Homeಕರೋನಾ ತಲ್ಲಣದೆಹಲಿ ಸೇರಿ 4 ರಾಜ್ಯಗಳಲ್ಲಿ ಲಸಿಕೆ ಕೊರತೆ: ವ್ಯಾಕ್ಸಿನೇಷನ್‌‌ ಕೇಂದ್ರಗಳಿಗೆ ಬಾಗಿಲು

ದೆಹಲಿ ಸೇರಿ 4 ರಾಜ್ಯಗಳಲ್ಲಿ ಲಸಿಕೆ ಕೊರತೆ: ವ್ಯಾಕ್ಸಿನೇಷನ್‌‌ ಕೇಂದ್ರಗಳಿಗೆ ಬಾಗಿಲು

- Advertisement -
- Advertisement -

ಕಳೆದ ಹಲವು ದಿನಗಳಿಂದ ಹಲವಾರು ರಾಜ್ಯಗಳು ಕೊರೊನಾ ಲಸಿಕೆ ಪೂರೈಕೆಯಲ್ಲಿ ತೀವ್ರ ಕೊರತೆಯಾಗಿದೆ ಎಂದು ತಿಳಿಸಿದ್ದು, ಇದು ದೇಶದಲ್ಲಿ ವ್ಯಾಕ್ಸಿನೇಷನ್‌ ಪ್ರಕ್ರಿಯೆಗೆ ಹಿನ್ನಡೆ ಉಂಟು ಮಾಡಿದೆ. ಲಸಿಕೆ ಕೊರತೆ ಉಂಟಾದ ಹಿನ್ನೆಲೆಯಲ್ಲಿ, ದೆಹಲಿ, ಮಧ್ಯಪ್ರದೇಶ ಮತ್ತು ಒಡಿಶಾ ಸೇರಿದಂತೆ ವಿವಿಧ ರಾಜ್ಯಗಳಲ್ಲಿನ ಅನೇಕ ವ್ಯಾಕ್ಸಿನೇಷನ್ ಕೇಂದ್ರಗಳು ಮುಚ್ಚಲ್ಪಡುತ್ತಿವೆ ಎಂದು ವರದಿಯಾಗಿದೆ.

ಜೂನ್ ಕೊನೆಯ ವಾರದಲ್ಲಿ ಪ್ರತಿದಿನ ಸರಾಸರಿ 62.10 ಲಕ್ಷ ಡೋಸ್ ಕೊರೊನಾ ಲಸಿಕೆಗಳನ್ನು ನೀಡಲಾಯಿತು ಎಂದು ಕೋವಿನ್ ಪೋರ್ಟಲ್‌ನಲ್ಲಿನ ಡೇಟಾವನ್ನು ಉಲ್ಲೇಖಿಸಿ ಪತ್ರಿಕೆಗಳು ವರದಿ ಮಾಡಿದೆ. ಜುಲೈ ಮೊದಲ ಕೆಲವು ದಿನಗಳಲ್ಲಿ ಈ ಸಂಖ್ಯೆ 41.80 ಲಕ್ಷಕ್ಕೆ ಇಳಿದಿದೆ. ಜುಲೈ 5 ಮತ್ತು ಜುಲೈ 11 ರ ನಡುವೆ ದೈನಂದಿನವಾಗಿ ಸರಾಸರಿ 35 ಲಕ್ಷಕ್ಕೆ ಇಳಿದಿದೆ.

ಇದನ್ನೂ ಓದಿ: ಕೊರೊನಾ ಲಸಿಕೆಯಿಂದ ‘ಬಂಜೆತನ’ ಉಂಟಾಗುವುದಿಲ್ಲ: ಒಕ್ಕೂಟ ಸರ್ಕಾರ ಸ್ಪಷ್ಟನೆ

ದೆಹಲಿಯಲ್ಲಿ ಕೋವಿಶೀಲ್ಡ್ ಲಸಿಕೆಯ ದಾಸ್ತಾನು ಮುಗಿದಿದೆ ಎಂದು ಸೋಮವಾರ ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿತ್ತು. ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಟ್ವಿಟ್ಟರ್‌ನ ತಮ್ಮ ಅಧಿಕೃತ ಹ್ಯಾಂಡಲ್‌ನಲ್ಲಿ ರಾಜ್ಯದಲ್ಲಿ ಲಸಿಕೆ ಕೊರತೆಯ ಬಗ್ಗೆ ಮಾಹಿತಿ ನೀಡಿದ್ದರು.

