Homeಕರೋನಾ ತಲ್ಲಣಕೊರೊನಾ ಲಸಿಕೆ ಕೊರತೆ: ಕೋವಾಕ್ಸಿನ್‌ ತಯಾರಿಕೆ ಗಮನಾರ್ಹವಾಗಿ ಹೆಚ್ಚಿಸಲು ಕೇಳಿಕೊಂಡ ಕೇಂದ್ರ

ಕೊರೊನಾ ಲಸಿಕೆ ಕೊರತೆ: ಕೋವಾಕ್ಸಿನ್‌ ತಯಾರಿಕೆ ಗಮನಾರ್ಹವಾಗಿ ಹೆಚ್ಚಿಸಲು ಕೇಳಿಕೊಂಡ ಕೇಂದ್ರ

ಸೀರಮ್‌‌ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 10 ಕೋಟಿ ಡೋಸ್‌ಗಳನ್ನು ತಯಾರಿಸಲು ಒಪ್ಪಿದೆಯಾದರೂ, ವಿದೇಶಗಳಿಗೆ ರಫ್ತು ಮಾಡುವ ಡೋಸ್‌ಗಳು ಕೂಡಾ ಅದರಲ್ಲೇ ಸೇರಿದೆ.

- Advertisement -
- Advertisement -

ದೇಶದಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಜನರಿಗೆ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆ ಏಪ್ರಿಲ್ 1 ರಿಂದ ಪ್ರಾರಂಭವಾಗುತ್ತಿದ್ದು ಈ ನಡುವೆ, ಕೋವಾಕ್ಸಿನ್ ತಯಾರಕರಾದ ಭಾರತ್ ಬಯೋಟೆಕ್‌‌ ಅನ್ನು ಉತ್ಪಾದನಾ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲು ಕೇಂದ್ರವು ಕೇಳಿಕೊಂಡಿದೆ ಎಂದು TNIE ಪತ್ರಿಕೆಯು ವರದಿ ಮಾಡಿದೆ.

ಪ್ರಸ್ತುತ ಲಸಿಕೆಗಳ ಪೂರೈಕೆ ಸಮಸ್ಯೆಯನ್ನು ಎದುರಿಸುತ್ತಿರುವ ಕೇಂದ್ರ ಸರ್ಕಾರವು ಕೊರೊನಾಕ್ಕಾಗಿ ತಯಾರಿಸಿದ “ದೇಶೀಯ ಲಸಿಕೆಗಳ ಸಾಮರ್ಥ್ಯ ವೃದ್ಧಿಗೆ” ಅನುಕೂಲವಾಗುವಂತೆ ಒಂದು ಸಮಿತಿಯನ್ನು ರಚಿಸಿದೆ. ಭಾರತದಲ್ಲಿ ಇಲ್ಲಿಯವರೆಗೆ ನೀಡಲಾದ 5,33,24,811 ಡೋಸ್‌ಗಳಲ್ಲಿ, 50 ಲಕ್ಷಕ್ಕಿಂತ ಕಡಿಮೆ ಅಥವಾ 10% ಲಸಿಕೆ ಪ್ರಮಾಣವು ದೇಶದ ಮೊದಲ ದೇಶೀಯ ಕೋವಿಡ್‌ ಲಸಿಕೆಯಾದ ಕೊವಾಕ್ಸಿನ್ ಅನ್ನು ಒಳಗೊಂಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ನಾಲ್ಕು ದಿನಗಳಿಗೆ ಸಾಕಾಗುವಷ್ಟು ಮಾತ್ರ ಕೊರೊನಾ ಲಸಿಕೆ ದಾಸ್ತಾನು!

ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಹೇಳುವಂತೆ ಭಾರತದಲ್ಲಿ ಅನುಮತಿ ಲಭಿಸಿದ ಎರಡು ಲಸಿಕೆಗಳ ಸುಮಾರು 8.7 ಕೋಟಿ ಡೋಸೇಜ್‌ಗಳನ್ನು ಇಲ್ಲಿಯವರೆಗೆ ರಾಜ್ಯಗಳಿಗೆ ಕಳುಹಿಸಲಾಗಿದೆ. ಆದರೆ ಈಗ ಉದ್ದೇಶಿತ ಫಲಾನುಭವಿಗಳ ಸಂಖ್ಯೆ ಈಗ 34 ಕೋಟಿಗೆ ತಲುಪಿರುವುದರಿಂದ, ಮುಂದಿನ ಕೆಲವು ತಿಂಗಳುಗಳಲ್ಲಿ ಆದ್ಯತೆಯ ಜನಸಂಖ್ಯೆಗಾಗಿ ದೇಶಕ್ಕೆ 64 ಕೋಟಿ ಪ್ರಮಾಣದ ಲಸಿಕೆಗಳು ಬೇಕಾಗುತ್ತವೆ.

