Homeಕರೋನಾ ತಲ್ಲಣದೆಹಲಿ ಸೇರಿ 4 ರಾಜ್ಯಗಳಲ್ಲಿ ಲಸಿಕೆ ಕೊರತೆ: ವ್ಯಾಕ್ಸಿನೇಷನ್‌‌ ಕೇಂದ್ರಗಳಿಗೆ ಬಾಗಿಲು

ದೆಹಲಿ ಸೇರಿ 4 ರಾಜ್ಯಗಳಲ್ಲಿ ಲಸಿಕೆ ಕೊರತೆ: ವ್ಯಾಕ್ಸಿನೇಷನ್‌‌ ಕೇಂದ್ರಗಳಿಗೆ ಬಾಗಿಲು

- Advertisement -
- Advertisement -

ಕಳೆದ ಹಲವು ದಿನಗಳಿಂದ ಹಲವಾರು ರಾಜ್ಯಗಳು ಕೊರೊನಾ ಲಸಿಕೆ ಪೂರೈಕೆಯಲ್ಲಿ ತೀವ್ರ ಕೊರತೆಯಾಗಿದೆ ಎಂದು ತಿಳಿಸಿದ್ದು, ಇದು ದೇಶದಲ್ಲಿ ವ್ಯಾಕ್ಸಿನೇಷನ್‌ ಪ್ರಕ್ರಿಯೆಗೆ ಹಿನ್ನಡೆ ಉಂಟು ಮಾಡಿದೆ. ಲಸಿಕೆ ಕೊರತೆ ಉಂಟಾದ ಹಿನ್ನೆಲೆಯಲ್ಲಿ, ದೆಹಲಿ, ಮಧ್ಯಪ್ರದೇಶ ಮತ್ತು ಒಡಿಶಾ ಸೇರಿದಂತೆ ವಿವಿಧ ರಾಜ್ಯಗಳಲ್ಲಿನ ಅನೇಕ ವ್ಯಾಕ್ಸಿನೇಷನ್ ಕೇಂದ್ರಗಳು ಮುಚ್ಚಲ್ಪಡುತ್ತಿವೆ ಎಂದು ವರದಿಯಾಗಿದೆ.

ಜೂನ್ ಕೊನೆಯ ವಾರದಲ್ಲಿ ಪ್ರತಿದಿನ ಸರಾಸರಿ 62.10 ಲಕ್ಷ ಡೋಸ್ ಕೊರೊನಾ ಲಸಿಕೆಗಳನ್ನು ನೀಡಲಾಯಿತು ಎಂದು ಕೋವಿನ್ ಪೋರ್ಟಲ್‌ನಲ್ಲಿನ ಡೇಟಾವನ್ನು ಉಲ್ಲೇಖಿಸಿ ಪತ್ರಿಕೆಗಳು ವರದಿ ಮಾಡಿದೆ. ಜುಲೈ ಮೊದಲ ಕೆಲವು ದಿನಗಳಲ್ಲಿ ಈ ಸಂಖ್ಯೆ 41.80 ಲಕ್ಷಕ್ಕೆ ಇಳಿದಿದೆ. ಜುಲೈ 5 ಮತ್ತು ಜುಲೈ 11 ರ ನಡುವೆ ದೈನಂದಿನವಾಗಿ ಸರಾಸರಿ 35 ಲಕ್ಷಕ್ಕೆ ಇಳಿದಿದೆ.

ಇದನ್ನೂ ಓದಿ: ಕೊರೊನಾ ಲಸಿಕೆಯಿಂದ ‘ಬಂಜೆತನ’ ಉಂಟಾಗುವುದಿಲ್ಲ: ಒಕ್ಕೂಟ ಸರ್ಕಾರ ಸ್ಪಷ್ಟನೆ

ದೆಹಲಿಯಲ್ಲಿ ಕೋವಿಶೀಲ್ಡ್ ಲಸಿಕೆಯ ದಾಸ್ತಾನು ಮುಗಿದಿದೆ ಎಂದು ಸೋಮವಾರ ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿತ್ತು. ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಟ್ವಿಟ್ಟರ್‌ನ ತಮ್ಮ ಅಧಿಕೃತ ಹ್ಯಾಂಡಲ್‌ನಲ್ಲಿ ರಾಜ್ಯದಲ್ಲಿ ಲಸಿಕೆ ಕೊರತೆಯ ಬಗ್ಗೆ ಮಾಹಿತಿ ನೀಡಿದ್ದರು.