ದೆಹಲಿಯಲ್ಲಿ ಕೋವಿಶೀಲ್ಡ್ ಲಸಿಕೆ ದಾಸ್ತಾನು ಮುಗಿದಿದೆ ಎಂದು ಎತ್ತಿ ತೋರಿಸಿದ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಒಕ್ಕೂಟ ಸರ್ಕಾರವು ಗರಿಷ್ಠ ಒಂದು ದಿನ ಅಥವಾ ಎರಡು ದಿನಗಳವರೆಗೆ ಇರುವ ದಾಸ್ತಾನುಗಳನ್ನು ಮಾತ್ರ ಒದಗಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

“ದೆಹಲಿಯಲ್ಲಿ ಲಸಿಕೆಗಳು ಮತ್ತೆ ಮುಗಿದಿವೆ. ಒಕ್ಕೂಟ ಸರ್ಕಾರವು ಒಂದು ಅಥವಾ ಎರಡು ದಿನ ಲಸಿಕೆಗಳನ್ನು ನೀಡುತ್ತದೆ, ನಂತರ ನಾವು ಲಸಿಕೆ ಕೇಂದ್ರಗಳನ್ನು ಹಲವಾರು ದಿನಗಳವರೆಗೆ ಮುಚ್ಚಬೇಕು. ಒಕ್ಕೂಟ ಸರ್ಕಾರಕ್ಕೆ ಯಾವ ಅನಿವಾರ್ಯವಿದೆಯೊ? ನಮ್ಮ ದೇಶದ ವ್ಯಾಕ್ಸಿನೇಷನ್ ಕಾರ್ಯಕ್ರಮವು ಇಷ್ಟು ದಿನಗಳ ನಂತರವೂ ಯಾಕೆ ಕುಸಿಯುತ್ತಿದೆ” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೂ ಬಂತು ಕೋವಿಡ್ ಲಸಿಕೆ : ಸೆಪ್ಟೆಂಬರ್‌ನಲ್ಲಿ ಝೈಡಸ್‌ ಕ್ಯಾಡಿಲಾ ವ್ಯಾಕ್ಸಿನ್‌-ಎನ್‌.ಕೆ. ಅರೋರಾ

ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ, ರಾಜ್ಯಕ್ಕೆ ಪ್ರತಿದಿನ 15 ಲಕ್ಷ ಜನರಿಗೆ ಲಸಿಕೆ ನೀಡುವ ಸಾಮರ್ಥ್ಯವಿದೆ. ಆದರೆ ಈಗಿನಂತೆ, ಸ್ಟಾಕ್ ಕೊರತೆಯಿಂದಾಗಿ ಕೇವಲ 2 ರಿಂದ 3 ಲಕ್ಷ ಜನರಿಗಷ್ಟೇ ಚುಚ್ಚುಮದ್ದು ನೀಡಲಾಗುತ್ತಿದೆ. ಒಡಿಶಾದ ಒಟ್ಟು 30 ಜಿಲ್ಲೆಗಳಲ್ಲಿ 24 ರಲ್ಲಿ ಲಸಿಕೆ ನೀಡುವುದನ್ನು ನಿಲ್ಲಿಸಲಾಗಿದೆ ಎಂದು ರಾಜ್ಯ ಆರೋಗ್ಯ ಕಾರ್ಯದರ್ಶಿ ಪಿ ಕೆ ಮೊಹಾಪಾತ್ರಾ ಅವರು ಹೇಳಿದ್ದಾರೆ. ಕೋವಿಶೀಲ್ಡ್ ಲಸಿಕೆಯು ಜುಲೈ 15 ರಂದು ಬರುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಲಸಿಕೆಗಳು ಮುಗಿದಿದ್ದು ಮತ್ತು ವ್ಯಾಕ್ಸಿನೇಷನ್‌ ದಿನಗಳಾದ ಸೋಮವಾರ ಮತ್ತು ಬುಧವಾರ ಯಾವುದೇ ಲಸಿಕೆಗಳನ್ನು ನೀಡಲಾಗುವುದಿಲ್ಲ ಎಂದು ಮಧ್ಯಪ್ರದೇಶದ ಅಧಿಕಾರಿ ಸಂತೋಷ್ ಶುಕ್ಲಾ ಆದೇಶ ಹೊರಡಿಸಿದ್ದಾರೆ.

ಆದಾಗ್ಯೂ, ಒಕ್ಕೂಟ ಸರ್ಕಾರವು ಕೊರೊನಾ ಲಸಿಕೆಯ ಕೊರತೆಯನ್ನು ನಿರಾಕರಿಸಿದೆ.

ಇದನ್ನೂ ಓದಿ: ಬ್ರೆಜಿಲ್‌: ಲಸಿಕೆ ಖರೀದಿ ಹಗರಣ – ಅಧ್ಯಕ್ಷ ಬೊಲ್ಸನಾರೊ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...