“ಇದು ಕಠಿಣ ಕಾರ್ಯವಾಗಿದೆ ಮತ್ತು ಭಾರತ್ ಬಯೋಟೆಕ್ ತನ್ನ ಉತ್ಪಾದನೆಯನ್ನು ಹೆಚ್ಚಿಸದಿದ್ದರೆ, ದೊಡ್ಡ ಸವಾಲಾಗಿ ಪರಿಣಮಿಸುತ್ತದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಧಿಕೃತವಾಗಿ, ಭಾರತದಲ್ಲಿ ಕೋವಿಡ್‌ ಲಸಿಕೆಗಳ ಕೊರತೆಯಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಸಚಿವಾಲಯದ ಅನೇಕ ಅಧಿಕಾರಿಗಳ ಪ್ರಕಾರ, ಈಗಿನಂತೆ ಸೀರಮ್‌ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಉತ್ಪಾದನಾ ಸಾಮರ್ಥ್ಯ 5-6 ಕೋಟಿ ಆಗಿದ್ದರೆ, ಭಾರತ್ ಬಯೋಟೆಕ್‌‌ ಒಂದು ಕೋಟಿ ಮಿಲಿಯನ್ ಉತ್ಪಾದನಾ ಸಾಮರ್ಥ್ಯ ಹೊಂದಿದೆ. “ಆದಾಗ್ಯೂ, ಸೀರಮ್‌‌ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 10 ಕೋಟಿ ಡೋಸ್‌ಗಳನ್ನು ತಯಾರಿಸಲು ಒಪ್ಪಿದೆಯಾದರೂ, ವಿದೇಶಗಳಿಗೆ ರಫ್ತು ಮಾಡುವ ಡೋಸ್‌ಗಳು ಕೂಡಾ ಅದರಲ್ಲೇ ಸೇರಿದೆ” ಎಂದು ಮೂಲವನ್ನು ಉಲ್ಲೇಖಿಸಿ TNIE  ವರದಿ ಮಾಡಿದೆ.

ಇದನ್ನೂ ಓದಿ: ಪ್ರತಿದಿನ 10-20 ಕೊರೊನಾ ಪ್ರಕರಣಗಳು: ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರದ ಸೂಚನೆ

“ಆದ್ದರಿಂದ, ಕೊವಾಕ್ಸಿನ್‌ ಎರಡನೇ ಆಯ್ಕೆಯಾಗುದರ ಬದಲಿಗೆ ಮಹತ್ವದ ಪಾತ್ರ ವಹಿಸಬೇಕಾಗುತ್ತದೆ” ಎಂದು ಮೂಲವು ತಿಳಿಸಿದೆ. ಈ ಕಾರಣಕ್ಕಾಗಿಯೇ ಸರ್ಕಾರ ಕಳೆದ ವಾರ ಅಂತರ ಸಚಿವಾಲಯದ ಸಮಿತಿಯನ್ನು ರಚಿಸಿ, ಲಸಿಕೆ ತಯಾರಕರು ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಲು ಮಾರ್ಗಗಳನ್ನು ಕಂಡುಕೊಳ್ಳಲು ಅನೇಕ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಕೇಳಿಕೊಂಡಿದೆ.

“ಸರ್ಕಾರವು ಕೆಲವು ಸಣ್ಣ ಉತ್ಪಾದಕರಿಂದ ಕೂಡಾ ವಿನಂತಿಗಳನ್ನು ಸ್ವೀಕರಿಸಿದೆ. ಕೆಲವು ಲಸಿಕೆ ಉತ್ಪಾದನಾ ಘಟಕಗಳನ್ನು ಕೋವಿಡ್ ಲಸಿಕೆ ಉತ್ಪಾದನಾ ಘಟಕಗಳಾಗಿ ಪರಿವರ್ತಿಸಲು ಕೆಲವು ರಾಜ್ಯ ಸರ್ಕಾರಗಳು ಕೋರಿವೆ ಆದರೆ ಇದಕ್ಕೆ ಜೈವಿಕ ಸುರಕ್ಷತೆಯ ಮಟ್ಟಗಳ ಉನ್ನತ ಮಾನದಂಡಗಳಾಗಿ ಪರಿವರ್ತನೆ ಅಗತ್ಯವಿರುತ್ತದೆ” ಎಂದು ಸಮಿತಿಯ ಸದಸ್ಯರೊಬ್ಬರು ಹೇಳಿದ್ದಾರೆಂದು TNIE ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಕೊರೊನಾ ಸೋಂಕಿಗಿಂತ ರಸ್ತೆ ಅಪಘಾತದಲ್ಲಿ ಮೃತಪಟ್ಟವರೇ ಹೆಚ್ಚು: ಸಚಿವ ನಿತಿನ್ ಗಡ್ಕರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...