ದೆಹಲಿಯಲ್ಲಿ ಕೋವಿಶೀಲ್ಡ್ ಲಸಿಕೆ ದಾಸ್ತಾನು ಮುಗಿದಿದೆ ಎಂದು ಎತ್ತಿ ತೋರಿಸಿದ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಒಕ್ಕೂಟ ಸರ್ಕಾರವು ಗರಿಷ್ಠ ಒಂದು ದಿನ ಅಥವಾ ಎರಡು ದಿನಗಳವರೆಗೆ ಇರುವ ದಾಸ್ತಾನುಗಳನ್ನು ಮಾತ್ರ ಒದಗಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

“ದೆಹಲಿಯಲ್ಲಿ ಲಸಿಕೆಗಳು ಮತ್ತೆ ಮುಗಿದಿವೆ. ಒಕ್ಕೂಟ ಸರ್ಕಾರವು ಒಂದು ಅಥವಾ ಎರಡು ದಿನ ಲಸಿಕೆಗಳನ್ನು ನೀಡುತ್ತದೆ, ನಂತರ ನಾವು ಲಸಿಕೆ ಕೇಂದ್ರಗಳನ್ನು ಹಲವಾರು ದಿನಗಳವರೆಗೆ ಮುಚ್ಚಬೇಕು. ಒಕ್ಕೂಟ ಸರ್ಕಾರಕ್ಕೆ ಯಾವ ಅನಿವಾರ್ಯವಿದೆಯೊ? ನಮ್ಮ ದೇಶದ ವ್ಯಾಕ್ಸಿನೇಷನ್ ಕಾರ್ಯಕ್ರಮವು ಇಷ್ಟು ದಿನಗಳ ನಂತರವೂ ಯಾಕೆ ಕುಸಿಯುತ್ತಿದೆ” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೂ ಬಂತು ಕೋವಿಡ್ ಲಸಿಕೆ : ಸೆಪ್ಟೆಂಬರ್‌ನಲ್ಲಿ ಝೈಡಸ್‌ ಕ್ಯಾಡಿಲಾ ವ್ಯಾಕ್ಸಿನ್‌-ಎನ್‌.ಕೆ. ಅರೋರಾ

ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ, ರಾಜ್ಯಕ್ಕೆ ಪ್ರತಿದಿನ 15 ಲಕ್ಷ ಜನರಿಗೆ ಲಸಿಕೆ ನೀಡುವ ಸಾಮರ್ಥ್ಯವಿದೆ. ಆದರೆ ಈಗಿನಂತೆ, ಸ್ಟಾಕ್ ಕೊರತೆಯಿಂದಾಗಿ ಕೇವಲ 2 ರಿಂದ 3 ಲಕ್ಷ ಜನರಿಗಷ್ಟೇ ಚುಚ್ಚುಮದ್ದು ನೀಡಲಾಗುತ್ತಿದೆ. ಒಡಿಶಾದ ಒಟ್ಟು 30 ಜಿಲ್ಲೆಗಳಲ್ಲಿ 24 ರಲ್ಲಿ ಲಸಿಕೆ ನೀಡುವುದನ್ನು ನಿಲ್ಲಿಸಲಾಗಿದೆ ಎಂದು ರಾಜ್ಯ ಆರೋಗ್ಯ ಕಾರ್ಯದರ್ಶಿ ಪಿ ಕೆ ಮೊಹಾಪಾತ್ರಾ ಅವರು ಹೇಳಿದ್ದಾರೆ. ಕೋವಿಶೀಲ್ಡ್ ಲಸಿಕೆಯು ಜುಲೈ 15 ರಂದು ಬರುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಲಸಿಕೆಗಳು ಮುಗಿದಿದ್ದು ಮತ್ತು ವ್ಯಾಕ್ಸಿನೇಷನ್‌ ದಿನಗಳಾದ ಸೋಮವಾರ ಮತ್ತು ಬುಧವಾರ ಯಾವುದೇ ಲಸಿಕೆಗಳನ್ನು ನೀಡಲಾಗುವುದಿಲ್ಲ ಎಂದು ಮಧ್ಯಪ್ರದೇಶದ ಅಧಿಕಾರಿ ಸಂತೋಷ್ ಶುಕ್ಲಾ ಆದೇಶ ಹೊರಡಿಸಿದ್ದಾರೆ.

ಆದಾಗ್ಯೂ, ಒಕ್ಕೂಟ ಸರ್ಕಾರವು ಕೊರೊನಾ ಲಸಿಕೆಯ ಕೊರತೆಯನ್ನು ನಿರಾಕರಿಸಿದೆ.

ಇದನ್ನೂ ಓದಿ: ಬ್ರೆಜಿಲ್‌: ಲಸಿಕೆ ಖರೀದಿ ಹಗರಣ – ಅಧ್ಯಕ್ಷ ಬೊಲ್ಸನಾರೊ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...