Homeಕರೋನಾ ತಲ್ಲಣಕೊರೊನಾ ಲಸಿಕೆ ಕೊರತೆ: ಕೋವಾಕ್ಸಿನ್‌ ತಯಾರಿಕೆ ಗಮನಾರ್ಹವಾಗಿ ಹೆಚ್ಚಿಸಲು ಕೇಳಿಕೊಂಡ ಕೇಂದ್ರ

ಕೊರೊನಾ ಲಸಿಕೆ ಕೊರತೆ: ಕೋವಾಕ್ಸಿನ್‌ ತಯಾರಿಕೆ ಗಮನಾರ್ಹವಾಗಿ ಹೆಚ್ಚಿಸಲು ಕೇಳಿಕೊಂಡ ಕೇಂದ್ರ

ಸೀರಮ್‌‌ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 10 ಕೋಟಿ ಡೋಸ್‌ಗಳನ್ನು ತಯಾರಿಸಲು ಒಪ್ಪಿದೆಯಾದರೂ, ವಿದೇಶಗಳಿಗೆ ರಫ್ತು ಮಾಡುವ ಡೋಸ್‌ಗಳು ಕೂಡಾ ಅದರಲ್ಲೇ ಸೇರಿದೆ.

- Advertisement -
- Advertisement -

ದೇಶದಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಜನರಿಗೆ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆ ಏಪ್ರಿಲ್ 1 ರಿಂದ ಪ್ರಾರಂಭವಾಗುತ್ತಿದ್ದು ಈ ನಡುವೆ, ಕೋವಾಕ್ಸಿನ್ ತಯಾರಕರಾದ ಭಾರತ್ ಬಯೋಟೆಕ್‌‌ ಅನ್ನು ಉತ್ಪಾದನಾ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲು ಕೇಂದ್ರವು ಕೇಳಿಕೊಂಡಿದೆ ಎಂದು TNIE ಪತ್ರಿಕೆಯು ವರದಿ ಮಾಡಿದೆ.

ಪ್ರಸ್ತುತ ಲಸಿಕೆಗಳ ಪೂರೈಕೆ ಸಮಸ್ಯೆಯನ್ನು ಎದುರಿಸುತ್ತಿರುವ ಕೇಂದ್ರ ಸರ್ಕಾರವು ಕೊರೊನಾಕ್ಕಾಗಿ ತಯಾರಿಸಿದ “ದೇಶೀಯ ಲಸಿಕೆಗಳ ಸಾಮರ್ಥ್ಯ ವೃದ್ಧಿಗೆ” ಅನುಕೂಲವಾಗುವಂತೆ ಒಂದು ಸಮಿತಿಯನ್ನು ರಚಿಸಿದೆ. ಭಾರತದಲ್ಲಿ ಇಲ್ಲಿಯವರೆಗೆ ನೀಡಲಾದ 5,33,24,811 ಡೋಸ್‌ಗಳಲ್ಲಿ, 50 ಲಕ್ಷಕ್ಕಿಂತ ಕಡಿಮೆ ಅಥವಾ 10% ಲಸಿಕೆ ಪ್ರಮಾಣವು ದೇಶದ ಮೊದಲ ದೇಶೀಯ ಕೋವಿಡ್‌ ಲಸಿಕೆಯಾದ ಕೊವಾಕ್ಸಿನ್ ಅನ್ನು ಒಳಗೊಂಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ನಾಲ್ಕು ದಿನಗಳಿಗೆ ಸಾಕಾಗುವಷ್ಟು ಮಾತ್ರ ಕೊರೊನಾ ಲಸಿಕೆ ದಾಸ್ತಾನು!

ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಹೇಳುವಂತೆ ಭಾರತದಲ್ಲಿ ಅನುಮತಿ ಲಭಿಸಿದ ಎರಡು ಲಸಿಕೆಗಳ ಸುಮಾರು 8.7 ಕೋಟಿ ಡೋಸೇಜ್‌ಗಳನ್ನು ಇಲ್ಲಿಯವರೆಗೆ ರಾಜ್ಯಗಳಿಗೆ ಕಳುಹಿಸಲಾಗಿದೆ. ಆದರೆ ಈಗ ಉದ್ದೇಶಿತ ಫಲಾನುಭವಿಗಳ ಸಂಖ್ಯೆ ಈಗ 34 ಕೋಟಿಗೆ ತಲುಪಿರುವುದರಿಂದ, ಮುಂದಿನ ಕೆಲವು ತಿಂಗಳುಗಳಲ್ಲಿ ಆದ್ಯತೆಯ ಜನಸಂಖ್ಯೆಗಾಗಿ ದೇಶಕ್ಕೆ 64 ಕೋಟಿ ಪ್ರಮಾಣದ ಲಸಿಕೆಗಳು ಬೇಕಾಗುತ್ತವೆ.

