲಿ ಜನ ಲಸಿಕೆಯಿಲ್ಲದೆ ಹಿಂತಿರುಗುತ್ತಿದ್ದಾರೆ : ಮಹಾರಾಷ್ಟ್ರ ಆರೋಗ್ಯ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...