“ಇದು ಕಠಿಣ ಕಾರ್ಯವಾಗಿದೆ ಮತ್ತು ಭಾರತ್ ಬಯೋಟೆಕ್ ತನ್ನ ಉತ್ಪಾದನೆಯನ್ನು ಹೆಚ್ಚಿಸದಿದ್ದರೆ, ದೊಡ್ಡ ಸವಾಲಾಗಿ ಪರಿಣಮಿಸುತ್ತದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಧಿಕೃತವಾಗಿ, ಭಾರತದಲ್ಲಿ ಕೋವಿಡ್‌ ಲಸಿಕೆಗಳ ಕೊರತೆಯಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಸಚಿವಾಲಯದ ಅನೇಕ ಅಧಿಕಾರಿಗಳ ಪ್ರಕಾರ, ಈಗಿನಂತೆ ಸೀರಮ್‌ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಉತ್ಪಾದನಾ ಸಾಮರ್ಥ್ಯ 5-6 ಕೋಟಿ ಆಗಿದ್ದರೆ, ಭಾರತ್ ಬಯೋಟೆಕ್‌‌ ಒಂದು ಕೋಟಿ ಮಿಲಿಯನ್ ಉತ್ಪಾದನಾ ಸಾಮರ್ಥ್ಯ ಹೊಂದಿದೆ. “ಆದಾಗ್ಯೂ, ಸೀರಮ್‌‌ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 10 ಕೋಟಿ ಡೋಸ್‌ಗಳನ್ನು ತಯಾರಿಸಲು ಒಪ್ಪಿದೆಯಾದರೂ, ವಿದೇಶಗಳಿಗೆ ರಫ್ತು ಮಾಡುವ ಡೋಸ್‌ಗಳು ಕೂಡಾ ಅದರಲ್ಲೇ ಸೇರಿದೆ” ಎಂದು ಮೂಲವನ್ನು ಉಲ್ಲೇಖಿಸಿ TNIE  ವರದಿ ಮಾಡಿದೆ.

ಇದನ್ನೂ ಓದಿ: ಪ್ರತಿದಿನ 10-20 ಕೊರೊನಾ ಪ್ರಕರಣಗಳು: ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರದ ಸೂಚನೆ

“ಆದ್ದರಿಂದ, ಕೊವಾಕ್ಸಿನ್‌ ಎರಡನೇ ಆಯ್ಕೆಯಾಗುದರ ಬದಲಿಗೆ ಮಹತ್ವದ ಪಾತ್ರ ವಹಿಸಬೇಕಾಗುತ್ತದೆ” ಎಂದು ಮೂಲವು ತಿಳಿಸಿದೆ. ಈ ಕಾರಣಕ್ಕಾಗಿಯೇ ಸರ್ಕಾರ ಕಳೆದ ವಾರ ಅಂತರ ಸಚಿವಾಲಯದ ಸಮಿತಿಯನ್ನು ರಚಿಸಿ, ಲಸಿಕೆ ತಯಾರಕರು ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಲು ಮಾರ್ಗಗಳನ್ನು ಕಂಡುಕೊಳ್ಳಲು ಅನೇಕ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಕೇಳಿಕೊಂಡಿದೆ.

“ಸರ್ಕಾರವು ಕೆಲವು ಸಣ್ಣ ಉತ್ಪಾದಕರಿಂದ ಕೂಡಾ ವಿನಂತಿಗಳನ್ನು ಸ್ವೀಕರಿಸಿದೆ. ಕೆಲವು ಲಸಿಕೆ ಉತ್ಪಾದನಾ ಘಟಕಗಳನ್ನು ಕೋವಿಡ್ ಲಸಿಕೆ ಉತ್ಪಾದನಾ ಘಟಕಗಳಾಗಿ ಪರಿವರ್ತಿಸಲು ಕೆಲವು ರಾಜ್ಯ ಸರ್ಕಾರಗಳು ಕೋರಿವೆ ಆದರೆ ಇದಕ್ಕೆ ಜೈವಿಕ ಸುರಕ್ಷತೆಯ ಮಟ್ಟಗಳ ಉನ್ನತ ಮಾನದಂಡಗಳಾಗಿ ಪರಿವರ್ತನೆ ಅಗತ್ಯವಿರುತ್ತದೆ” ಎಂದು ಸಮಿತಿಯ ಸದಸ್ಯರೊಬ್ಬರು ಹೇಳಿದ್ದಾರೆಂದು TNIE ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಕೊರೊನಾ ಸೋಂಕಿಗಿಂತ ರಸ್ತೆ ಅಪಘಾತದಲ್ಲಿ ಮೃತಪಟ್ಟವರೇ ಹೆಚ್ಚು: ಸಚಿವ ನಿತಿನ್ ಗಡ್ಕರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...